Homeಅಂಕಣಗಳುಮಾರ್ಟಿನ್ ಲಿಂಗ್ಸ್ ಅವರ ಮಹಮದ್ : ಇಸ್ಲಾಂನ ಧಾರ್ಮಿಕ ಮತ್ತು ಚಾರಿತ್ರಿಕ ಅನಾವರಣ

ಮಾರ್ಟಿನ್ ಲಿಂಗ್ಸ್ ಅವರ ಮಹಮದ್ : ಇಸ್ಲಾಂನ ಧಾರ್ಮಿಕ ಮತ್ತು ಚಾರಿತ್ರಿಕ ಅನಾವರಣ

- Advertisement -
- Advertisement -

ಇಸ್ಲಾಂ, ಕುರಾನ್ ಮತ್ತು ಪ್ರವಾದಿ ಮಹಮದ್; ಈ ಮೂರರ ಬಗ್ಗೆ ಮುಸಲ್ಮಾನೇತರ ಜನರು ಅನೇಕಾನೇಕ ತಪ್ಪು ಅಭಿಪ್ರಾಯಗಳನ್ನು ಹೊಂದಿರುವುದು ಮಾತ್ರವಲ್ಲದೇ ಜಾಗತಿಕ ಮಟ್ಟದಲ್ಲಿ ಇಸ್ಲಾಮೋಫೋಭಿಯಾವನ್ನು ಹುಟ್ಟುಹಾಕಲು ಒಂದಷ್ಟು ರಾಷ್ಟ್ರಗಳು ಯಶಸ್ವಿ ಪ್ರಯತ್ನವನ್ನು ಮಾಡಿವೆ. ಸಾಮಾನ್ಯ ಜನರು ಹರಡುವ ಸಾಮಾನ್ಯ ತಪ್ಪು ಮಾಹಿತಿಯೆಂದರೆ ಇಸ್ಲಾಂ ಎಂಬ ಧರ್ಮವನ್ನು ಪ್ರವಾದಿ ಮಹಮದರು ಸ್ಥಾಪಿಸಿದರು ಎಂಬುದು. ಇಸ್ಲಾಂ ಮಹಮದರ ಪೂರ್ವದಲ್ಲಿಯೇ ಅರಬರಲ್ಲಿ ಇದ್ದಂತಹ ಒಂದು ಧಾರ್ಮಿಕತೆ. ಅದಕ್ಕೊಂದು ಅಚ್ಚುಕಟ್ಟಾದ ಕ್ರಮವನ್ನು ಒದಗಿಸುವ ದಿಕ್ಕಿನಲ್ಲಿ ಕೆಲಸ ಮಾಡಿದರು. ದೇವರ ಬಗ್ಗೆ ಇದ್ದಂತಹ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವ, ಧಾರ್ಮಿಕ ಹೊಣೆಗಾರಿಕೆಯನ್ನು ಸ್ಪಷ್ಟಪಡಿಸುವ ಮತ್ತು ಸಮಾಜೋಧಾರ್ಮಿಕ ದೃಷ್ಟಿಯನ್ನು ವ್ಯಕ್ತಿಯು ನೇಮ ಮತ್ತು ನಿಷ್ಠೆಯ ಮೂಲಕ ಅನುಷ್ಠಾನಕ್ಕೆ ತರಲು ಬೇಕಾದಂತಹ ವಿಧಾನಗಳನ್ನು ಖಚಿತತೆಯಿಂದ ಮನಗಾಣಿಸಿದ್ದು, ಕ್ರಮಗೊಳಿಸಿದ್ದು ಪ್ರವಾದಿ ಮಹಮದ್. ತತ್ವ, ನಿಯಮ, ಒಳನೋಟ, ಬಹಳ ಮುಖ್ಯವಾಗಿ ದಾರಿ; ಇತ್ಯಾದಿಗಳನ್ನು ದಾಖಲಿಸಿದ್ದು ಕುರಾನಿನಲ್ಲಿ.

ಮಹಮದ್: ಹಿಸ್ ಲೈಫ್ ಬೇಸ್ಡ್ ಆನ್ ದ ಅರ್ಲಿಯೆಸ್ಟ್ ಸೋರ್ಸಸ್ ಎಂಬ ಮಾರ್ಟಿನ್ ಲಿಂಗ್ಸ್ ಅವರ ಪುಸ್ತಕವು ಮಹಮದರ ಜೀವನವನ್ನು ಬೇರಾವ ಪುಸ್ತಕದಲ್ಲಿಯೂ ನೀಡದಿರುವಷ್ಟು ವಿವರಗಳಿಂದ ಕಟ್ಟಿಕೊಡುತ್ತದೆ. ಬೋಳುವಾರು ಮಹಮದ್ ಕುಂಯ್ಞಿ ಅವರ ’ಓದಿರಿ’ ಕಾದಂಬರಿಯನ್ನು ಓದಿದರೆ ಮಹಮದರ ಜೀವನ ಚಿತ್ರಣವನ್ನು ಕಟ್ಟಿಕೊಳ್ಳಲು ಬಹುಪಾಲು ಸಾಧ್ಯವಾಗುತ್ತದೆ. ಈ ಎರಡೂ ಪುಸ್ತಕಗಳಲ್ಲಿ ಯಾವುದನ್ನೇ ಮೊದಲು ಓದಿದರೂ ಮತ್ತೊಂದನ್ನು ಅರ್ಥಮಾಡಿಕೊಳ್ಳಲು ನೆರವಾಗುತ್ತದೆ.

