Homeಮುಖಪುಟಅರ್ಜುನ ಪ್ರಶಸ್ತಿ ಸ್ವೀಕರಿಸಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ

ಅರ್ಜುನ ಪ್ರಶಸ್ತಿ ಸ್ವೀಕರಿಸಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ

- Advertisement -
- Advertisement -

ಭಾರತೀಯ ಕ್ರಿಕೆಟಿಗ, ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಷ್ಠಿತ ಅರ್ಜುನ ಪ್ರಶಸ್ತಿಯನ್ನು ಪ್ರಧಾನ ಮಾಡಿದ್ದಾರೆ.

2023ರಲ್ಲಿ ಅದ್ಭುತ ಪ್ರದರ್ಶನ ನೀಡಿದ ಶಮಿ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಪ್ರತಿಷ್ಠಿತ ಗೌರವಕ್ಕೆ ಮೊಹಮ್ಮದ್ ಶಮಿ ಹೆಸರನ್ನು ಶಿಫಾರಸು ಮಾಡಿತ್ತು.

ಪ್ರಶಸ್ತಿಗೆ ನಾಮನಿರ್ದೇಶನಗೊಂಡಾಗ ಶಮಿಯು ಸಂತಸವನ್ನು ವ್ಯಕ್ತಪಡಿಸಿದ್ದರು. ಈ ಪ್ರಶಸ್ತಿಯು ಒಂದು ಕನಸು, ಹಲವಾರು ಮಂದಿ ತಮ್ಮ ಜೀವಿತಾವಧಿ ಮುಗಿದರೂ ಈ ಪ್ರಶಸ್ತಿ ಪಡೆಯಲು ಸಾಧ್ಯವಾಗುವುದಿಲ್ಲ. ಈ ಪ್ರಶಸ್ತಿಗೆ ನನ್ನನ್ನು ನಾಮಕರಣ ಮಾಡಿದ್ದಕ್ಕೆ ನನಗೆ ಸಂತೋಷವಾಗಿದೆ ಮತ್ತು ನಾನು ಹೆಮ್ಮೆಪಡುತ್ತೇನೆ. ಇದು ಅನೇಕರಿಗೆ ನನಸಾಗದ ಕನಸಾಗಿದೆ ಎಂದು ಶಮಿ ಸೋಮವಾರ ದೇಶದ ಎರಡನೇ ಅತಿದೊಡ್ಡ ಕ್ರೀಡಾ ಗೌರವಕ್ಕೆ ನಾಮನಿರ್ದೇಶನಗೊಂಡ ಬಗ್ಗೆ ಮಾತನಾಡುತ್ತಾ ಹೇಳಿದ್ದಾರೆ.

2023ರ ಏಕದನ ವಿಶ್ವಕಪ್‌ ಪಂದ್ಯದಲ್ಲಿ ಮೊಹಮ್ಮದ್ ಶಮಿ ಭಾರತೀಯ ತಂಡದ ಪ್ರಕಾಶಮಾನವಾದ ತಾರೆಗಳಲ್ಲಿ ಒಬ್ಬರಾಗಿದ್ದರು. ಶಮಿ ಕೇವಲ ಏಳು ಪಂದ್ಯಗಳಲ್ಲಿ 24 ವಿಕೆಟ್‌ಗಳನ್ನು ಪಡೆದರು. ಈ ಮೂಲಕ ಹಲವಾರು ದಾಖಲೆಗಳನ್ನು ಮುರಿದರು ಮತ್ತು ಪಂದ್ಯಾವಳಿಯ ಇತಿಹಾಸದಲ್ಲಿ ಭಾರತದ ಸಾರ್ವಕಾಲಿಕ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಶಮಿ ಈ ಟೂರ್ನಿಯಲ್ಲಿ ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅವರಿಗಿಂತ ಹೆಚ್ಚು ವಿಕೆಟ್‌ಗಳನ್ನು ಗಳಿಸಿ ಮೆಚ್ಚುಗೆಗೆ ಪಾತ್ರರಾಗಿದ್ದರು.

