Homeಅಂಕಣಗಳುಮಾರ್ಟಿನ್ ಲಿಂಗ್ಸ್ ಅವರ ಮಹಮದ್ : ಇಸ್ಲಾಂನ ಧಾರ್ಮಿಕ ಮತ್ತು ಚಾರಿತ್ರಿಕ ಅನಾವರಣ

ಮಾರ್ಟಿನ್ ಲಿಂಗ್ಸ್ ಅವರ ಮಹಮದ್ : ಇಸ್ಲಾಂನ ಧಾರ್ಮಿಕ ಮತ್ತು ಚಾರಿತ್ರಿಕ ಅನಾವರಣ

- Advertisement -
- Advertisement -

ಇಸ್ಲಾಂ, ಕುರಾನ್ ಮತ್ತು ಪ್ರವಾದಿ ಮಹಮದ್; ಈ ಮೂರರ ಬಗ್ಗೆ ಮುಸಲ್ಮಾನೇತರ ಜನರು ಅನೇಕಾನೇಕ ತಪ್ಪು ಅಭಿಪ್ರಾಯಗಳನ್ನು ಹೊಂದಿರುವುದು ಮಾತ್ರವಲ್ಲದೇ ಜಾಗತಿಕ ಮಟ್ಟದಲ್ಲಿ ಇಸ್ಲಾಮೋಫೋಭಿಯಾವನ್ನು ಹುಟ್ಟುಹಾಕಲು ಒಂದಷ್ಟು ರಾಷ್ಟ್ರಗಳು ಯಶಸ್ವಿ ಪ್ರಯತ್ನವನ್ನು ಮಾಡಿವೆ. ಸಾಮಾನ್ಯ ಜನರು ಹರಡುವ ಸಾಮಾನ್ಯ ತಪ್ಪು ಮಾಹಿತಿಯೆಂದರೆ ಇಸ್ಲಾಂ ಎಂಬ ಧರ್ಮವನ್ನು ಪ್ರವಾದಿ ಮಹಮದರು ಸ್ಥಾಪಿಸಿದರು ಎಂಬುದು. ಇಸ್ಲಾಂ ಮಹಮದರ ಪೂರ್ವದಲ್ಲಿಯೇ ಅರಬರಲ್ಲಿ ಇದ್ದಂತಹ ಒಂದು ಧಾರ್ಮಿಕತೆ. ಅದಕ್ಕೊಂದು ಅಚ್ಚುಕಟ್ಟಾದ ಕ್ರಮವನ್ನು ಒದಗಿಸುವ ದಿಕ್ಕಿನಲ್ಲಿ ಕೆಲಸ ಮಾಡಿದರು. ದೇವರ ಬಗ್ಗೆ ಇದ್ದಂತಹ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವ, ಧಾರ್ಮಿಕ ಹೊಣೆಗಾರಿಕೆಯನ್ನು ಸ್ಪಷ್ಟಪಡಿಸುವ ಮತ್ತು ಸಮಾಜೋಧಾರ್ಮಿಕ ದೃಷ್ಟಿಯನ್ನು ವ್ಯಕ್ತಿಯು ನೇಮ ಮತ್ತು ನಿಷ್ಠೆಯ ಮೂಲಕ ಅನುಷ್ಠಾನಕ್ಕೆ ತರಲು ಬೇಕಾದಂತಹ ವಿಧಾನಗಳನ್ನು ಖಚಿತತೆಯಿಂದ ಮನಗಾಣಿಸಿದ್ದು, ಕ್ರಮಗೊಳಿಸಿದ್ದು ಪ್ರವಾದಿ ಮಹಮದ್. ತತ್ವ, ನಿಯಮ, ಒಳನೋಟ, ಬಹಳ ಮುಖ್ಯವಾಗಿ ದಾರಿ; ಇತ್ಯಾದಿಗಳನ್ನು ದಾಖಲಿಸಿದ್ದು ಕುರಾನಿನಲ್ಲಿ.

ಮಹಮದ್: ಹಿಸ್ ಲೈಫ್ ಬೇಸ್ಡ್ ಆನ್ ದ ಅರ್ಲಿಯೆಸ್ಟ್ ಸೋರ್ಸಸ್ ಎಂಬ ಮಾರ್ಟಿನ್ ಲಿಂಗ್ಸ್ ಅವರ ಪುಸ್ತಕವು ಮಹಮದರ ಜೀವನವನ್ನು ಬೇರಾವ ಪುಸ್ತಕದಲ್ಲಿಯೂ ನೀಡದಿರುವಷ್ಟು ವಿವರಗಳಿಂದ ಕಟ್ಟಿಕೊಡುತ್ತದೆ. ಬೋಳುವಾರು ಮಹಮದ್ ಕುಂಯ್ಞಿ ಅವರ ’ಓದಿರಿ’ ಕಾದಂಬರಿಯನ್ನು ಓದಿದರೆ ಮಹಮದರ ಜೀವನ ಚಿತ್ರಣವನ್ನು ಕಟ್ಟಿಕೊಳ್ಳಲು ಬಹುಪಾಲು ಸಾಧ್ಯವಾಗುತ್ತದೆ. ಈ ಎರಡೂ ಪುಸ್ತಕಗಳಲ್ಲಿ ಯಾವುದನ್ನೇ ಮೊದಲು ಓದಿದರೂ ಮತ್ತೊಂದನ್ನು ಅರ್ಥಮಾಡಿಕೊಳ್ಳಲು ನೆರವಾಗುತ್ತದೆ.

