Homeಸಿನಿಮಾಕ್ರೀಡೆಇಂದಿನ ಟೆಸ್ಟ್ ಅಭ್ಯಾಸ ಪಂದ್ಯದಲ್ಲಿ ಕ್ರೀಡಾಸ್ಪೂರ್ತಿ ಮೆರದು ಜನರ ಹೃದಯಗೆದ್ದ ಮೊಹಮ್ಮದ್ ಸಿರಾಜ್

ಇಂದಿನ ಟೆಸ್ಟ್ ಅಭ್ಯಾಸ ಪಂದ್ಯದಲ್ಲಿ ಕ್ರೀಡಾಸ್ಪೂರ್ತಿ ಮೆರದು ಜನರ ಹೃದಯಗೆದ್ದ ಮೊಹಮ್ಮದ್ ಸಿರಾಜ್

ಆ ಸಮಯದಲ್ಲಿ ತಾನು ರನೌಟ್‌ ಆಗಬಹುದು ಅಥವಾ ರನ್ ಗಳಿಸಬಹುದು ಎಂಬುದರ ಯಾವ ಪರಿವೆಯೂ ಅವರಿಗಿರಲಿಲ್ಲ. ಅವರಿಗಿದ್ದುದು ಬೌಲರ್ ಕ್ಯಾಮರೂನ್ ಗ್ರೀನ್‌ಗೆ ಏನೂ ಆಗಬಾರದೆಂಬ ಕಾಳಜಿಯಷ್ಟೆ

- Advertisement -
- Advertisement -

ಅಕ್ಟೋಬರ್ 21 ರಂದು ನಡೆದ ಕೋಲ್ಕತ್ತಾ ನೈಟ್‌ ರೈಡರ್ಸ್ ಮತ್ತು‌ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ದೇಶದ ಗಮನಸೆಳೆದಿದ್ದರು. ಬೆಂಗಳೂರು ಪರ ಬೌಲ್ ಮಾಡಿದ ಅವರು 4 ಓವರ್‌ಗಳಲ್ಲಿ ಕೇವಲ 8 ರನ್ ನೀಡಿ 2 ಮೇಡನ್ ಮತ್ತು 3 ವಿಕೆಟ್ ಗಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು. ಅದೇ ಮೊಹಮ್ಮದ್ ಸಿರಾಜ್ ಇಂದು ಮತ್ತೊಮ್ಮೆ ಕ್ರೀಡಾಭಿಮಾನಿಗಳ ಹೃದಯಗೆದಿದ್ದಾರೆ. ಆದರೆ ಈ ಬಾರಿ ಬೌಲ್ ಮಾಡಿ ಅಲ್ಲ, ಬದಲಿಗೆ ಕ್ರೀಡಾಂಗಣದಲ್ಲಿ ಮಾನವೀಯತೆ ಪ್ರದರ್ಶಿಸುವ ಮೂಲಕ.

ಇಂದು ಭಾರತ ಆಸ್ಟ್ರೇಲಿಯಾ ಎ ನಡುವಿನ ಎರಡನೇ ಟೆಸ್ಟ್ ಅಭ್ಯಾಸ ಪಂದ್ಯ ಆರಂಭವಾಗಿದೆ. ಮೊದಲು ಬ್ಯಾಟ್ ಮಾಡಿದ ಭಾರತ ಅಲ್ಪ ಮೊತ್ತಕ್ಕೆ ಎಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡಿತು. ಆದರೆ ಭಾರತದ ಮೊದಲ ಇನ್ನಿಂಗ್ಸ್‌ನಲ್ಲಿ 44 ಓವರ್‌ಗಳಲ್ಲಿ 165 ರನ್‌ಗಳಿಗೆ 9 ವಿಕೆಟ್ ಕಳೆದುಕೊಂಡಿತ್ತು. ಕೊನೆಗೆ ಜಸ್ಪ್ರಿತ್ ಬೂಮ್ರ ಮತ್ತು ಮೊಹಮ್ಮದ್ ಸಿರಾಜ್ ಕ್ರೀಸ್‌ನಲ್ಲಿದ್ದರು. ಆಗ 44 ನೇ ಓವರ್‌ನಲ್ಲಿ ಆಸ್ಟ್ರೇಲಿಯಾದ ಕ್ಯಾಮರೂನ್ ಗ್ರೀನ್ ಬೌಲಿಂಗ್ ಮಾಡಿದರು. ಬ್ಯಾಟಿಂಗ್ ಕ್ರೀಸ್‌ನಲ್ಲಿದ್ದ ಬೂಮ್ರ ತನ್ನತ್ತ ಬಂದ್ ಬೌಲ್‌ಗೆ ನೇರವಾಗಿ ಬಾರಿಸಿದಾಗ ಅದು ಸೀದಾ ಬೌಲರ್ ಕ್ಯಾಮರೂನ್ ಗ್ರೀನ್ ತಲೆಗೆ ಬಡಿಯಿತು. ಕ್ರೀಸ್‌ನ ಇನ್ನೊಂದು ಬದಿಯಲ್ಲಿದ್ದ ಮೊಹಮ್ಮದ್ ಸಿರಾಜ್ ಕ್ಷಣಮಾತ್ರದಲ್ಲಿ ಬ್ಯಾಟ್ ಕೈಬಿಟ್ಟು ಸೀದಾ ಕ್ಯಾಮರೂನ್ ಗ್ರೀನ್ ಬಳಿಗೆ ಓಡಿ ಅವರನ್ನು ಸಂತೈಸಿದರು. ಅವರಿಗೆ ಆ ಸಮಯದಲ್ಲಿ ತಾನು ರನೌಟ್‌ ಆಗಬಹುದು ಅಥವಾ ರನ್ ಗಳಿಸಬಹುದು ಎಂಬುದರ ಯಾವ ಪರಿವೆಯೂ ಅವರಿಗಿರಲಿಲ್ಲ. ಅವರಿಗಿದ್ದುದು ಬೌಲರ್ ಕ್ಯಾಮರೂನ್ ಗ್ರೀನ್‌ಗೆ ಏನೂ ಆಗಬಾರದೆಂಬ ಕಾಳಜಿಯಷ್ಟೆ.. ಆ ಕಾಳಜಿಗೆ ಕ್ರೀಡಾಭಿಮಾನಿಗಳು ಗೌರವದ ಮಳೆ ಸುರಿಸಿದ್ದಾರೆ.

