Homeಮುಖಪುಟಅರ್ಜುನ ಪ್ರಶಸ್ತಿ ಸ್ವೀಕರಿಸಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ

ಅರ್ಜುನ ಪ್ರಶಸ್ತಿ ಸ್ವೀಕರಿಸಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ

- Advertisement -
- Advertisement -

ಭಾರತೀಯ ಕ್ರಿಕೆಟಿಗ, ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಷ್ಠಿತ ಅರ್ಜುನ ಪ್ರಶಸ್ತಿಯನ್ನು ಪ್ರಧಾನ ಮಾಡಿದ್ದಾರೆ.

2023ರಲ್ಲಿ ಅದ್ಭುತ ಪ್ರದರ್ಶನ ನೀಡಿದ ಶಮಿ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಪ್ರತಿಷ್ಠಿತ ಗೌರವಕ್ಕೆ ಮೊಹಮ್ಮದ್ ಶಮಿ ಹೆಸರನ್ನು ಶಿಫಾರಸು ಮಾಡಿತ್ತು.

ಪ್ರಶಸ್ತಿಗೆ ನಾಮನಿರ್ದೇಶನಗೊಂಡಾಗ ಶಮಿಯು ಸಂತಸವನ್ನು ವ್ಯಕ್ತಪಡಿಸಿದ್ದರು. ಈ ಪ್ರಶಸ್ತಿಯು ಒಂದು ಕನಸು, ಹಲವಾರು ಮಂದಿ ತಮ್ಮ ಜೀವಿತಾವಧಿ ಮುಗಿದರೂ ಈ ಪ್ರಶಸ್ತಿ ಪಡೆಯಲು ಸಾಧ್ಯವಾಗುವುದಿಲ್ಲ. ಈ ಪ್ರಶಸ್ತಿಗೆ ನನ್ನನ್ನು ನಾಮಕರಣ ಮಾಡಿದ್ದಕ್ಕೆ ನನಗೆ ಸಂತೋಷವಾಗಿದೆ ಮತ್ತು ನಾನು ಹೆಮ್ಮೆಪಡುತ್ತೇನೆ. ಇದು ಅನೇಕರಿಗೆ ನನಸಾಗದ ಕನಸಾಗಿದೆ ಎಂದು ಶಮಿ ಸೋಮವಾರ ದೇಶದ ಎರಡನೇ ಅತಿದೊಡ್ಡ ಕ್ರೀಡಾ ಗೌರವಕ್ಕೆ ನಾಮನಿರ್ದೇಶನಗೊಂಡ ಬಗ್ಗೆ ಮಾತನಾಡುತ್ತಾ ಹೇಳಿದ್ದಾರೆ.

2023ರ ಏಕದನ ವಿಶ್ವಕಪ್‌ ಪಂದ್ಯದಲ್ಲಿ ಮೊಹಮ್ಮದ್ ಶಮಿ ಭಾರತೀಯ ತಂಡದ ಪ್ರಕಾಶಮಾನವಾದ ತಾರೆಗಳಲ್ಲಿ ಒಬ್ಬರಾಗಿದ್ದರು. ಶಮಿ ಕೇವಲ ಏಳು ಪಂದ್ಯಗಳಲ್ಲಿ 24 ವಿಕೆಟ್‌ಗಳನ್ನು ಪಡೆದರು. ಈ ಮೂಲಕ ಹಲವಾರು ದಾಖಲೆಗಳನ್ನು ಮುರಿದರು ಮತ್ತು ಪಂದ್ಯಾವಳಿಯ ಇತಿಹಾಸದಲ್ಲಿ ಭಾರತದ ಸಾರ್ವಕಾಲಿಕ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಶಮಿ ಈ ಟೂರ್ನಿಯಲ್ಲಿ ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅವರಿಗಿಂತ ಹೆಚ್ಚು ವಿಕೆಟ್‌ಗಳನ್ನು ಗಳಿಸಿ ಮೆಚ್ಚುಗೆಗೆ ಪಾತ್ರರಾಗಿದ್ದರು.

