Homeಅಂಕಣಗಳುಮಾರ್ಟಿನ್ ಲಿಂಗ್ಸ್ ಅವರ ಮಹಮದ್ : ಇಸ್ಲಾಂನ ಧಾರ್ಮಿಕ ಮತ್ತು ಚಾರಿತ್ರಿಕ ಅನಾವರಣ

ಮಾರ್ಟಿನ್ ಲಿಂಗ್ಸ್ ಅವರ ಮಹಮದ್ : ಇಸ್ಲಾಂನ ಧಾರ್ಮಿಕ ಮತ್ತು ಚಾರಿತ್ರಿಕ ಅನಾವರಣ

- Advertisement -
- Advertisement -

ಇಸ್ಲಾಂ, ಕುರಾನ್ ಮತ್ತು ಪ್ರವಾದಿ ಮಹಮದ್; ಈ ಮೂರರ ಬಗ್ಗೆ ಮುಸಲ್ಮಾನೇತರ ಜನರು ಅನೇಕಾನೇಕ ತಪ್ಪು ಅಭಿಪ್ರಾಯಗಳನ್ನು ಹೊಂದಿರುವುದು ಮಾತ್ರವಲ್ಲದೇ ಜಾಗತಿಕ ಮಟ್ಟದಲ್ಲಿ ಇಸ್ಲಾಮೋಫೋಭಿಯಾವನ್ನು ಹುಟ್ಟುಹಾಕಲು ಒಂದಷ್ಟು ರಾಷ್ಟ್ರಗಳು ಯಶಸ್ವಿ ಪ್ರಯತ್ನವನ್ನು ಮಾಡಿವೆ. ಸಾಮಾನ್ಯ ಜನರು ಹರಡುವ ಸಾಮಾನ್ಯ ತಪ್ಪು ಮಾಹಿತಿಯೆಂದರೆ ಇಸ್ಲಾಂ ಎಂಬ ಧರ್ಮವನ್ನು ಪ್ರವಾದಿ ಮಹಮದರು ಸ್ಥಾಪಿಸಿದರು ಎಂಬುದು. ಇಸ್ಲಾಂ ಮಹಮದರ ಪೂರ್ವದಲ್ಲಿಯೇ ಅರಬರಲ್ಲಿ ಇದ್ದಂತಹ ಒಂದು ಧಾರ್ಮಿಕತೆ. ಅದಕ್ಕೊಂದು ಅಚ್ಚುಕಟ್ಟಾದ ಕ್ರಮವನ್ನು ಒದಗಿಸುವ ದಿಕ್ಕಿನಲ್ಲಿ ಕೆಲಸ ಮಾಡಿದರು. ದೇವರ ಬಗ್ಗೆ ಇದ್ದಂತಹ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವ, ಧಾರ್ಮಿಕ ಹೊಣೆಗಾರಿಕೆಯನ್ನು ಸ್ಪಷ್ಟಪಡಿಸುವ ಮತ್ತು ಸಮಾಜೋಧಾರ್ಮಿಕ ದೃಷ್ಟಿಯನ್ನು ವ್ಯಕ್ತಿಯು ನೇಮ ಮತ್ತು ನಿಷ್ಠೆಯ ಮೂಲಕ ಅನುಷ್ಠಾನಕ್ಕೆ ತರಲು ಬೇಕಾದಂತಹ ವಿಧಾನಗಳನ್ನು ಖಚಿತತೆಯಿಂದ ಮನಗಾಣಿಸಿದ್ದು, ಕ್ರಮಗೊಳಿಸಿದ್ದು ಪ್ರವಾದಿ ಮಹಮದ್. ತತ್ವ, ನಿಯಮ, ಒಳನೋಟ, ಬಹಳ ಮುಖ್ಯವಾಗಿ ದಾರಿ; ಇತ್ಯಾದಿಗಳನ್ನು ದಾಖಲಿಸಿದ್ದು ಕುರಾನಿನಲ್ಲಿ.

ಮಹಮದ್: ಹಿಸ್ ಲೈಫ್ ಬೇಸ್ಡ್ ಆನ್ ದ ಅರ್ಲಿಯೆಸ್ಟ್ ಸೋರ್ಸಸ್ ಎಂಬ ಮಾರ್ಟಿನ್ ಲಿಂಗ್ಸ್ ಅವರ ಪುಸ್ತಕವು ಮಹಮದರ ಜೀವನವನ್ನು ಬೇರಾವ ಪುಸ್ತಕದಲ್ಲಿಯೂ ನೀಡದಿರುವಷ್ಟು ವಿವರಗಳಿಂದ ಕಟ್ಟಿಕೊಡುತ್ತದೆ. ಬೋಳುವಾರು ಮಹಮದ್ ಕುಂಯ್ಞಿ ಅವರ ’ಓದಿರಿ’ ಕಾದಂಬರಿಯನ್ನು ಓದಿದರೆ ಮಹಮದರ ಜೀವನ ಚಿತ್ರಣವನ್ನು ಕಟ್ಟಿಕೊಳ್ಳಲು ಬಹುಪಾಲು ಸಾಧ್ಯವಾಗುತ್ತದೆ. ಈ ಎರಡೂ ಪುಸ್ತಕಗಳಲ್ಲಿ ಯಾವುದನ್ನೇ ಮೊದಲು ಓದಿದರೂ ಮತ್ತೊಂದನ್ನು ಅರ್ಥಮಾಡಿಕೊಳ್ಳಲು ನೆರವಾಗುತ್ತದೆ.

