Homeಕರ್ನಾಟಕ‘ಮಾಸ್ಟರ್ ಶೆಫ್ ಇಂಡಿಯಾ’ ಗೆದ್ದ ಮಂಗಳೂರಿನ ಯುವಕ ಮೊಹಮ್ಮದ್ ಆಶಿಕ್

‘ಮಾಸ್ಟರ್ ಶೆಫ್ ಇಂಡಿಯಾ’ ಗೆದ್ದ ಮಂಗಳೂರಿನ ಯುವಕ ಮೊಹಮ್ಮದ್ ಆಶಿಕ್

- Advertisement -
- Advertisement -

ಮುಂಬೈಯಲ್ಲಿ ಸೋನಿ ಲೈವ್ ಓಟಿಟಿ ಪ್ಲಾಟ್ ಫಾರ್ಮ್ ಆಯೋಜಿಸಿರುವ ‘ಮಾಸ್ಟರ್ ಶೆಫ್ ಇಂಡಿಯಾ-2023’ ಪ್ರಶಸ್ತಿಯನ್ನು ಮಂಗಳೂರಿನ ಯುವಕ ಮುಹಮ್ಮದ್ ಆಶಿಕ್ ಗೆದ್ದುಕೊಂಡಿದ್ದಾರೆ.

ಮಂಗಳೂರಿನ 24 ವರ್ಷದ ಯುವಕ ಮೊಹಮ್ಮದ್ ಆಶಿಕ್ ಅವರು ಮಾಸ್ಟರ್ ಚೆಫ್ ಇಂಡಿಯಾ 2023ರ ವಿಜೇತರಾಗಿ ಹೊರಹೊಮ್ಮಿದ್ದು, ನಂಬಿ ಜೆಸ್ಸಿಕಾ ಮರಕ್ ಮತ್ತು ರುಖ್ಸಾರ್ ಸಯೀದ್ ರನ್ನರ್ ಅಪ್  ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಮೊಹಮ್ಮದ್ ಆಶಿಕ್, ನಾನು ಮಾಸ್ಟರ್‌ಚೆಫ್ ಇಂಡಿಯಾದಲ್ಲಿ ಗೆಲುವಿಗೆ  ಕೃತಜ್ಞನಾಗಿದ್ದೇನೆ. ಎಲಿಮಿನೇಷನ್ ಎದುರಿಸುವುದರಿಂದ ಹಿಡಿದು ಟ್ರೋಫಿ ಹಿಡಿಯುವವರೆಗೆ ಪ್ರತಿ ಕ್ಷಣವೂ ಆಳವಾದ ಪಾಠವಾಗಿತ್ತು. ಈ ಅನುಭವವು ನನ್ನ ಜೀವನವನ್ನು ಸಂಪೂರ್ಣವಾಗಿ ಮರು ರೂಪಿಸಿದೆ. ನಾನು ಸಂಪೂರ್ಣವಾಗಿ ಪಾಕಶಾಲೆಗೆ ನನ್ನನ್ನು ಅರ್ಪಿಸಿಕೊಂಡಿದ್ದೇನೆ. ನಾನು ತೀರ್ಪುಗಾರರಿಗೆ ಅಪಾರ ಕೃತಜ್ಞತೆ ಸಲ್ಲಿಸುತ್ತೇನೆ. ತೀರ್ಪುಗಾರರಾದ ವಿಕಾಸ್, ರಣವೀರ್ ಮತ್ತು ಪೂಜಾ, ಸಹ ಸ್ಪರ್ಧಿಗಳು, ಪ್ರೇಕ್ಷಕರು ಮತ್ತು ಅಡುಗೆಮನೆಯಲ್ಲಿ ಪ್ರತಿ ದಿನವೂ ಉತ್ತಮವಾಗಿ ಕಾರ್ಯನಿರ್ವಹಿಸಲು ನನ್ನನ್ನು ಪ್ರೇರೇಪಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.

ಕಳೆದ ವರ್ಷ ಮೊಹಮ್ಮದ್ ಆಶಿಕ್ ಮಾಸ್ಟರ್‌ಚೆಫ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿ ಸೋಲು ಕಂಡಿದ್ದರು. ಈ ಬಾರಿ ಸತತ ಪ್ರಯತ್ನದ ಮೂಲಕ ಮಾಸ್ಟರ್‌ಚೆಫ್ ಇಂಡಿಯಾ ಟ್ರೋಫಿಯನ್ನು ಗೆದ್ದುಕೊಂಡಿದ್ದಾರೆ. ಮಾಸ್ಟರ್ ಶೆಫ್ ಇಂಡಿಯಾ ಫೈನಲ್‌ಗೆ  ರುಖ್ಸಾರ್ ಸಯೀದ್, ಸೂರಜ್ ಥಾಪಾ, ನಂಬಿ ಜೆಸ್ಸಿಕಾ ಮರಕ್ ಮತ್ತು ಮುಹಮ್ಮದ್ ಆಶಿಕ್ ಪ್ರವೇಶಿಸಿದ್ದರು.

ಇದೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಯುವಕನೊಬ್ಬ ‘ಮಾಸ್ಟರ್ ಶೆಫ್ ಇಂಡಿಯಾ’ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ಮಂಗಳೂರು ನಗರದ ಜೆಪ್ಪು ಸಮೀಪದ ಅಬ್ದುಲ್ ಖಾದರ್-ಸಾರಮ್ಮ ದಂಪತಿಯ ಪುತ್ರನಾಗಿರುವ ಮುಹಮ್ಮದ್ ಆಶಿಕ್‌ಗೆ ಅಡುಗೆ ತಯಾರಿಯೆಂದರೆ ಅಚ್ಚುಮೆಚ್ಚು. ಹೋಟೆಲ್ ಮ್ಯಾನೇಜ್ ಮೆಂಟ್ ಕಲಿಯಬೇಕೆಂಬ ಬಯಕೆಯಿತ್ತು. ಆದರೆ ಆರ್ಥಿಕ ಸ್ಥಿತಿ ಚೆನ್ನಾಗಿರದ ಕಾರಣ ದ್ವಿತೀಯ ಪಿಯುಸಿಯಲ್ಲಿ ಶಿಕ್ಷಣ ನಿಲ್ಲಿಸಿದ್ದರು. ಪರಿಚಯಸ್ಥರು, ಸ್ನೇಹಿತರ ಮನೆಗಳಲ್ಲಿ ನಡೆಯುವ ಸಣ್ಣ ಪುಟ್ಟ ಕಾರ್ಯಕ್ರಮಗಳಿಗೆ ತನ್ನ ಮನೆಯಲ್ಲಿ ರುಚಿಯಾದ ಹೊಸ ಶೈಲಿಯ ಆಹಾರಗಳನ್ನು ತಯಾರಿಸಿ ಕೊಡುತ್ತಿದ್ದರು. ಇದಲ್ಲದೆ ನಗರದ ಕಾಲೇಜುಗಳಲ್ಲಿ ಕಾರ್ಯಕ್ರಮಗಳು ನಡೆಯುವಾಗ ಸ್ಟಾಲ್ ಹಾಕಿ ವ್ಯಾಪಾರ ಮಾಡುತ್ತಿದ್ದರು. ಕುಲ್ಕಿ ಶರ್ಬತ್ ಸೇರಿ ಹಲವು ಬಗೆಯ ಪಾನೀಯಗಳನ್ನು ತಯಾರಿಸುತ್ತಿದ್ದರು.

ಮೊಹಮ್ಮದ್ ಆಶಿಕ್ ಅವರ ಪಾಕ ಕಲೆಯನ್ನು ಗುರುತಿಸಿದ ಅವರ ಸಂಬಂಧಿ ಮುಹಮ್ಮದ್ ಅಲಿ ಎಂಬವರು ಆರ್ಥಿಕ ನೆರವು ನೀಡಿ ಪ್ರೋತ್ಸಾಹಿಸಿದ್ದರು. ಅದರಂತೆ ತನ್ನ 20ರ ಹರೆಯದಲ್ಲಿ ನಗರದ ಬಲ್ಮಠದಲ್ಲಿ ಮೊಹಮ್ಮದ್‌ ಆಶಿಕ್‌ ‘ಕುಲ್ಕಿ ಹಬ್’ ತೆರೆದಿದ್ದರು. ಪೂರ್ಣಪ್ರಮಾಣದಲ್ಲಿ ‘ ಶೆಫ್ ’ ಆಗಿದ್ದ ಮೊಹಮ್ಮದ್‌ ಆಶಿಕ್‌  ಹೈದರಾಬಾದ್, ಬೆಂಗಳೂರಿನಲ್ಲಿ ನಡೆದ ‘ ಶೆಫ್ ’ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.

 

ಇದನ್ನು ಓದಿ: ಮುಂದಿನ 30 ವರ್ಷ ಸಂಸತ್ತಿನ ಒಳಗೆ- ಹೊರಗೆ ನಿಮ್ಮ ವಿರುದ್ಧ ಹೋರಾಡುತ್ತೇನೆ: ಮಹುವಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...