Homeಸಿನಿಮಾಕ್ರೀಡೆಇಂದಿನ ಟೆಸ್ಟ್ ಅಭ್ಯಾಸ ಪಂದ್ಯದಲ್ಲಿ ಕ್ರೀಡಾಸ್ಪೂರ್ತಿ ಮೆರದು ಜನರ ಹೃದಯಗೆದ್ದ ಮೊಹಮ್ಮದ್ ಸಿರಾಜ್

ಇಂದಿನ ಟೆಸ್ಟ್ ಅಭ್ಯಾಸ ಪಂದ್ಯದಲ್ಲಿ ಕ್ರೀಡಾಸ್ಪೂರ್ತಿ ಮೆರದು ಜನರ ಹೃದಯಗೆದ್ದ ಮೊಹಮ್ಮದ್ ಸಿರಾಜ್

ಆ ಸಮಯದಲ್ಲಿ ತಾನು ರನೌಟ್‌ ಆಗಬಹುದು ಅಥವಾ ರನ್ ಗಳಿಸಬಹುದು ಎಂಬುದರ ಯಾವ ಪರಿವೆಯೂ ಅವರಿಗಿರಲಿಲ್ಲ. ಅವರಿಗಿದ್ದುದು ಬೌಲರ್ ಕ್ಯಾಮರೂನ್ ಗ್ರೀನ್‌ಗೆ ಏನೂ ಆಗಬಾರದೆಂಬ ಕಾಳಜಿಯಷ್ಟೆ

- Advertisement -
- Advertisement -

ಅಕ್ಟೋಬರ್ 21 ರಂದು ನಡೆದ ಕೋಲ್ಕತ್ತಾ ನೈಟ್‌ ರೈಡರ್ಸ್ ಮತ್ತು‌ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ದೇಶದ ಗಮನಸೆಳೆದಿದ್ದರು. ಬೆಂಗಳೂರು ಪರ ಬೌಲ್ ಮಾಡಿದ ಅವರು 4 ಓವರ್‌ಗಳಲ್ಲಿ ಕೇವಲ 8 ರನ್ ನೀಡಿ 2 ಮೇಡನ್ ಮತ್ತು 3 ವಿಕೆಟ್ ಗಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು. ಅದೇ ಮೊಹಮ್ಮದ್ ಸಿರಾಜ್ ಇಂದು ಮತ್ತೊಮ್ಮೆ ಕ್ರೀಡಾಭಿಮಾನಿಗಳ ಹೃದಯಗೆದಿದ್ದಾರೆ. ಆದರೆ ಈ ಬಾರಿ ಬೌಲ್ ಮಾಡಿ ಅಲ್ಲ, ಬದಲಿಗೆ ಕ್ರೀಡಾಂಗಣದಲ್ಲಿ ಮಾನವೀಯತೆ ಪ್ರದರ್ಶಿಸುವ ಮೂಲಕ.

ಇಂದು ಭಾರತ ಆಸ್ಟ್ರೇಲಿಯಾ ಎ ನಡುವಿನ ಎರಡನೇ ಟೆಸ್ಟ್ ಅಭ್ಯಾಸ ಪಂದ್ಯ ಆರಂಭವಾಗಿದೆ. ಮೊದಲು ಬ್ಯಾಟ್ ಮಾಡಿದ ಭಾರತ ಅಲ್ಪ ಮೊತ್ತಕ್ಕೆ ಎಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡಿತು. ಆದರೆ ಭಾರತದ ಮೊದಲ ಇನ್ನಿಂಗ್ಸ್‌ನಲ್ಲಿ 44 ಓವರ್‌ಗಳಲ್ಲಿ 165 ರನ್‌ಗಳಿಗೆ 9 ವಿಕೆಟ್ ಕಳೆದುಕೊಂಡಿತ್ತು. ಕೊನೆಗೆ ಜಸ್ಪ್ರಿತ್ ಬೂಮ್ರ ಮತ್ತು ಮೊಹಮ್ಮದ್ ಸಿರಾಜ್ ಕ್ರೀಸ್‌ನಲ್ಲಿದ್ದರು. ಆಗ 44 ನೇ ಓವರ್‌ನಲ್ಲಿ ಆಸ್ಟ್ರೇಲಿಯಾದ ಕ್ಯಾಮರೂನ್ ಗ್ರೀನ್ ಬೌಲಿಂಗ್ ಮಾಡಿದರು. ಬ್ಯಾಟಿಂಗ್ ಕ್ರೀಸ್‌ನಲ್ಲಿದ್ದ ಬೂಮ್ರ ತನ್ನತ್ತ ಬಂದ್ ಬೌಲ್‌ಗೆ ನೇರವಾಗಿ ಬಾರಿಸಿದಾಗ ಅದು ಸೀದಾ ಬೌಲರ್ ಕ್ಯಾಮರೂನ್ ಗ್ರೀನ್ ತಲೆಗೆ ಬಡಿಯಿತು. ಕ್ರೀಸ್‌ನ ಇನ್ನೊಂದು ಬದಿಯಲ್ಲಿದ್ದ ಮೊಹಮ್ಮದ್ ಸಿರಾಜ್ ಕ್ಷಣಮಾತ್ರದಲ್ಲಿ ಬ್ಯಾಟ್ ಕೈಬಿಟ್ಟು ಸೀದಾ ಕ್ಯಾಮರೂನ್ ಗ್ರೀನ್ ಬಳಿಗೆ ಓಡಿ ಅವರನ್ನು ಸಂತೈಸಿದರು. ಅವರಿಗೆ ಆ ಸಮಯದಲ್ಲಿ ತಾನು ರನೌಟ್‌ ಆಗಬಹುದು ಅಥವಾ ರನ್ ಗಳಿಸಬಹುದು ಎಂಬುದರ ಯಾವ ಪರಿವೆಯೂ ಅವರಿಗಿರಲಿಲ್ಲ. ಅವರಿಗಿದ್ದುದು ಬೌಲರ್ ಕ್ಯಾಮರೂನ್ ಗ್ರೀನ್‌ಗೆ ಏನೂ ಆಗಬಾರದೆಂಬ ಕಾಳಜಿಯಷ್ಟೆ.. ಆ ಕಾಳಜಿಗೆ ಕ್ರೀಡಾಭಿಮಾನಿಗಳು ಗೌರವದ ಮಳೆ ಸುರಿಸಿದ್ದಾರೆ.

