Homeಸಿನಿಮಾಕ್ರೀಡೆಇಂದಿನ ಟೆಸ್ಟ್ ಅಭ್ಯಾಸ ಪಂದ್ಯದಲ್ಲಿ ಕ್ರೀಡಾಸ್ಪೂರ್ತಿ ಮೆರದು ಜನರ ಹೃದಯಗೆದ್ದ ಮೊಹಮ್ಮದ್ ಸಿರಾಜ್

ಇಂದಿನ ಟೆಸ್ಟ್ ಅಭ್ಯಾಸ ಪಂದ್ಯದಲ್ಲಿ ಕ್ರೀಡಾಸ್ಪೂರ್ತಿ ಮೆರದು ಜನರ ಹೃದಯಗೆದ್ದ ಮೊಹಮ್ಮದ್ ಸಿರಾಜ್

ಆ ಸಮಯದಲ್ಲಿ ತಾನು ರನೌಟ್‌ ಆಗಬಹುದು ಅಥವಾ ರನ್ ಗಳಿಸಬಹುದು ಎಂಬುದರ ಯಾವ ಪರಿವೆಯೂ ಅವರಿಗಿರಲಿಲ್ಲ. ಅವರಿಗಿದ್ದುದು ಬೌಲರ್ ಕ್ಯಾಮರೂನ್ ಗ್ರೀನ್‌ಗೆ ಏನೂ ಆಗಬಾರದೆಂಬ ಕಾಳಜಿಯಷ್ಟೆ

- Advertisement -
- Advertisement -

ಅಕ್ಟೋಬರ್ 21 ರಂದು ನಡೆದ ಕೋಲ್ಕತ್ತಾ ನೈಟ್‌ ರೈಡರ್ಸ್ ಮತ್ತು‌ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ದೇಶದ ಗಮನಸೆಳೆದಿದ್ದರು. ಬೆಂಗಳೂರು ಪರ ಬೌಲ್ ಮಾಡಿದ ಅವರು 4 ಓವರ್‌ಗಳಲ್ಲಿ ಕೇವಲ 8 ರನ್ ನೀಡಿ 2 ಮೇಡನ್ ಮತ್ತು 3 ವಿಕೆಟ್ ಗಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು. ಅದೇ ಮೊಹಮ್ಮದ್ ಸಿರಾಜ್ ಇಂದು ಮತ್ತೊಮ್ಮೆ ಕ್ರೀಡಾಭಿಮಾನಿಗಳ ಹೃದಯಗೆದಿದ್ದಾರೆ. ಆದರೆ ಈ ಬಾರಿ ಬೌಲ್ ಮಾಡಿ ಅಲ್ಲ, ಬದಲಿಗೆ ಕ್ರೀಡಾಂಗಣದಲ್ಲಿ ಮಾನವೀಯತೆ ಪ್ರದರ್ಶಿಸುವ ಮೂಲಕ.

ಇಂದು ಭಾರತ ಆಸ್ಟ್ರೇಲಿಯಾ ಎ ನಡುವಿನ ಎರಡನೇ ಟೆಸ್ಟ್ ಅಭ್ಯಾಸ ಪಂದ್ಯ ಆರಂಭವಾಗಿದೆ. ಮೊದಲು ಬ್ಯಾಟ್ ಮಾಡಿದ ಭಾರತ ಅಲ್ಪ ಮೊತ್ತಕ್ಕೆ ಎಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡಿತು. ಆದರೆ ಭಾರತದ ಮೊದಲ ಇನ್ನಿಂಗ್ಸ್‌ನಲ್ಲಿ 44 ಓವರ್‌ಗಳಲ್ಲಿ 165 ರನ್‌ಗಳಿಗೆ 9 ವಿಕೆಟ್ ಕಳೆದುಕೊಂಡಿತ್ತು. ಕೊನೆಗೆ ಜಸ್ಪ್ರಿತ್ ಬೂಮ್ರ ಮತ್ತು ಮೊಹಮ್ಮದ್ ಸಿರಾಜ್ ಕ್ರೀಸ್‌ನಲ್ಲಿದ್ದರು. ಆಗ 44 ನೇ ಓವರ್‌ನಲ್ಲಿ ಆಸ್ಟ್ರೇಲಿಯಾದ ಕ್ಯಾಮರೂನ್ ಗ್ರೀನ್ ಬೌಲಿಂಗ್ ಮಾಡಿದರು. ಬ್ಯಾಟಿಂಗ್ ಕ್ರೀಸ್‌ನಲ್ಲಿದ್ದ ಬೂಮ್ರ ತನ್ನತ್ತ ಬಂದ್ ಬೌಲ್‌ಗೆ ನೇರವಾಗಿ ಬಾರಿಸಿದಾಗ ಅದು ಸೀದಾ ಬೌಲರ್ ಕ್ಯಾಮರೂನ್ ಗ್ರೀನ್ ತಲೆಗೆ ಬಡಿಯಿತು. ಕ್ರೀಸ್‌ನ ಇನ್ನೊಂದು ಬದಿಯಲ್ಲಿದ್ದ ಮೊಹಮ್ಮದ್ ಸಿರಾಜ್ ಕ್ಷಣಮಾತ್ರದಲ್ಲಿ ಬ್ಯಾಟ್ ಕೈಬಿಟ್ಟು ಸೀದಾ ಕ್ಯಾಮರೂನ್ ಗ್ರೀನ್ ಬಳಿಗೆ ಓಡಿ ಅವರನ್ನು ಸಂತೈಸಿದರು. ಅವರಿಗೆ ಆ ಸಮಯದಲ್ಲಿ ತಾನು ರನೌಟ್‌ ಆಗಬಹುದು ಅಥವಾ ರನ್ ಗಳಿಸಬಹುದು ಎಂಬುದರ ಯಾವ ಪರಿವೆಯೂ ಅವರಿಗಿರಲಿಲ್ಲ. ಅವರಿಗಿದ್ದುದು ಬೌಲರ್ ಕ್ಯಾಮರೂನ್ ಗ್ರೀನ್‌ಗೆ ಏನೂ ಆಗಬಾರದೆಂಬ ಕಾಳಜಿಯಷ್ಟೆ.. ಆ ಕಾಳಜಿಗೆ ಕ್ರೀಡಾಭಿಮಾನಿಗಳು ಗೌರವದ ಮಳೆ ಸುರಿಸಿದ್ದಾರೆ.

