Homeಮುಖಪುಟಸಿರಿಯಾದ ಹಂಗಾಮಿ ಪ್ರಧಾನಿಯಾಗಿ ಮೊಹಮ್ಮದ್ ಅಲ್ ಬಶೀರ್ ನೇಮಕ

ಸಿರಿಯಾದ ಹಂಗಾಮಿ ಪ್ರಧಾನಿಯಾಗಿ ಮೊಹಮ್ಮದ್ ಅಲ್ ಬಶೀರ್ ನೇಮಕ

- Advertisement -
- Advertisement -

ರಾಜಕೀಯ ಅರಾಜಕತೆ ಉಂಟಾಗಿರುವ ಸಿರಿಯಾದ ಹಂಗಾಮಿ ಪ್ರಧಾನಿಯಾಗಿ ಮೊಹಮ್ಮದ್ ಅಲ್ ಬಶೀರ್ ಆಯ್ಕೆಯಾಗಿದ್ದಾರೆ. ಮಂಗಳವಾರ (ಡಿ.10) ಹಾಲಿ ಸರ್ಕಾರ ಮತ್ತು ಮುಂಬರುವ ಸರ್ಕಾರದ ಮುಖ್ಯಸ್ಥರ ಜೊತೆ ಬಶೀರ್ ಸಭೆ ನಡೆಸಿದ್ದಾರೆ.

ವರದಿಗಳ ಪ್ರಕಾರ, ಸಿರಿಯಾದ ಅಧ್ಯಕ್ಷರಾಗಿದ್ದ ಬಶರ್ ಅಲ್ ಅಸದ್ ಪಲಾಯನ ಮಾಡಿದ ಬಳಿಕ, ಪ್ರಧಾನಿ ಮೊಹಮ್ಮದ್ ಘಾಝಿ ಅಲ್ ಜಲಾಲಿ ಬಂಡುಕೋರರನ್ನು ಬೆಂಬಲಿಸಿದ್ದಾರೆ. ನೂತನ ಮಧ್ಯಂತರ ಸರ್ಕಾರ ರಚನೆಗೆ ಸಹಕಾರ ನೀಡುವುದಾಗಿ ಹೇಳಿದ್ದಾರೆ. ಹಾಗಾಗಿ, ಬಂಡುಕೋರರ ಗುಂಪಿನ ನಾಯಕ ಮೊಹಮ್ಮದ್ ಅಲ್ ಬಶೀರ್ ಅಧಿಕಾರವಹಿಸಿಕೊಂಡಿದ್ದಾರೆ. 2025ರ ಮಾರ್ಚ್‌ವರೆಗೆ ಅವರು ಪ್ರಧಾನಿಯಾಗಿ ದೇಶವನ್ನು ಮುನ್ನಡೆಸಲಿದ್ದಾರೆ. ಬಶೀರ್ ಆಡಳಿತವನ್ನು ‘ಪರಿವರ್ತನಾ ಸರ್ಕಾರ’ (Transitional Govt) ಎಂದು ಹೇಳಲಾಗಿದೆ.

ಸೋಮವಾರ (ಡಿ.9) ಬಂಡುಕೋರರ ಗುಂಪಿನ ಕಮಾಂಡರ್ ಅಬು ಮೊಹಮ್ಮದ್ ಅಲ್-ಜುಲಾನಿ ಅವರು ಪ್ರಧಾನಿ ಮೊಹಮ್ಮದ್ ಘಾಝಿ ಅಲ್ ಜಲಾಲಿ ಮತ್ತು ಉಪಾಧ್ಯಕ್ಷ ಫೈಸಲ್ ಮೆಕ್ದಾದ್ ಅವರನ್ನು ಭೇಟಿಯಾಗಿ ಮಧ್ಯಂತರ ಸರ್ಕಾರ ರಚನೆ ಕುರಿತು ಚರ್ಚೆ ನಡೆಸಿದ್ದರು.

ಆ ಬಳಿಕ, ಹೋರಾಟಗಾರರ ಗುಂಪಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ. ನನ್ನ ಸರ್ಕಾರ ಇನ್ನುಮುಂದೆ ಹೋರಾಟಗಾರರ ಸರ್ಕಾರವಾಗಿ ಬದಲಾಗಲಿದೆ ಎಂದು ಪ್ರಧಾನಿ ಜಲಾಲಿ ಹೇಳಿದ್ದರು.

