Homeಕರ್ನಾಟಕ‘ಮಾಸ್ಟರ್ ಶೆಫ್ ಇಂಡಿಯಾ’ ಗೆದ್ದ ಮಂಗಳೂರಿನ ಯುವಕ ಮೊಹಮ್ಮದ್ ಆಶಿಕ್

‘ಮಾಸ್ಟರ್ ಶೆಫ್ ಇಂಡಿಯಾ’ ಗೆದ್ದ ಮಂಗಳೂರಿನ ಯುವಕ ಮೊಹಮ್ಮದ್ ಆಶಿಕ್

- Advertisement -
- Advertisement -

ಮುಂಬೈಯಲ್ಲಿ ಸೋನಿ ಲೈವ್ ಓಟಿಟಿ ಪ್ಲಾಟ್ ಫಾರ್ಮ್ ಆಯೋಜಿಸಿರುವ ‘ಮಾಸ್ಟರ್ ಶೆಫ್ ಇಂಡಿಯಾ-2023’ ಪ್ರಶಸ್ತಿಯನ್ನು ಮಂಗಳೂರಿನ ಯುವಕ ಮುಹಮ್ಮದ್ ಆಶಿಕ್ ಗೆದ್ದುಕೊಂಡಿದ್ದಾರೆ.

ಮಂಗಳೂರಿನ 24 ವರ್ಷದ ಯುವಕ ಮೊಹಮ್ಮದ್ ಆಶಿಕ್ ಅವರು ಮಾಸ್ಟರ್ ಚೆಫ್ ಇಂಡಿಯಾ 2023ರ ವಿಜೇತರಾಗಿ ಹೊರಹೊಮ್ಮಿದ್ದು, ನಂಬಿ ಜೆಸ್ಸಿಕಾ ಮರಕ್ ಮತ್ತು ರುಖ್ಸಾರ್ ಸಯೀದ್ ರನ್ನರ್ ಅಪ್  ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಮೊಹಮ್ಮದ್ ಆಶಿಕ್, ನಾನು ಮಾಸ್ಟರ್‌ಚೆಫ್ ಇಂಡಿಯಾದಲ್ಲಿ ಗೆಲುವಿಗೆ  ಕೃತಜ್ಞನಾಗಿದ್ದೇನೆ. ಎಲಿಮಿನೇಷನ್ ಎದುರಿಸುವುದರಿಂದ ಹಿಡಿದು ಟ್ರೋಫಿ ಹಿಡಿಯುವವರೆಗೆ ಪ್ರತಿ ಕ್ಷಣವೂ ಆಳವಾದ ಪಾಠವಾಗಿತ್ತು. ಈ ಅನುಭವವು ನನ್ನ ಜೀವನವನ್ನು ಸಂಪೂರ್ಣವಾಗಿ ಮರು ರೂಪಿಸಿದೆ. ನಾನು ಸಂಪೂರ್ಣವಾಗಿ ಪಾಕಶಾಲೆಗೆ ನನ್ನನ್ನು ಅರ್ಪಿಸಿಕೊಂಡಿದ್ದೇನೆ. ನಾನು ತೀರ್ಪುಗಾರರಿಗೆ ಅಪಾರ ಕೃತಜ್ಞತೆ ಸಲ್ಲಿಸುತ್ತೇನೆ. ತೀರ್ಪುಗಾರರಾದ ವಿಕಾಸ್, ರಣವೀರ್ ಮತ್ತು ಪೂಜಾ, ಸಹ ಸ್ಪರ್ಧಿಗಳು, ಪ್ರೇಕ್ಷಕರು ಮತ್ತು ಅಡುಗೆಮನೆಯಲ್ಲಿ ಪ್ರತಿ ದಿನವೂ ಉತ್ತಮವಾಗಿ ಕಾರ್ಯನಿರ್ವಹಿಸಲು ನನ್ನನ್ನು ಪ್ರೇರೇಪಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.

ಕಳೆದ ವರ್ಷ ಮೊಹಮ್ಮದ್ ಆಶಿಕ್ ಮಾಸ್ಟರ್‌ಚೆಫ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿ ಸೋಲು ಕಂಡಿದ್ದರು. ಈ ಬಾರಿ ಸತತ ಪ್ರಯತ್ನದ ಮೂಲಕ ಮಾಸ್ಟರ್‌ಚೆಫ್ ಇಂಡಿಯಾ ಟ್ರೋಫಿಯನ್ನು ಗೆದ್ದುಕೊಂಡಿದ್ದಾರೆ. ಮಾಸ್ಟರ್ ಶೆಫ್ ಇಂಡಿಯಾ ಫೈನಲ್‌ಗೆ  ರುಖ್ಸಾರ್ ಸಯೀದ್, ಸೂರಜ್ ಥಾಪಾ, ನಂಬಿ ಜೆಸ್ಸಿಕಾ ಮರಕ್ ಮತ್ತು ಮುಹಮ್ಮದ್ ಆಶಿಕ್ ಪ್ರವೇಶಿಸಿದ್ದರು.

ಇದೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಯುವಕನೊಬ್ಬ ‘ಮಾಸ್ಟರ್ ಶೆಫ್ ಇಂಡಿಯಾ’ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ಮಂಗಳೂರು ನಗರದ ಜೆಪ್ಪು ಸಮೀಪದ ಅಬ್ದುಲ್ ಖಾದರ್-ಸಾರಮ್ಮ ದಂಪತಿಯ ಪುತ್ರನಾಗಿರುವ ಮುಹಮ್ಮದ್ ಆಶಿಕ್‌ಗೆ ಅಡುಗೆ ತಯಾರಿಯೆಂದರೆ ಅಚ್ಚುಮೆಚ್ಚು. ಹೋಟೆಲ್ ಮ್ಯಾನೇಜ್ ಮೆಂಟ್ ಕಲಿಯಬೇಕೆಂಬ ಬಯಕೆಯಿತ್ತು. ಆದರೆ ಆರ್ಥಿಕ ಸ್ಥಿತಿ ಚೆನ್ನಾಗಿರದ ಕಾರಣ ದ್ವಿತೀಯ ಪಿಯುಸಿಯಲ್ಲಿ ಶಿಕ್ಷಣ ನಿಲ್ಲಿಸಿದ್ದರು. ಪರಿಚಯಸ್ಥರು, ಸ್ನೇಹಿತರ ಮನೆಗಳಲ್ಲಿ ನಡೆಯುವ ಸಣ್ಣ ಪುಟ್ಟ ಕಾರ್ಯಕ್ರಮಗಳಿಗೆ ತನ್ನ ಮನೆಯಲ್ಲಿ ರುಚಿಯಾದ ಹೊಸ ಶೈಲಿಯ ಆಹಾರಗಳನ್ನು ತಯಾರಿಸಿ ಕೊಡುತ್ತಿದ್ದರು. ಇದಲ್ಲದೆ ನಗರದ ಕಾಲೇಜುಗಳಲ್ಲಿ ಕಾರ್ಯಕ್ರಮಗಳು ನಡೆಯುವಾಗ ಸ್ಟಾಲ್ ಹಾಕಿ ವ್ಯಾಪಾರ ಮಾಡುತ್ತಿದ್ದರು. ಕುಲ್ಕಿ ಶರ್ಬತ್ ಸೇರಿ ಹಲವು ಬಗೆಯ ಪಾನೀಯಗಳನ್ನು ತಯಾರಿಸುತ್ತಿದ್ದರು.

ಮೊಹಮ್ಮದ್ ಆಶಿಕ್ ಅವರ ಪಾಕ ಕಲೆಯನ್ನು ಗುರುತಿಸಿದ ಅವರ ಸಂಬಂಧಿ ಮುಹಮ್ಮದ್ ಅಲಿ ಎಂಬವರು ಆರ್ಥಿಕ ನೆರವು ನೀಡಿ ಪ್ರೋತ್ಸಾಹಿಸಿದ್ದರು. ಅದರಂತೆ ತನ್ನ 20ರ ಹರೆಯದಲ್ಲಿ ನಗರದ ಬಲ್ಮಠದಲ್ಲಿ ಮೊಹಮ್ಮದ್‌ ಆಶಿಕ್‌ ‘ಕುಲ್ಕಿ ಹಬ್’ ತೆರೆದಿದ್ದರು. ಪೂರ್ಣಪ್ರಮಾಣದಲ್ಲಿ ‘ ಶೆಫ್ ’ ಆಗಿದ್ದ ಮೊಹಮ್ಮದ್‌ ಆಶಿಕ್‌  ಹೈದರಾಬಾದ್, ಬೆಂಗಳೂರಿನಲ್ಲಿ ನಡೆದ ‘ ಶೆಫ್ ’ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.

 

ಇದನ್ನು ಓದಿ: ಮುಂದಿನ 30 ವರ್ಷ ಸಂಸತ್ತಿನ ಒಳಗೆ- ಹೊರಗೆ ನಿಮ್ಮ ವಿರುದ್ಧ ಹೋರಾಡುತ್ತೇನೆ: ಮಹುವಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...