Homeಮುಖಪುಟಮಾಂಸಾಹಾರಿಗಳ ಬಗ್ಗೆ ಮೋಹನ್ ಭಾಗವತ್‌ ಕ್ಷುಲ್ಲಕ ಹೇಳಿಕೆ; ‘ಮಾಂಸ ತಿನ್ನುವವರ ಮತ ಬಿಜೆಪಿಗೆ ಬೇಡವೇ?’ ಎಂದ...

ಮಾಂಸಾಹಾರಿಗಳ ಬಗ್ಗೆ ಮೋಹನ್ ಭಾಗವತ್‌ ಕ್ಷುಲ್ಲಕ ಹೇಳಿಕೆ; ‘ಮಾಂಸ ತಿನ್ನುವವರ ಮತ ಬಿಜೆಪಿಗೆ ಬೇಡವೇ?’ ಎಂದ ಜನತೆ

- Advertisement -
- Advertisement -

ಮಾಂಸಾಹಾರ ಸೇವಿಸುವವರ ಕುರಿತು ಆರ್‌ಎಸ್‌ಎಸ್ ಮುಖ್ಯಸ್ಥರಾದ ಮೋಹನ್ ಭಾಗವತ್‌ ಕ್ಲುಲ್ಲಕವಾಗಿ ಮಾತನಾಡಿದ್ದಾರೆ. ಮಾಂಸಾಹಾರವನ್ನು ತಾಮಸಿಕ ಆಹಾರ ಎಂದು ಜರಿದು, ಟೀಕೆಗೆ ಗುರಿಯಾಗಿದ್ದಾರೆ.

“ಮಾಂಸಾಹಾರ ಸೇವಿಸುವವರು ಮಾಂಸಾಹಾರ ಸೇವಿಸುವಾಗ ಶಿಸ್ತು ಅನುಸರಿಸಲು ಪ್ರಯತ್ನಿಸಬೇಕು” ಮೋಹನ್ ಭಾಗವತ್ ಅವರು ಗುರುವಾರ ಹೇಳಿದ್ದಾರೆ. ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವತ್ ಮಾತನಾಡಿದ್ದಾರೆ.

ಜನರು ಸಾಮಾನ್ಯವಾಗಿ ಮಾಂಸಾಹಾರಿ ಭಕ್ಷ್ಯಗಳನ್ನು ಒಳಗೊಂಡಿರುವ ‘ತಾಮಸಿಕ ಆಹಾರ’ವನ್ನು ಸೇವಿಸುವುದನ್ನು ತಪ್ಪಿಸಬೇಕು. ನೀವು ತಪ್ಪು ಆಹಾರವನ್ನು ಸೇವಿಸಿದರೆ, ನೀವು ತಪ್ಪು ದಾರಿಯಲ್ಲಿ ಹೋಗುತ್ತೀರಿ ಎಂದು ಹೇಳಲಾಗುತ್ತದೆ. ಆದ್ದರಿಂದ ತಾಮಸಿಕ ಆಹಾರವನ್ನು ಸೇವಿಸಬೇಡಿ ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಾಶ್ಚಿಮಾತ್ಯ ದೇಶಗಳ ಮಾಂಸಾಹಾರಿಗಳೊಂದಿಗೆ ಹೋಲಿಕೆ ಮಾಡಿದ ಭಾಗವತ್, “ಭಾರತದಲ್ಲಿ ಮಾಂಸ ಮತ್ತು ಮೀನುಗಳನ್ನು ಸೇವಿಸುವವರು ‘ಶ್ರಾವಣ’ ಮಾಸ ಹಾಗೂ ವಾರದ ಕೆಲವು ದಿನಗಳಲ್ಲಿ ತಮ್ಮ ದೈನಂದಿನ ಆಹಾರ ಪದ್ಧತಿಯನ್ನು ತ್ಯಜಿಸುತ್ತಾರೆ” ಎಂದು ಹೇಳಿದ್ದಾರೆ.

“ಮಾಂಸ ಸೇವನೆಯಲ್ಲಿ ಶಿಸ್ತನ್ನು ಅನುಸರಿಸಲು ಪ್ರಯತ್ನಿಸಿ. ಇದರಿಂದ (ನಿಮ್ಮ) ಮನಸ್ಸು ಚಂಚಲವಾಗುವುದಿಲ್ಲ” ಎಂದು ಹೇಳಿರುವುದಾಗಿ ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ನವರಾತ್ರಿ ಆಚರಣೆಯ ಹೊತ್ತಿನಲ್ಲಿ ಭಾಗವತ್ ಹೇಳಿಕೆ ಹೊರಬಿದ್ದಿದೆ. “ಈ ಸಮಯದಲ್ಲಿ ಮಾಂಸಾಹಾರದಿಂದ ಜನರು ದೂರ ಉಳಿಯುತ್ತಾರೆ. ಆದಾಗ್ಯೂ, ದುರ್ಗಾಪೂಜಾ ಹಬ್ಬದ ಕಾರಣಕ್ಕಾಗಿ ಜಾಗತಿಕವಾಗಿ ಪ್ರಸಿದ್ಧವಾಗಿರುವ ಪಶ್ಚಿಮ ಬಂಗಾಳದಂತಹ ಭಾರತದ ಕೆಲವು ಭಾಗಗಳಲ್ಲಿ ಜನರು ಈ ಅವಧಿಯಲ್ಲಿ ಮಾಂಸಾಹಾರವನ್ನು ಸೇವಿಸುತ್ತಾರೆ” ಎಂದು ತಿಳಿಸಿದ್ದಾರೆ.