ಮಾರ್ಟಿನ್ ಅವರ ಪುಸ್ತಕದ ಶಕ್ತಿಯೇ ಪುರಾತನ ಅರಬರ ಆಕರಗಳನ್ನು ಆಧರಿಸಿ ಬರೆದಿರುವುದು. ಅವುಗಳಲ್ಲಿ ಬಹಳಷ್ಟು ಮೊದಲ ಬಾರಿಗೆ ಇಂಗ್ಲಿಷಿಗೆ ಅನುವಾದಗೊಂಡಿವೆ. ಹಾಗಂತ ಇದು ಮಹಮದರ ಬಗ್ಗೆ ಇರುವ ಇತರ ಬರಹಗಳಿಗೆ ವಿರೋಧಾಭಾಸವಾಗಿಯೇನೂ ಇಲ್ಲ. ಬದಲಾಗಿ ಒಳನೋಟಗಳನ್ನು ಮತ್ತು ಹೆಚ್ಚಿನ ವಿವರಗಳನ್ನು ನೀಡುತ್ತದೆ.

PC : Beyaz Tarih

ಮಹಮದರ ಸಮಕಾಲೀನರು ಮತ್ತು ಅವರ ಜೀವನಶೈಲಿ ಮತ್ತು ಕೆಲಸಗಳನ್ನು ನೇರವಾಗಿ ಸಾಕ್ಷೀಕರಿಸಿರುವವರ ಮಾತುಗಳು ಅರಬ್ ಸಾಹಿತ್ಯದಲ್ಲಿ ದಾಖಲಾಗಿವೆ. ಅವುಗಳನ್ನೂ ಮಾರ್ಟಿನ್ ಮುಖ್ಯವಾಗಿ ಆಕರವನ್ನಾಗಿ ಬಳಸಿಕೊಂಡಿದ್ದಾರೆ. ಇಸ್ಲಾಮಿನ ಮತ್ತು ಅರಬ್ಬರ ಚರಿತ್ರೆಯ ಮೈಲಿಗಲ್ಲುಗಳನ್ನು ಮತ್ತು ಮಹಮದರ ಜೀವನದ ಗತಿಯನ್ನು ಕಾಲಾನುಕ್ರಮಣಿಕೆಯ ಆಧಾರದಲ್ಲಿಯೇ ಮಾರ್ಟಿನ್ ಬರೆಯುತ್ತಾರೆ. ಹಾಗಾಗಿ ಇದು ಇತಿಹಾಸ ಅಧ್ಯಯನ ಮಾಡುವವರಿಗೆ ಮಾತ್ರವಲ್ಲದೇ ಸಂಶೋಧನಾಸಕ್ತಿ ಇರುವವರಿಗೂ ಒಂದು ಮುಖ್ಯ ಆಕರವಾಗಿ ಪರಿಣಮಿಸುತ್ತದೆ.

ಇದು ಕಾದಂಬರಿಯಲ್ಲದಿದ್ದರೂ ಭಾಷೆಯ ಸರಳ ಶೈಲಿ ಮತ್ತು ಓಘದ ರೀತಿಯು ಕತೆಯನ್ನು ಓದಿಸುವಷ್ಟೇ ಸುಲಲಿತವಾಗಿ ಓದಿಸಿಕೊಂಡು ಹೋಗುತ್ತದೆ. ಇಸ್ಲಾಮಿನ ಬೋಧನೆಗಳ ಮೇಲೆ ಗಮನವನ್ನು ಕೇಂದ್ರೀಕರಿಸದ ಇದು ಮಹಮದರ ಜೀವನವನ್ನೇ ತನ್ನ ಕೇಂದ್ರವಾಗಿಟ್ಟುಕೊಂಡಿದೆ. ಇಂಗ್ಲೆಂಡಿನ ಇಂಗ್ಲಿಷಾದರೂ ಜಾಗತಿಕ ಮಟ್ಟದ ಇಂಗ್ಲಿಷಿನ ಸರಳತೆಯನ್ನು ಹೊಂದಿದೆ. ಇತಿಹಾಸದ ದೃಷ್ಟಿಯಲ್ಲಿ ಇದರಲ್ಲಿರುವ ನಿಖರತೆಯ ಕಾರಣ ಇದನ್ನು ಇಂಗ್ಲಿಷ್ ಭಾಷೆಯಲ್ಲಿರುವ ವ್ಯಕ್ತಿಚರಿತ್ರೆಗಳ ಸಾಲಿನಲ್ಲಿ ಬಹಳ ಮಹತ್ವದ ಪುಸ್ತಕವನ್ನಾಗಿ ಪರಿಗಣಿಸುತ್ತಾರೆ.