ಮಾರ್ಟಿನ್ ಅವರ ಪುಸ್ತಕದ ಶಕ್ತಿಯೇ ಪುರಾತನ ಅರಬರ ಆಕರಗಳನ್ನು ಆಧರಿಸಿ ಬರೆದಿರುವುದು. ಅವುಗಳಲ್ಲಿ ಬಹಳಷ್ಟು ಮೊದಲ ಬಾರಿಗೆ ಇಂಗ್ಲಿಷಿಗೆ ಅನುವಾದಗೊಂಡಿವೆ. ಹಾಗಂತ ಇದು ಮಹಮದರ ಬಗ್ಗೆ ಇರುವ ಇತರ ಬರಹಗಳಿಗೆ ವಿರೋಧಾಭಾಸವಾಗಿಯೇನೂ ಇಲ್ಲ. ಬದಲಾಗಿ ಒಳನೋಟಗಳನ್ನು ಮತ್ತು ಹೆಚ್ಚಿನ ವಿವರಗಳನ್ನು ನೀಡುತ್ತದೆ.

PC : Beyaz Tarih

ಮಹಮದರ ಸಮಕಾಲೀನರು ಮತ್ತು ಅವರ ಜೀವನಶೈಲಿ ಮತ್ತು ಕೆಲಸಗಳನ್ನು ನೇರವಾಗಿ ಸಾಕ್ಷೀಕರಿಸಿರುವವರ ಮಾತುಗಳು ಅರಬ್ ಸಾಹಿತ್ಯದಲ್ಲಿ ದಾಖಲಾಗಿವೆ. ಅವುಗಳನ್ನೂ ಮಾರ್ಟಿನ್ ಮುಖ್ಯವಾಗಿ ಆಕರವನ್ನಾಗಿ ಬಳಸಿಕೊಂಡಿದ್ದಾರೆ. ಇಸ್ಲಾಮಿನ ಮತ್ತು ಅರಬ್ಬರ ಚರಿತ್ರೆಯ ಮೈಲಿಗಲ್ಲುಗಳನ್ನು ಮತ್ತು ಮಹಮದರ ಜೀವನದ ಗತಿಯನ್ನು ಕಾಲಾನುಕ್ರಮಣಿಕೆಯ ಆಧಾರದಲ್ಲಿಯೇ ಮಾರ್ಟಿನ್ ಬರೆಯುತ್ತಾರೆ. ಹಾಗಾಗಿ ಇದು ಇತಿಹಾಸ ಅಧ್ಯಯನ ಮಾಡುವವರಿಗೆ ಮಾತ್ರವಲ್ಲದೇ ಸಂಶೋಧನಾಸಕ್ತಿ ಇರುವವರಿಗೂ ಒಂದು ಮುಖ್ಯ ಆಕರವಾಗಿ ಪರಿಣಮಿಸುತ್ತದೆ.

ಇದು ಕಾದಂಬರಿಯಲ್ಲದಿದ್ದರೂ ಭಾಷೆಯ ಸರಳ ಶೈಲಿ ಮತ್ತು ಓಘದ ರೀತಿಯು ಕತೆಯನ್ನು ಓದಿಸುವಷ್ಟೇ ಸುಲಲಿತವಾಗಿ ಓದಿಸಿಕೊಂಡು ಹೋಗುತ್ತದೆ. ಇಸ್ಲಾಮಿನ ಬೋಧನೆಗಳ ಮೇಲೆ ಗಮನವನ್ನು ಕೇಂದ್ರೀಕರಿಸದ ಇದು ಮಹಮದರ ಜೀವನವನ್ನೇ ತನ್ನ ಕೇಂದ್ರವಾಗಿಟ್ಟುಕೊಂಡಿದೆ. ಇಂಗ್ಲೆಂಡಿನ ಇಂಗ್ಲಿಷಾದರೂ ಜಾಗತಿಕ ಮಟ್ಟದ ಇಂಗ್ಲಿಷಿನ ಸರಳತೆಯನ್ನು ಹೊಂದಿದೆ. ಇತಿಹಾಸದ ದೃಷ್ಟಿಯಲ್ಲಿ ಇದರಲ್ಲಿರುವ ನಿಖರತೆಯ ಕಾರಣ ಇದನ್ನು ಇಂಗ್ಲಿಷ್ ಭಾಷೆಯಲ್ಲಿರುವ ವ್ಯಕ್ತಿಚರಿತ್ರೆಗಳ ಸಾಲಿನಲ್ಲಿ ಬಹಳ ಮಹತ್ವದ ಪುಸ್ತಕವನ್ನಾಗಿ ಪರಿಗಣಿಸುತ್ತಾರೆ.

