Homeಮುಖಪುಟಮೊಹಮ್ಮದ್ ಜುಬೇರ್ | ವಶಪಡಿಸಿಕೊಂಡ ಎಲೆಕ್ಟ್ರಾನಿಕ್ ಸಾಧನಗಳ ಬಿಡುಗಡೆಗೆ ಸಲ್ಲಿಸಿದ್ದ ಅರ್ಜಿ ವಜಾ

ಮೊಹಮ್ಮದ್ ಜುಬೇರ್ | ವಶಪಡಿಸಿಕೊಂಡ ಎಲೆಕ್ಟ್ರಾನಿಕ್ ಸಾಧನಗಳ ಬಿಡುಗಡೆಗೆ ಸಲ್ಲಿಸಿದ್ದ ಅರ್ಜಿ ವಜಾ

- Advertisement -
- Advertisement -

2022 ರಲ್ಲಿ ದೆಹಲಿ ಪೊಲೀಸರು ವಶಪಡಿಸಿಕೊಂಡಿರುವ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರ ಎಲೆಕ್ಟ್ರಾನಿಕ್ ಸಾಧನಗಳನ್ನು ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ನ್ಯಾಯಮೂರ್ತಿ ಸ್ವರಣ ಕಾಂತ ಶರ್ಮಾ ಅವರು, ಇದರ ಪರಿಹಾರಕ್ಕಾಗಿ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಜುಬೈರ್ ಅವರನ್ನು ಕೇಳಿಕೊಂಡಿದ್ದಾರೆ.

2018 ರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದ ಈ ಪ್ರಕರಣದಲ್ಲಿ ಜುಬೈರ್ 1983 ರ ಹಿಂದಿ ಚಲನಚಿತ್ರದ “ಹನಿಮೂನ್ ಹೋಟೆಲ್” ಮತ್ತು “ಹನುಮಾನ್ ಹೋಟೆಲ್” ಎಂಬ ದೃಶ್ಯದ ಸ್ಕ್ರೀನ್ ಶಾರ್ಟ್‌ ಅನ್ನು ಹಂಚಿಕೊಂಡಿದ್ದರು. ಅವರ ಈ ಟ್ವೀಟ್ ಹಿಂದೂ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಆರೋಪಿಸಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಮೊಹಮ್ಮದ್ ಜುಬೇರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇದರ ನಂತರ, ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ ಆರೋಪದ ಮೇಲೆ ದೆಹಲಿ ಪೊಲೀಸರ ಸೈಬರ್ ಘಟಕವು ಜೂನ್ 2022 ರಲ್ಲಿ ಜುಬೇರ್ ಅವರನ್ನು ಬಂಧಿಸಿತ್ತು. ಪ್ರಕರಣದಲ್ಲಿ ಜುಲೈ 15, 2022 ರಂದು, ದೆಹಲಿ ನ್ಯಾಯಾಲಯವು ಅವರಿಗೆ ಜಾಮೀನು ನೀಡಿದ್ದು, “ವಾಕ್ ಸ್ವಾತಂತ್ರ್ಯವು ಪ್ರಜಾಪ್ರಭುತ್ವ ಸಮಾಜದ ಅಡಿಪಾಯ” ಎಂದು ಹೇಳಿತ್ತು.

2018ರ ಈ ಪೋಸ್ಟ್ ಹಂಚಿಕೊಳ್ಳಲು ಬಳಸಿದ್ದ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್ ಬೆಂಗಳೂರಿನಲ್ಲಿರುವ ತನ್ನ ಮನೆಯಲ್ಲಿದೆ ಎಂದು ಜುಬೈರ್ ಹೇಳಿದ್ದರು ಎಂದು ದೆಹಲಿ ಪೊಲೀಸರು ಹೇಳಿಕೊಂಡಿದ್ದರು. ಇದರಿಂದಾಗಿ ಅವರು ಜೂನ್ 30, 2022 ರಂದು ಜುಬೇರ್ ಮನೆ ಮೇಲೆ ದಾಳಿ ನಡೆಸಿ ಡಿವೈಸ್, ಎರಡು ಇನ್‌ವಾಯ್ಸ್‌ಗಳು ಮತ್ತು ಹಾರ್ಡ್ ಡಿಸ್ಕ್ ಅನ್ನು ವಶಪಡಿಸಿಕೊಂಡಿದ್ದರು.

