Homeಮುಖಪುಟಮೊಹಮ್ಮದ್ ಝುಬೈರ್ ವಿರುದ್ಧದ ಪೋಕ್ಸೊ ಪ್ರಕರಣ ಮುಕ್ತಾಯ | ಹೈಕೋರ್ಟ್‌ಗೆ ಛತ್ತೀಸ್‌ಗಡ ಸರ್ಕಾರ ಮಾಹಿತಿ

ಮೊಹಮ್ಮದ್ ಝುಬೈರ್ ವಿರುದ್ಧದ ಪೋಕ್ಸೊ ಪ್ರಕರಣ ಮುಕ್ತಾಯ | ಹೈಕೋರ್ಟ್‌ಗೆ ಛತ್ತೀಸ್‌ಗಡ ಸರ್ಕಾರ ಮಾಹಿತಿ

- Advertisement -
- Advertisement -

ಖ್ಯಾತ ಫ್ಯಾಕ್ಟ್‌ಚೆಕ್ಕರ್‌, ಆಲ್ಟ್-ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಝುಬೈರ್ ವಿರುದ್ಧದ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಪ್ರಕರಣದಲ್ಲಿ ಮುಕ್ತಾಯ ವರದಿಯನ್ನು ಸಲ್ಲಿಸಲಾಗಿದೆ ಎಂದು ಛತ್ತೀಸ್‌ಗಢ ರಾಜ್ಯ ಸರ್ಕಾರ ಅಧಿಕೃತವಾಗಿ ಛತ್ತೀಸ್‌ಗಢ ಹೈಕೋರ್ಟ್‌ಗೆ ತಿಳಿಸಿದೆ. ಝುಬೈರ್ ಅವರು 2020 ರಲ್ಲಿ ಪೋಸ್ಟ್ ಮಾಡಿದ ಟ್ವೀಟ್‌ಗೆ ಸಂಬಂಧಿಸಿ ಈ ಪ್ರಕರಣ ದಾಖಲಾಗಿತ್ತು.

ಮುಖ್ಯ ನ್ಯಾಯಮೂರ್ತಿ ರಮೇಶ್ ಸಿನ್ಹಾ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ವರ್ಮಾ ಅವರನ್ನೊಳಗೊಂಡ ಪೀಠದ ಮುಂದೆ ರಾಜ್ಯದ ವಕೀಲರು ಈ ಮಾಹಿತಿಯನ್ನು ಮಂಡಿಸಿದ್ದಾರೆ. ಇದರ ನಂತರ, ವಿಭಾಗೀಯ ಪೀಠವು ಝುಬೈರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಲೇವಾರಿ ಮಾಡಿತು. ಇದರಲ್ಲಿ ಐಟಿ ಕಾಯ್ದೆ, ಐಪಿಸಿ ಮತ್ತು ಪೋಕ್ಸೋ ಕಾಯ್ದೆಯಡಿಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿದ್ದರು.

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಮೊಹಮ್ಮದ್ ಝುಬೈರ್ ಅವರು, ಸತ್ಯಕ್ಕೆ ಹಿನ್ನಡೆಯಾಗಬಹುದು, ಆದರೆ ಅದನ್ನು ಸೋಲಿಸಲು ಸಾಧ್ಯವಿಲ್ಲ. ನ್ಯಾಯವು ಗೆಲ್ಲುತ್ತದೆ! ಎಂದು ಹೇಳಿದ್ದಾರೆ.