ಆದರೆ, ಈ ಪುಸ್ತಕವು ಸುದೀರ್ಘಕಾಲಿನ ವಿಷಯಭರಿತವಾಗಿದೆ ಎಂದು ಅರಬ್ಬಿನ ಸಂಪ್ರದಾಯವಾದಿಗಳು ಟೀಕಿಸಿರುವುದುಂಟು. ಆದರೆ, ಅರಬ್ ಭಾಷೆಯ ನಿಯತಕಾಲಿಕಗಳಲ್ಲಿ ಮಾರ್ಟಿನ್ ಅವುಗಳಿಗೆಲ್ಲಾ ಸೂಕ್ತ ಉತ್ತರಗಳನ್ನು ನೀಡಿದ್ದಾರೆ. ಪ್ರಾಯಶಃ ಮಾರ್ಟಿನ್ ಅವರ ಬರಹಗಳಲ್ಲಿ ಇಸ್ಲಾಮಿನ ತಾತ್ವಿಕತೆಯು ಸೂಫಿ ಪಂಥದ ಛಾಯೆಯನ್ನು ಪಡೆದುಕೊಳ್ಳುವುದರ ಕಾರಣವೂ ಈ ಬಗೆಯ ವಿರೋಧಗಳನ್ನು ಎದುರಿಸಿದ್ದಿರಬಹುದು. ಇವರನ್ನು ಹತ್ತಿರದಿಂದ ಬಲ್ಲವರು ಸೂಫಿ ಸಂತರೆಂದೇ ಕರೆಯುತ್ತಿದ್ದರು. ಬೌದ್ಧಿಕವಾಗಿ ಮನವೊಲಿಸುವ ಕಲೆಯಂತೂ ಮಾರ್ಟಿನರಿಗೆ ಕರಗತವಾಗಿದ್ದು, ಮುಸಲ್ಮಾನೇತರರೂ ಅವರನ್ನು ಅಭಿಮಾನದಿಂದ ನೋಡುತ್ತಿದ್ದರು ಮತ್ತು ಅನುಸರಿಸುತ್ತಿದ್ದರು.

ಪ್ರಾಟಸ್ಟೆಂಟ್ ಕ್ರೈಸ್ತ ಕುಟುಂಬದಲ್ಲಿ ಹುಟ್ಟಿದ ಮಾರ್ಟಿನ್ ನಾಸ್ತಿಕರಾಗಿ ಪರಿವರ್ತನೆ ಹೊಂದಿದ್ದರು. ಅನೇಕ ಐರೋಪ್ಯ ವಿಶ್ವವಿದ್ಯಾಲಯಗಳಲ್ಲಿ ಪಾಠ ಮಾಡಿದ್ದ ಮಾರ್ಟಿನ್ ಅವರ ಈಜಿಪ್ಟಿನ ಹೆಂಡತಿಯ ಜೊತೆ ಸಂವಹನ ನಡೆಸಲು ಅರಬ್ ಭಾಷೆಯನ್ನು ಕಲಿತರು. ನಂತರ ಇಸ್ಲಾಂ ಧರ್ಮದ ಪ್ರಭಾವಕ್ಕೊಳಗಾದ ಮಾರ್ಟಿನ್ ಇಸ್ಲಾಂ ಸ್ವೀಕರಿಸಿದರು. ಧಾರ್ಮಿಕತೆಯಲ್ಲದ ಆಧ್ಯಾತ್ಮಿಕತೆಯ ಒಲವನ್ನು ಹೊಂದಿದ್ದ ಮಾರ್ಟಿನ್ ಸೂಫಿಯ ರೀತಿ ನೀತಿಗಳ ಅಧ್ಯಯನ ಮತ್ತು ಅನುಸರಣೆಗಳನ್ನು ಮಾಡತೊಡಗಿದ್ದರು.

ಒಟ್ಟಾರೆ ಪ್ರಾಚೀನ ಅರಬ್ ಆಕರಗಳನ್ನು ಆಧರಿಸಿ ರಚಿಸಿರುವ ಮಹಮದ್, ಇಸ್ಲಾಂಅನ್ನು ಧಾರ್ಮಿಕವಾಗಿ ಮಾತ್ರವಲ್ಲದೇ ಚಾರಿತ್ರಿಕವಾಗಿ ತಿಳಿಯಲು ನೆರವಾಗುತ್ತದೆ.


ಇದನ್ನೂ ಓದಿ: ದೇವಿಪ್ರಸಾದ್ ಚಟ್ಟೋಪಾಧ್ಯಾಯರ ’ಲೋಕಾಯತ’ವನ್ನು ಏಕೆ ಓದಬೇಕೆಂದರೆ.. : ಯೋಗೇಶ್ ಮಾಸ್ಟರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...