ಆದರೆ, ಈ ಪುಸ್ತಕವು ಸುದೀರ್ಘಕಾಲಿನ ವಿಷಯಭರಿತವಾಗಿದೆ ಎಂದು ಅರಬ್ಬಿನ ಸಂಪ್ರದಾಯವಾದಿಗಳು ಟೀಕಿಸಿರುವುದುಂಟು. ಆದರೆ, ಅರಬ್ ಭಾಷೆಯ ನಿಯತಕಾಲಿಕಗಳಲ್ಲಿ ಮಾರ್ಟಿನ್ ಅವುಗಳಿಗೆಲ್ಲಾ ಸೂಕ್ತ ಉತ್ತರಗಳನ್ನು ನೀಡಿದ್ದಾರೆ. ಪ್ರಾಯಶಃ ಮಾರ್ಟಿನ್ ಅವರ ಬರಹಗಳಲ್ಲಿ ಇಸ್ಲಾಮಿನ ತಾತ್ವಿಕತೆಯು ಸೂಫಿ ಪಂಥದ ಛಾಯೆಯನ್ನು ಪಡೆದುಕೊಳ್ಳುವುದರ ಕಾರಣವೂ ಈ ಬಗೆಯ ವಿರೋಧಗಳನ್ನು ಎದುರಿಸಿದ್ದಿರಬಹುದು. ಇವರನ್ನು ಹತ್ತಿರದಿಂದ ಬಲ್ಲವರು ಸೂಫಿ ಸಂತರೆಂದೇ ಕರೆಯುತ್ತಿದ್ದರು. ಬೌದ್ಧಿಕವಾಗಿ ಮನವೊಲಿಸುವ ಕಲೆಯಂತೂ ಮಾರ್ಟಿನರಿಗೆ ಕರಗತವಾಗಿದ್ದು, ಮುಸಲ್ಮಾನೇತರರೂ ಅವರನ್ನು ಅಭಿಮಾನದಿಂದ ನೋಡುತ್ತಿದ್ದರು ಮತ್ತು ಅನುಸರಿಸುತ್ತಿದ್ದರು.

ಪ್ರಾಟಸ್ಟೆಂಟ್ ಕ್ರೈಸ್ತ ಕುಟುಂಬದಲ್ಲಿ ಹುಟ್ಟಿದ ಮಾರ್ಟಿನ್ ನಾಸ್ತಿಕರಾಗಿ ಪರಿವರ್ತನೆ ಹೊಂದಿದ್ದರು. ಅನೇಕ ಐರೋಪ್ಯ ವಿಶ್ವವಿದ್ಯಾಲಯಗಳಲ್ಲಿ ಪಾಠ ಮಾಡಿದ್ದ ಮಾರ್ಟಿನ್ ಅವರ ಈಜಿಪ್ಟಿನ ಹೆಂಡತಿಯ ಜೊತೆ ಸಂವಹನ ನಡೆಸಲು ಅರಬ್ ಭಾಷೆಯನ್ನು ಕಲಿತರು. ನಂತರ ಇಸ್ಲಾಂ ಧರ್ಮದ ಪ್ರಭಾವಕ್ಕೊಳಗಾದ ಮಾರ್ಟಿನ್ ಇಸ್ಲಾಂ ಸ್ವೀಕರಿಸಿದರು. ಧಾರ್ಮಿಕತೆಯಲ್ಲದ ಆಧ್ಯಾತ್ಮಿಕತೆಯ ಒಲವನ್ನು ಹೊಂದಿದ್ದ ಮಾರ್ಟಿನ್ ಸೂಫಿಯ ರೀತಿ ನೀತಿಗಳ ಅಧ್ಯಯನ ಮತ್ತು ಅನುಸರಣೆಗಳನ್ನು ಮಾಡತೊಡಗಿದ್ದರು.

ಒಟ್ಟಾರೆ ಪ್ರಾಚೀನ ಅರಬ್ ಆಕರಗಳನ್ನು ಆಧರಿಸಿ ರಚಿಸಿರುವ ಮಹಮದ್, ಇಸ್ಲಾಂಅನ್ನು ಧಾರ್ಮಿಕವಾಗಿ ಮಾತ್ರವಲ್ಲದೇ ಚಾರಿತ್ರಿಕವಾಗಿ ತಿಳಿಯಲು ನೆರವಾಗುತ್ತದೆ.


ಇದನ್ನೂ ಓದಿ: ದೇವಿಪ್ರಸಾದ್ ಚಟ್ಟೋಪಾಧ್ಯಾಯರ ’ಲೋಕಾಯತ’ವನ್ನು ಏಕೆ ಓದಬೇಕೆಂದರೆ.. : ಯೋಗೇಶ್ ಮಾಸ್ಟರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....