Homeಮುಖಪುಟಅಪಘಾತದ ಗಾಯಾಳುಗಳನ್ನು ರಕ್ಷಿಸಿದ ಕ್ರಿಕೆಟರ್‌ ಮೊಹಮ್ಮದ್‌ ಶಮಿ

ಅಪಘಾತದ ಗಾಯಾಳುಗಳನ್ನು ರಕ್ಷಿಸಿದ ಕ್ರಿಕೆಟರ್‌ ಮೊಹಮ್ಮದ್‌ ಶಮಿ

- Advertisement -
- Advertisement -

ಉತ್ತರಪ್ರದೇಶದ ನ್ಯಾನಿತಾಲ್‌ನಲ್ಲಿ ಅಪಘಾತದ ಗಾಯಾಳುಗಳನ್ನು ಕ್ರಿಕೆಟರ್‌ ಮೊಹಮ್ಮದ್‌ ಶಮಿ ರಕ್ಷಿಸಿದ್ದು, ಈ ಕುರಿತ ವಿಡಿಯೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ತಡರಾತ್ರಿ ನ್ಯಾನಿತಾಲ್‌ನಲ್ಲಿ ಮೊಹಮ್ಮದ್ ಶಮಿ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಅವರ ಎದುರೇ ಕಾರೊಂದು ಅಪಘಾತವಾಗಿ ರಸ್ತೆಯಿಂದ ಕೆಳಗೆ ಉರುಳಿ ಬಿದ್ದಿದೆ. ತಕ್ಷಣ ಎಚ್ಚೆತ್ತ ಶಮಿ ಮತ್ತು ಅವರ ಜೊತೆಗಿದ್ದವರು ಕಾರಿನಲ್ಲಿದ್ದವರನ್ನು ರಕ್ಷಿಸಿ ಮೇಲಕ್ಕೆತ್ತಿದ್ದಾರೆ.

ಈ ಕುರಿತ ವಿಡಿಯೋವನ್ನು ಶಮಿ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಆತ ಎಷ್ಟು ಅದೃಷ್ಟವಂತನೆಂದರೆ, ದೇವರು ಆತನಿಗೆ 2ನೇ ಬಾರಿ ಬದುಕು ನೀಡಿದ್ದಾನೆ. ಆತನ ಕಾರು ನನ್ನ ಕಾರಿನ ಎದುರುಗಡೆಯೆ ನೈನಿತಾಲ್ ನ ಬೆಟ್ಟದ ರಸ್ತೆಯಿಂದ ಕೆಳಕ್ಕೆ ಉರುಳಿತು. ನಾವು ಆತನನ್ನು ಬಹಳ ಸುರಕ್ಷಿತವಾಗಿ ಕಾರಿನಿಂದ ಹೊರ ತಂದೆವು ಎಂದು ಇನ್ಸ್ಟಾಗ್ರಾಮ್ ನಲ್ಲಿ ಶಮಿ ಬರೆದುಕೊಂಡಿದ್ದಾರೆ.

ಇನ್ಸ್ಟಾಗ್ರಾಮ್ ನಲ್ಲಿ ಶಮಿ ಹಂಚಿಕೊಂಡಿರುವ ವಿಡಿಯೊದಲ್ಲಿ ಕಾರಿನಲ್ಲಿದ್ದ ಗಾಯಾಳುವನ್ನು ಅವರು ರಕ್ಷಿಸುತ್ತಿರುವುದನ್ನು ನೋಡಬಹುದಾಗಿದೆ. ಈ ವಿಡಿಯೋ ನೋಡಿದ ಬಳಿಕ ಶಮಿ ಫ್ಯಾನ್ಸ್, ದೇವರಂತೆ ಬಂದು ಆತನನ್ನು ಕಾಪಾಡಿದ್ದೀರಿ ಸರ್ ಎಂದು ಕಮೆಂಟ್ ಮಾಡಿದ್ದಾರೆ.

ಇತ್ತೀಚೆಗೆ ಕೊನೆಗೊಂಡ ಏಕದಿನ ವಿಶ್ವಕಪ್ ಕ್ರಿಕೆಟ್‌ನಲ್ಲಿ ಮುಹಮ್ಮದ್ ಶಮಿ ಅತ್ಯಂತ ಯಶಸ್ವಿ ಬೌಲರ್ ಆಗಿ ಹೊರಹೊಮ್ಮಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

0
ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ, ಸರ್ಕಾರಿ ಉದ್ಯೋಗ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರು ಕೂಡ ಮೀಸಲಾತಿಯನ್ನು ಪಡೆಯಬೇಕು, ಅವರ ಮೀಸಲಾತಿ ಪರವಾಗಿ ನಾನಿದ್ದೇನೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)...