ಮಾರ್ಟಿನ್ ಅವರ ಪುಸ್ತಕದ ಶಕ್ತಿಯೇ ಪುರಾತನ ಅರಬರ ಆಕರಗಳನ್ನು ಆಧರಿಸಿ ಬರೆದಿರುವುದು. ಅವುಗಳಲ್ಲಿ ಬಹಳಷ್ಟು ಮೊದಲ ಬಾರಿಗೆ ಇಂಗ್ಲಿಷಿಗೆ ಅನುವಾದಗೊಂಡಿವೆ. ಹಾಗಂತ ಇದು ಮಹಮದರ ಬಗ್ಗೆ ಇರುವ ಇತರ ಬರಹಗಳಿಗೆ ವಿರೋಧಾಭಾಸವಾಗಿಯೇನೂ ಇಲ್ಲ. ಬದಲಾಗಿ ಒಳನೋಟಗಳನ್ನು ಮತ್ತು ಹೆಚ್ಚಿನ ವಿವರಗಳನ್ನು ನೀಡುತ್ತದೆ.

PC : Beyaz Tarih

ಮಹಮದರ ಸಮಕಾಲೀನರು ಮತ್ತು ಅವರ ಜೀವನಶೈಲಿ ಮತ್ತು ಕೆಲಸಗಳನ್ನು ನೇರವಾಗಿ ಸಾಕ್ಷೀಕರಿಸಿರುವವರ ಮಾತುಗಳು ಅರಬ್ ಸಾಹಿತ್ಯದಲ್ಲಿ ದಾಖಲಾಗಿವೆ. ಅವುಗಳನ್ನೂ ಮಾರ್ಟಿನ್ ಮುಖ್ಯವಾಗಿ ಆಕರವನ್ನಾಗಿ ಬಳಸಿಕೊಂಡಿದ್ದಾರೆ. ಇಸ್ಲಾಮಿನ ಮತ್ತು ಅರಬ್ಬರ ಚರಿತ್ರೆಯ ಮೈಲಿಗಲ್ಲುಗಳನ್ನು ಮತ್ತು ಮಹಮದರ ಜೀವನದ ಗತಿಯನ್ನು ಕಾಲಾನುಕ್ರಮಣಿಕೆಯ ಆಧಾರದಲ್ಲಿಯೇ ಮಾರ್ಟಿನ್ ಬರೆಯುತ್ತಾರೆ. ಹಾಗಾಗಿ ಇದು ಇತಿಹಾಸ ಅಧ್ಯಯನ ಮಾಡುವವರಿಗೆ ಮಾತ್ರವಲ್ಲದೇ ಸಂಶೋಧನಾಸಕ್ತಿ ಇರುವವರಿಗೂ ಒಂದು ಮುಖ್ಯ ಆಕರವಾಗಿ ಪರಿಣಮಿಸುತ್ತದೆ.

ಇದು ಕಾದಂಬರಿಯಲ್ಲದಿದ್ದರೂ ಭಾಷೆಯ ಸರಳ ಶೈಲಿ ಮತ್ತು ಓಘದ ರೀತಿಯು ಕತೆಯನ್ನು ಓದಿಸುವಷ್ಟೇ ಸುಲಲಿತವಾಗಿ ಓದಿಸಿಕೊಂಡು ಹೋಗುತ್ತದೆ. ಇಸ್ಲಾಮಿನ ಬೋಧನೆಗಳ ಮೇಲೆ ಗಮನವನ್ನು ಕೇಂದ್ರೀಕರಿಸದ ಇದು ಮಹಮದರ ಜೀವನವನ್ನೇ ತನ್ನ ಕೇಂದ್ರವಾಗಿಟ್ಟುಕೊಂಡಿದೆ. ಇಂಗ್ಲೆಂಡಿನ ಇಂಗ್ಲಿಷಾದರೂ ಜಾಗತಿಕ ಮಟ್ಟದ ಇಂಗ್ಲಿಷಿನ ಸರಳತೆಯನ್ನು ಹೊಂದಿದೆ. ಇತಿಹಾಸದ ದೃಷ್ಟಿಯಲ್ಲಿ ಇದರಲ್ಲಿರುವ ನಿಖರತೆಯ ಕಾರಣ ಇದನ್ನು ಇಂಗ್ಲಿಷ್ ಭಾಷೆಯಲ್ಲಿರುವ ವ್ಯಕ್ತಿಚರಿತ್ರೆಗಳ ಸಾಲಿನಲ್ಲಿ ಬಹಳ ಮಹತ್ವದ ಪುಸ್ತಕವನ್ನಾಗಿ ಪರಿಗಣಿಸುತ್ತಾರೆ.

