Homeಮುಖಪುಟಮಾಂಸಾಹಾರಿಗಳ ಬಗ್ಗೆ ಮೋಹನ್ ಭಾಗವತ್‌ ಕ್ಷುಲ್ಲಕ ಹೇಳಿಕೆ; ‘ಮಾಂಸ ತಿನ್ನುವವರ ಮತ ಬಿಜೆಪಿಗೆ ಬೇಡವೇ?’ ಎಂದ...

ಮಾಂಸಾಹಾರಿಗಳ ಬಗ್ಗೆ ಮೋಹನ್ ಭಾಗವತ್‌ ಕ್ಷುಲ್ಲಕ ಹೇಳಿಕೆ; ‘ಮಾಂಸ ತಿನ್ನುವವರ ಮತ ಬಿಜೆಪಿಗೆ ಬೇಡವೇ?’ ಎಂದ ಜನತೆ

- Advertisement -
- Advertisement -

ಮಾಂಸಾಹಾರ ಸೇವಿಸುವವರ ಕುರಿತು ಆರ್‌ಎಸ್‌ಎಸ್ ಮುಖ್ಯಸ್ಥರಾದ ಮೋಹನ್ ಭಾಗವತ್‌ ಕ್ಲುಲ್ಲಕವಾಗಿ ಮಾತನಾಡಿದ್ದಾರೆ. ಮಾಂಸಾಹಾರವನ್ನು ತಾಮಸಿಕ ಆಹಾರ ಎಂದು ಜರಿದು, ಟೀಕೆಗೆ ಗುರಿಯಾಗಿದ್ದಾರೆ.

“ಮಾಂಸಾಹಾರ ಸೇವಿಸುವವರು ಮಾಂಸಾಹಾರ ಸೇವಿಸುವಾಗ ಶಿಸ್ತು ಅನುಸರಿಸಲು ಪ್ರಯತ್ನಿಸಬೇಕು” ಮೋಹನ್ ಭಾಗವತ್ ಅವರು ಗುರುವಾರ ಹೇಳಿದ್ದಾರೆ. ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವತ್ ಮಾತನಾಡಿದ್ದಾರೆ.

ಜನರು ಸಾಮಾನ್ಯವಾಗಿ ಮಾಂಸಾಹಾರಿ ಭಕ್ಷ್ಯಗಳನ್ನು ಒಳಗೊಂಡಿರುವ ‘ತಾಮಸಿಕ ಆಹಾರ’ವನ್ನು ಸೇವಿಸುವುದನ್ನು ತಪ್ಪಿಸಬೇಕು. ನೀವು ತಪ್ಪು ಆಹಾರವನ್ನು ಸೇವಿಸಿದರೆ, ನೀವು ತಪ್ಪು ದಾರಿಯಲ್ಲಿ ಹೋಗುತ್ತೀರಿ ಎಂದು ಹೇಳಲಾಗುತ್ತದೆ. ಆದ್ದರಿಂದ ತಾಮಸಿಕ ಆಹಾರವನ್ನು ಸೇವಿಸಬೇಡಿ ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಾಶ್ಚಿಮಾತ್ಯ ದೇಶಗಳ ಮಾಂಸಾಹಾರಿಗಳೊಂದಿಗೆ ಹೋಲಿಕೆ ಮಾಡಿದ ಭಾಗವತ್, “ಭಾರತದಲ್ಲಿ ಮಾಂಸ ಮತ್ತು ಮೀನುಗಳನ್ನು ಸೇವಿಸುವವರು ‘ಶ್ರಾವಣ’ ಮಾಸ ಹಾಗೂ ವಾರದ ಕೆಲವು ದಿನಗಳಲ್ಲಿ ತಮ್ಮ ದೈನಂದಿನ ಆಹಾರ ಪದ್ಧತಿಯನ್ನು ತ್ಯಜಿಸುತ್ತಾರೆ” ಎಂದು ಹೇಳಿದ್ದಾರೆ.

“ಮಾಂಸ ಸೇವನೆಯಲ್ಲಿ ಶಿಸ್ತನ್ನು ಅನುಸರಿಸಲು ಪ್ರಯತ್ನಿಸಿ. ಇದರಿಂದ (ನಿಮ್ಮ) ಮನಸ್ಸು ಚಂಚಲವಾಗುವುದಿಲ್ಲ” ಎಂದು ಹೇಳಿರುವುದಾಗಿ ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ನವರಾತ್ರಿ ಆಚರಣೆಯ ಹೊತ್ತಿನಲ್ಲಿ ಭಾಗವತ್ ಹೇಳಿಕೆ ಹೊರಬಿದ್ದಿದೆ. “ಈ ಸಮಯದಲ್ಲಿ ಮಾಂಸಾಹಾರದಿಂದ ಜನರು ದೂರ ಉಳಿಯುತ್ತಾರೆ. ಆದಾಗ್ಯೂ, ದುರ್ಗಾಪೂಜಾ ಹಬ್ಬದ ಕಾರಣಕ್ಕಾಗಿ ಜಾಗತಿಕವಾಗಿ ಪ್ರಸಿದ್ಧವಾಗಿರುವ ಪಶ್ಚಿಮ ಬಂಗಾಳದಂತಹ ಭಾರತದ ಕೆಲವು ಭಾಗಗಳಲ್ಲಿ ಜನರು ಈ ಅವಧಿಯಲ್ಲಿ ಮಾಂಸಾಹಾರವನ್ನು ಸೇವಿಸುತ್ತಾರೆ” ಎಂದು ತಿಳಿಸಿದ್ದಾರೆ.

