Homeಅಂಕಣಗಳುಮಾರ್ಟಿನ್ ಲಿಂಗ್ಸ್ ಅವರ ಮಹಮದ್ : ಇಸ್ಲಾಂನ ಧಾರ್ಮಿಕ ಮತ್ತು ಚಾರಿತ್ರಿಕ ಅನಾವರಣ

ಮಾರ್ಟಿನ್ ಲಿಂಗ್ಸ್ ಅವರ ಮಹಮದ್ : ಇಸ್ಲಾಂನ ಧಾರ್ಮಿಕ ಮತ್ತು ಚಾರಿತ್ರಿಕ ಅನಾವರಣ

- Advertisement -
- Advertisement -

ಇಸ್ಲಾಂ, ಕುರಾನ್ ಮತ್ತು ಪ್ರವಾದಿ ಮಹಮದ್; ಈ ಮೂರರ ಬಗ್ಗೆ ಮುಸಲ್ಮಾನೇತರ ಜನರು ಅನೇಕಾನೇಕ ತಪ್ಪು ಅಭಿಪ್ರಾಯಗಳನ್ನು ಹೊಂದಿರುವುದು ಮಾತ್ರವಲ್ಲದೇ ಜಾಗತಿಕ ಮಟ್ಟದಲ್ಲಿ ಇಸ್ಲಾಮೋಫೋಭಿಯಾವನ್ನು ಹುಟ್ಟುಹಾಕಲು ಒಂದಷ್ಟು ರಾಷ್ಟ್ರಗಳು ಯಶಸ್ವಿ ಪ್ರಯತ್ನವನ್ನು ಮಾಡಿವೆ. ಸಾಮಾನ್ಯ ಜನರು ಹರಡುವ ಸಾಮಾನ್ಯ ತಪ್ಪು ಮಾಹಿತಿಯೆಂದರೆ ಇಸ್ಲಾಂ ಎಂಬ ಧರ್ಮವನ್ನು ಪ್ರವಾದಿ ಮಹಮದರು ಸ್ಥಾಪಿಸಿದರು ಎಂಬುದು. ಇಸ್ಲಾಂ ಮಹಮದರ ಪೂರ್ವದಲ್ಲಿಯೇ ಅರಬರಲ್ಲಿ ಇದ್ದಂತಹ ಒಂದು ಧಾರ್ಮಿಕತೆ. ಅದಕ್ಕೊಂದು ಅಚ್ಚುಕಟ್ಟಾದ ಕ್ರಮವನ್ನು ಒದಗಿಸುವ ದಿಕ್ಕಿನಲ್ಲಿ ಕೆಲಸ ಮಾಡಿದರು. ದೇವರ ಬಗ್ಗೆ ಇದ್ದಂತಹ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವ, ಧಾರ್ಮಿಕ ಹೊಣೆಗಾರಿಕೆಯನ್ನು ಸ್ಪಷ್ಟಪಡಿಸುವ ಮತ್ತು ಸಮಾಜೋಧಾರ್ಮಿಕ ದೃಷ್ಟಿಯನ್ನು ವ್ಯಕ್ತಿಯು ನೇಮ ಮತ್ತು ನಿಷ್ಠೆಯ ಮೂಲಕ ಅನುಷ್ಠಾನಕ್ಕೆ ತರಲು ಬೇಕಾದಂತಹ ವಿಧಾನಗಳನ್ನು ಖಚಿತತೆಯಿಂದ ಮನಗಾಣಿಸಿದ್ದು, ಕ್ರಮಗೊಳಿಸಿದ್ದು ಪ್ರವಾದಿ ಮಹಮದ್. ತತ್ವ, ನಿಯಮ, ಒಳನೋಟ, ಬಹಳ ಮುಖ್ಯವಾಗಿ ದಾರಿ; ಇತ್ಯಾದಿಗಳನ್ನು ದಾಖಲಿಸಿದ್ದು ಕುರಾನಿನಲ್ಲಿ.

ಮಹಮದ್: ಹಿಸ್ ಲೈಫ್ ಬೇಸ್ಡ್ ಆನ್ ದ ಅರ್ಲಿಯೆಸ್ಟ್ ಸೋರ್ಸಸ್ ಎಂಬ ಮಾರ್ಟಿನ್ ಲಿಂಗ್ಸ್ ಅವರ ಪುಸ್ತಕವು ಮಹಮದರ ಜೀವನವನ್ನು ಬೇರಾವ ಪುಸ್ತಕದಲ್ಲಿಯೂ ನೀಡದಿರುವಷ್ಟು ವಿವರಗಳಿಂದ ಕಟ್ಟಿಕೊಡುತ್ತದೆ. ಬೋಳುವಾರು ಮಹಮದ್ ಕುಂಯ್ಞಿ ಅವರ ’ಓದಿರಿ’ ಕಾದಂಬರಿಯನ್ನು ಓದಿದರೆ ಮಹಮದರ ಜೀವನ ಚಿತ್ರಣವನ್ನು ಕಟ್ಟಿಕೊಳ್ಳಲು ಬಹುಪಾಲು ಸಾಧ್ಯವಾಗುತ್ತದೆ. ಈ ಎರಡೂ ಪುಸ್ತಕಗಳಲ್ಲಿ ಯಾವುದನ್ನೇ ಮೊದಲು ಓದಿದರೂ ಮತ್ತೊಂದನ್ನು ಅರ್ಥಮಾಡಿಕೊಳ್ಳಲು ನೆರವಾಗುತ್ತದೆ.