ಶಮಿ ಉತ್ತರಪ್ರದೇಶದ ಅಮ್ರೋಹದ ಸಹಸ್ಪುರ ಗ್ರಾಮದ ನಿವಾಸಿಯಾಗಿದ್ದಾರೆ. ಅವರ ತಂದೆ ತೌಸೀಫ್‌ ಅಲಿ ರೈತರಾಗಿದ್ದಾರೆ. ಇವರ ತಂದೆ ತಾಯಿಗೆ ಐವರು ಮಕ್ಕಳು. ಶಮಿ ತಮ್ಮ ಯೌವನದಲ್ಲಿ ವೇಗದ ಬೌಲರ್ ಆಗಿದ್ದರು. ಶಮಿ 15 ವರ್ಷದವನಾಗಿದ್ದಾಗ ಅವರ ಮನೆಯಿಂದ 22 ಕಿಲೋಮೀಟರ್ ದೂರದಲ್ಲಿರುವ ಮೊರದಾಬಾದ್‌ನಲ್ಲಿರುವ ಕ್ರಿಕೆಟ್ ತರಬೇತುದಾರ ಬದ್ರುದ್ದೀನ್ ಸಿದ್ದಿಕ್ ಬಳಿಗೆ ತರಬೇತಿಗೆ ತೆರಳಿದ್ದರು. ಅಲ್ಲಿ ಪರಿಶ್ರಮದಿಂದ ತರಭೇತಿಯನ್ನು ಪಡೆದರು. ಆದರೆ ಉತ್ತರಪ್ರದೇಶದ ಅಂಡರ್‌ 19 ತಂಡಕ್ಕೆ ಪ್ರವೇಶ ಸಿಕ್ಕಿರಲಿಲ್ಲ. 2005ರಲ್ಲಿ ಇವರನ್ನು ರಾಜ್ಯ ತಂಡಕ್ಕೆ ಆಯ್ಕೆ ಮಾಡುವ ಉದ್ದೇಶದಿಂದ ಕೋಚ್‌ ಬದ್ರುದ್ದೀನ್ ಕೊಲ್ಕತ್ತಾಗೆ ಕಳುಹಿಸಿದ್ದರು. ಆ ಬಳಿಕ ಅವರು ಬಂಗಾಳ ಕ್ರಿಕೆಟ್‌ ಅಸೋಸಿಯೇಷನ್‌ ಮಾಜಿ ಸಹಾಯಕ ಕಾರ್ಯದರ್ಶಿ ದೇಬಬ್ರತ ದಾಸ್‌ ಅವರ ಕ್ಲಬ್‌ನಲ್ಲಿ ತರಬೇತಿಯನ್ನು ಪಡೆದಿದ್ದರು. ಶಮಿ ಅವರನ್ನು 2010-11ರಲ್ಲಿ ರಣಜಿ ಟ್ರೋಪಿಗೆ ಬಂಗಾಳ ತಂಡಕ್ಕೆ ಸೇರಿಸಲಾಗಿತ್ತು. ಬಳಿಕ 2010ರಲ್ಲಿ ಅವರು ಟ್ವೆಂಟಿ20 ಪಂದ್ಯಗಳಲ್ಲಿ ಆಡಿದ್ದರು. 2013ರಲ್ಲಿ ಅವರು ಅಂತಾರಷ್ಟ್ರೀಯ ಪಂದ್ಯಕ್ಕೆ ಪಾದಾರ್ಪಣೆ ಮಾಡಿದ್ದರು.

ಏಷ್ಯನ್ ಗೇಮ್ಸ್‌ನ ತಾರೆಗಳಿಗೂ ಪ್ರಶಸ್ತಿ ಪ್ರಧಾನ:
ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು, ಏಷ್ಯನ್ ಗೇಮ್ಸ್ ತಾರೆ ಶೀತಲ್ ದೇವಿ ಅವರಿಗೆ ಅರ್ಜುನ ಪ್ರಶಸ್ತಿಯನ್ನು ಪ್ರಧಾನ ಮಾಡಿದರು. ಇದಲ್ಲದೆ ಭಾರತದ ಏಷ್ಯನ್ ಗೇಮ್ಸ್ ಹೀರೋಗಳಾದ ಅದಿತಿ ಗೋಪಿಚಂದ್ ಸ್ವಾಮಿ, ಶ್ರೀಶಂಕರ್ ಮುರಳಿ, ಪಾರುಲ್ ಚೌಧರಿ, ಇಶಾ ಸಿಂಗ್ ಮತ್ತು ಐಶ್ವರಿ ಪ್ರತಾಪ್ ಸಿಂಗ್ ತೋಮರ್ ಅವರಿಗೂ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.

