Homeಅಂತರಾಷ್ಟ್ರೀಯಬ್ರಿಟನ್‌ನ ಮೊದಲ ದಲಿತ ಮಹಿಳಾ ಮೇಯರ್ ಆಗಿ ಮೊಹಿಂದರ್ ಮಿಧಾ ಆಯ್ಕೆ

ಬ್ರಿಟನ್‌ನ ಮೊದಲ ದಲಿತ ಮಹಿಳಾ ಮೇಯರ್ ಆಗಿ ಮೊಹಿಂದರ್ ಮಿಧಾ ಆಯ್ಕೆ

ಭಾರತದಲ್ಲಿ ಜಾತಿಯ ಹೆಸರಿನಲ್ಲಿ ಶೋಷಣೆಗೆ ಒಳಗಾಗುವ ಜನರು ತಮ್ಮ ಸಾಮರ್ಥ್ಯದ ಆಧಾರದ ಮೇಲೆ ವಿದೇಶಗಳಲ್ಲಿ ತಮ್ಮ ಕೀರ್ತಿ ಪತಾಕೆ ಹಾರಿಸುತ್ತಿದ್ದಾರೆ.

- Advertisement -
- Advertisement -

ಬ್ರಿಟನ್‌ನ ಈಲಿಂಗ್ ನಗರದ ಮೇಯರ್ ಆಗಿ ಮೊಹಿಂದರ್ ಮಿಧಾರವರು ಆಯ್ಕೆ ಆಗುವುದರೊಂದಿಗೆ ಆ ಹುದ್ದೆಗೇರಿದ ಮೊದಲ ದಲಿತ ಮಹಿಳೆ ಎಂದು ಹಿರಿಮೆಗೆ ಪಾತ್ರರಾಗಿದ್ದಾರೆ.

ಪಶ್ಚಿಮ ಲಂಡನ್‌ನಲ್ಲಿರುವ ಸಿಟಿ ಆಫ್ ಈಲಿಂಗ್ ಮೊಹಿಂದರ್ ಕೌರ್ ಮಿಧಾ ಅವರನ್ನು ಮೇಯರ್ ಆಗಿ ಆಯ್ಕೆ ಮಾಡಿದೆ. ಮೊಹಿಂದರ್ ಕೌರ್ ಮಿಧಾ ಅವರು ಈಲಿಂಗ್ ಕೌನ್ಸಿಲ್ ಚುನಾವಣೆಯಲ್ಲಿ ಗರಿಷ್ಠ ಮತಗಳನ್ನು ಪಡೆದು 2022-23 ನೇ ಸಾಲಿನ ನಗರದ ಪ್ರಮುಖ ಹುದ್ದೆಗೆ ಆಯ್ಕೆಯಾಗಿದ್ದಾರೆ.

ಮೊಹಿಂದರ್ ಕೌರ್ ಮಿಧಾ ಇಂಗ್ಲೆಂಡ್‌ನಲ್ಲಿ ಮೇಯರ್ ಕುರ್ಚಿಯ ಮೇಲೆ ಕುಳಿತ ಮೊದಲ ದಲಿತ ಮಹಿಳೆ. ಈ ಸುದ್ದಿಯು ಬ್ರಿಟನ್‌ನಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಅಂಬೇಡ್ಕರ್‌ವಾದಿಗಳ ಮುಖದಲ್ಲಿ ಮಂದಹಾಸವನ್ನು ತಂದಿದೆ ಎಂದು ದಿ ಶೂದ್ರ ವರದಿ ಮಾಡಿದೆ.

ಮೊಹಿಂದರ್ ಮಿಧಾರವರು ಈ ಹುದ್ದೆಗೇರುತ್ತಲೇ ಹಲವು ಅಂಬೇಡ್ಕರ್‌ವಾದಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಲಂಡನ್ ನಗರದ ಖ್ಯಾತ ಮಾನವ ಹಕ್ಕುಗಳ ಕಾರ್ಯಕರ್ತೆ ಸಂತೋಷ್ ದಾಸ್ ಈ ಕುರಿತು ಟ್ವೀಟ್ ಮಾಡಿದ್ದು, “ಕಳೆದ 5 ನಿಮಿಷಗಳಲ್ಲಿ, ಶ್ರೀಮತಿ ಮೊಹಿಂದರ್ ಕೌರ್ ಮಿಧಾ ಈಲಿಂಗ್‌ನ ಮೇಯರ್ ಆಗಿ ಆಯ್ಕೆಯಾದರು. ಯುಕೆಯಲ್ಲಿ ಪ್ರಥಮ ಬಾರಿಗೆ ದಲಿತ ಮಹಿಳೆಯೊಬ್ಬರು ಮೇಯರ್ ಆಗಿದ್ದಾರೆ. ಇದು ನಮಗೆ ಹೆಮ್ಮೆಯ ಕ್ಷಣ’ ಎಂದಿದ್ದಾರೆ.