ವಾಯುವ್ಯ ಸಿರಿಯಾದ ಇದ್ಲಿಬ್ ಮತ್ತು ಅಲೆಪ್ಪೋ ಪ್ರಾಂತ್ಯವನ್ನು ಬಂಡುಕೋರರ ಪ್ರಬಲ ಗುಂಪು ಹಯಾತ್ ತಹ್ರೀರ್ ಅಲ್-ಶಾಮ್ (ಹೆಚ್‌ಟಿಎಸ್‌) ತನ್ನ ವಶಕ್ಕೆ ಪಡೆದುಕೊಂಡ ಬಳಿಕ, ಕಳೆದ ಜನವರಿಯಿಂದ ಮೊಹಮ್ಮದ್ ಅಲ್ ಬಶೀರ್ ಅಲ್ಲಿನ ಆಡಳಿತ ನೋಡಿಕೊಳ್ಳುತ್ತಿದ್ದರು. ಬಶೀರ್ ಆಡಳಿತವನ್ನು ಬಂಡುಕೋರರ ಗುಂಪು ‘ಮುಕ್ತಿ ಸರ್ಕಾರ’ (Salvation government) ಎಂದಿದೆ.

ಮಂಗಳವಾರ ನಡೆಸಿದ ಸಭೆಯಲ್ಲಿ ಮೊಹಮ್ಮದ್ ಅಲ್ ಬಶೀರ್ ಅವರು ಮುಂದಿನ ಜವಾಬ್ದಾರಿ ಹಂಚಿಕೆ ಕುರಿತು ಮಾತುಕತೆ ನಡೆಸಿದ್ದಾರೆ. ದೇಶದ ಜನರು ‘ಸ್ಥಿರತೆ ಮತ್ತು ಶಾಂತತೆಯನ್ನು ಆನಂದಿಸಿ’ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ. ಸಿರಿಯಾದ ಹೊಸ ಸರ್ಕಾರ ‘ಉತ್ತಮ ಸಂದೇಶ’ ಸಾರಲಿ ಎಂದು ಸಿರಿಯಾದ ವಿಶ್ವಸಂಸ್ಥೆಯ ಪ್ರತಿನಿಧಿ ಹೇಳಿದ್ದಾರೆ.

ಸಿರಿಯಾದ ಭವಿಷ್ಯದ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇವೆ. ಹೊಸ ಸರ್ಕಾರ ಅಲ್ಪಸಂಖ್ಯಾತರನ್ನು ಗೌರವಿಸಲಿ, ವಿಶ್ವಾಸಾರ್ಹತೆ ಕಾಪಾಡಲಿ ಮತ್ತು ಎಲ್ಲರ ಒಳಗೊಳ್ಳುವಿಕೆಯನ್ನು ಖಾತ್ರಿಪಡಿಸಲಿ ಎಂದು ಯುಎಸ್‌ ಸರ್ಕಾರದ ಕಾರ್ಯದರ್ಶಿ ಆಂಟೋನಿ ಜೆ. ಬ್ಲಿಂಕೆನ್ ತಿಳಿಸಿದ್ದಾರೆ.

ಮೊಹಮ್ಮದ್ ಬಶೀರ್ ಯಾರು?

ಎಲೆಕ್ಟ್ರಿಕಲ್ ಎಂಜಿನಿಯರ್ ಪದವಿ ಪಡೆದಿರುವ ಸಿರಿಯಾದ ನೂತನ ಹಂಗಾಮಿ ಪ್ರಧಾನಿ ಮೊಹಮ್ಮದ್ ಅಲ್ ಬಶೀರ್, 2011 ರಲ್ಲಿ ದೇಶದಲ್ಲಿ ಅಂತರ್ಯುದ್ಧ ಪ್ರಾರಂಭವಾಗುವ ಮೊದಲು ಅನಿಲ ಸ್ಥಾವರಗಳಲ್ಲಿ ಕೆಲಸ ಮಾಡಿದ್ದರು.

