Homeಮುಖಪುಟಮೊಹಮ್ಮದ್ ಝುಬೈರ್ ವಿರುದ್ಧದ ಪೋಕ್ಸೊ ಪ್ರಕರಣ ಮುಕ್ತಾಯ | ಹೈಕೋರ್ಟ್‌ಗೆ ಛತ್ತೀಸ್‌ಗಡ ಸರ್ಕಾರ ಮಾಹಿತಿ

ಮೊಹಮ್ಮದ್ ಝುಬೈರ್ ವಿರುದ್ಧದ ಪೋಕ್ಸೊ ಪ್ರಕರಣ ಮುಕ್ತಾಯ | ಹೈಕೋರ್ಟ್‌ಗೆ ಛತ್ತೀಸ್‌ಗಡ ಸರ್ಕಾರ ಮಾಹಿತಿ

- Advertisement -
- Advertisement -

ಖ್ಯಾತ ಫ್ಯಾಕ್ಟ್‌ಚೆಕ್ಕರ್‌, ಆಲ್ಟ್-ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಝುಬೈರ್ ವಿರುದ್ಧದ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಪ್ರಕರಣದಲ್ಲಿ ಮುಕ್ತಾಯ ವರದಿಯನ್ನು ಸಲ್ಲಿಸಲಾಗಿದೆ ಎಂದು ಛತ್ತೀಸ್‌ಗಢ ರಾಜ್ಯ ಸರ್ಕಾರ ಅಧಿಕೃತವಾಗಿ ಛತ್ತೀಸ್‌ಗಢ ಹೈಕೋರ್ಟ್‌ಗೆ ತಿಳಿಸಿದೆ. ಝುಬೈರ್ ಅವರು 2020 ರಲ್ಲಿ ಪೋಸ್ಟ್ ಮಾಡಿದ ಟ್ವೀಟ್‌ಗೆ ಸಂಬಂಧಿಸಿ ಈ ಪ್ರಕರಣ ದಾಖಲಾಗಿತ್ತು.

ಮುಖ್ಯ ನ್ಯಾಯಮೂರ್ತಿ ರಮೇಶ್ ಸಿನ್ಹಾ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ವರ್ಮಾ ಅವರನ್ನೊಳಗೊಂಡ ಪೀಠದ ಮುಂದೆ ರಾಜ್ಯದ ವಕೀಲರು ಈ ಮಾಹಿತಿಯನ್ನು ಮಂಡಿಸಿದ್ದಾರೆ. ಇದರ ನಂತರ, ವಿಭಾಗೀಯ ಪೀಠವು ಝುಬೈರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಲೇವಾರಿ ಮಾಡಿತು. ಇದರಲ್ಲಿ ಐಟಿ ಕಾಯ್ದೆ, ಐಪಿಸಿ ಮತ್ತು ಪೋಕ್ಸೋ ಕಾಯ್ದೆಯಡಿಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿದ್ದರು.

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಮೊಹಮ್ಮದ್ ಝುಬೈರ್ ಅವರು, ಸತ್ಯಕ್ಕೆ ಹಿನ್ನಡೆಯಾಗಬಹುದು, ಆದರೆ ಅದನ್ನು ಸೋಲಿಸಲು ಸಾಧ್ಯವಿಲ್ಲ. ನ್ಯಾಯವು ಗೆಲ್ಲುತ್ತದೆ! ಎಂದು ಹೇಳಿದ್ದಾರೆ.

