Homeಅಂಕಣಗಳುಮಾರ್ಟಿನ್ ಲಿಂಗ್ಸ್ ಅವರ ಮಹಮದ್ : ಇಸ್ಲಾಂನ ಧಾರ್ಮಿಕ ಮತ್ತು ಚಾರಿತ್ರಿಕ ಅನಾವರಣ

ಮಾರ್ಟಿನ್ ಲಿಂಗ್ಸ್ ಅವರ ಮಹಮದ್ : ಇಸ್ಲಾಂನ ಧಾರ್ಮಿಕ ಮತ್ತು ಚಾರಿತ್ರಿಕ ಅನಾವರಣ

- Advertisement -
- Advertisement -

ಇಸ್ಲಾಂ, ಕುರಾನ್ ಮತ್ತು ಪ್ರವಾದಿ ಮಹಮದ್; ಈ ಮೂರರ ಬಗ್ಗೆ ಮುಸಲ್ಮಾನೇತರ ಜನರು ಅನೇಕಾನೇಕ ತಪ್ಪು ಅಭಿಪ್ರಾಯಗಳನ್ನು ಹೊಂದಿರುವುದು ಮಾತ್ರವಲ್ಲದೇ ಜಾಗತಿಕ ಮಟ್ಟದಲ್ಲಿ ಇಸ್ಲಾಮೋಫೋಭಿಯಾವನ್ನು ಹುಟ್ಟುಹಾಕಲು ಒಂದಷ್ಟು ರಾಷ್ಟ್ರಗಳು ಯಶಸ್ವಿ ಪ್ರಯತ್ನವನ್ನು ಮಾಡಿವೆ. ಸಾಮಾನ್ಯ ಜನರು ಹರಡುವ ಸಾಮಾನ್ಯ ತಪ್ಪು ಮಾಹಿತಿಯೆಂದರೆ ಇಸ್ಲಾಂ ಎಂಬ ಧರ್ಮವನ್ನು ಪ್ರವಾದಿ ಮಹಮದರು ಸ್ಥಾಪಿಸಿದರು ಎಂಬುದು. ಇಸ್ಲಾಂ ಮಹಮದರ ಪೂರ್ವದಲ್ಲಿಯೇ ಅರಬರಲ್ಲಿ ಇದ್ದಂತಹ ಒಂದು ಧಾರ್ಮಿಕತೆ. ಅದಕ್ಕೊಂದು ಅಚ್ಚುಕಟ್ಟಾದ ಕ್ರಮವನ್ನು ಒದಗಿಸುವ ದಿಕ್ಕಿನಲ್ಲಿ ಕೆಲಸ ಮಾಡಿದರು. ದೇವರ ಬಗ್ಗೆ ಇದ್ದಂತಹ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವ, ಧಾರ್ಮಿಕ ಹೊಣೆಗಾರಿಕೆಯನ್ನು ಸ್ಪಷ್ಟಪಡಿಸುವ ಮತ್ತು ಸಮಾಜೋಧಾರ್ಮಿಕ ದೃಷ್ಟಿಯನ್ನು ವ್ಯಕ್ತಿಯು ನೇಮ ಮತ್ತು ನಿಷ್ಠೆಯ ಮೂಲಕ ಅನುಷ್ಠಾನಕ್ಕೆ ತರಲು ಬೇಕಾದಂತಹ ವಿಧಾನಗಳನ್ನು ಖಚಿತತೆಯಿಂದ ಮನಗಾಣಿಸಿದ್ದು, ಕ್ರಮಗೊಳಿಸಿದ್ದು ಪ್ರವಾದಿ ಮಹಮದ್. ತತ್ವ, ನಿಯಮ, ಒಳನೋಟ, ಬಹಳ ಮುಖ್ಯವಾಗಿ ದಾರಿ; ಇತ್ಯಾದಿಗಳನ್ನು ದಾಖಲಿಸಿದ್ದು ಕುರಾನಿನಲ್ಲಿ.

ಮಹಮದ್: ಹಿಸ್ ಲೈಫ್ ಬೇಸ್ಡ್ ಆನ್ ದ ಅರ್ಲಿಯೆಸ್ಟ್ ಸೋರ್ಸಸ್ ಎಂಬ ಮಾರ್ಟಿನ್ ಲಿಂಗ್ಸ್ ಅವರ ಪುಸ್ತಕವು ಮಹಮದರ ಜೀವನವನ್ನು ಬೇರಾವ ಪುಸ್ತಕದಲ್ಲಿಯೂ ನೀಡದಿರುವಷ್ಟು ವಿವರಗಳಿಂದ ಕಟ್ಟಿಕೊಡುತ್ತದೆ. ಬೋಳುವಾರು ಮಹಮದ್ ಕುಂಯ್ಞಿ ಅವರ ’ಓದಿರಿ’ ಕಾದಂಬರಿಯನ್ನು ಓದಿದರೆ ಮಹಮದರ ಜೀವನ ಚಿತ್ರಣವನ್ನು ಕಟ್ಟಿಕೊಳ್ಳಲು ಬಹುಪಾಲು ಸಾಧ್ಯವಾಗುತ್ತದೆ. ಈ ಎರಡೂ ಪುಸ್ತಕಗಳಲ್ಲಿ ಯಾವುದನ್ನೇ ಮೊದಲು ಓದಿದರೂ ಮತ್ತೊಂದನ್ನು ಅರ್ಥಮಾಡಿಕೊಳ್ಳಲು ನೆರವಾಗುತ್ತದೆ.

