Homeಮುಖಪುಟಸಿರಿಯಾದ ಹಂಗಾಮಿ ಪ್ರಧಾನಿಯಾಗಿ ಮೊಹಮ್ಮದ್ ಅಲ್ ಬಶೀರ್ ನೇಮಕ

ಸಿರಿಯಾದ ಹಂಗಾಮಿ ಪ್ರಧಾನಿಯಾಗಿ ಮೊಹಮ್ಮದ್ ಅಲ್ ಬಶೀರ್ ನೇಮಕ

- Advertisement -
- Advertisement -

ರಾಜಕೀಯ ಅರಾಜಕತೆ ಉಂಟಾಗಿರುವ ಸಿರಿಯಾದ ಹಂಗಾಮಿ ಪ್ರಧಾನಿಯಾಗಿ ಮೊಹಮ್ಮದ್ ಅಲ್ ಬಶೀರ್ ಆಯ್ಕೆಯಾಗಿದ್ದಾರೆ. ಮಂಗಳವಾರ (ಡಿ.10) ಹಾಲಿ ಸರ್ಕಾರ ಮತ್ತು ಮುಂಬರುವ ಸರ್ಕಾರದ ಮುಖ್ಯಸ್ಥರ ಜೊತೆ ಬಶೀರ್ ಸಭೆ ನಡೆಸಿದ್ದಾರೆ.

ವರದಿಗಳ ಪ್ರಕಾರ, ಸಿರಿಯಾದ ಅಧ್ಯಕ್ಷರಾಗಿದ್ದ ಬಶರ್ ಅಲ್ ಅಸದ್ ಪಲಾಯನ ಮಾಡಿದ ಬಳಿಕ, ಪ್ರಧಾನಿ ಮೊಹಮ್ಮದ್ ಘಾಝಿ ಅಲ್ ಜಲಾಲಿ ಬಂಡುಕೋರರನ್ನು ಬೆಂಬಲಿಸಿದ್ದಾರೆ. ನೂತನ ಮಧ್ಯಂತರ ಸರ್ಕಾರ ರಚನೆಗೆ ಸಹಕಾರ ನೀಡುವುದಾಗಿ ಹೇಳಿದ್ದಾರೆ. ಹಾಗಾಗಿ, ಬಂಡುಕೋರರ ಗುಂಪಿನ ನಾಯಕ ಮೊಹಮ್ಮದ್ ಅಲ್ ಬಶೀರ್ ಅಧಿಕಾರವಹಿಸಿಕೊಂಡಿದ್ದಾರೆ. 2025ರ ಮಾರ್ಚ್‌ವರೆಗೆ ಅವರು ಪ್ರಧಾನಿಯಾಗಿ ದೇಶವನ್ನು ಮುನ್ನಡೆಸಲಿದ್ದಾರೆ. ಬಶೀರ್ ಆಡಳಿತವನ್ನು ‘ಪರಿವರ್ತನಾ ಸರ್ಕಾರ’ (Transitional Govt) ಎಂದು ಹೇಳಲಾಗಿದೆ.

ಸೋಮವಾರ (ಡಿ.9) ಬಂಡುಕೋರರ ಗುಂಪಿನ ಕಮಾಂಡರ್ ಅಬು ಮೊಹಮ್ಮದ್ ಅಲ್-ಜುಲಾನಿ ಅವರು ಪ್ರಧಾನಿ ಮೊಹಮ್ಮದ್ ಘಾಝಿ ಅಲ್ ಜಲಾಲಿ ಮತ್ತು ಉಪಾಧ್ಯಕ್ಷ ಫೈಸಲ್ ಮೆಕ್ದಾದ್ ಅವರನ್ನು ಭೇಟಿಯಾಗಿ ಮಧ್ಯಂತರ ಸರ್ಕಾರ ರಚನೆ ಕುರಿತು ಚರ್ಚೆ ನಡೆಸಿದ್ದರು.

ಆ ಬಳಿಕ, ಹೋರಾಟಗಾರರ ಗುಂಪಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ. ನನ್ನ ಸರ್ಕಾರ ಇನ್ನುಮುಂದೆ ಹೋರಾಟಗಾರರ ಸರ್ಕಾರವಾಗಿ ಬದಲಾಗಲಿದೆ ಎಂದು ಪ್ರಧಾನಿ ಜಲಾಲಿ ಹೇಳಿದ್ದರು.

