Homeಮುಖಪುಟಮೊಹಮ್ಮದ್ ಝುಬೈರ್ ವಿರುದ್ಧದ ಪೋಕ್ಸೊ ಪ್ರಕರಣ ಮುಕ್ತಾಯ | ಹೈಕೋರ್ಟ್‌ಗೆ ಛತ್ತೀಸ್‌ಗಡ ಸರ್ಕಾರ ಮಾಹಿತಿ

ಮೊಹಮ್ಮದ್ ಝುಬೈರ್ ವಿರುದ್ಧದ ಪೋಕ್ಸೊ ಪ್ರಕರಣ ಮುಕ್ತಾಯ | ಹೈಕೋರ್ಟ್‌ಗೆ ಛತ್ತೀಸ್‌ಗಡ ಸರ್ಕಾರ ಮಾಹಿತಿ

- Advertisement -
- Advertisement -

ಖ್ಯಾತ ಫ್ಯಾಕ್ಟ್‌ಚೆಕ್ಕರ್‌, ಆಲ್ಟ್-ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಝುಬೈರ್ ವಿರುದ್ಧದ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಪ್ರಕರಣದಲ್ಲಿ ಮುಕ್ತಾಯ ವರದಿಯನ್ನು ಸಲ್ಲಿಸಲಾಗಿದೆ ಎಂದು ಛತ್ತೀಸ್‌ಗಢ ರಾಜ್ಯ ಸರ್ಕಾರ ಅಧಿಕೃತವಾಗಿ ಛತ್ತೀಸ್‌ಗಢ ಹೈಕೋರ್ಟ್‌ಗೆ ತಿಳಿಸಿದೆ. ಝುಬೈರ್ ಅವರು 2020 ರಲ್ಲಿ ಪೋಸ್ಟ್ ಮಾಡಿದ ಟ್ವೀಟ್‌ಗೆ ಸಂಬಂಧಿಸಿ ಈ ಪ್ರಕರಣ ದಾಖಲಾಗಿತ್ತು.

ಮುಖ್ಯ ನ್ಯಾಯಮೂರ್ತಿ ರಮೇಶ್ ಸಿನ್ಹಾ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ವರ್ಮಾ ಅವರನ್ನೊಳಗೊಂಡ ಪೀಠದ ಮುಂದೆ ರಾಜ್ಯದ ವಕೀಲರು ಈ ಮಾಹಿತಿಯನ್ನು ಮಂಡಿಸಿದ್ದಾರೆ. ಇದರ ನಂತರ, ವಿಭಾಗೀಯ ಪೀಠವು ಝುಬೈರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಲೇವಾರಿ ಮಾಡಿತು. ಇದರಲ್ಲಿ ಐಟಿ ಕಾಯ್ದೆ, ಐಪಿಸಿ ಮತ್ತು ಪೋಕ್ಸೋ ಕಾಯ್ದೆಯಡಿಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿದ್ದರು.

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಮೊಹಮ್ಮದ್ ಝುಬೈರ್ ಅವರು, ಸತ್ಯಕ್ಕೆ ಹಿನ್ನಡೆಯಾಗಬಹುದು, ಆದರೆ ಅದನ್ನು ಸೋಲಿಸಲು ಸಾಧ್ಯವಿಲ್ಲ. ನ್ಯಾಯವು ಗೆಲ್ಲುತ್ತದೆ! ಎಂದು ಹೇಳಿದ್ದಾರೆ.