ಆದಾಗ್ಯೂ, ತನಿಖಾಧಿಕಾರಿ ಅಥವಾ ಯಾವುದೇ ಇತರ ಪೊಲೀಸ್ ಅಧಿಕಾರಿಗೆ ತಾನು ಯಾವುದೇ ಹೇಳಿಕೆಯನ್ನು ನೀಡಿಲ್ಲ ಎಂದು ಜುಬೈರ್ ಹೇಳಿಕೊಂಡಿದ್ದಾರೆ. ಪೋಸ್ಟ್ ಹಂಚಿಕೊಳ್ಳಲು ಬಳಸಿದ ಮೊಬೈಲ್ ಫೋನ್ ಕಳೆದುಕೊಂಡಿರುವುದಾಗಿ ಪೊಲೀಸರಿಗೆ ತಿಳಿಸಿರುವುದಾಗಿ ಅವರು ಹೇಳಿದ್ದಾರೆ.

“ಇಷ್ಟೆ ಅಲ್ಲದೆ, ವಿವಾದದಲ್ಲಿರುವ ಟ್ವೀಟ್‌ನಲ್ಲೆ ಅದನ್ನು ಆಂಡ್ರಾಯ್ಡ್ ಮೊಬೈಲ್ ಫೋನ್‌ನಲ್ಲಿ ಪೋಸ್ಟ್ ಮಾಡಲಾಗಿದೆ ಎಂದು ಸ್ಪಷ್ಟವಾಗಿ ಹೇಳುತ್ತದೆ. ಆದ್ದರಿಂದ ಇದು ಯಾವುದೇ ಲ್ಯಾಪ್‌ಟಾಪ್‌ ಜೊತೆಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ” ಎಂದು ಜುಬೈರ್ ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ. “ನನ್ನ ನಿವಾಸದಲ್ಲಿ ನಡೆಸಲಾಗಿದೆ ಎಂದು ಹೇಳಲಾದ ಶೋಧ ಮತ್ತು ವಶಪಡಿಸಿಕೊಳ್ಳುವಿಕೆಯನ್ನು ತನಿಖೆಯ ಅಗತ್ಯಕ್ಕೆ ಮೀರಿದ ದುರುದ್ದೇಶಪೂರಿತ ಕಾರಣಗಳಿಗಾಗಿ ನಡೆಸಲಾಗಿದೆ.” ಎಂದು ಅವರು ಹೇಳಿದ್ದಾರೆ.

ಎಫ್‌ಐಆರ್‌ನ ವ್ಯಾಪ್ತಿಯನ್ನು ಮೀರಿದ ಈ ಸಾಧನಗಳನ್ನು ಬಿಡುಗಡೆ ಮಾಡುವಂತೆ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. “ವಾದದ ಸಮಯದಲ್ಲಿ ಅರ್ಜಿದಾರರ ಪರ ವಕೀಲರು ಅರ್ಜಿದಾರರ ಮೊಬೈಲ್ ಫೋನ್ ಅನ್ನು ಉಲ್ಲೇಖಿಸುತ್ತಿರುವುದು ಕಂಡುಬಂದಿದೆ. ಈ ನಿಟ್ಟಿನಲ್ಲಿ, ಅವರು ಸಂಬಂಧಪಟ್ಟ ಪ್ರದೇಶ ಮ್ಯಾಜಿಸ್ಟ್ರೇಟ್ ಮುಂದೆ ಸೂಕ್ತ ಅರ್ಜಿಯನ್ನು ಸಲ್ಲಿಸಬೇಕು. ಅವರು ಕಾನೂನಿನ ಪ್ರಕಾರ ಅದನ್ನು ನಿಭಾಯಿಸುತ್ತಾರೆ.” ಎಂದು ನ್ಯಾಯಾಲಯ ಹೇಳಿದೆ.

ಇದನ್ನೂಓದಿ:  ಸೌದಿ ಅರೇಬಿಯಾ ಉದ್ಯೋಗ ವೀಸಾ : ಭಾರತೀಯ ಕಾರ್ಮಿಕರಿಗೆ ಕಠಿಣ ನಿಯಮಗಳು ಜಾರಿ

ಸೌದಿ ಅರೇಬಿಯಾ ಉದ್ಯೋಗ ವೀಸಾ : ಭಾರತೀಯ ಕಾರ್ಮಿಕರಿಗೆ ಕಠಿಣ ನಿಯಮಗಳು ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...