Homeಸಿನಿಮಾಕ್ರೀಡೆಇಂದಿನ ಟೆಸ್ಟ್ ಅಭ್ಯಾಸ ಪಂದ್ಯದಲ್ಲಿ ಕ್ರೀಡಾಸ್ಪೂರ್ತಿ ಮೆರದು ಜನರ ಹೃದಯಗೆದ್ದ ಮೊಹಮ್ಮದ್ ಸಿರಾಜ್

ಇಂದಿನ ಟೆಸ್ಟ್ ಅಭ್ಯಾಸ ಪಂದ್ಯದಲ್ಲಿ ಕ್ರೀಡಾಸ್ಪೂರ್ತಿ ಮೆರದು ಜನರ ಹೃದಯಗೆದ್ದ ಮೊಹಮ್ಮದ್ ಸಿರಾಜ್

ಆ ಸಮಯದಲ್ಲಿ ತಾನು ರನೌಟ್‌ ಆಗಬಹುದು ಅಥವಾ ರನ್ ಗಳಿಸಬಹುದು ಎಂಬುದರ ಯಾವ ಪರಿವೆಯೂ ಅವರಿಗಿರಲಿಲ್ಲ. ಅವರಿಗಿದ್ದುದು ಬೌಲರ್ ಕ್ಯಾಮರೂನ್ ಗ್ರೀನ್‌ಗೆ ಏನೂ ಆಗಬಾರದೆಂಬ ಕಾಳಜಿಯಷ್ಟೆ

- Advertisement -
- Advertisement -

ಅಕ್ಟೋಬರ್ 21 ರಂದು ನಡೆದ ಕೋಲ್ಕತ್ತಾ ನೈಟ್‌ ರೈಡರ್ಸ್ ಮತ್ತು‌ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ದೇಶದ ಗಮನಸೆಳೆದಿದ್ದರು. ಬೆಂಗಳೂರು ಪರ ಬೌಲ್ ಮಾಡಿದ ಅವರು 4 ಓವರ್‌ಗಳಲ್ಲಿ ಕೇವಲ 8 ರನ್ ನೀಡಿ 2 ಮೇಡನ್ ಮತ್ತು 3 ವಿಕೆಟ್ ಗಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು. ಅದೇ ಮೊಹಮ್ಮದ್ ಸಿರಾಜ್ ಇಂದು ಮತ್ತೊಮ್ಮೆ ಕ್ರೀಡಾಭಿಮಾನಿಗಳ ಹೃದಯಗೆದಿದ್ದಾರೆ. ಆದರೆ ಈ ಬಾರಿ ಬೌಲ್ ಮಾಡಿ ಅಲ್ಲ, ಬದಲಿಗೆ ಕ್ರೀಡಾಂಗಣದಲ್ಲಿ ಮಾನವೀಯತೆ ಪ್ರದರ್ಶಿಸುವ ಮೂಲಕ.

ಇಂದು ಭಾರತ ಆಸ್ಟ್ರೇಲಿಯಾ ಎ ನಡುವಿನ ಎರಡನೇ ಟೆಸ್ಟ್ ಅಭ್ಯಾಸ ಪಂದ್ಯ ಆರಂಭವಾಗಿದೆ. ಮೊದಲು ಬ್ಯಾಟ್ ಮಾಡಿದ ಭಾರತ ಅಲ್ಪ ಮೊತ್ತಕ್ಕೆ ಎಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡಿತು. ಆದರೆ ಭಾರತದ ಮೊದಲ ಇನ್ನಿಂಗ್ಸ್‌ನಲ್ಲಿ 44 ಓವರ್‌ಗಳಲ್ಲಿ 165 ರನ್‌ಗಳಿಗೆ 9 ವಿಕೆಟ್ ಕಳೆದುಕೊಂಡಿತ್ತು. ಕೊನೆಗೆ ಜಸ್ಪ್ರಿತ್ ಬೂಮ್ರ ಮತ್ತು ಮೊಹಮ್ಮದ್ ಸಿರಾಜ್ ಕ್ರೀಸ್‌ನಲ್ಲಿದ್ದರು. ಆಗ 44 ನೇ ಓವರ್‌ನಲ್ಲಿ ಆಸ್ಟ್ರೇಲಿಯಾದ ಕ್ಯಾಮರೂನ್ ಗ್ರೀನ್ ಬೌಲಿಂಗ್ ಮಾಡಿದರು. ಬ್ಯಾಟಿಂಗ್ ಕ್ರೀಸ್‌ನಲ್ಲಿದ್ದ ಬೂಮ್ರ ತನ್ನತ್ತ ಬಂದ್ ಬೌಲ್‌ಗೆ ನೇರವಾಗಿ ಬಾರಿಸಿದಾಗ ಅದು ಸೀದಾ ಬೌಲರ್ ಕ್ಯಾಮರೂನ್ ಗ್ರೀನ್ ತಲೆಗೆ ಬಡಿಯಿತು. ಕ್ರೀಸ್‌ನ ಇನ್ನೊಂದು ಬದಿಯಲ್ಲಿದ್ದ ಮೊಹಮ್ಮದ್ ಸಿರಾಜ್ ಕ್ಷಣಮಾತ್ರದಲ್ಲಿ ಬ್ಯಾಟ್ ಕೈಬಿಟ್ಟು ಸೀದಾ ಕ್ಯಾಮರೂನ್ ಗ್ರೀನ್ ಬಳಿಗೆ ಓಡಿ ಅವರನ್ನು ಸಂತೈಸಿದರು. ಅವರಿಗೆ ಆ ಸಮಯದಲ್ಲಿ ತಾನು ರನೌಟ್‌ ಆಗಬಹುದು ಅಥವಾ ರನ್ ಗಳಿಸಬಹುದು ಎಂಬುದರ ಯಾವ ಪರಿವೆಯೂ ಅವರಿಗಿರಲಿಲ್ಲ. ಅವರಿಗಿದ್ದುದು ಬೌಲರ್ ಕ್ಯಾಮರೂನ್ ಗ್ರೀನ್‌ಗೆ ಏನೂ ಆಗಬಾರದೆಂಬ ಕಾಳಜಿಯಷ್ಟೆ.. ಆ ಕಾಳಜಿಗೆ ಕ್ರೀಡಾಭಿಮಾನಿಗಳು ಗೌರವದ ಮಳೆ ಸುರಿಸಿದ್ದಾರೆ.