ಮಾರ್ಟಿನ್ ಅವರ ಪುಸ್ತಕದ ಶಕ್ತಿಯೇ ಪುರಾತನ ಅರಬರ ಆಕರಗಳನ್ನು ಆಧರಿಸಿ ಬರೆದಿರುವುದು. ಅವುಗಳಲ್ಲಿ ಬಹಳಷ್ಟು ಮೊದಲ ಬಾರಿಗೆ ಇಂಗ್ಲಿಷಿಗೆ ಅನುವಾದಗೊಂಡಿವೆ. ಹಾಗಂತ ಇದು ಮಹಮದರ ಬಗ್ಗೆ ಇರುವ ಇತರ ಬರಹಗಳಿಗೆ ವಿರೋಧಾಭಾಸವಾಗಿಯೇನೂ ಇಲ್ಲ. ಬದಲಾಗಿ ಒಳನೋಟಗಳನ್ನು ಮತ್ತು ಹೆಚ್ಚಿನ ವಿವರಗಳನ್ನು ನೀಡುತ್ತದೆ.

PC : Beyaz Tarih

ಮಹಮದರ ಸಮಕಾಲೀನರು ಮತ್ತು ಅವರ ಜೀವನಶೈಲಿ ಮತ್ತು ಕೆಲಸಗಳನ್ನು ನೇರವಾಗಿ ಸಾಕ್ಷೀಕರಿಸಿರುವವರ ಮಾತುಗಳು ಅರಬ್ ಸಾಹಿತ್ಯದಲ್ಲಿ ದಾಖಲಾಗಿವೆ. ಅವುಗಳನ್ನೂ ಮಾರ್ಟಿನ್ ಮುಖ್ಯವಾಗಿ ಆಕರವನ್ನಾಗಿ ಬಳಸಿಕೊಂಡಿದ್ದಾರೆ. ಇಸ್ಲಾಮಿನ ಮತ್ತು ಅರಬ್ಬರ ಚರಿತ್ರೆಯ ಮೈಲಿಗಲ್ಲುಗಳನ್ನು ಮತ್ತು ಮಹಮದರ ಜೀವನದ ಗತಿಯನ್ನು ಕಾಲಾನುಕ್ರಮಣಿಕೆಯ ಆಧಾರದಲ್ಲಿಯೇ ಮಾರ್ಟಿನ್ ಬರೆಯುತ್ತಾರೆ. ಹಾಗಾಗಿ ಇದು ಇತಿಹಾಸ ಅಧ್ಯಯನ ಮಾಡುವವರಿಗೆ ಮಾತ್ರವಲ್ಲದೇ ಸಂಶೋಧನಾಸಕ್ತಿ ಇರುವವರಿಗೂ ಒಂದು ಮುಖ್ಯ ಆಕರವಾಗಿ ಪರಿಣಮಿಸುತ್ತದೆ.

ಇದು ಕಾದಂಬರಿಯಲ್ಲದಿದ್ದರೂ ಭಾಷೆಯ ಸರಳ ಶೈಲಿ ಮತ್ತು ಓಘದ ರೀತಿಯು ಕತೆಯನ್ನು ಓದಿಸುವಷ್ಟೇ ಸುಲಲಿತವಾಗಿ ಓದಿಸಿಕೊಂಡು ಹೋಗುತ್ತದೆ. ಇಸ್ಲಾಮಿನ ಬೋಧನೆಗಳ ಮೇಲೆ ಗಮನವನ್ನು ಕೇಂದ್ರೀಕರಿಸದ ಇದು ಮಹಮದರ ಜೀವನವನ್ನೇ ತನ್ನ ಕೇಂದ್ರವಾಗಿಟ್ಟುಕೊಂಡಿದೆ. ಇಂಗ್ಲೆಂಡಿನ ಇಂಗ್ಲಿಷಾದರೂ ಜಾಗತಿಕ ಮಟ್ಟದ ಇಂಗ್ಲಿಷಿನ ಸರಳತೆಯನ್ನು ಹೊಂದಿದೆ. ಇತಿಹಾಸದ ದೃಷ್ಟಿಯಲ್ಲಿ ಇದರಲ್ಲಿರುವ ನಿಖರತೆಯ ಕಾರಣ ಇದನ್ನು ಇಂಗ್ಲಿಷ್ ಭಾಷೆಯಲ್ಲಿರುವ ವ್ಯಕ್ತಿಚರಿತ್ರೆಗಳ ಸಾಲಿನಲ್ಲಿ ಬಹಳ ಮಹತ್ವದ ಪುಸ್ತಕವನ್ನಾಗಿ ಪರಿಗಣಿಸುತ್ತಾರೆ.