“ಈಗ ಎರಡು ಕಡಿಮೆಯಾಗಿದೆ, ಇನ್ನೂ ಹತ್ತು ಎಫ್‌ಐಆರ್‌ಗಳು ಬಾಕಿ ಇವೆ. ಛತ್ತೀಸ್‌ಗಢದಲ್ಲಿ ಪೋಕ್ಸೋ ಕಾಯ್ದೆಯಡಿ ನನ್ನ ವಿರುದ್ಧ ಎಫ್‌ಐಆರ್ ದಾಖಲಾಗಿ 4 ವರ್ಷಗಳ ನಂತರ, ರಾಯ್‌ಪುರ ಪೊಲೀಸರು ಅಂತಿಮವಾಗಿ ಮುಕ್ತಾಯ ವರದಿಯನ್ನು ಸಲ್ಲಿಸಿದ್ದಾರೆ. ಛತ್ತೀಸ್‌ಗಢ ನ್ಯಾಯಾಲಯವು ಆದೇಶವನ್ನು ವಿಲೇವಾರಿ ಮಾಡಿದೆ. ಈ ಪ್ರಕರಣದಲ್ಲಿ, ಕನೂಂಗೊ ಪ್ರಿಯಾಂಕ್, ಎನ್‌ಸಿಪಿಸಿಆರ್ ತಮ್ಮ ಅಧಿಕೃತ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ದೆಹಲಿ ಮತ್ತು ರಾಯ್‌ಪುರ ಪೊಲೀಸರಿಗೆ ಪತ್ರ ಬರೆದು ನನ್ನ ಟ್ವೀಟ್ ಅಪ್ರಾಪ್ತ ಬಾಲಕಿಯ ಚಿತ್ರಹಿಂಸೆ ಮತ್ತು ಕಿರುಕುಳಕ್ಕೆ ಸಮನಾಗಿದೆ ಎಂದು ಆರೋಪಿಸಿ ನನ್ನ ವಿರುದ್ಧ ಅಪಪ್ರಚಾರ ನಡೆಸಿತು. ಆದರೆ ಕಳೆದ ವರ್ಷ, ದೆಹಲಿ ನ್ಯಾಯಾಲಯವು ನನ್ನ ವಿರುದ್ಧ ಪ್ರಕರಣ ದಾಖಲಿಸಿದ ವ್ಯಕ್ತಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಕೇಳಿತ್ತು. ಮತ್ತು ಈಗ ಛತ್ತೀಸ್‌ಗಢ ಪೊಲೀಸರು ಮುಕ್ತಾಯ ವರದಿಯನ್ನು ಸಲ್ಲಿಸಿ ನನ್ನ ಹೆಸರನ್ನು ತೆರವುಗೊಳಿಸಿದರು.” ಎಂದು ಝುಬೈರ್ ಹೇಳಿದ್ದಾರೆ.

ಪ್ರಕರಣದ ಹಿನ್ನಲೆ

ತಮ್ಮ ಅಪ್ರಾಪ್ತ ಮೊಮ್ಮಗಳೊಂದಿಗೆ ನಿಂತಿದ್ದ ಜಗದೀಶ್ ಸಿಂಗ್ ಎಂಬ ವ್ಯಕ್ತಿಯ ಪ್ರೊಫೈಲ್ ಚಿತ್ರವನ್ನು 2020 ರಲ್ಲಿ ಮೊಹಮ್ಮದ್ ಝುಬೈರ್ ಅವರು ಹಂಚಿಕೊಂಡ ನಂತರ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಜಗಧೀಶ್ ಸಿಂಗ್ ಅವರು ಝುಬೈರ್ ಅವರನ್ನು “ಜಿಹಾದಿ” ಎಂದು ಕರೆಯುವುದು ಸೇರಿದಂತೆ ಅವಹೇಳನಕಾರಿ ಭಾಷೆಯನ್ನು ಬಳಸಿದ್ದರು. ಇದನ್ನು ಉದ್ದೇಶಿಸಿ ಜುಬೈರ್ ಅವರು ಮಗುವನ್ನು ಒಳಗೊಂಡ ಪ್ರೊಫೈಲ್ ಚಿತ್ರವನ್ನು ಹಂಚಿ, ಮಕ್ಕಳ ಜೊತೆಗೆ ಇಂತಹ ಚಿತ್ರ ಹಾಕಿರುವ ನೀವು ಇಂತಹ ಭಾಷೆಯನ್ನು ಬಳಸುವುದು ಸರಿಯೆ ಎಂದು ಪ್ರಶ್ನಿಸಿದ್ದರು.