“ಈಗ ಎರಡು ಕಡಿಮೆಯಾಗಿದೆ, ಇನ್ನೂ ಹತ್ತು ಎಫ್‌ಐಆರ್‌ಗಳು ಬಾಕಿ ಇವೆ. ಛತ್ತೀಸ್‌ಗಢದಲ್ಲಿ ಪೋಕ್ಸೋ ಕಾಯ್ದೆಯಡಿ ನನ್ನ ವಿರುದ್ಧ ಎಫ್‌ಐಆರ್ ದಾಖಲಾಗಿ 4 ವರ್ಷಗಳ ನಂತರ, ರಾಯ್‌ಪುರ ಪೊಲೀಸರು ಅಂತಿಮವಾಗಿ ಮುಕ್ತಾಯ ವರದಿಯನ್ನು ಸಲ್ಲಿಸಿದ್ದಾರೆ. ಛತ್ತೀಸ್‌ಗಢ ನ್ಯಾಯಾಲಯವು ಆದೇಶವನ್ನು ವಿಲೇವಾರಿ ಮಾಡಿದೆ. ಈ ಪ್ರಕರಣದಲ್ಲಿ, ಕನೂಂಗೊ ಪ್ರಿಯಾಂಕ್, ಎನ್‌ಸಿಪಿಸಿಆರ್ ತಮ್ಮ ಅಧಿಕೃತ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ದೆಹಲಿ ಮತ್ತು ರಾಯ್‌ಪುರ ಪೊಲೀಸರಿಗೆ ಪತ್ರ ಬರೆದು ನನ್ನ ಟ್ವೀಟ್ ಅಪ್ರಾಪ್ತ ಬಾಲಕಿಯ ಚಿತ್ರಹಿಂಸೆ ಮತ್ತು ಕಿರುಕುಳಕ್ಕೆ ಸಮನಾಗಿದೆ ಎಂದು ಆರೋಪಿಸಿ ನನ್ನ ವಿರುದ್ಧ ಅಪಪ್ರಚಾರ ನಡೆಸಿತು. ಆದರೆ ಕಳೆದ ವರ್ಷ, ದೆಹಲಿ ನ್ಯಾಯಾಲಯವು ನನ್ನ ವಿರುದ್ಧ ಪ್ರಕರಣ ದಾಖಲಿಸಿದ ವ್ಯಕ್ತಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಕೇಳಿತ್ತು. ಮತ್ತು ಈಗ ಛತ್ತೀಸ್‌ಗಢ ಪೊಲೀಸರು ಮುಕ್ತಾಯ ವರದಿಯನ್ನು ಸಲ್ಲಿಸಿ ನನ್ನ ಹೆಸರನ್ನು ತೆರವುಗೊಳಿಸಿದರು.” ಎಂದು ಝುಬೈರ್ ಹೇಳಿದ್ದಾರೆ.

ಪ್ರಕರಣದ ಹಿನ್ನಲೆ

ತಮ್ಮ ಅಪ್ರಾಪ್ತ ಮೊಮ್ಮಗಳೊಂದಿಗೆ ನಿಂತಿದ್ದ ಜಗದೀಶ್ ಸಿಂಗ್ ಎಂಬ ವ್ಯಕ್ತಿಯ ಪ್ರೊಫೈಲ್ ಚಿತ್ರವನ್ನು 2020 ರಲ್ಲಿ ಮೊಹಮ್ಮದ್ ಝುಬೈರ್ ಅವರು ಹಂಚಿಕೊಂಡ ನಂತರ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಜಗಧೀಶ್ ಸಿಂಗ್ ಅವರು ಝುಬೈರ್ ಅವರನ್ನು “ಜಿಹಾದಿ” ಎಂದು ಕರೆಯುವುದು ಸೇರಿದಂತೆ ಅವಹೇಳನಕಾರಿ ಭಾಷೆಯನ್ನು ಬಳಸಿದ್ದರು. ಇದನ್ನು ಉದ್ದೇಶಿಸಿ ಜುಬೈರ್ ಅವರು ಮಗುವನ್ನು ಒಳಗೊಂಡ ಪ್ರೊಫೈಲ್ ಚಿತ್ರವನ್ನು ಹಂಚಿ, ಮಕ್ಕಳ ಜೊತೆಗೆ ಇಂತಹ ಚಿತ್ರ ಹಾಕಿರುವ ನೀವು ಇಂತಹ ಭಾಷೆಯನ್ನು ಬಳಸುವುದು ಸರಿಯೆ ಎಂದು ಪ್ರಶ್ನಿಸಿದ್ದರು.