ಈ ಘಟನೆ ನಡೆದ ತಕ್ಷಣ ಎಲ್ಲರೂ ಕ್ಯಾಮರೂನ್ ಗ್ರೀನ್ ಬಳಿ ಓಡಿದ್ದಾರೆ. ಅಂಪೈರ್ ಕೂಡ ತೆರಳಿ ಮೆಡಿಕಲ್ ಟೀಮ್‌ ಬರಲು ಸನ್ಹೆ ಮಾಡಿದರು. ಆದರೆ ಎಲ್ಲರಿಗಿಂತ ಮೊದಲು ತೆರಳಿದ್ದು ಮಾತ್ರ ನಾನ್‌ಸ್ಟ್ರೈಕರ್‌ ನಲ್ಲಿದ್ದ ಮೊಹಮ್ಮದ್ ಸಿರಾಜ್. ಆ ಕ್ಷಣಗಳನ್ನು ಈ ಕೆಳಗಿನ ವಿಡಿಯೋದಲ್ಲಿ ನೋಡಿ.

“ಮೊಹಮ್ಮದ್ ಸಿರಾಜ್, ಸ್ವಾರ್ಥರಹಿತ ಕ್ರಿಕೆಟರ್ ಇಂದು ನನ್ನ ಹೃದಯ ಗೆದ್ದಿದ್ದಾರೆ. ಎಂಥ ಅದ್ಬುತ ಕ್ಷಣ” ಎಂದು ಹಲವರು ಟ್ವೀಟ್‌ ಮಾಡಿದ್ದಾರೆ.

ಜಸ್ಪ್ರಿತ್ ಬುಮ್ರಾ ಸ್ಟ್ರೈಟ್ ಡ್ರೈವ್‌ನಿಂದ ತಲೆಗೆ ಪೆಟ್ಟಾದ ಕ್ಯಾಮರೂನ್ ಗ್ರೀನ್‌ರನ್ನು ಪರೀಕ್ಷಿಸಲು ನಾನ್-ಸ್ಟ್ರೈಕರ್ ಬ್ಯಾಟ್ಸ್‌ಮನ್ ಮೊಹಮ್ಮದ್ ಸಿರಾಜ್ ಬೇಗನೆ ಧಾವಿಸಿದರು ಎಂದು ಬಿಸಿಸಿಐ ಟ್ವೀಟ್ ಮಾಡಿದೆ.

ಪೆಟ್ಟು ತಿಂದ ಕ್ಯಾಮರೂನ್ ಗ್ರೀನ್‌ರನ್ನು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಡ್ರೆಸ್ಸಿಂಗ್ ರೂಂಗೆ ಕರೆದೊಯ್ಯಲಾಯಿತು.


ಇದನ್ನೂ ಓದಿ: ಭಾರತ-ಆಸ್ಟ್ರೇಲಿಯಾ ಏಕದಿನ ಪಂದ್ಯ: ಮೈದಾನಕ್ಕೆ ನುಗ್ಗಿ ‘ಸ್ಟಾಪ್ ಅದಾನಿ’ ಎಂದ ಪ್ರತಿಭಟನೆಗಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...