Homeಕರ್ನಾಟಕ‘ಮಾಸ್ಟರ್ ಶೆಫ್ ಇಂಡಿಯಾ’ ಗೆದ್ದ ಮಂಗಳೂರಿನ ಯುವಕ ಮೊಹಮ್ಮದ್ ಆಶಿಕ್

‘ಮಾಸ್ಟರ್ ಶೆಫ್ ಇಂಡಿಯಾ’ ಗೆದ್ದ ಮಂಗಳೂರಿನ ಯುವಕ ಮೊಹಮ್ಮದ್ ಆಶಿಕ್

- Advertisement -
- Advertisement -

ಮುಂಬೈಯಲ್ಲಿ ಸೋನಿ ಲೈವ್ ಓಟಿಟಿ ಪ್ಲಾಟ್ ಫಾರ್ಮ್ ಆಯೋಜಿಸಿರುವ ‘ಮಾಸ್ಟರ್ ಶೆಫ್ ಇಂಡಿಯಾ-2023’ ಪ್ರಶಸ್ತಿಯನ್ನು ಮಂಗಳೂರಿನ ಯುವಕ ಮುಹಮ್ಮದ್ ಆಶಿಕ್ ಗೆದ್ದುಕೊಂಡಿದ್ದಾರೆ.

ಮಂಗಳೂರಿನ 24 ವರ್ಷದ ಯುವಕ ಮೊಹಮ್ಮದ್ ಆಶಿಕ್ ಅವರು ಮಾಸ್ಟರ್ ಚೆಫ್ ಇಂಡಿಯಾ 2023ರ ವಿಜೇತರಾಗಿ ಹೊರಹೊಮ್ಮಿದ್ದು, ನಂಬಿ ಜೆಸ್ಸಿಕಾ ಮರಕ್ ಮತ್ತು ರುಖ್ಸಾರ್ ಸಯೀದ್ ರನ್ನರ್ ಅಪ್  ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಮೊಹಮ್ಮದ್ ಆಶಿಕ್, ನಾನು ಮಾಸ್ಟರ್‌ಚೆಫ್ ಇಂಡಿಯಾದಲ್ಲಿ ಗೆಲುವಿಗೆ  ಕೃತಜ್ಞನಾಗಿದ್ದೇನೆ. ಎಲಿಮಿನೇಷನ್ ಎದುರಿಸುವುದರಿಂದ ಹಿಡಿದು ಟ್ರೋಫಿ ಹಿಡಿಯುವವರೆಗೆ ಪ್ರತಿ ಕ್ಷಣವೂ ಆಳವಾದ ಪಾಠವಾಗಿತ್ತು. ಈ ಅನುಭವವು ನನ್ನ ಜೀವನವನ್ನು ಸಂಪೂರ್ಣವಾಗಿ ಮರು ರೂಪಿಸಿದೆ. ನಾನು ಸಂಪೂರ್ಣವಾಗಿ ಪಾಕಶಾಲೆಗೆ ನನ್ನನ್ನು ಅರ್ಪಿಸಿಕೊಂಡಿದ್ದೇನೆ. ನಾನು ತೀರ್ಪುಗಾರರಿಗೆ ಅಪಾರ ಕೃತಜ್ಞತೆ ಸಲ್ಲಿಸುತ್ತೇನೆ. ತೀರ್ಪುಗಾರರಾದ ವಿಕಾಸ್, ರಣವೀರ್ ಮತ್ತು ಪೂಜಾ, ಸಹ ಸ್ಪರ್ಧಿಗಳು, ಪ್ರೇಕ್ಷಕರು ಮತ್ತು ಅಡುಗೆಮನೆಯಲ್ಲಿ ಪ್ರತಿ ದಿನವೂ ಉತ್ತಮವಾಗಿ ಕಾರ್ಯನಿರ್ವಹಿಸಲು ನನ್ನನ್ನು ಪ್ರೇರೇಪಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.

ಕಳೆದ ವರ್ಷ ಮೊಹಮ್ಮದ್ ಆಶಿಕ್ ಮಾಸ್ಟರ್‌ಚೆಫ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿ ಸೋಲು ಕಂಡಿದ್ದರು. ಈ ಬಾರಿ ಸತತ ಪ್ರಯತ್ನದ ಮೂಲಕ ಮಾಸ್ಟರ್‌ಚೆಫ್ ಇಂಡಿಯಾ ಟ್ರೋಫಿಯನ್ನು ಗೆದ್ದುಕೊಂಡಿದ್ದಾರೆ. ಮಾಸ್ಟರ್ ಶೆಫ್ ಇಂಡಿಯಾ ಫೈನಲ್‌ಗೆ  ರುಖ್ಸಾರ್ ಸಯೀದ್, ಸೂರಜ್ ಥಾಪಾ, ನಂಬಿ ಜೆಸ್ಸಿಕಾ ಮರಕ್ ಮತ್ತು ಮುಹಮ್ಮದ್ ಆಶಿಕ್ ಪ್ರವೇಶಿಸಿದ್ದರು.

ಇದೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಯುವಕನೊಬ್ಬ ‘ಮಾಸ್ಟರ್ ಶೆಫ್ ಇಂಡಿಯಾ’ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ಮಂಗಳೂರು ನಗರದ ಜೆಪ್ಪು ಸಮೀಪದ ಅಬ್ದುಲ್ ಖಾದರ್-ಸಾರಮ್ಮ ದಂಪತಿಯ ಪುತ್ರನಾಗಿರುವ ಮುಹಮ್ಮದ್ ಆಶಿಕ್‌ಗೆ ಅಡುಗೆ ತಯಾರಿಯೆಂದರೆ ಅಚ್ಚುಮೆಚ್ಚು. ಹೋಟೆಲ್ ಮ್ಯಾನೇಜ್ ಮೆಂಟ್ ಕಲಿಯಬೇಕೆಂಬ ಬಯಕೆಯಿತ್ತು. ಆದರೆ ಆರ್ಥಿಕ ಸ್ಥಿತಿ ಚೆನ್ನಾಗಿರದ ಕಾರಣ ದ್ವಿತೀಯ ಪಿಯುಸಿಯಲ್ಲಿ ಶಿಕ್ಷಣ ನಿಲ್ಲಿಸಿದ್ದರು. ಪರಿಚಯಸ್ಥರು, ಸ್ನೇಹಿತರ ಮನೆಗಳಲ್ಲಿ ನಡೆಯುವ ಸಣ್ಣ ಪುಟ್ಟ ಕಾರ್ಯಕ್ರಮಗಳಿಗೆ ತನ್ನ ಮನೆಯಲ್ಲಿ ರುಚಿಯಾದ ಹೊಸ ಶೈಲಿಯ ಆಹಾರಗಳನ್ನು ತಯಾರಿಸಿ ಕೊಡುತ್ತಿದ್ದರು. ಇದಲ್ಲದೆ ನಗರದ ಕಾಲೇಜುಗಳಲ್ಲಿ ಕಾರ್ಯಕ್ರಮಗಳು ನಡೆಯುವಾಗ ಸ್ಟಾಲ್ ಹಾಕಿ ವ್ಯಾಪಾರ ಮಾಡುತ್ತಿದ್ದರು. ಕುಲ್ಕಿ ಶರ್ಬತ್ ಸೇರಿ ಹಲವು ಬಗೆಯ ಪಾನೀಯಗಳನ್ನು ತಯಾರಿಸುತ್ತಿದ್ದರು.

ಮೊಹಮ್ಮದ್ ಆಶಿಕ್ ಅವರ ಪಾಕ ಕಲೆಯನ್ನು ಗುರುತಿಸಿದ ಅವರ ಸಂಬಂಧಿ ಮುಹಮ್ಮದ್ ಅಲಿ ಎಂಬವರು ಆರ್ಥಿಕ ನೆರವು ನೀಡಿ ಪ್ರೋತ್ಸಾಹಿಸಿದ್ದರು. ಅದರಂತೆ ತನ್ನ 20ರ ಹರೆಯದಲ್ಲಿ ನಗರದ ಬಲ್ಮಠದಲ್ಲಿ ಮೊಹಮ್ಮದ್‌ ಆಶಿಕ್‌ ‘ಕುಲ್ಕಿ ಹಬ್’ ತೆರೆದಿದ್ದರು. ಪೂರ್ಣಪ್ರಮಾಣದಲ್ಲಿ ‘ ಶೆಫ್ ’ ಆಗಿದ್ದ ಮೊಹಮ್ಮದ್‌ ಆಶಿಕ್‌  ಹೈದರಾಬಾದ್, ಬೆಂಗಳೂರಿನಲ್ಲಿ ನಡೆದ ‘ ಶೆಫ್ ’ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.

 

ಇದನ್ನು ಓದಿ: ಮುಂದಿನ 30 ವರ್ಷ ಸಂಸತ್ತಿನ ಒಳಗೆ- ಹೊರಗೆ ನಿಮ್ಮ ವಿರುದ್ಧ ಹೋರಾಡುತ್ತೇನೆ: ಮಹುವಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...