Homeಚಳವಳಿ6 ಪ್ರಕರಣಗಳನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ ಮೊಹಮ್ಮದ್ ಜುಬೇರ್‌

6 ಪ್ರಕರಣಗಳನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ ಮೊಹಮ್ಮದ್ ಜುಬೇರ್‌

- Advertisement -
- Advertisement -

ಉತ್ತರ ಪ್ರದೇಶ ಪೊಲೀಸರು ತಮ್ಮ ವಿರುದ್ಧ ಹೂಡಿರುವ ಆರು ಪ್ರಕರಣಗಳನ್ನು ರದ್ದುಗೊಳಿಸುವಂತೆ ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್ ಜುಬೇರ್ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಜೊತೆಗೆ ಪ್ರಕರಣಗಳ ತನಿಖೆಗೆ ರಚಿಸಿರುವ ವಿಶೇಷ ತನಿಖಾ ತಂಡವನ್ನೂ ರದ್ದುಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಅವರ ವಿರುದ್ಧ ದಾಖಲಾದ ಆರು ಪ್ರಕರಣಗಳ ಪೈಕಿ ಮೂರು ಪ್ರಕರಣಗಳು ಲಖಿಂಪುರ ಖೇರಿ, ಹತ್ರಾಸ್ ಮತ್ತು ಸೀತಾಪುರ್‌ನಲ್ಲಿ ದಾಖಲಾಗಿತ್ತು. ಈ ಪ್ರಕರಣವು ಬಿಜೆಪಿ ಬೆಂಬಲಿತ ಬಲಪಂಥೀಯ ನಾಯಕರನ್ನು “ದ್ವೇಷದ ದೊರೆಗಳು” ಎಂದು ಕರೆದ ಟ್ವೀಟ್‌ನ ವಿರುದ್ಧ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರದಂದು ಉತ್ತರ ಪ್ರದೇಶದ ಸೀತಾಪುರದಲ್ಲಿ ದಾಖಲಾದ ಪ್ರಕರಣದಲ್ಲಿ ಅವರ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ವಿಸ್ತರಿಸಿದೆ. ಈ ಪ್ರಕರಣದಲ್ಲಿ ಜುಬೇರ್‌‌ ವಿರುದ್ಧ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಆದರೆ, ಉತ್ತರ ಪ್ರದೇಶ ಮತ್ತು ದೆಹಲಿಯಲ್ಲಿ ಅವರ ವಿರುದ್ಧ ದಾಖಲಾಗಿರುವ ಇತರ ಪ್ರಕರಣಗಳಲ್ಲಿ ಅವರಿಗೆ ಜಾಮೀನು ನೀಡಲಾಗಿಲ್ಲ. ಹೀಗಾಗಿ ಅವರು ಇನ್ನೂ ಜೈಲಿನಲ್ಲಿದ್ದಾರೆ. ಈ ನಡುವೆ ಜುಬೇರ್‌ ಅವರು ತನಗೆ ಜೀವ ಬೆದರಿಕೆ ಇದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು.

ಇದನ್ನೂ ಓದಿ: ಜುಬೇರ್‌ ಪ್ರಕರಣ: ಜಾಮೀನು ನೀಡಲು ನ್ಯಾಯಾಧೀಶರು ಹೆದರುತ್ತಿದ್ದಾರೆ- ಜಸ್ಟೀಸ್‌ ದೀಪಕ್‌ ಗುಪ್ತಾ

ಅದೇ ದಿನ, ಉತ್ತರ ಪ್ರದೇಶ ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿದ್ದು, ಅವರ ವಿರುದ್ಧದ ಅನೇಕ ಪ್ರಕರಣಗಳನ್ನು ತನಿಖೆ ಮಾಡಿದ್ದಾರೆ. ಶೀಘ್ರ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸುವಂತೆ ಎಸ್‌ಐಟಿಗೆ ಸೂಚಿಸಿದ್ದಾರೆ.

1983 ರಲ್ಲಿ ಬಿಡುಗಡೆಯಾದ ಜನಪ್ರಿಯ ಹಿಂದಿ ಚಲನಚಿತ್ರದ ಸ್ಕ್ರೀನ್‌ಶಾಟ್ ಅನ್ನು ನಾಲ್ಕು ವರ್ಷಗಳ ಹಿಂದೆ ಜುಬೇರ್‌ ಟ್ವೀಟ್ ಮಾಡಿದ್ದರು. ಈ ಟ್ವೀಟ್‌ ಮಾಡಿದ್ದಕ್ಕಾಗಿ ಅವರನ್ನು ಜೂನ್ 27 ರಂದು ದೆಹಲಿ ಪೊಲೀಸರು ಬಂಧಿಸಿದ್ದರು.

ಬಿಜೆಪಿಯ ರಾಷ್ಟ್ರೀಯ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಅವರು ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮೊಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ವೀಡಿಯೊವನ್ನು ಜುಬೇರ್‌ ವೈರಲ್ ಮಾಡಿದ ನಂತರ ವಿಶ್ವದಾದ್ಯಂತ ಬಿಜೆಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದು ಆಡಳಿತರೂಢ ಬಿಜೆಪಿಗೆ ತೀವ್ರ ಮುಗರಕ್ಕೀಡು ಮಾಡಿತ್ತು. ಇದಾಗಿ ಕೆಲವೇ ದಿನಗಳ ನಂತರ ಜುಬೇರ್‌ ಬಂಧನ ನಡೆದಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಪತ್ರಕರ್ತ ಜುಬೇರ್‌‌ ವಿರುದ್ಧ ತನಿಖೆಗೆ ಎಸ್‌ಐಟಿ ರಚನೆ

ಮಂಗಳವಾರದ ವಿಚಾರಣೆಯ ವೇಳೆ ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಎಎಸ್ ಬೋಪಣ್ಣ ಅವರ ಪೀಠವು ಮೊಹಮ್ಮದ್ ಜುಬೇರ್ ಅವರ ಮನವಿಗೆ ಪ್ರತಿಕ್ರಿಯೆ ಸಲ್ಲಿಸಲು ಉತ್ತರ ಪ್ರದೇಶ ಸರ್ಕಾರಕ್ಕೆ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಈ ಪ್ರಕರಣದ ಮುಂದಿನ ವಿಚಾರಣೆ ಸೆಪ್ಟೆಂಬರ್ 7 ರಂದು ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...