ಭಾಗವತ್ ಹೇಳಿಕೆಗೆ ವಿರೋಧ; ಬಿಜೆಪಿಗೆ ಮತ ಹಾಕಬಾರದೇ ಎಂದು ಕೇಳಿದ ಜನತೆ

ಮಾಂಸಾಹಾರದ ಕುರಿತು ಕ್ಷುಲ್ಲಕವಾಗಿ ಮಾತನಾಡಿರುವುದನ್ನು ಅನೇಕರು ಖಂಡಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಜನರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

“ಮಾಂಸಾಹಾರ ತಿನ್ನುವವರು ಮಾಂಸಾಹಾರ ವಿರೋಧಿಗಳಿಗೆ ಮತ ನೀಡುವ ಕೆಟ್ಟ ಕೆಲಸ ಮಾಡಬೇಡಿ, ದಮ್ಮಯ್ಯ” ಎಂದು ಡಾ.ಶ್ರೀನಿವಾಸ ಕಕ್ಕಿಲ್ಲಾಯ ಅವರು ಮನವಿ ಮಾಡಿದ್ದಾರೆ.

“ನೂರಕ್ಕೆ 99.99 % ನೊಬೆಲ್‌ ಪ್ರಶಸ್ತಿ ವಿಜೇತರು, ಒಲಂಪಿಕ್ ಚಿನ್ನದ ಪದಕ ಪಡೆದವರು, ಹೊಸ ಹೊಸ ವೈಜ್ಞಾನಿಕ ಅವಿಷ್ಕಾರಗಳಿಗೆ ಕಾರಣಕರ್ತರು, ಪ್ರಖ್ಯಾತ ಸಾಹಿತಿಗಳು ಎಲ್ಲರೂ ಮಾಂಸಾಹಾರಿಗಳಾಗಿದ್ದಾರೆ. ಅದರಲ್ಲೂ ಬೀಫ್ ಈಟರ್ಸ್. ಆದರೆ ನಮ್ಮ ದೇಶದ ಹುಲ್ಲು ಮೇಯುವವರ ಅವಿಷ್ಕಾರಗಳು ಇದರಲ್ಲಿ ಎಷ್ಟಿದೆ? ಯಾವುದೇ ಆಹಾರವಾಗಲಿ ಅದರಲ್ಲಿರುವುದು ಬರಿಯ ಫ್ಯಾಟ್, ಪ್ರೋಟೀನ್ ಕಾರ್ಬೊ ಹೈಡ್ರೇಟ್. ಇಂತಹ ಮೂಢರು ನಮ್ಮ ದೇಶ ಆಳುವ ದುರ್ಗತಿ ಒದಗಿ ಬಂತಲ್ಲ ಅನ್ನುವುದೇ ಒಂದು ನಾವೆಂದೂ ಕಾಣದಿದ್ದ ದೊಡ್ಡ ದುರಂತ” ಎಂದು ಕೃಷ್ಣಮೂರ್ತಿ ಶ್ರೀನಾಥ್‌ ಪೋಸ್ಟ್ ಮಾಡಿದ್ದಾರೆ.

“ಮಾಂಸ ತಿಂದು ದೇವಸ್ಥಾನಕ್ಕೆ ಹೋಗಬಾರದು ಅನ್ನುವುದು, ಆಮೇಲೆ ಗೋಮಾಂಸ ತಿನ್ನಬಾರದು ಅನ್ನುವುದು ಟೆಸ್ಟ್ ಡೋಸ್ಗಳು. ಇವರ ಮೂಲ ಉದ್ದೇಶವೇ ಇದು- ಮಾಂಸ ತಿನ್ನುವವರು ಕೀಳು- ಎಂದು ಹೇಳುವುದು. ಇದನ್ನು ದೇಶದ ಬಹುಸಂಖ್ಯಾತ ಮಾಂಸಾಹಾರಿಗಳು ಅರ್ಥಮಾಡಿಕೊಳ್ಳಬೇಕು” ಎಂದು ಪ್ರಕಾಶ್ ರಾಜ್‌ ಮೇಹು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಶಶಿ ತರೂರು v/s ಮಲ್ಲಿಕಾರ್ಜುನ ಖರ್ಗೆ; ದಿಗ್ವಿಜಯ್ ಸಿಂಗ್ ಕಣದಿಂದ ಹೊರಕ್ಕೆ