ವಾಯುವ್ಯ ಸಿರಿಯಾದ ಇದ್ಲಿಬ್ ಮತ್ತು ಅಲೆಪ್ಪೋ ಪ್ರಾಂತ್ಯವನ್ನು ಬಂಡುಕೋರರ ಪ್ರಬಲ ಗುಂಪು ಹಯಾತ್ ತಹ್ರೀರ್ ಅಲ್-ಶಾಮ್ (ಹೆಚ್‌ಟಿಎಸ್‌) ತನ್ನ ವಶಕ್ಕೆ ಪಡೆದುಕೊಂಡ ಬಳಿಕ, ಕಳೆದ ಜನವರಿಯಿಂದ ಮೊಹಮ್ಮದ್ ಅಲ್ ಬಶೀರ್ ಅಲ್ಲಿನ ಆಡಳಿತ ನೋಡಿಕೊಳ್ಳುತ್ತಿದ್ದರು. ಬಶೀರ್ ಆಡಳಿತವನ್ನು ಬಂಡುಕೋರರ ಗುಂಪು ‘ಮುಕ್ತಿ ಸರ್ಕಾರ’ (Salvation government) ಎಂದಿದೆ.

ಮಂಗಳವಾರ ನಡೆಸಿದ ಸಭೆಯಲ್ಲಿ ಮೊಹಮ್ಮದ್ ಅಲ್ ಬಶೀರ್ ಅವರು ಮುಂದಿನ ಜವಾಬ್ದಾರಿ ಹಂಚಿಕೆ ಕುರಿತು ಮಾತುಕತೆ ನಡೆಸಿದ್ದಾರೆ. ದೇಶದ ಜನರು ‘ಸ್ಥಿರತೆ ಮತ್ತು ಶಾಂತತೆಯನ್ನು ಆನಂದಿಸಿ’ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ. ಸಿರಿಯಾದ ಹೊಸ ಸರ್ಕಾರ ‘ಉತ್ತಮ ಸಂದೇಶ’ ಸಾರಲಿ ಎಂದು ಸಿರಿಯಾದ ವಿಶ್ವಸಂಸ್ಥೆಯ ಪ್ರತಿನಿಧಿ ಹೇಳಿದ್ದಾರೆ.

ಸಿರಿಯಾದ ಭವಿಷ್ಯದ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇವೆ. ಹೊಸ ಸರ್ಕಾರ ಅಲ್ಪಸಂಖ್ಯಾತರನ್ನು ಗೌರವಿಸಲಿ, ವಿಶ್ವಾಸಾರ್ಹತೆ ಕಾಪಾಡಲಿ ಮತ್ತು ಎಲ್ಲರ ಒಳಗೊಳ್ಳುವಿಕೆಯನ್ನು ಖಾತ್ರಿಪಡಿಸಲಿ ಎಂದು ಯುಎಸ್‌ ಸರ್ಕಾರದ ಕಾರ್ಯದರ್ಶಿ ಆಂಟೋನಿ ಜೆ. ಬ್ಲಿಂಕೆನ್ ತಿಳಿಸಿದ್ದಾರೆ.

ಮೊಹಮ್ಮದ್ ಬಶೀರ್ ಯಾರು?

ಎಲೆಕ್ಟ್ರಿಕಲ್ ಎಂಜಿನಿಯರ್ ಪದವಿ ಪಡೆದಿರುವ ಸಿರಿಯಾದ ನೂತನ ಹಂಗಾಮಿ ಪ್ರಧಾನಿ ಮೊಹಮ್ಮದ್ ಅಲ್ ಬಶೀರ್, 2011 ರಲ್ಲಿ ದೇಶದಲ್ಲಿ ಅಂತರ್ಯುದ್ಧ ಪ್ರಾರಂಭವಾಗುವ ಮೊದಲು ಅನಿಲ ಸ್ಥಾವರಗಳಲ್ಲಿ ಕೆಲಸ ಮಾಡಿದ್ದರು.

