Homeಕರ್ನಾಟಕ‘ಮಾಸ್ಟರ್ ಶೆಫ್ ಇಂಡಿಯಾ’ ಗೆದ್ದ ಮಂಗಳೂರಿನ ಯುವಕ ಮೊಹಮ್ಮದ್ ಆಶಿಕ್

‘ಮಾಸ್ಟರ್ ಶೆಫ್ ಇಂಡಿಯಾ’ ಗೆದ್ದ ಮಂಗಳೂರಿನ ಯುವಕ ಮೊಹಮ್ಮದ್ ಆಶಿಕ್

- Advertisement -
- Advertisement -

ಮುಂಬೈಯಲ್ಲಿ ಸೋನಿ ಲೈವ್ ಓಟಿಟಿ ಪ್ಲಾಟ್ ಫಾರ್ಮ್ ಆಯೋಜಿಸಿರುವ ‘ಮಾಸ್ಟರ್ ಶೆಫ್ ಇಂಡಿಯಾ-2023’ ಪ್ರಶಸ್ತಿಯನ್ನು ಮಂಗಳೂರಿನ ಯುವಕ ಮುಹಮ್ಮದ್ ಆಶಿಕ್ ಗೆದ್ದುಕೊಂಡಿದ್ದಾರೆ.

ಮಂಗಳೂರಿನ 24 ವರ್ಷದ ಯುವಕ ಮೊಹಮ್ಮದ್ ಆಶಿಕ್ ಅವರು ಮಾಸ್ಟರ್ ಚೆಫ್ ಇಂಡಿಯಾ 2023ರ ವಿಜೇತರಾಗಿ ಹೊರಹೊಮ್ಮಿದ್ದು, ನಂಬಿ ಜೆಸ್ಸಿಕಾ ಮರಕ್ ಮತ್ತು ರುಖ್ಸಾರ್ ಸಯೀದ್ ರನ್ನರ್ ಅಪ್  ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಮೊಹಮ್ಮದ್ ಆಶಿಕ್, ನಾನು ಮಾಸ್ಟರ್‌ಚೆಫ್ ಇಂಡಿಯಾದಲ್ಲಿ ಗೆಲುವಿಗೆ  ಕೃತಜ್ಞನಾಗಿದ್ದೇನೆ. ಎಲಿಮಿನೇಷನ್ ಎದುರಿಸುವುದರಿಂದ ಹಿಡಿದು ಟ್ರೋಫಿ ಹಿಡಿಯುವವರೆಗೆ ಪ್ರತಿ ಕ್ಷಣವೂ ಆಳವಾದ ಪಾಠವಾಗಿತ್ತು. ಈ ಅನುಭವವು ನನ್ನ ಜೀವನವನ್ನು ಸಂಪೂರ್ಣವಾಗಿ ಮರು ರೂಪಿಸಿದೆ. ನಾನು ಸಂಪೂರ್ಣವಾಗಿ ಪಾಕಶಾಲೆಗೆ ನನ್ನನ್ನು ಅರ್ಪಿಸಿಕೊಂಡಿದ್ದೇನೆ. ನಾನು ತೀರ್ಪುಗಾರರಿಗೆ ಅಪಾರ ಕೃತಜ್ಞತೆ ಸಲ್ಲಿಸುತ್ತೇನೆ. ತೀರ್ಪುಗಾರರಾದ ವಿಕಾಸ್, ರಣವೀರ್ ಮತ್ತು ಪೂಜಾ, ಸಹ ಸ್ಪರ್ಧಿಗಳು, ಪ್ರೇಕ್ಷಕರು ಮತ್ತು ಅಡುಗೆಮನೆಯಲ್ಲಿ ಪ್ರತಿ ದಿನವೂ ಉತ್ತಮವಾಗಿ ಕಾರ್ಯನಿರ್ವಹಿಸಲು ನನ್ನನ್ನು ಪ್ರೇರೇಪಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.

ಕಳೆದ ವರ್ಷ ಮೊಹಮ್ಮದ್ ಆಶಿಕ್ ಮಾಸ್ಟರ್‌ಚೆಫ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿ ಸೋಲು ಕಂಡಿದ್ದರು. ಈ ಬಾರಿ ಸತತ ಪ್ರಯತ್ನದ ಮೂಲಕ ಮಾಸ್ಟರ್‌ಚೆಫ್ ಇಂಡಿಯಾ ಟ್ರೋಫಿಯನ್ನು ಗೆದ್ದುಕೊಂಡಿದ್ದಾರೆ. ಮಾಸ್ಟರ್ ಶೆಫ್ ಇಂಡಿಯಾ ಫೈನಲ್‌ಗೆ  ರುಖ್ಸಾರ್ ಸಯೀದ್, ಸೂರಜ್ ಥಾಪಾ, ನಂಬಿ ಜೆಸ್ಸಿಕಾ ಮರಕ್ ಮತ್ತು ಮುಹಮ್ಮದ್ ಆಶಿಕ್ ಪ್ರವೇಶಿಸಿದ್ದರು.

ಇದೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಯುವಕನೊಬ್ಬ ‘ಮಾಸ್ಟರ್ ಶೆಫ್ ಇಂಡಿಯಾ’ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ಮಂಗಳೂರು ನಗರದ ಜೆಪ್ಪು ಸಮೀಪದ ಅಬ್ದುಲ್ ಖಾದರ್-ಸಾರಮ್ಮ ದಂಪತಿಯ ಪುತ್ರನಾಗಿರುವ ಮುಹಮ್ಮದ್ ಆಶಿಕ್‌ಗೆ ಅಡುಗೆ ತಯಾರಿಯೆಂದರೆ ಅಚ್ಚುಮೆಚ್ಚು. ಹೋಟೆಲ್ ಮ್ಯಾನೇಜ್ ಮೆಂಟ್ ಕಲಿಯಬೇಕೆಂಬ ಬಯಕೆಯಿತ್ತು. ಆದರೆ ಆರ್ಥಿಕ ಸ್ಥಿತಿ ಚೆನ್ನಾಗಿರದ ಕಾರಣ ದ್ವಿತೀಯ ಪಿಯುಸಿಯಲ್ಲಿ ಶಿಕ್ಷಣ ನಿಲ್ಲಿಸಿದ್ದರು. ಪರಿಚಯಸ್ಥರು, ಸ್ನೇಹಿತರ ಮನೆಗಳಲ್ಲಿ ನಡೆಯುವ ಸಣ್ಣ ಪುಟ್ಟ ಕಾರ್ಯಕ್ರಮಗಳಿಗೆ ತನ್ನ ಮನೆಯಲ್ಲಿ ರುಚಿಯಾದ ಹೊಸ ಶೈಲಿಯ ಆಹಾರಗಳನ್ನು ತಯಾರಿಸಿ ಕೊಡುತ್ತಿದ್ದರು. ಇದಲ್ಲದೆ ನಗರದ ಕಾಲೇಜುಗಳಲ್ಲಿ ಕಾರ್ಯಕ್ರಮಗಳು ನಡೆಯುವಾಗ ಸ್ಟಾಲ್ ಹಾಕಿ ವ್ಯಾಪಾರ ಮಾಡುತ್ತಿದ್ದರು. ಕುಲ್ಕಿ ಶರ್ಬತ್ ಸೇರಿ ಹಲವು ಬಗೆಯ ಪಾನೀಯಗಳನ್ನು ತಯಾರಿಸುತ್ತಿದ್ದರು.

ಮೊಹಮ್ಮದ್ ಆಶಿಕ್ ಅವರ ಪಾಕ ಕಲೆಯನ್ನು ಗುರುತಿಸಿದ ಅವರ ಸಂಬಂಧಿ ಮುಹಮ್ಮದ್ ಅಲಿ ಎಂಬವರು ಆರ್ಥಿಕ ನೆರವು ನೀಡಿ ಪ್ರೋತ್ಸಾಹಿಸಿದ್ದರು. ಅದರಂತೆ ತನ್ನ 20ರ ಹರೆಯದಲ್ಲಿ ನಗರದ ಬಲ್ಮಠದಲ್ಲಿ ಮೊಹಮ್ಮದ್‌ ಆಶಿಕ್‌ ‘ಕುಲ್ಕಿ ಹಬ್’ ತೆರೆದಿದ್ದರು. ಪೂರ್ಣಪ್ರಮಾಣದಲ್ಲಿ ‘ ಶೆಫ್ ’ ಆಗಿದ್ದ ಮೊಹಮ್ಮದ್‌ ಆಶಿಕ್‌  ಹೈದರಾಬಾದ್, ಬೆಂಗಳೂರಿನಲ್ಲಿ ನಡೆದ ‘ ಶೆಫ್ ’ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.

 

ಇದನ್ನು ಓದಿ: ಮುಂದಿನ 30 ವರ್ಷ ಸಂಸತ್ತಿನ ಒಳಗೆ- ಹೊರಗೆ ನಿಮ್ಮ ವಿರುದ್ಧ ಹೋರಾಡುತ್ತೇನೆ: ಮಹುವಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...