ಮಾರ್ಟಿನ್ ಅವರ ಪುಸ್ತಕದ ಶಕ್ತಿಯೇ ಪುರಾತನ ಅರಬರ ಆಕರಗಳನ್ನು ಆಧರಿಸಿ ಬರೆದಿರುವುದು. ಅವುಗಳಲ್ಲಿ ಬಹಳಷ್ಟು ಮೊದಲ ಬಾರಿಗೆ ಇಂಗ್ಲಿಷಿಗೆ ಅನುವಾದಗೊಂಡಿವೆ. ಹಾಗಂತ ಇದು ಮಹಮದರ ಬಗ್ಗೆ ಇರುವ ಇತರ ಬರಹಗಳಿಗೆ ವಿರೋಧಾಭಾಸವಾಗಿಯೇನೂ ಇಲ್ಲ. ಬದಲಾಗಿ ಒಳನೋಟಗಳನ್ನು ಮತ್ತು ಹೆಚ್ಚಿನ ವಿವರಗಳನ್ನು ನೀಡುತ್ತದೆ.

PC : Beyaz Tarih

ಮಹಮದರ ಸಮಕಾಲೀನರು ಮತ್ತು ಅವರ ಜೀವನಶೈಲಿ ಮತ್ತು ಕೆಲಸಗಳನ್ನು ನೇರವಾಗಿ ಸಾಕ್ಷೀಕರಿಸಿರುವವರ ಮಾತುಗಳು ಅರಬ್ ಸಾಹಿತ್ಯದಲ್ಲಿ ದಾಖಲಾಗಿವೆ. ಅವುಗಳನ್ನೂ ಮಾರ್ಟಿನ್ ಮುಖ್ಯವಾಗಿ ಆಕರವನ್ನಾಗಿ ಬಳಸಿಕೊಂಡಿದ್ದಾರೆ. ಇಸ್ಲಾಮಿನ ಮತ್ತು ಅರಬ್ಬರ ಚರಿತ್ರೆಯ ಮೈಲಿಗಲ್ಲುಗಳನ್ನು ಮತ್ತು ಮಹಮದರ ಜೀವನದ ಗತಿಯನ್ನು ಕಾಲಾನುಕ್ರಮಣಿಕೆಯ ಆಧಾರದಲ್ಲಿಯೇ ಮಾರ್ಟಿನ್ ಬರೆಯುತ್ತಾರೆ. ಹಾಗಾಗಿ ಇದು ಇತಿಹಾಸ ಅಧ್ಯಯನ ಮಾಡುವವರಿಗೆ ಮಾತ್ರವಲ್ಲದೇ ಸಂಶೋಧನಾಸಕ್ತಿ ಇರುವವರಿಗೂ ಒಂದು ಮುಖ್ಯ ಆಕರವಾಗಿ ಪರಿಣಮಿಸುತ್ತದೆ.

ಇದು ಕಾದಂಬರಿಯಲ್ಲದಿದ್ದರೂ ಭಾಷೆಯ ಸರಳ ಶೈಲಿ ಮತ್ತು ಓಘದ ರೀತಿಯು ಕತೆಯನ್ನು ಓದಿಸುವಷ್ಟೇ ಸುಲಲಿತವಾಗಿ ಓದಿಸಿಕೊಂಡು ಹೋಗುತ್ತದೆ. ಇಸ್ಲಾಮಿನ ಬೋಧನೆಗಳ ಮೇಲೆ ಗಮನವನ್ನು ಕೇಂದ್ರೀಕರಿಸದ ಇದು ಮಹಮದರ ಜೀವನವನ್ನೇ ತನ್ನ ಕೇಂದ್ರವಾಗಿಟ್ಟುಕೊಂಡಿದೆ. ಇಂಗ್ಲೆಂಡಿನ ಇಂಗ್ಲಿಷಾದರೂ ಜಾಗತಿಕ ಮಟ್ಟದ ಇಂಗ್ಲಿಷಿನ ಸರಳತೆಯನ್ನು ಹೊಂದಿದೆ. ಇತಿಹಾಸದ ದೃಷ್ಟಿಯಲ್ಲಿ ಇದರಲ್ಲಿರುವ ನಿಖರತೆಯ ಕಾರಣ ಇದನ್ನು ಇಂಗ್ಲಿಷ್ ಭಾಷೆಯಲ್ಲಿರುವ ವ್ಯಕ್ತಿಚರಿತ್ರೆಗಳ ಸಾಲಿನಲ್ಲಿ ಬಹಳ ಮಹತ್ವದ ಪುಸ್ತಕವನ್ನಾಗಿ ಪರಿಗಣಿಸುತ್ತಾರೆ.