ಈ ಘಟನೆ ನಡೆದ ತಕ್ಷಣ ಎಲ್ಲರೂ ಕ್ಯಾಮರೂನ್ ಗ್ರೀನ್ ಬಳಿ ಓಡಿದ್ದಾರೆ. ಅಂಪೈರ್ ಕೂಡ ತೆರಳಿ ಮೆಡಿಕಲ್ ಟೀಮ್‌ ಬರಲು ಸನ್ಹೆ ಮಾಡಿದರು. ಆದರೆ ಎಲ್ಲರಿಗಿಂತ ಮೊದಲು ತೆರಳಿದ್ದು ಮಾತ್ರ ನಾನ್‌ಸ್ಟ್ರೈಕರ್‌ ನಲ್ಲಿದ್ದ ಮೊಹಮ್ಮದ್ ಸಿರಾಜ್. ಆ ಕ್ಷಣಗಳನ್ನು ಈ ಕೆಳಗಿನ ವಿಡಿಯೋದಲ್ಲಿ ನೋಡಿ.

“ಮೊಹಮ್ಮದ್ ಸಿರಾಜ್, ಸ್ವಾರ್ಥರಹಿತ ಕ್ರಿಕೆಟರ್ ಇಂದು ನನ್ನ ಹೃದಯ ಗೆದ್ದಿದ್ದಾರೆ. ಎಂಥ ಅದ್ಬುತ ಕ್ಷಣ” ಎಂದು ಹಲವರು ಟ್ವೀಟ್‌ ಮಾಡಿದ್ದಾರೆ.

ಜಸ್ಪ್ರಿತ್ ಬುಮ್ರಾ ಸ್ಟ್ರೈಟ್ ಡ್ರೈವ್‌ನಿಂದ ತಲೆಗೆ ಪೆಟ್ಟಾದ ಕ್ಯಾಮರೂನ್ ಗ್ರೀನ್‌ರನ್ನು ಪರೀಕ್ಷಿಸಲು ನಾನ್-ಸ್ಟ್ರೈಕರ್ ಬ್ಯಾಟ್ಸ್‌ಮನ್ ಮೊಹಮ್ಮದ್ ಸಿರಾಜ್ ಬೇಗನೆ ಧಾವಿಸಿದರು ಎಂದು ಬಿಸಿಸಿಐ ಟ್ವೀಟ್ ಮಾಡಿದೆ.

ಪೆಟ್ಟು ತಿಂದ ಕ್ಯಾಮರೂನ್ ಗ್ರೀನ್‌ರನ್ನು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಡ್ರೆಸ್ಸಿಂಗ್ ರೂಂಗೆ ಕರೆದೊಯ್ಯಲಾಯಿತು.


ಇದನ್ನೂ ಓದಿ: ಭಾರತ-ಆಸ್ಟ್ರೇಲಿಯಾ ಏಕದಿನ ಪಂದ್ಯ: ಮೈದಾನಕ್ಕೆ ನುಗ್ಗಿ ‘ಸ್ಟಾಪ್ ಅದಾನಿ’ ಎಂದ ಪ್ರತಿಭಟನೆಗಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...