“ನಮಸ್ಕಾರ ಜಗದೀಶ್ ಸಿಂಗ್. ಸಾಮಾಜಿಕ ಮಾಧ್ಯಮದಲ್ಲಿ ಜನರನ್ನು ನಿಂದಿಸುವ ನಿಮ್ಮ ಅರೆಕಾಲಿಕ ಕೆಲಸದ ಬಗ್ಗೆ ನಿಮ್ಮ ಮುದ್ದಾದ ಮೊಮ್ಮಗಳಿಗೆ ತಿಳಿದಿದೆಯೇ? ನಿಮ್ಮ ಪ್ರೊಫೈಲ್ ಚಿತ್ರವನ್ನು ಬದಲಾಯಿಸಲು ನಾನು ಸೂಚಿಸುತ್ತೇನೆ.” ಎಂದು ಝುಬೈರ್ ಟ್ವೀಟ್ ಮಾಡಿದ್ದು, ಟ್ವೀಟ್ ಪೋಸ್ಟ್ ಮಾಡುವ ಮೊದಲು ಝುಬೈರ್ ಅವರು ಅಪ್ರಾಪ್ತ ಬಾಲಕಿಯ ಮುಖವನ್ನು ಮಸುಕುಗೊಳಿಸಿದ್ದರು.

ಝುಬೈರ್ ಅವರ ಟ್ವೀಟ್‌ನ ನಂತರ, ಜಗದೀಶ್ ಸಿಂಗ್ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ (NCPCR) ದೂರು ದಾಖಲಿಸಿದ್ದರು. ಇದರ ನಂತರ NCPCR ದೆಹಲಿ ಪೊಲೀಸರು ಮತ್ತು ರಾಯ್ಪುರ್ ಪೊಲೀಸರಿಗೆ ಪತ್ರ ಬರೆದು, ಈ ಟ್ವೀಟ್ ಅಪ್ರಾಪ್ತ ಬಾಲಕಿಗೆ ನೀಡುತ್ತಿರುವ ಚಿತ್ರಹಿಂಸೆ ಮತ್ತು ಕಿರುಕುಳವಾಗಿದೆ ಎಂದು ಹೇಳಿಕೊಂಡಿತ್ತು. ಇದರ ಆಧಾರದ ರಾಯ್ಪುರ್ ಪೊಲೀಸರು ಹಲವಾರು ಕಾನೂನು ನಿಬಂಧನೆಗಳ ಅಡಿಯಲ್ಲಿ ಝಬೈರ್‌ ವಿರುದ್ಧ FIR ದಾಖಲಿಸಿದ್ದರು.

ಈ ವೇಳೆ ಅವರ ವಿರುದ್ಧ IPC ಯ ಸೆಕ್ಷನ್ 509B (ಎಲೆಕ್ಟ್ರಾನಿಕ್ ವಿಧಾನಗಳಿಂದ ಲೈಂಗಿಕ ಕಿರುಕುಳ), POCSO ಕಾಯ್ದೆಯ ಸೆಕ್ಷನ್ 12 (ಮಗುವಿನ ಮೇಲೆ ಲೈಂಗಿಕ ಕಿರುಕುಳ ಎಸಗಿದ್ದಕ್ಕಾಗಿ ಶಿಕ್ಷೆ), IT ಕಾಯ್ದೆಯ ಸೆಕ್ಷನ್ 67 (ಎಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲ ವಿಷಯವನ್ನು ಪ್ರಕಟಿಸಿದ್ದಕ್ಕಾಗಿ ಅಥವಾ ರವಾನಿಸಿದ್ದಕ್ಕಾಗಿ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