ಹಾರ್ವರ್ಡ್ ವಿಶ್ವವಿದ್ಯಾಲಯದ ವಿದ್ವಾಂಸ ಸೂರಜ್ ಯೆಂಗ್ಡೆ ಪ್ರತಿಕ್ರಿಯಿಸಿ ‘ಇದೊಂದು ಅಂತಾರಾಷ್ಟ್ರೀಯ ಸುದ್ದಿ. ಗೌರವಾನ್ವಿತ ಮೊಹಿಂದರ್ ಮಿಧಾರನ್ನು ಮೊದಲ ದಲಿತ ಮಹಿಳಾ ಮೇಯರ್ ಆಗಿ ಆಯ್ಕೆ ಮಾಡಿದ ಈಲಿಂಗ್ ಕೌನ್ಸಿಲ್‌ಗೆ ಅಭಿನಂದನೆಗಳು. ಜೈ ಭೀಮ್” ಎಂದಿದ್ದಾರೆ.

ಇದನ್ನೂ ಓದಿ: ಆಂಧ್ರಪ್ರದೇಶ: ಹೊಸ ಜಿಲ್ಲೆಗೆ ಅಂಬೇಡ್ಕರ್‌‌‌ ನಾಮಕರಣ ವಿರೋಧಿಸಿ ಸಚಿವನ ಮನೆಗೆ ಬೆಂಕಿ

ಭಾರತದಲ್ಲಿ ಜಾತಿಯ ಹೆಸರಿನಲ್ಲಿ ಶೋಷಣೆಗೆ ಒಳಗಾಗುವ ಜನರು ತಮ್ಮ ಸಾಮರ್ಥ್ಯದ ಆಧಾರದ ಮೇಲೆ ವಿದೇಶಗಳಲ್ಲಿ ತಮ್ಮ ಕೀರ್ತಿ ಪತಾಕೆ ಹಾರಿಸುತ್ತಿದ್ದಾರೆ. ಮೊಹಿಂದರ್ ಮಿಧಾ ಅವರಂತಹ ಮಹಿಳೆಯರು ನಮಗೆಲ್ಲ ಸ್ಪೂರ್ತಿಯಾಗಿದ್ದಾರೆ. ಬಾಬಾಸಾಹೇಬ್ ಡಾ. ಅಂಬೇಡ್ಕರ್ ಅವರು ಉನ್ನತ ಶಿಕ್ಷಣವನ್ನು ಪೂರ್ಣಗೊಳಿಸಿದ ಅದೇ ಲಂಡನ್‌ನಲ್ಲಿ, ದಲಿತ ಮಹಿಳೆಯೊಬ್ಬರು ನಗರವನ್ನು ಮುನ್ನಡೆಸುತ್ತಾರೆ. ಇದು ನಮ್ಮ ಹೆಮ್ಮೆ ಎಂದು ದಿ ಶೂದ್ರ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಮೋದಿ ಅಥವಾ ಬಿ ಜೆ ಪಿ ಯನ್ನು ತೆಗಳಿದರೆ ಮಾತ್ರ ಕಾಮೆಂಟ್ ಹಾಕುತ್ತೀರಾ ಅಲ್ಲವೇ

  2. ತಪ್ಪೇನು ? ಈ media ಇರುವುದೇ ಮೋದಿ, ಬಿಜೆಪಿ, ಹಿಂದೂ, ಬ್ರಾಹ್ಮಣ್ಯ, ಭಾರತ ದೇಶದ ಮೇಲೆ ಗೂಬೆ ಕೂರಿಸಿ ತೆಗಳುವುದಕ್ಕೆ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...