2023 ರಲ್ಲಿ ಅರ್ಜುನ ಪ್ರಶಸ್ತಿ ಪಡೆದ ಕ್ರೀಡಾಪಟುಗಳ ಪಟ್ಟಿ

-ಓಜಸ್ ಪ್ರವೀಣ್ ಡಿಯೋಟಾಲೆ (ಬಿಲ್ಲುಗಾರಿಕೆ)
-ಅದಿತಿ ಗೋಪಿಚಂದ್ ಸ್ವಾಮಿ (ಬಿಲ್ಲುಗಾರಿಕೆ)
-ಶ್ರೀಶಂಕರ್ ಎಂ (ಅಥ್ಲೆಟಿಕ್ಸ್)
-ಪಾರುಲ್ ಚೌಧರಿ (ಅಥ್ಲೆಟಿಕ್ಸ್)
-ಮೊಹಮೀದ್ ಹುಸಾಮುದ್ದೀನ್ (ಬಾಕ್ಸಿಂಗ್)
-ಆರ್ ವೈಶಾಲಿ (ಚೆಸ್)
-ಮೊಹಮ್ಮದ್ ಶಮಿ (ಕ್ರಿಕೆಟ್)
-ಅನುಷ್ ಅಗರ್ವಾಲಾ (ಈಕ್ವೆಸ್ಟ್ರಿಯನ್)
-ದಿವ್ಯಾಕೃತಿ ಸಿಂಗ್ (ಈಕ್ವೆಸ್ಟ್ರಿಯನ್ ಡ್ರೆಸ್ಸೇಜ್)
-ದೀಕ್ಷಾ ದಾಗರ್ (ಗಾಲ್ಫ್)
-ಕ್ರಿಶನ್ ಬಹದ್ದೂರ್ ಪಾಠಕ್ (ಹಾಕಿ)
-ಪುಖ್ರಂಬಂ ಸುಶೀಲಾ ಚಾನು (ಹಾಕಿ)
-ಪವನ್ ಕುಮಾರ್ (ಕಬಡ್ಡಿ)
-ರಿತು ನೇಗಿ (ಕಬಡ್ಡಿ)
-ನಸ್ರೀನ್ (ಖೋ-ಖೋ)
-ಪಿಂಕಿ (ಲಾನ್ ಬೌಲ್ಸ್)
-ಐಶ್ವರಿ ಪ್ರತಾಪ್ ಸಿಂಗ್ ತೋಮರ್ (ಶೂಟಿಂಗ್)
-ಇಶಾ ಸಿಂಗ್ (ಶೂಟಿಂಗ್)
-ಹರಿಂದರ್ ಪಾಲ್ ಸಿಂಗ್ ಸಂಧು (ಸ್ಕ್ವಾಷ್)
-ಅಹಿಕಾ ಮುಖರ್ಜಿ (ಟೇಬಲ್ ಟೆನಿಸ್)
-ಸುನಿಲ್ ಕುಮಾರ್ (ಕುಸ್ತಿ)
-ಆಂಟಿಮ್ (ಕುಸ್ತಿ)
-ನವೋರೆಮ್ ರೋಶಿಬಿನಾ ದೇವಿ (ವುಶು)
-ಶೀತಲ್ ದೇವಿ (ಪ್ಯಾರಾ ಆರ್ಚರಿ)
-ಇಲ್ಲೂರಿ ಅಜಯ್ ಕುಮಾರ್ ರೆಡ್ಡಿ (ಅಂಧ ಕ್ರಿಕೆಟ್)
-ಪ್ರಾಚಿ ಯಾದವ್ (ಪ್ಯಾರಾ ಕ್ಯಾನೋಯಿಂಗ್)

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...