“ನಮಸ್ಕಾರ ಜಗದೀಶ್ ಸಿಂಗ್. ಸಾಮಾಜಿಕ ಮಾಧ್ಯಮದಲ್ಲಿ ಜನರನ್ನು ನಿಂದಿಸುವ ನಿಮ್ಮ ಅರೆಕಾಲಿಕ ಕೆಲಸದ ಬಗ್ಗೆ ನಿಮ್ಮ ಮುದ್ದಾದ ಮೊಮ್ಮಗಳಿಗೆ ತಿಳಿದಿದೆಯೇ? ನಿಮ್ಮ ಪ್ರೊಫೈಲ್ ಚಿತ್ರವನ್ನು ಬದಲಾಯಿಸಲು ನಾನು ಸೂಚಿಸುತ್ತೇನೆ.” ಎಂದು ಝುಬೈರ್ ಟ್ವೀಟ್ ಮಾಡಿದ್ದು, ಟ್ವೀಟ್ ಪೋಸ್ಟ್ ಮಾಡುವ ಮೊದಲು ಝುಬೈರ್ ಅವರು ಅಪ್ರಾಪ್ತ ಬಾಲಕಿಯ ಮುಖವನ್ನು ಮಸುಕುಗೊಳಿಸಿದ್ದರು.

ಝುಬೈರ್ ಅವರ ಟ್ವೀಟ್‌ನ ನಂತರ, ಜಗದೀಶ್ ಸಿಂಗ್ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ (NCPCR) ದೂರು ದಾಖಲಿಸಿದ್ದರು. ಇದರ ನಂತರ NCPCR ದೆಹಲಿ ಪೊಲೀಸರು ಮತ್ತು ರಾಯ್ಪುರ್ ಪೊಲೀಸರಿಗೆ ಪತ್ರ ಬರೆದು, ಈ ಟ್ವೀಟ್ ಅಪ್ರಾಪ್ತ ಬಾಲಕಿಗೆ ನೀಡುತ್ತಿರುವ ಚಿತ್ರಹಿಂಸೆ ಮತ್ತು ಕಿರುಕುಳವಾಗಿದೆ ಎಂದು ಹೇಳಿಕೊಂಡಿತ್ತು. ಇದರ ಆಧಾರದ ರಾಯ್ಪುರ್ ಪೊಲೀಸರು ಹಲವಾರು ಕಾನೂನು ನಿಬಂಧನೆಗಳ ಅಡಿಯಲ್ಲಿ ಝಬೈರ್‌ ವಿರುದ್ಧ FIR ದಾಖಲಿಸಿದ್ದರು.

ಈ ವೇಳೆ ಅವರ ವಿರುದ್ಧ IPC ಯ ಸೆಕ್ಷನ್ 509B (ಎಲೆಕ್ಟ್ರಾನಿಕ್ ವಿಧಾನಗಳಿಂದ ಲೈಂಗಿಕ ಕಿರುಕುಳ), POCSO ಕಾಯ್ದೆಯ ಸೆಕ್ಷನ್ 12 (ಮಗುವಿನ ಮೇಲೆ ಲೈಂಗಿಕ ಕಿರುಕುಳ ಎಸಗಿದ್ದಕ್ಕಾಗಿ ಶಿಕ್ಷೆ), IT ಕಾಯ್ದೆಯ ಸೆಕ್ಷನ್ 67 (ಎಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲ ವಿಷಯವನ್ನು ಪ್ರಕಟಿಸಿದ್ದಕ್ಕಾಗಿ ಅಥವಾ ರವಾನಿಸಿದ್ದಕ್ಕಾಗಿ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