ಶಮಿ ಉತ್ತರಪ್ರದೇಶದ ಅಮ್ರೋಹದ ಸಹಸ್ಪುರ ಗ್ರಾಮದ ನಿವಾಸಿಯಾಗಿದ್ದಾರೆ. ಅವರ ತಂದೆ ತೌಸೀಫ್‌ ಅಲಿ ರೈತರಾಗಿದ್ದಾರೆ. ಇವರ ತಂದೆ ತಾಯಿಗೆ ಐವರು ಮಕ್ಕಳು. ಶಮಿ ತಮ್ಮ ಯೌವನದಲ್ಲಿ ವೇಗದ ಬೌಲರ್ ಆಗಿದ್ದರು. ಶಮಿ 15 ವರ್ಷದವನಾಗಿದ್ದಾಗ ಅವರ ಮನೆಯಿಂದ 22 ಕಿಲೋಮೀಟರ್ ದೂರದಲ್ಲಿರುವ ಮೊರದಾಬಾದ್‌ನಲ್ಲಿರುವ ಕ್ರಿಕೆಟ್ ತರಬೇತುದಾರ ಬದ್ರುದ್ದೀನ್ ಸಿದ್ದಿಕ್ ಬಳಿಗೆ ತರಬೇತಿಗೆ ತೆರಳಿದ್ದರು. ಅಲ್ಲಿ ಪರಿಶ್ರಮದಿಂದ ತರಭೇತಿಯನ್ನು ಪಡೆದರು. ಆದರೆ ಉತ್ತರಪ್ರದೇಶದ ಅಂಡರ್‌ 19 ತಂಡಕ್ಕೆ ಪ್ರವೇಶ ಸಿಕ್ಕಿರಲಿಲ್ಲ. 2005ರಲ್ಲಿ ಇವರನ್ನು ರಾಜ್ಯ ತಂಡಕ್ಕೆ ಆಯ್ಕೆ ಮಾಡುವ ಉದ್ದೇಶದಿಂದ ಕೋಚ್‌ ಬದ್ರುದ್ದೀನ್ ಕೊಲ್ಕತ್ತಾಗೆ ಕಳುಹಿಸಿದ್ದರು. ಆ ಬಳಿಕ ಅವರು ಬಂಗಾಳ ಕ್ರಿಕೆಟ್‌ ಅಸೋಸಿಯೇಷನ್‌ ಮಾಜಿ ಸಹಾಯಕ ಕಾರ್ಯದರ್ಶಿ ದೇಬಬ್ರತ ದಾಸ್‌ ಅವರ ಕ್ಲಬ್‌ನಲ್ಲಿ ತರಬೇತಿಯನ್ನು ಪಡೆದಿದ್ದರು. ಶಮಿ ಅವರನ್ನು 2010-11ರಲ್ಲಿ ರಣಜಿ ಟ್ರೋಪಿಗೆ ಬಂಗಾಳ ತಂಡಕ್ಕೆ ಸೇರಿಸಲಾಗಿತ್ತು. ಬಳಿಕ 2010ರಲ್ಲಿ ಅವರು ಟ್ವೆಂಟಿ20 ಪಂದ್ಯಗಳಲ್ಲಿ ಆಡಿದ್ದರು. 2013ರಲ್ಲಿ ಅವರು ಅಂತಾರಷ್ಟ್ರೀಯ ಪಂದ್ಯಕ್ಕೆ ಪಾದಾರ್ಪಣೆ ಮಾಡಿದ್ದರು.

ಏಷ್ಯನ್ ಗೇಮ್ಸ್‌ನ ತಾರೆಗಳಿಗೂ ಪ್ರಶಸ್ತಿ ಪ್ರಧಾನ:
ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು, ಏಷ್ಯನ್ ಗೇಮ್ಸ್ ತಾರೆ ಶೀತಲ್ ದೇವಿ ಅವರಿಗೆ ಅರ್ಜುನ ಪ್ರಶಸ್ತಿಯನ್ನು ಪ್ರಧಾನ ಮಾಡಿದರು. ಇದಲ್ಲದೆ ಭಾರತದ ಏಷ್ಯನ್ ಗೇಮ್ಸ್ ಹೀರೋಗಳಾದ ಅದಿತಿ ಗೋಪಿಚಂದ್ ಸ್ವಾಮಿ, ಶ್ರೀಶಂಕರ್ ಮುರಳಿ, ಪಾರುಲ್ ಚೌಧರಿ, ಇಶಾ ಸಿಂಗ್ ಮತ್ತು ಐಶ್ವರಿ ಪ್ರತಾಪ್ ಸಿಂಗ್ ತೋಮರ್ ಅವರಿಗೂ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.