“ಈಗ ಎರಡು ಕಡಿಮೆಯಾಗಿದೆ, ಇನ್ನೂ ಹತ್ತು ಎಫ್‌ಐಆರ್‌ಗಳು ಬಾಕಿ ಇವೆ. ಛತ್ತೀಸ್‌ಗಢದಲ್ಲಿ ಪೋಕ್ಸೋ ಕಾಯ್ದೆಯಡಿ ನನ್ನ ವಿರುದ್ಧ ಎಫ್‌ಐಆರ್ ದಾಖಲಾಗಿ 4 ವರ್ಷಗಳ ನಂತರ, ರಾಯ್‌ಪುರ ಪೊಲೀಸರು ಅಂತಿಮವಾಗಿ ಮುಕ್ತಾಯ ವರದಿಯನ್ನು ಸಲ್ಲಿಸಿದ್ದಾರೆ. ಛತ್ತೀಸ್‌ಗಢ ನ್ಯಾಯಾಲಯವು ಆದೇಶವನ್ನು ವಿಲೇವಾರಿ ಮಾಡಿದೆ. ಈ ಪ್ರಕರಣದಲ್ಲಿ, ಕನೂಂಗೊ ಪ್ರಿಯಾಂಕ್, ಎನ್‌ಸಿಪಿಸಿಆರ್ ತಮ್ಮ ಅಧಿಕೃತ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ದೆಹಲಿ ಮತ್ತು ರಾಯ್‌ಪುರ ಪೊಲೀಸರಿಗೆ ಪತ್ರ ಬರೆದು ನನ್ನ ಟ್ವೀಟ್ ಅಪ್ರಾಪ್ತ ಬಾಲಕಿಯ ಚಿತ್ರಹಿಂಸೆ ಮತ್ತು ಕಿರುಕುಳಕ್ಕೆ ಸಮನಾಗಿದೆ ಎಂದು ಆರೋಪಿಸಿ ನನ್ನ ವಿರುದ್ಧ ಅಪಪ್ರಚಾರ ನಡೆಸಿತು. ಆದರೆ ಕಳೆದ ವರ್ಷ, ದೆಹಲಿ ನ್ಯಾಯಾಲಯವು ನನ್ನ ವಿರುದ್ಧ ಪ್ರಕರಣ ದಾಖಲಿಸಿದ ವ್ಯಕ್ತಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಕೇಳಿತ್ತು. ಮತ್ತು ಈಗ ಛತ್ತೀಸ್‌ಗಢ ಪೊಲೀಸರು ಮುಕ್ತಾಯ ವರದಿಯನ್ನು ಸಲ್ಲಿಸಿ ನನ್ನ ಹೆಸರನ್ನು ತೆರವುಗೊಳಿಸಿದರು.” ಎಂದು ಝುಬೈರ್ ಹೇಳಿದ್ದಾರೆ.

ಪ್ರಕರಣದ ಹಿನ್ನಲೆ

ತಮ್ಮ ಅಪ್ರಾಪ್ತ ಮೊಮ್ಮಗಳೊಂದಿಗೆ ನಿಂತಿದ್ದ ಜಗದೀಶ್ ಸಿಂಗ್ ಎಂಬ ವ್ಯಕ್ತಿಯ ಪ್ರೊಫೈಲ್ ಚಿತ್ರವನ್ನು 2020 ರಲ್ಲಿ ಮೊಹಮ್ಮದ್ ಝುಬೈರ್ ಅವರು ಹಂಚಿಕೊಂಡ ನಂತರ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಜಗಧೀಶ್ ಸಿಂಗ್ ಅವರು ಝುಬೈರ್ ಅವರನ್ನು “ಜಿಹಾದಿ” ಎಂದು ಕರೆಯುವುದು ಸೇರಿದಂತೆ ಅವಹೇಳನಕಾರಿ ಭಾಷೆಯನ್ನು ಬಳಸಿದ್ದರು. ಇದನ್ನು ಉದ್ದೇಶಿಸಿ ಜುಬೈರ್ ಅವರು ಮಗುವನ್ನು ಒಳಗೊಂಡ ಪ್ರೊಫೈಲ್ ಚಿತ್ರವನ್ನು ಹಂಚಿ, ಮಕ್ಕಳ ಜೊತೆಗೆ ಇಂತಹ ಚಿತ್ರ ಹಾಕಿರುವ ನೀವು ಇಂತಹ ಭಾಷೆಯನ್ನು ಬಳಸುವುದು ಸರಿಯೆ ಎಂದು ಪ್ರಶ್ನಿಸಿದ್ದರು.