ಆದರೆ, ಈ ಪುಸ್ತಕವು ಸುದೀರ್ಘಕಾಲಿನ ವಿಷಯಭರಿತವಾಗಿದೆ ಎಂದು ಅರಬ್ಬಿನ ಸಂಪ್ರದಾಯವಾದಿಗಳು ಟೀಕಿಸಿರುವುದುಂಟು. ಆದರೆ, ಅರಬ್ ಭಾಷೆಯ ನಿಯತಕಾಲಿಕಗಳಲ್ಲಿ ಮಾರ್ಟಿನ್ ಅವುಗಳಿಗೆಲ್ಲಾ ಸೂಕ್ತ ಉತ್ತರಗಳನ್ನು ನೀಡಿದ್ದಾರೆ. ಪ್ರಾಯಶಃ ಮಾರ್ಟಿನ್ ಅವರ ಬರಹಗಳಲ್ಲಿ ಇಸ್ಲಾಮಿನ ತಾತ್ವಿಕತೆಯು ಸೂಫಿ ಪಂಥದ ಛಾಯೆಯನ್ನು ಪಡೆದುಕೊಳ್ಳುವುದರ ಕಾರಣವೂ ಈ ಬಗೆಯ ವಿರೋಧಗಳನ್ನು ಎದುರಿಸಿದ್ದಿರಬಹುದು. ಇವರನ್ನು ಹತ್ತಿರದಿಂದ ಬಲ್ಲವರು ಸೂಫಿ ಸಂತರೆಂದೇ ಕರೆಯುತ್ತಿದ್ದರು. ಬೌದ್ಧಿಕವಾಗಿ ಮನವೊಲಿಸುವ ಕಲೆಯಂತೂ ಮಾರ್ಟಿನರಿಗೆ ಕರಗತವಾಗಿದ್ದು, ಮುಸಲ್ಮಾನೇತರರೂ ಅವರನ್ನು ಅಭಿಮಾನದಿಂದ ನೋಡುತ್ತಿದ್ದರು ಮತ್ತು ಅನುಸರಿಸುತ್ತಿದ್ದರು.

ಪ್ರಾಟಸ್ಟೆಂಟ್ ಕ್ರೈಸ್ತ ಕುಟುಂಬದಲ್ಲಿ ಹುಟ್ಟಿದ ಮಾರ್ಟಿನ್ ನಾಸ್ತಿಕರಾಗಿ ಪರಿವರ್ತನೆ ಹೊಂದಿದ್ದರು. ಅನೇಕ ಐರೋಪ್ಯ ವಿಶ್ವವಿದ್ಯಾಲಯಗಳಲ್ಲಿ ಪಾಠ ಮಾಡಿದ್ದ ಮಾರ್ಟಿನ್ ಅವರ ಈಜಿಪ್ಟಿನ ಹೆಂಡತಿಯ ಜೊತೆ ಸಂವಹನ ನಡೆಸಲು ಅರಬ್ ಭಾಷೆಯನ್ನು ಕಲಿತರು. ನಂತರ ಇಸ್ಲಾಂ ಧರ್ಮದ ಪ್ರಭಾವಕ್ಕೊಳಗಾದ ಮಾರ್ಟಿನ್ ಇಸ್ಲಾಂ ಸ್ವೀಕರಿಸಿದರು. ಧಾರ್ಮಿಕತೆಯಲ್ಲದ ಆಧ್ಯಾತ್ಮಿಕತೆಯ ಒಲವನ್ನು ಹೊಂದಿದ್ದ ಮಾರ್ಟಿನ್ ಸೂಫಿಯ ರೀತಿ ನೀತಿಗಳ ಅಧ್ಯಯನ ಮತ್ತು ಅನುಸರಣೆಗಳನ್ನು ಮಾಡತೊಡಗಿದ್ದರು.

ಒಟ್ಟಾರೆ ಪ್ರಾಚೀನ ಅರಬ್ ಆಕರಗಳನ್ನು ಆಧರಿಸಿ ರಚಿಸಿರುವ ಮಹಮದ್, ಇಸ್ಲಾಂಅನ್ನು ಧಾರ್ಮಿಕವಾಗಿ ಮಾತ್ರವಲ್ಲದೇ ಚಾರಿತ್ರಿಕವಾಗಿ ತಿಳಿಯಲು ನೆರವಾಗುತ್ತದೆ.


ಇದನ್ನೂ ಓದಿ: ದೇವಿಪ್ರಸಾದ್ ಚಟ್ಟೋಪಾಧ್ಯಾಯರ ’ಲೋಕಾಯತ’ವನ್ನು ಏಕೆ ಓದಬೇಕೆಂದರೆ.. : ಯೋಗೇಶ್ ಮಾಸ್ಟರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...