ಭಾಗವತ್ ಹೇಳಿಕೆಗೆ ವಿರೋಧ; ಬಿಜೆಪಿಗೆ ಮತ ಹಾಕಬಾರದೇ ಎಂದು ಕೇಳಿದ ಜನತೆ

ಮಾಂಸಾಹಾರದ ಕುರಿತು ಕ್ಷುಲ್ಲಕವಾಗಿ ಮಾತನಾಡಿರುವುದನ್ನು ಅನೇಕರು ಖಂಡಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಜನರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

“ಮಾಂಸಾಹಾರ ತಿನ್ನುವವರು ಮಾಂಸಾಹಾರ ವಿರೋಧಿಗಳಿಗೆ ಮತ ನೀಡುವ ಕೆಟ್ಟ ಕೆಲಸ ಮಾಡಬೇಡಿ, ದಮ್ಮಯ್ಯ” ಎಂದು ಡಾ.ಶ್ರೀನಿವಾಸ ಕಕ್ಕಿಲ್ಲಾಯ ಅವರು ಮನವಿ ಮಾಡಿದ್ದಾರೆ.

“ನೂರಕ್ಕೆ 99.99 % ನೊಬೆಲ್‌ ಪ್ರಶಸ್ತಿ ವಿಜೇತರು, ಒಲಂಪಿಕ್ ಚಿನ್ನದ ಪದಕ ಪಡೆದವರು, ಹೊಸ ಹೊಸ ವೈಜ್ಞಾನಿಕ ಅವಿಷ್ಕಾರಗಳಿಗೆ ಕಾರಣಕರ್ತರು, ಪ್ರಖ್ಯಾತ ಸಾಹಿತಿಗಳು ಎಲ್ಲರೂ ಮಾಂಸಾಹಾರಿಗಳಾಗಿದ್ದಾರೆ. ಅದರಲ್ಲೂ ಬೀಫ್ ಈಟರ್ಸ್. ಆದರೆ ನಮ್ಮ ದೇಶದ ಹುಲ್ಲು ಮೇಯುವವರ ಅವಿಷ್ಕಾರಗಳು ಇದರಲ್ಲಿ ಎಷ್ಟಿದೆ? ಯಾವುದೇ ಆಹಾರವಾಗಲಿ ಅದರಲ್ಲಿರುವುದು ಬರಿಯ ಫ್ಯಾಟ್, ಪ್ರೋಟೀನ್ ಕಾರ್ಬೊ ಹೈಡ್ರೇಟ್. ಇಂತಹ ಮೂಢರು ನಮ್ಮ ದೇಶ ಆಳುವ ದುರ್ಗತಿ ಒದಗಿ ಬಂತಲ್ಲ ಅನ್ನುವುದೇ ಒಂದು ನಾವೆಂದೂ ಕಾಣದಿದ್ದ ದೊಡ್ಡ ದುರಂತ” ಎಂದು ಕೃಷ್ಣಮೂರ್ತಿ ಶ್ರೀನಾಥ್‌ ಪೋಸ್ಟ್ ಮಾಡಿದ್ದಾರೆ.

“ಮಾಂಸ ತಿಂದು ದೇವಸ್ಥಾನಕ್ಕೆ ಹೋಗಬಾರದು ಅನ್ನುವುದು, ಆಮೇಲೆ ಗೋಮಾಂಸ ತಿನ್ನಬಾರದು ಅನ್ನುವುದು ಟೆಸ್ಟ್ ಡೋಸ್ಗಳು. ಇವರ ಮೂಲ ಉದ್ದೇಶವೇ ಇದು- ಮಾಂಸ ತಿನ್ನುವವರು ಕೀಳು- ಎಂದು ಹೇಳುವುದು. ಇದನ್ನು ದೇಶದ ಬಹುಸಂಖ್ಯಾತ ಮಾಂಸಾಹಾರಿಗಳು ಅರ್ಥಮಾಡಿಕೊಳ್ಳಬೇಕು” ಎಂದು ಪ್ರಕಾಶ್ ರಾಜ್‌ ಮೇಹು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಶಶಿ ತರೂರು v/s ಮಲ್ಲಿಕಾರ್ಜುನ ಖರ್ಗೆ; ದಿಗ್ವಿಜಯ್ ಸಿಂಗ್ ಕಣದಿಂದ ಹೊರಕ್ಕೆ