FIR ಅನ್ನು ಪ್ರಶ್ನಿಸಿ, ಮೊಹಮ್ಮದ್ ಝುಬೈರ್ ಅವರು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (CrPC) ಸೆಕ್ಷನ್ 482 ರ ಅಡಿಯಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. ಈ ಎಫ್‌ಐಆರ್ ಕಾನೂನು ಪ್ರಕ್ರಿಯೆಯ ದುರುಪಯೋಗವಾಗಿದ್ದು, ತಾನು ಮಾಡಿರುವ ಟ್ವೀಟ್ ಆಪಾದಿತ ವಿಭಾಗಗಳ ಅಡಿಯಲ್ಲಿ ಯಾವುದೇ ಕ್ರಿಮಿನಲ್ ಅಪರಾಧವಲ್ಲ ಎಂದು ಅವರ ವಕೀಲರು ವಾದಿಸಿದ್ದರು. ಅಕ್ಟೋಬರ್ 2020 ರಲ್ಲಿ, ಝುಬೈರ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಆದೇಶ ಹೊರಡಿಸಿತ್ತು.

ಆಗಸ್ಟ್ 2023 ರಲ್ಲಿ, ದೆಹಲಿ ಹೈಕೋರ್ಟ್ ಜಗದೀಶ್ ಸಿಂಗ್ ಅವರು 2020 ರಲ್ಲಿ ಝುಬೈರ್ ಅವರನ್ನು “ಜಿಹಾದಿ” ಎಂದು ಕರೆದಿದ್ದ ಅವರ ಆಕ್ರಮಣಕಾರಿ ಟ್ವೀಟ್‌ಗಾಗಿ ಎಕ್ಸ್‌ನಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಆದೇಶಿಸಿತ್ತು. ಜುಬೈರ್ ವಿರುದ್ಧದ ಆಕ್ರಮಣಕಾರಿ ಕಾಮೆಂಟ್‌ಗಾಗಿ ಸಿಂಗ್ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಹೇಳುವ ಸ್ಥಿತಿ ವರದಿಯನ್ನು ದೆಹಲಿ ಪೊಲೀಸರು ಸಲ್ಲಿಸಿದ ನಂತರ ಈ ಆದೇಶವನ್ನು ಅಂಗೀಕರಿಸಲಾಯಿತು. ಜೊತೆಗೆ ಅವರ ಅವಹೇಳನಕಾರಿ ಕಾಮೆಂಟ್ ಸಾರ್ವಜನಿಕವಾಗಿ ಲಭ್ಯವಿದ್ದರೂ, ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿದ್ದಕ್ಕಾಗಿ ದೆಹಲಿ ಪೊಲೀಸರನ್ನು ನ್ಯಾಯಾಲಯವು ಈ ಹಿಂದೆ ಟೀಕಿಸಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ನಿಮ್ಮ ವಿಷವನ್ನು ಕೇರಳ ದೂರವಿಟ್ಟಿದೆ; ಒಬ್ಬ ಗೆದ್ದಿದ್ದಾರೆ, ಆದರೆ ಅದನ್ನು ಮುಚ್ಚುತ್ತೇವೆ’: ಬಿಜೆಪಿಗೆ ಸಿಪಿಐ(ಎಂ) ಸಂಸದ ಜಾನ್ ಬ್ರಿಟ್ಟಾಸ್

‘ನಿಮ್ಮ ವಿಷವನ್ನು ಕೇರಳ ದೂರವಿಟ್ಟಿದೆ; ಒಬ್ಬ ಗೆದ್ದಿದ್ದಾರೆ, ಆದರೆ ಅದನ್ನು ಮುಚ್ಚುತ್ತೇವೆ’: ಬಿಜೆಪಿಗೆ ಸಿಪಿಐ(ಎಂ) ಸಂಸದ ಜಾನ್ ಬ್ರಿಟ್ಟಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...