ಕಳೆದ ಜನವರಿಯಲ್ಲಿ ಬಶೀರ್ ಅವರನ್ನು ತಮ್ಮ ನಿಯಂತ್ರಣದಲ್ಲಿರುವ ಇದ್ಲಿಬ್ ಮತ್ತು ಅಲೆಪ್ಪೋ ಪ್ರಾಂತ್ಯಗಳ ‘ಮುಕ್ತಿ ಸರ್ಕಾರ’ದ (Salvation government) ಪ್ರಧಾನ ಮಂತ್ರಿಯಾಗಿ ಅಥವಾ ಆಡಳಿತಗಾರನಾಗಿ ಹಯಾತ್ ತಹ್ರೀರ್ ಅಲ್-ಶಾಮ್ (ಹೆಚ್‌ಟಿಎಸ್‌) ನೇಮಿಸಿತ್ತು.

ಇಸ್ಲಾಮಿಕ್ ನೀತಿಗಳಿಂದ ಮಾರ್ಗದರ್ಶಿಸಲ್ಪಟ್ಟ ಧಾರ್ಮಿಕ ಮಂಡಳಿಯ ಮೂಲಕ ಸಚಿವಾಲಯಗಳು, ಸ್ಥಳೀಯ ಇಲಾಖೆಗಳು, ನ್ಯಾಯಾಂಗ ಮತ್ತು ಭದ್ರತಾ ಅಧಿಕಾರಿಗಳೊಂದಿಗೆ ಬಂಡುಕೋರರ ಮುಕ್ತಿ ಸರ್ಕಾರ ಒಂದು ರಾಜ್ಯದಂತೆ ಕಾರ್ಯನಿರ್ವಹಿಸಿತ್ತು.

ಬಂಡುಕೋರರ ಗುಂಪು ಹೆಚ್‌ಟಿಎಸ್ ಮತ್ತು ಅದರ ಮಿತ್ರರು ಇದ್ಲಿಬ್ ಮತ್ತು ಅಲೆಪ್ಪೋ ಪ್ರಾಂತ್ಯಗಳನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡ ಬಳಿಕ, ಅಲ್ಲಿನ ಸರ್ಕಾರಿ ಕಚೇರಿಗಳು ಸೇರಿದಂತೆ ಎಲ್ಲಾ ಕಾರ್ಯ ಚಟುವಟಿಕೆಗಳು ಸ್ಥಗಿತಗೊಂಡಿತ್ತು. ಆಗ ಮುಕ್ತಿ ಸರ್ಕಾರದ ಮೂಲಕ ಅವುಗಳನ್ನು ಮೊಹಮ್ಮದ್ ಅಲ್ ಬಶೀರ್ ಪುನಃ ಸ್ಥಾಪಿಸಿದ್ದರು.

ಬಂಡುಕೋರರ ಗುಂಪು ಸಿರಿಯಾದ ರಾಜಧಾನಿ ಡಮಾಸ್ಕಸ್ ಮೇಲೆ ಡಿ.8ರಂದು ಹಿಡಿತ ಸಾಧಿಸಿದ್ದಾರೆ. ಆ ಬಳಿಕ ಅಧ್ಯಕ್ಷ ಬಶರ್ ಅಲ್ ಅಸಾದ್ ಮತ್ತು ಕುಟುಂಬ ರಷ್ಯಾದ ಮಾಸ್ಕೋಗೆ ಪಲಾಯನ ಮಾಡಿದೆ. ಸಿರಿಯಾ ಬಂಡುಕೋರರ ವಶವಾಗುವ ಮೂಲಕ ಬಶರ್ ಅಲ್ ಅಸಾದ್ ಕುಟುಂಬದ 50 ವರ್ಷಗಳ ನಿರಂಕುಶ ಆಡಳಿತ ಕೊನೆಗೊಂಡಿದೆ. ಬಂಡುಕೋರರ ಗುಂಪು, ” ನಮ್ಮ ಹೋರಾಟ ಅಸದ್ ಆಡಳಿತ ವಿರುದ್ದವಾಗಿತ್ತು. ಆತನ ಹುದ್ದೆಯಿಂದ ಕೆಳಗಿಳಿದ ಬಳಿಕ ಮುಂದೆ ಎಲ್ಲರನ್ನು ಒಳಗೊಂಡ ಸರ್ಕಾರ ರಚಿಸಿ ದೇಶ ಮುನ್ನಡೆಸುತ್ತೇವೆ” ಎಂದಿದೆ.

ಇದನ್ನೂ ಓದಿ : ಉತ್ತರ ಪ್ರದೇಶ | 180 ವರ್ಷ ಹಳೆಯ ಮಸೀದಿಯನ್ನು ಭಾಗಶಃ ಕೆಡವಿದ ಜಿಲ್ಲಾಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...