“ಸರ್ವ ಜನಾಂಗದ ಶಾಂತಿಯ ತೋಟವನ್ನು ಆಶಿಸಿದ ಕುವೆಂಪು ಮಾಂಸಾಹಾರಿ. ಕರುಣೆಯ ಮೂರ್ತಿ ಬುದ್ಧನೂ ಮಾಂಸಾಹಾರಿ. ಆರು‌ ಮಿಲಿಯ ಯಹೂದಿಗಳನ್ನು ಗ್ಯಾಸ್ ಚೇಂಬರಿನಲ್ಲಿ‌ ಕೊಂದ ಹಿಟ್ಲರ್ ಸಸ್ಯಾಹಾರಿ. ಶಾಂತಿಧೂತ ಗಾಂಧಿಯನ್ನು ಕೊಂದ ಗೋಡ್ಸೆ ಸಸ್ಯಾಹಾರಿ” ಎಂದು ಉದಯ್‌ ಗೋಂಕರ್‌ ಬರೆದಿದ್ದಾರೆ.

“ಮಾಂಸಾಹಾರ ಮಾಡುವವರ ವೋಟ್ ಬಿಜೆಪಿಗೆ ಬೇಡ ಅಂತ ಫರ್ಮಾನು ಹೊರಡಿಸಿ. ದಿನ ನಾನ್ಸೆನ್ಸ್ ಹೇಳಿಕೆ ಕೊಡೋದು ತಪ್ಪತ್ತದೆ” ಎಂದು ಶರತ್‌ಚಂದ್ರ ಒತ್ತಾಯಿಸಿದ್ದಾರೆ.

“ಯುಗಾದಿ ಹಬ್ಬದ ಟೈಮ್‌ನಲ್ಲಿ ಹಲಾಲ್ ಬೇಡ, ಜಟಕ ಮಾಂಸ ತಿನ್ನಿ ಅಂತ ಇವರುಗಳೇ ಹಿಂದೂವಿ ಜಟಕ ಮಾಂಸಾಹಾರದ ಪ್ರಚಾರ ಮಾಡಿದರು. ಆಯುಧ ಪೂಜೆ ಟೈಮ್‌ಗೆ ಕರೆಕ್ಟಆಗಿ ಮಾಂಸ ತಿಂದರೆ ನೀವು ಹಿಂಸಾ ವಿನೋದಿಗಳು ಅಂತಿದಾರೆ” ಎಂದು ನಾಗೇಗೌಡ ಕೀಲಾರ ಅವರು ಕುಟುಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ತಿನ್ನುವ ಆಹಾರದ ಆಧಾರದ ಮೇಲೂ ಸಮಾಜವನ್ನು ವಿಭಜಿಸುವ ಇವರ ವಿಚಾರಗಳ ಬಗ್ಗೆ ಜನತೆ ಎಚ್ಚತ್ತು ಕೊಳ್ಳದಿದ್ದಲ್ಲಿ ಮುಂದೆ ಇನ್ನಷ್ಟು ವಿಪತ್ತು ಕಾದಿದೆ, ಇವರ ಪುರೋಹಿತಶಾಹಿ ಧೋರಣೆಗೆ ಧಿಕ್ಕಾರ, ಮಾಂಸ ತಿಂದವರಿಂದ ಅಲ್ಲಾ ಸ್ವಾಮಿ ದೇಶ ಹಾಳಾಗಿರುವುದು, ತುಪ್ಪ ತಿಂದವರಿಂದ, ಇವರು ತಮ್ಮ ಪರಂಪರೆಯನ್ನು ಒಮ್ಮೆ ತಿರುವಿ ಹಾಕಲಿ ಯಜ್ಞ, ಯಾಗದ ಸಂಧರ್ಭದಲ್ಲಿ ಋತ್ವಿಕರುಗಳಿಗೆ ಎಳೆ ಹಸುವಿನ ಮಾಂಸ ಬಡಿಸುತ್ತಿದ್ದ ವಿಚಾರ ಎಲ್ಲರಿಗೂ ತಿಳಿದದ್ದೇ, ಈಗ ಗೊಡ್ಡು ಉಪದೇಶ ನೀಡುವ ಬದಲು ಎಲ್ಲರಿಗೂ ಆಹಾರ, ವಸತಿ, ಆರೋಗ್ಯ, ಶಿಕ್ಷಣ ಮುಂತಾದ ಮೂಲಭೂತ ಸೌಕರ್ಯ ಒದಗಿಸುವಂತೆ ತಮ್ಮ ಸರ್ಕಾರಕ್ಕೆ ನಿರ್ದೇಶಿಸಿದರೆ ಅನುಕೂಲ ಆಗುತ್ತೆ, ಜನರು ಇವರ ಬಗ್ಗೆ ಎಚ್ಚರದಿಂದ ಇರುವುದು ಒಳ್ಳೆಯದು.

  2. What nonsence! God has created everything for human being. It is his or hercwish to consume meat, fish or vegetables. It is none of anyone’s business to set rules on food consumption. If anyone wants eat meat let him/her consume meat, who the hell we are to tell others? First of all because of the price hike and GST people are slogging to get food and this guy is delivering speech about eating non veg. First let him tell the supremos to provide shelter and food to the people who go to sleep without food then deliver speeches on consuming non veg.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...