FIR ಅನ್ನು ಪ್ರಶ್ನಿಸಿ, ಮೊಹಮ್ಮದ್ ಝುಬೈರ್ ಅವರು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (CrPC) ಸೆಕ್ಷನ್ 482 ರ ಅಡಿಯಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. ಈ ಎಫ್‌ಐಆರ್ ಕಾನೂನು ಪ್ರಕ್ರಿಯೆಯ ದುರುಪಯೋಗವಾಗಿದ್ದು, ತಾನು ಮಾಡಿರುವ ಟ್ವೀಟ್ ಆಪಾದಿತ ವಿಭಾಗಗಳ ಅಡಿಯಲ್ಲಿ ಯಾವುದೇ ಕ್ರಿಮಿನಲ್ ಅಪರಾಧವಲ್ಲ ಎಂದು ಅವರ ವಕೀಲರು ವಾದಿಸಿದ್ದರು. ಅಕ್ಟೋಬರ್ 2020 ರಲ್ಲಿ, ಝುಬೈರ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಆದೇಶ ಹೊರಡಿಸಿತ್ತು.

ಆಗಸ್ಟ್ 2023 ರಲ್ಲಿ, ದೆಹಲಿ ಹೈಕೋರ್ಟ್ ಜಗದೀಶ್ ಸಿಂಗ್ ಅವರು 2020 ರಲ್ಲಿ ಝುಬೈರ್ ಅವರನ್ನು “ಜಿಹಾದಿ” ಎಂದು ಕರೆದಿದ್ದ ಅವರ ಆಕ್ರಮಣಕಾರಿ ಟ್ವೀಟ್‌ಗಾಗಿ ಎಕ್ಸ್‌ನಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಆದೇಶಿಸಿತ್ತು. ಜುಬೈರ್ ವಿರುದ್ಧದ ಆಕ್ರಮಣಕಾರಿ ಕಾಮೆಂಟ್‌ಗಾಗಿ ಸಿಂಗ್ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಹೇಳುವ ಸ್ಥಿತಿ ವರದಿಯನ್ನು ದೆಹಲಿ ಪೊಲೀಸರು ಸಲ್ಲಿಸಿದ ನಂತರ ಈ ಆದೇಶವನ್ನು ಅಂಗೀಕರಿಸಲಾಯಿತು. ಜೊತೆಗೆ ಅವರ ಅವಹೇಳನಕಾರಿ ಕಾಮೆಂಟ್ ಸಾರ್ವಜನಿಕವಾಗಿ ಲಭ್ಯವಿದ್ದರೂ, ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿದ್ದಕ್ಕಾಗಿ ದೆಹಲಿ ಪೊಲೀಸರನ್ನು ನ್ಯಾಯಾಲಯವು ಈ ಹಿಂದೆ ಟೀಕಿಸಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ನಿಮ್ಮ ವಿಷವನ್ನು ಕೇರಳ ದೂರವಿಟ್ಟಿದೆ; ಒಬ್ಬ ಗೆದ್ದಿದ್ದಾರೆ, ಆದರೆ ಅದನ್ನು ಮುಚ್ಚುತ್ತೇವೆ’: ಬಿಜೆಪಿಗೆ ಸಿಪಿಐ(ಎಂ) ಸಂಸದ ಜಾನ್ ಬ್ರಿಟ್ಟಾಸ್

‘ನಿಮ್ಮ ವಿಷವನ್ನು ಕೇರಳ ದೂರವಿಟ್ಟಿದೆ; ಒಬ್ಬ ಗೆದ್ದಿದ್ದಾರೆ, ಆದರೆ ಅದನ್ನು ಮುಚ್ಚುತ್ತೇವೆ’: ಬಿಜೆಪಿಗೆ ಸಿಪಿಐ(ಎಂ) ಸಂಸದ ಜಾನ್ ಬ್ರಿಟ್ಟಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...