ಈ ಘಟನೆ ನಡೆದ ತಕ್ಷಣ ಎಲ್ಲರೂ ಕ್ಯಾಮರೂನ್ ಗ್ರೀನ್ ಬಳಿ ಓಡಿದ್ದಾರೆ. ಅಂಪೈರ್ ಕೂಡ ತೆರಳಿ ಮೆಡಿಕಲ್ ಟೀಮ್‌ ಬರಲು ಸನ್ಹೆ ಮಾಡಿದರು. ಆದರೆ ಎಲ್ಲರಿಗಿಂತ ಮೊದಲು ತೆರಳಿದ್ದು ಮಾತ್ರ ನಾನ್‌ಸ್ಟ್ರೈಕರ್‌ ನಲ್ಲಿದ್ದ ಮೊಹಮ್ಮದ್ ಸಿರಾಜ್. ಆ ಕ್ಷಣಗಳನ್ನು ಈ ಕೆಳಗಿನ ವಿಡಿಯೋದಲ್ಲಿ ನೋಡಿ.

“ಮೊಹಮ್ಮದ್ ಸಿರಾಜ್, ಸ್ವಾರ್ಥರಹಿತ ಕ್ರಿಕೆಟರ್ ಇಂದು ನನ್ನ ಹೃದಯ ಗೆದ್ದಿದ್ದಾರೆ. ಎಂಥ ಅದ್ಬುತ ಕ್ಷಣ” ಎಂದು ಹಲವರು ಟ್ವೀಟ್‌ ಮಾಡಿದ್ದಾರೆ.

ಜಸ್ಪ್ರಿತ್ ಬುಮ್ರಾ ಸ್ಟ್ರೈಟ್ ಡ್ರೈವ್‌ನಿಂದ ತಲೆಗೆ ಪೆಟ್ಟಾದ ಕ್ಯಾಮರೂನ್ ಗ್ರೀನ್‌ರನ್ನು ಪರೀಕ್ಷಿಸಲು ನಾನ್-ಸ್ಟ್ರೈಕರ್ ಬ್ಯಾಟ್ಸ್‌ಮನ್ ಮೊಹಮ್ಮದ್ ಸಿರಾಜ್ ಬೇಗನೆ ಧಾವಿಸಿದರು ಎಂದು ಬಿಸಿಸಿಐ ಟ್ವೀಟ್ ಮಾಡಿದೆ.

ಪೆಟ್ಟು ತಿಂದ ಕ್ಯಾಮರೂನ್ ಗ್ರೀನ್‌ರನ್ನು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಡ್ರೆಸ್ಸಿಂಗ್ ರೂಂಗೆ ಕರೆದೊಯ್ಯಲಾಯಿತು.


ಇದನ್ನೂ ಓದಿ: ಭಾರತ-ಆಸ್ಟ್ರೇಲಿಯಾ ಏಕದಿನ ಪಂದ್ಯ: ಮೈದಾನಕ್ಕೆ ನುಗ್ಗಿ ‘ಸ್ಟಾಪ್ ಅದಾನಿ’ ಎಂದ ಪ್ರತಿಭಟನೆಗಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...