ಈ ಘಟನೆ ನಡೆದ ತಕ್ಷಣ ಎಲ್ಲರೂ ಕ್ಯಾಮರೂನ್ ಗ್ರೀನ್ ಬಳಿ ಓಡಿದ್ದಾರೆ. ಅಂಪೈರ್ ಕೂಡ ತೆರಳಿ ಮೆಡಿಕಲ್ ಟೀಮ್‌ ಬರಲು ಸನ್ಹೆ ಮಾಡಿದರು. ಆದರೆ ಎಲ್ಲರಿಗಿಂತ ಮೊದಲು ತೆರಳಿದ್ದು ಮಾತ್ರ ನಾನ್‌ಸ್ಟ್ರೈಕರ್‌ ನಲ್ಲಿದ್ದ ಮೊಹಮ್ಮದ್ ಸಿರಾಜ್. ಆ ಕ್ಷಣಗಳನ್ನು ಈ ಕೆಳಗಿನ ವಿಡಿಯೋದಲ್ಲಿ ನೋಡಿ.

“ಮೊಹಮ್ಮದ್ ಸಿರಾಜ್, ಸ್ವಾರ್ಥರಹಿತ ಕ್ರಿಕೆಟರ್ ಇಂದು ನನ್ನ ಹೃದಯ ಗೆದ್ದಿದ್ದಾರೆ. ಎಂಥ ಅದ್ಬುತ ಕ್ಷಣ” ಎಂದು ಹಲವರು ಟ್ವೀಟ್‌ ಮಾಡಿದ್ದಾರೆ.

ಜಸ್ಪ್ರಿತ್ ಬುಮ್ರಾ ಸ್ಟ್ರೈಟ್ ಡ್ರೈವ್‌ನಿಂದ ತಲೆಗೆ ಪೆಟ್ಟಾದ ಕ್ಯಾಮರೂನ್ ಗ್ರೀನ್‌ರನ್ನು ಪರೀಕ್ಷಿಸಲು ನಾನ್-ಸ್ಟ್ರೈಕರ್ ಬ್ಯಾಟ್ಸ್‌ಮನ್ ಮೊಹಮ್ಮದ್ ಸಿರಾಜ್ ಬೇಗನೆ ಧಾವಿಸಿದರು ಎಂದು ಬಿಸಿಸಿಐ ಟ್ವೀಟ್ ಮಾಡಿದೆ.

ಪೆಟ್ಟು ತಿಂದ ಕ್ಯಾಮರೂನ್ ಗ್ರೀನ್‌ರನ್ನು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಡ್ರೆಸ್ಸಿಂಗ್ ರೂಂಗೆ ಕರೆದೊಯ್ಯಲಾಯಿತು.


ಇದನ್ನೂ ಓದಿ: ಭಾರತ-ಆಸ್ಟ್ರೇಲಿಯಾ ಏಕದಿನ ಪಂದ್ಯ: ಮೈದಾನಕ್ಕೆ ನುಗ್ಗಿ ‘ಸ್ಟಾಪ್ ಅದಾನಿ’ ಎಂದ ಪ್ರತಿಭಟನೆಗಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...