“ಸರ್ವ ಜನಾಂಗದ ಶಾಂತಿಯ ತೋಟವನ್ನು ಆಶಿಸಿದ ಕುವೆಂಪು ಮಾಂಸಾಹಾರಿ. ಕರುಣೆಯ ಮೂರ್ತಿ ಬುದ್ಧನೂ ಮಾಂಸಾಹಾರಿ. ಆರು‌ ಮಿಲಿಯ ಯಹೂದಿಗಳನ್ನು ಗ್ಯಾಸ್ ಚೇಂಬರಿನಲ್ಲಿ‌ ಕೊಂದ ಹಿಟ್ಲರ್ ಸಸ್ಯಾಹಾರಿ. ಶಾಂತಿಧೂತ ಗಾಂಧಿಯನ್ನು ಕೊಂದ ಗೋಡ್ಸೆ ಸಸ್ಯಾಹಾರಿ” ಎಂದು ಉದಯ್‌ ಗೋಂಕರ್‌ ಬರೆದಿದ್ದಾರೆ.

“ಮಾಂಸಾಹಾರ ಮಾಡುವವರ ವೋಟ್ ಬಿಜೆಪಿಗೆ ಬೇಡ ಅಂತ ಫರ್ಮಾನು ಹೊರಡಿಸಿ. ದಿನ ನಾನ್ಸೆನ್ಸ್ ಹೇಳಿಕೆ ಕೊಡೋದು ತಪ್ಪತ್ತದೆ” ಎಂದು ಶರತ್‌ಚಂದ್ರ ಒತ್ತಾಯಿಸಿದ್ದಾರೆ.

“ಯುಗಾದಿ ಹಬ್ಬದ ಟೈಮ್‌ನಲ್ಲಿ ಹಲಾಲ್ ಬೇಡ, ಜಟಕ ಮಾಂಸ ತಿನ್ನಿ ಅಂತ ಇವರುಗಳೇ ಹಿಂದೂವಿ ಜಟಕ ಮಾಂಸಾಹಾರದ ಪ್ರಚಾರ ಮಾಡಿದರು. ಆಯುಧ ಪೂಜೆ ಟೈಮ್‌ಗೆ ಕರೆಕ್ಟಆಗಿ ಮಾಂಸ ತಿಂದರೆ ನೀವು ಹಿಂಸಾ ವಿನೋದಿಗಳು ಅಂತಿದಾರೆ” ಎಂದು ನಾಗೇಗೌಡ ಕೀಲಾರ ಅವರು ಕುಟುಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ತಿನ್ನುವ ಆಹಾರದ ಆಧಾರದ ಮೇಲೂ ಸಮಾಜವನ್ನು ವಿಭಜಿಸುವ ಇವರ ವಿಚಾರಗಳ ಬಗ್ಗೆ ಜನತೆ ಎಚ್ಚತ್ತು ಕೊಳ್ಳದಿದ್ದಲ್ಲಿ ಮುಂದೆ ಇನ್ನಷ್ಟು ವಿಪತ್ತು ಕಾದಿದೆ, ಇವರ ಪುರೋಹಿತಶಾಹಿ ಧೋರಣೆಗೆ ಧಿಕ್ಕಾರ, ಮಾಂಸ ತಿಂದವರಿಂದ ಅಲ್ಲಾ ಸ್ವಾಮಿ ದೇಶ ಹಾಳಾಗಿರುವುದು, ತುಪ್ಪ ತಿಂದವರಿಂದ, ಇವರು ತಮ್ಮ ಪರಂಪರೆಯನ್ನು ಒಮ್ಮೆ ತಿರುವಿ ಹಾಕಲಿ ಯಜ್ಞ, ಯಾಗದ ಸಂಧರ್ಭದಲ್ಲಿ ಋತ್ವಿಕರುಗಳಿಗೆ ಎಳೆ ಹಸುವಿನ ಮಾಂಸ ಬಡಿಸುತ್ತಿದ್ದ ವಿಚಾರ ಎಲ್ಲರಿಗೂ ತಿಳಿದದ್ದೇ, ಈಗ ಗೊಡ್ಡು ಉಪದೇಶ ನೀಡುವ ಬದಲು ಎಲ್ಲರಿಗೂ ಆಹಾರ, ವಸತಿ, ಆರೋಗ್ಯ, ಶಿಕ್ಷಣ ಮುಂತಾದ ಮೂಲಭೂತ ಸೌಕರ್ಯ ಒದಗಿಸುವಂತೆ ತಮ್ಮ ಸರ್ಕಾರಕ್ಕೆ ನಿರ್ದೇಶಿಸಿದರೆ ಅನುಕೂಲ ಆಗುತ್ತೆ, ಜನರು ಇವರ ಬಗ್ಗೆ ಎಚ್ಚರದಿಂದ ಇರುವುದು ಒಳ್ಳೆಯದು.

  2. What nonsence! God has created everything for human being. It is his or hercwish to consume meat, fish or vegetables. It is none of anyone’s business to set rules on food consumption. If anyone wants eat meat let him/her consume meat, who the hell we are to tell others? First of all because of the price hike and GST people are slogging to get food and this guy is delivering speech about eating non veg. First let him tell the supremos to provide shelter and food to the people who go to sleep without food then deliver speeches on consuming non veg.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...