ಆದರೆ, ಈ ಪುಸ್ತಕವು ಸುದೀರ್ಘಕಾಲಿನ ವಿಷಯಭರಿತವಾಗಿದೆ ಎಂದು ಅರಬ್ಬಿನ ಸಂಪ್ರದಾಯವಾದಿಗಳು ಟೀಕಿಸಿರುವುದುಂಟು. ಆದರೆ, ಅರಬ್ ಭಾಷೆಯ ನಿಯತಕಾಲಿಕಗಳಲ್ಲಿ ಮಾರ್ಟಿನ್ ಅವುಗಳಿಗೆಲ್ಲಾ ಸೂಕ್ತ ಉತ್ತರಗಳನ್ನು ನೀಡಿದ್ದಾರೆ. ಪ್ರಾಯಶಃ ಮಾರ್ಟಿನ್ ಅವರ ಬರಹಗಳಲ್ಲಿ ಇಸ್ಲಾಮಿನ ತಾತ್ವಿಕತೆಯು ಸೂಫಿ ಪಂಥದ ಛಾಯೆಯನ್ನು ಪಡೆದುಕೊಳ್ಳುವುದರ ಕಾರಣವೂ ಈ ಬಗೆಯ ವಿರೋಧಗಳನ್ನು ಎದುರಿಸಿದ್ದಿರಬಹುದು. ಇವರನ್ನು ಹತ್ತಿರದಿಂದ ಬಲ್ಲವರು ಸೂಫಿ ಸಂತರೆಂದೇ ಕರೆಯುತ್ತಿದ್ದರು. ಬೌದ್ಧಿಕವಾಗಿ ಮನವೊಲಿಸುವ ಕಲೆಯಂತೂ ಮಾರ್ಟಿನರಿಗೆ ಕರಗತವಾಗಿದ್ದು, ಮುಸಲ್ಮಾನೇತರರೂ ಅವರನ್ನು ಅಭಿಮಾನದಿಂದ ನೋಡುತ್ತಿದ್ದರು ಮತ್ತು ಅನುಸರಿಸುತ್ತಿದ್ದರು.

ಪ್ರಾಟಸ್ಟೆಂಟ್ ಕ್ರೈಸ್ತ ಕುಟುಂಬದಲ್ಲಿ ಹುಟ್ಟಿದ ಮಾರ್ಟಿನ್ ನಾಸ್ತಿಕರಾಗಿ ಪರಿವರ್ತನೆ ಹೊಂದಿದ್ದರು. ಅನೇಕ ಐರೋಪ್ಯ ವಿಶ್ವವಿದ್ಯಾಲಯಗಳಲ್ಲಿ ಪಾಠ ಮಾಡಿದ್ದ ಮಾರ್ಟಿನ್ ಅವರ ಈಜಿಪ್ಟಿನ ಹೆಂಡತಿಯ ಜೊತೆ ಸಂವಹನ ನಡೆಸಲು ಅರಬ್ ಭಾಷೆಯನ್ನು ಕಲಿತರು. ನಂತರ ಇಸ್ಲಾಂ ಧರ್ಮದ ಪ್ರಭಾವಕ್ಕೊಳಗಾದ ಮಾರ್ಟಿನ್ ಇಸ್ಲಾಂ ಸ್ವೀಕರಿಸಿದರು. ಧಾರ್ಮಿಕತೆಯಲ್ಲದ ಆಧ್ಯಾತ್ಮಿಕತೆಯ ಒಲವನ್ನು ಹೊಂದಿದ್ದ ಮಾರ್ಟಿನ್ ಸೂಫಿಯ ರೀತಿ ನೀತಿಗಳ ಅಧ್ಯಯನ ಮತ್ತು ಅನುಸರಣೆಗಳನ್ನು ಮಾಡತೊಡಗಿದ್ದರು.

ಒಟ್ಟಾರೆ ಪ್ರಾಚೀನ ಅರಬ್ ಆಕರಗಳನ್ನು ಆಧರಿಸಿ ರಚಿಸಿರುವ ಮಹಮದ್, ಇಸ್ಲಾಂಅನ್ನು ಧಾರ್ಮಿಕವಾಗಿ ಮಾತ್ರವಲ್ಲದೇ ಚಾರಿತ್ರಿಕವಾಗಿ ತಿಳಿಯಲು ನೆರವಾಗುತ್ತದೆ.


ಇದನ್ನೂ ಓದಿ: ದೇವಿಪ್ರಸಾದ್ ಚಟ್ಟೋಪಾಧ್ಯಾಯರ ’ಲೋಕಾಯತ’ವನ್ನು ಏಕೆ ಓದಬೇಕೆಂದರೆ.. : ಯೋಗೇಶ್ ಮಾಸ್ಟರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...