2023 ರಲ್ಲಿ ಅರ್ಜುನ ಪ್ರಶಸ್ತಿ ಪಡೆದ ಕ್ರೀಡಾಪಟುಗಳ ಪಟ್ಟಿ

-ಓಜಸ್ ಪ್ರವೀಣ್ ಡಿಯೋಟಾಲೆ (ಬಿಲ್ಲುಗಾರಿಕೆ)
-ಅದಿತಿ ಗೋಪಿಚಂದ್ ಸ್ವಾಮಿ (ಬಿಲ್ಲುಗಾರಿಕೆ)
-ಶ್ರೀಶಂಕರ್ ಎಂ (ಅಥ್ಲೆಟಿಕ್ಸ್)
-ಪಾರುಲ್ ಚೌಧರಿ (ಅಥ್ಲೆಟಿಕ್ಸ್)
-ಮೊಹಮೀದ್ ಹುಸಾಮುದ್ದೀನ್ (ಬಾಕ್ಸಿಂಗ್)
-ಆರ್ ವೈಶಾಲಿ (ಚೆಸ್)
-ಮೊಹಮ್ಮದ್ ಶಮಿ (ಕ್ರಿಕೆಟ್)
-ಅನುಷ್ ಅಗರ್ವಾಲಾ (ಈಕ್ವೆಸ್ಟ್ರಿಯನ್)
-ದಿವ್ಯಾಕೃತಿ ಸಿಂಗ್ (ಈಕ್ವೆಸ್ಟ್ರಿಯನ್ ಡ್ರೆಸ್ಸೇಜ್)
-ದೀಕ್ಷಾ ದಾಗರ್ (ಗಾಲ್ಫ್)
-ಕ್ರಿಶನ್ ಬಹದ್ದೂರ್ ಪಾಠಕ್ (ಹಾಕಿ)
-ಪುಖ್ರಂಬಂ ಸುಶೀಲಾ ಚಾನು (ಹಾಕಿ)
-ಪವನ್ ಕುಮಾರ್ (ಕಬಡ್ಡಿ)
-ರಿತು ನೇಗಿ (ಕಬಡ್ಡಿ)
-ನಸ್ರೀನ್ (ಖೋ-ಖೋ)
-ಪಿಂಕಿ (ಲಾನ್ ಬೌಲ್ಸ್)
-ಐಶ್ವರಿ ಪ್ರತಾಪ್ ಸಿಂಗ್ ತೋಮರ್ (ಶೂಟಿಂಗ್)
-ಇಶಾ ಸಿಂಗ್ (ಶೂಟಿಂಗ್)
-ಹರಿಂದರ್ ಪಾಲ್ ಸಿಂಗ್ ಸಂಧು (ಸ್ಕ್ವಾಷ್)
-ಅಹಿಕಾ ಮುಖರ್ಜಿ (ಟೇಬಲ್ ಟೆನಿಸ್)
-ಸುನಿಲ್ ಕುಮಾರ್ (ಕುಸ್ತಿ)
-ಆಂಟಿಮ್ (ಕುಸ್ತಿ)
-ನವೋರೆಮ್ ರೋಶಿಬಿನಾ ದೇವಿ (ವುಶು)
-ಶೀತಲ್ ದೇವಿ (ಪ್ಯಾರಾ ಆರ್ಚರಿ)
-ಇಲ್ಲೂರಿ ಅಜಯ್ ಕುಮಾರ್ ರೆಡ್ಡಿ (ಅಂಧ ಕ್ರಿಕೆಟ್)
-ಪ್ರಾಚಿ ಯಾದವ್ (ಪ್ಯಾರಾ ಕ್ಯಾನೋಯಿಂಗ್)

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...