“ನಮಸ್ಕಾರ ಜಗದೀಶ್ ಸಿಂಗ್. ಸಾಮಾಜಿಕ ಮಾಧ್ಯಮದಲ್ಲಿ ಜನರನ್ನು ನಿಂದಿಸುವ ನಿಮ್ಮ ಅರೆಕಾಲಿಕ ಕೆಲಸದ ಬಗ್ಗೆ ನಿಮ್ಮ ಮುದ್ದಾದ ಮೊಮ್ಮಗಳಿಗೆ ತಿಳಿದಿದೆಯೇ? ನಿಮ್ಮ ಪ್ರೊಫೈಲ್ ಚಿತ್ರವನ್ನು ಬದಲಾಯಿಸಲು ನಾನು ಸೂಚಿಸುತ್ತೇನೆ.” ಎಂದು ಝುಬೈರ್ ಟ್ವೀಟ್ ಮಾಡಿದ್ದು, ಟ್ವೀಟ್ ಪೋಸ್ಟ್ ಮಾಡುವ ಮೊದಲು ಝುಬೈರ್ ಅವರು ಅಪ್ರಾಪ್ತ ಬಾಲಕಿಯ ಮುಖವನ್ನು ಮಸುಕುಗೊಳಿಸಿದ್ದರು.

ಝುಬೈರ್ ಅವರ ಟ್ವೀಟ್‌ನ ನಂತರ, ಜಗದೀಶ್ ಸಿಂಗ್ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ (NCPCR) ದೂರು ದಾಖಲಿಸಿದ್ದರು. ಇದರ ನಂತರ NCPCR ದೆಹಲಿ ಪೊಲೀಸರು ಮತ್ತು ರಾಯ್ಪುರ್ ಪೊಲೀಸರಿಗೆ ಪತ್ರ ಬರೆದು, ಈ ಟ್ವೀಟ್ ಅಪ್ರಾಪ್ತ ಬಾಲಕಿಗೆ ನೀಡುತ್ತಿರುವ ಚಿತ್ರಹಿಂಸೆ ಮತ್ತು ಕಿರುಕುಳವಾಗಿದೆ ಎಂದು ಹೇಳಿಕೊಂಡಿತ್ತು. ಇದರ ಆಧಾರದ ರಾಯ್ಪುರ್ ಪೊಲೀಸರು ಹಲವಾರು ಕಾನೂನು ನಿಬಂಧನೆಗಳ ಅಡಿಯಲ್ಲಿ ಝಬೈರ್‌ ವಿರುದ್ಧ FIR ದಾಖಲಿಸಿದ್ದರು.

ಈ ವೇಳೆ ಅವರ ವಿರುದ್ಧ IPC ಯ ಸೆಕ್ಷನ್ 509B (ಎಲೆಕ್ಟ್ರಾನಿಕ್ ವಿಧಾನಗಳಿಂದ ಲೈಂಗಿಕ ಕಿರುಕುಳ), POCSO ಕಾಯ್ದೆಯ ಸೆಕ್ಷನ್ 12 (ಮಗುವಿನ ಮೇಲೆ ಲೈಂಗಿಕ ಕಿರುಕುಳ ಎಸಗಿದ್ದಕ್ಕಾಗಿ ಶಿಕ್ಷೆ), IT ಕಾಯ್ದೆಯ ಸೆಕ್ಷನ್ 67 (ಎಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲ ವಿಷಯವನ್ನು ಪ್ರಕಟಿಸಿದ್ದಕ್ಕಾಗಿ ಅಥವಾ ರವಾನಿಸಿದ್ದಕ್ಕಾಗಿ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