ಆದರೆ, ಈ ಪುಸ್ತಕವು ಸುದೀರ್ಘಕಾಲಿನ ವಿಷಯಭರಿತವಾಗಿದೆ ಎಂದು ಅರಬ್ಬಿನ ಸಂಪ್ರದಾಯವಾದಿಗಳು ಟೀಕಿಸಿರುವುದುಂಟು. ಆದರೆ, ಅರಬ್ ಭಾಷೆಯ ನಿಯತಕಾಲಿಕಗಳಲ್ಲಿ ಮಾರ್ಟಿನ್ ಅವುಗಳಿಗೆಲ್ಲಾ ಸೂಕ್ತ ಉತ್ತರಗಳನ್ನು ನೀಡಿದ್ದಾರೆ. ಪ್ರಾಯಶಃ ಮಾರ್ಟಿನ್ ಅವರ ಬರಹಗಳಲ್ಲಿ ಇಸ್ಲಾಮಿನ ತಾತ್ವಿಕತೆಯು ಸೂಫಿ ಪಂಥದ ಛಾಯೆಯನ್ನು ಪಡೆದುಕೊಳ್ಳುವುದರ ಕಾರಣವೂ ಈ ಬಗೆಯ ವಿರೋಧಗಳನ್ನು ಎದುರಿಸಿದ್ದಿರಬಹುದು. ಇವರನ್ನು ಹತ್ತಿರದಿಂದ ಬಲ್ಲವರು ಸೂಫಿ ಸಂತರೆಂದೇ ಕರೆಯುತ್ತಿದ್ದರು. ಬೌದ್ಧಿಕವಾಗಿ ಮನವೊಲಿಸುವ ಕಲೆಯಂತೂ ಮಾರ್ಟಿನರಿಗೆ ಕರಗತವಾಗಿದ್ದು, ಮುಸಲ್ಮಾನೇತರರೂ ಅವರನ್ನು ಅಭಿಮಾನದಿಂದ ನೋಡುತ್ತಿದ್ದರು ಮತ್ತು ಅನುಸರಿಸುತ್ತಿದ್ದರು.

ಪ್ರಾಟಸ್ಟೆಂಟ್ ಕ್ರೈಸ್ತ ಕುಟುಂಬದಲ್ಲಿ ಹುಟ್ಟಿದ ಮಾರ್ಟಿನ್ ನಾಸ್ತಿಕರಾಗಿ ಪರಿವರ್ತನೆ ಹೊಂದಿದ್ದರು. ಅನೇಕ ಐರೋಪ್ಯ ವಿಶ್ವವಿದ್ಯಾಲಯಗಳಲ್ಲಿ ಪಾಠ ಮಾಡಿದ್ದ ಮಾರ್ಟಿನ್ ಅವರ ಈಜಿಪ್ಟಿನ ಹೆಂಡತಿಯ ಜೊತೆ ಸಂವಹನ ನಡೆಸಲು ಅರಬ್ ಭಾಷೆಯನ್ನು ಕಲಿತರು. ನಂತರ ಇಸ್ಲಾಂ ಧರ್ಮದ ಪ್ರಭಾವಕ್ಕೊಳಗಾದ ಮಾರ್ಟಿನ್ ಇಸ್ಲಾಂ ಸ್ವೀಕರಿಸಿದರು. ಧಾರ್ಮಿಕತೆಯಲ್ಲದ ಆಧ್ಯಾತ್ಮಿಕತೆಯ ಒಲವನ್ನು ಹೊಂದಿದ್ದ ಮಾರ್ಟಿನ್ ಸೂಫಿಯ ರೀತಿ ನೀತಿಗಳ ಅಧ್ಯಯನ ಮತ್ತು ಅನುಸರಣೆಗಳನ್ನು ಮಾಡತೊಡಗಿದ್ದರು.

ಒಟ್ಟಾರೆ ಪ್ರಾಚೀನ ಅರಬ್ ಆಕರಗಳನ್ನು ಆಧರಿಸಿ ರಚಿಸಿರುವ ಮಹಮದ್, ಇಸ್ಲಾಂಅನ್ನು ಧಾರ್ಮಿಕವಾಗಿ ಮಾತ್ರವಲ್ಲದೇ ಚಾರಿತ್ರಿಕವಾಗಿ ತಿಳಿಯಲು ನೆರವಾಗುತ್ತದೆ.


ಇದನ್ನೂ ಓದಿ: ದೇವಿಪ್ರಸಾದ್ ಚಟ್ಟೋಪಾಧ್ಯಾಯರ ’ಲೋಕಾಯತ’ವನ್ನು ಏಕೆ ಓದಬೇಕೆಂದರೆ.. : ಯೋಗೇಶ್ ಮಾಸ್ಟರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...