ಕಳೆದ ಜನವರಿಯಲ್ಲಿ ಬಶೀರ್ ಅವರನ್ನು ತಮ್ಮ ನಿಯಂತ್ರಣದಲ್ಲಿರುವ ಇದ್ಲಿಬ್ ಮತ್ತು ಅಲೆಪ್ಪೋ ಪ್ರಾಂತ್ಯಗಳ ‘ಮುಕ್ತಿ ಸರ್ಕಾರ’ದ (Salvation government) ಪ್ರಧಾನ ಮಂತ್ರಿಯಾಗಿ ಅಥವಾ ಆಡಳಿತಗಾರನಾಗಿ ಹಯಾತ್ ತಹ್ರೀರ್ ಅಲ್-ಶಾಮ್ (ಹೆಚ್‌ಟಿಎಸ್‌) ನೇಮಿಸಿತ್ತು.

ಇಸ್ಲಾಮಿಕ್ ನೀತಿಗಳಿಂದ ಮಾರ್ಗದರ್ಶಿಸಲ್ಪಟ್ಟ ಧಾರ್ಮಿಕ ಮಂಡಳಿಯ ಮೂಲಕ ಸಚಿವಾಲಯಗಳು, ಸ್ಥಳೀಯ ಇಲಾಖೆಗಳು, ನ್ಯಾಯಾಂಗ ಮತ್ತು ಭದ್ರತಾ ಅಧಿಕಾರಿಗಳೊಂದಿಗೆ ಬಂಡುಕೋರರ ಮುಕ್ತಿ ಸರ್ಕಾರ ಒಂದು ರಾಜ್ಯದಂತೆ ಕಾರ್ಯನಿರ್ವಹಿಸಿತ್ತು.

ಬಂಡುಕೋರರ ಗುಂಪು ಹೆಚ್‌ಟಿಎಸ್ ಮತ್ತು ಅದರ ಮಿತ್ರರು ಇದ್ಲಿಬ್ ಮತ್ತು ಅಲೆಪ್ಪೋ ಪ್ರಾಂತ್ಯಗಳನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡ ಬಳಿಕ, ಅಲ್ಲಿನ ಸರ್ಕಾರಿ ಕಚೇರಿಗಳು ಸೇರಿದಂತೆ ಎಲ್ಲಾ ಕಾರ್ಯ ಚಟುವಟಿಕೆಗಳು ಸ್ಥಗಿತಗೊಂಡಿತ್ತು. ಆಗ ಮುಕ್ತಿ ಸರ್ಕಾರದ ಮೂಲಕ ಅವುಗಳನ್ನು ಮೊಹಮ್ಮದ್ ಅಲ್ ಬಶೀರ್ ಪುನಃ ಸ್ಥಾಪಿಸಿದ್ದರು.

ಬಂಡುಕೋರರ ಗುಂಪು ಸಿರಿಯಾದ ರಾಜಧಾನಿ ಡಮಾಸ್ಕಸ್ ಮೇಲೆ ಡಿ.8ರಂದು ಹಿಡಿತ ಸಾಧಿಸಿದ್ದಾರೆ. ಆ ಬಳಿಕ ಅಧ್ಯಕ್ಷ ಬಶರ್ ಅಲ್ ಅಸಾದ್ ಮತ್ತು ಕುಟುಂಬ ರಷ್ಯಾದ ಮಾಸ್ಕೋಗೆ ಪಲಾಯನ ಮಾಡಿದೆ. ಸಿರಿಯಾ ಬಂಡುಕೋರರ ವಶವಾಗುವ ಮೂಲಕ ಬಶರ್ ಅಲ್ ಅಸಾದ್ ಕುಟುಂಬದ 50 ವರ್ಷಗಳ ನಿರಂಕುಶ ಆಡಳಿತ ಕೊನೆಗೊಂಡಿದೆ. ಬಂಡುಕೋರರ ಗುಂಪು, ” ನಮ್ಮ ಹೋರಾಟ ಅಸದ್ ಆಡಳಿತ ವಿರುದ್ದವಾಗಿತ್ತು. ಆತನ ಹುದ್ದೆಯಿಂದ ಕೆಳಗಿಳಿದ ಬಳಿಕ ಮುಂದೆ ಎಲ್ಲರನ್ನು ಒಳಗೊಂಡ ಸರ್ಕಾರ ರಚಿಸಿ ದೇಶ ಮುನ್ನಡೆಸುತ್ತೇವೆ” ಎಂದಿದೆ.

ಇದನ್ನೂ ಓದಿ : ಉತ್ತರ ಪ್ರದೇಶ | 180 ವರ್ಷ ಹಳೆಯ ಮಸೀದಿಯನ್ನು ಭಾಗಶಃ ಕೆಡವಿದ ಜಿಲ್ಲಾಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...