FIR ಅನ್ನು ಪ್ರಶ್ನಿಸಿ, ಮೊಹಮ್ಮದ್ ಝುಬೈರ್ ಅವರು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (CrPC) ಸೆಕ್ಷನ್ 482 ರ ಅಡಿಯಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. ಈ ಎಫ್‌ಐಆರ್ ಕಾನೂನು ಪ್ರಕ್ರಿಯೆಯ ದುರುಪಯೋಗವಾಗಿದ್ದು, ತಾನು ಮಾಡಿರುವ ಟ್ವೀಟ್ ಆಪಾದಿತ ವಿಭಾಗಗಳ ಅಡಿಯಲ್ಲಿ ಯಾವುದೇ ಕ್ರಿಮಿನಲ್ ಅಪರಾಧವಲ್ಲ ಎಂದು ಅವರ ವಕೀಲರು ವಾದಿಸಿದ್ದರು. ಅಕ್ಟೋಬರ್ 2020 ರಲ್ಲಿ, ಝುಬೈರ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಆದೇಶ ಹೊರಡಿಸಿತ್ತು.

ಆಗಸ್ಟ್ 2023 ರಲ್ಲಿ, ದೆಹಲಿ ಹೈಕೋರ್ಟ್ ಜಗದೀಶ್ ಸಿಂಗ್ ಅವರು 2020 ರಲ್ಲಿ ಝುಬೈರ್ ಅವರನ್ನು “ಜಿಹಾದಿ” ಎಂದು ಕರೆದಿದ್ದ ಅವರ ಆಕ್ರಮಣಕಾರಿ ಟ್ವೀಟ್‌ಗಾಗಿ ಎಕ್ಸ್‌ನಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಆದೇಶಿಸಿತ್ತು. ಜುಬೈರ್ ವಿರುದ್ಧದ ಆಕ್ರಮಣಕಾರಿ ಕಾಮೆಂಟ್‌ಗಾಗಿ ಸಿಂಗ್ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಹೇಳುವ ಸ್ಥಿತಿ ವರದಿಯನ್ನು ದೆಹಲಿ ಪೊಲೀಸರು ಸಲ್ಲಿಸಿದ ನಂತರ ಈ ಆದೇಶವನ್ನು ಅಂಗೀಕರಿಸಲಾಯಿತು. ಜೊತೆಗೆ ಅವರ ಅವಹೇಳನಕಾರಿ ಕಾಮೆಂಟ್ ಸಾರ್ವಜನಿಕವಾಗಿ ಲಭ್ಯವಿದ್ದರೂ, ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿದ್ದಕ್ಕಾಗಿ ದೆಹಲಿ ಪೊಲೀಸರನ್ನು ನ್ಯಾಯಾಲಯವು ಈ ಹಿಂದೆ ಟೀಕಿಸಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ನಿಮ್ಮ ವಿಷವನ್ನು ಕೇರಳ ದೂರವಿಟ್ಟಿದೆ; ಒಬ್ಬ ಗೆದ್ದಿದ್ದಾರೆ, ಆದರೆ ಅದನ್ನು ಮುಚ್ಚುತ್ತೇವೆ’: ಬಿಜೆಪಿಗೆ ಸಿಪಿಐ(ಎಂ) ಸಂಸದ ಜಾನ್ ಬ್ರಿಟ್ಟಾಸ್

‘ನಿಮ್ಮ ವಿಷವನ್ನು ಕೇರಳ ದೂರವಿಟ್ಟಿದೆ; ಒಬ್ಬ ಗೆದ್ದಿದ್ದಾರೆ, ಆದರೆ ಅದನ್ನು ಮುಚ್ಚುತ್ತೇವೆ’: ಬಿಜೆಪಿಗೆ ಸಿಪಿಐ(ಎಂ) ಸಂಸದ ಜಾನ್ ಬ್ರಿಟ್ಟಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...