Homeಅಂತರಾಷ್ಟ್ರೀಯಬ್ರಿಟನ್‌ನ ಮೊದಲ ದಲಿತ ಮಹಿಳಾ ಮೇಯರ್ ಆಗಿ ಮೊಹಿಂದರ್ ಮಿಧಾ ಆಯ್ಕೆ

ಬ್ರಿಟನ್‌ನ ಮೊದಲ ದಲಿತ ಮಹಿಳಾ ಮೇಯರ್ ಆಗಿ ಮೊಹಿಂದರ್ ಮಿಧಾ ಆಯ್ಕೆ

ಭಾರತದಲ್ಲಿ ಜಾತಿಯ ಹೆಸರಿನಲ್ಲಿ ಶೋಷಣೆಗೆ ಒಳಗಾಗುವ ಜನರು ತಮ್ಮ ಸಾಮರ್ಥ್ಯದ ಆಧಾರದ ಮೇಲೆ ವಿದೇಶಗಳಲ್ಲಿ ತಮ್ಮ ಕೀರ್ತಿ ಪತಾಕೆ ಹಾರಿಸುತ್ತಿದ್ದಾರೆ.

- Advertisement -
- Advertisement -

ಬ್ರಿಟನ್‌ನ ಈಲಿಂಗ್ ನಗರದ ಮೇಯರ್ ಆಗಿ ಮೊಹಿಂದರ್ ಮಿಧಾರವರು ಆಯ್ಕೆ ಆಗುವುದರೊಂದಿಗೆ ಆ ಹುದ್ದೆಗೇರಿದ ಮೊದಲ ದಲಿತ ಮಹಿಳೆ ಎಂದು ಹಿರಿಮೆಗೆ ಪಾತ್ರರಾಗಿದ್ದಾರೆ.

ಪಶ್ಚಿಮ ಲಂಡನ್‌ನಲ್ಲಿರುವ ಸಿಟಿ ಆಫ್ ಈಲಿಂಗ್ ಮೊಹಿಂದರ್ ಕೌರ್ ಮಿಧಾ ಅವರನ್ನು ಮೇಯರ್ ಆಗಿ ಆಯ್ಕೆ ಮಾಡಿದೆ. ಮೊಹಿಂದರ್ ಕೌರ್ ಮಿಧಾ ಅವರು ಈಲಿಂಗ್ ಕೌನ್ಸಿಲ್ ಚುನಾವಣೆಯಲ್ಲಿ ಗರಿಷ್ಠ ಮತಗಳನ್ನು ಪಡೆದು 2022-23 ನೇ ಸಾಲಿನ ನಗರದ ಪ್ರಮುಖ ಹುದ್ದೆಗೆ ಆಯ್ಕೆಯಾಗಿದ್ದಾರೆ.

ಮೊಹಿಂದರ್ ಕೌರ್ ಮಿಧಾ ಇಂಗ್ಲೆಂಡ್‌ನಲ್ಲಿ ಮೇಯರ್ ಕುರ್ಚಿಯ ಮೇಲೆ ಕುಳಿತ ಮೊದಲ ದಲಿತ ಮಹಿಳೆ. ಈ ಸುದ್ದಿಯು ಬ್ರಿಟನ್‌ನಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಅಂಬೇಡ್ಕರ್‌ವಾದಿಗಳ ಮುಖದಲ್ಲಿ ಮಂದಹಾಸವನ್ನು ತಂದಿದೆ ಎಂದು ದಿ ಶೂದ್ರ ವರದಿ ಮಾಡಿದೆ.

ಮೊಹಿಂದರ್ ಮಿಧಾರವರು ಈ ಹುದ್ದೆಗೇರುತ್ತಲೇ ಹಲವು ಅಂಬೇಡ್ಕರ್‌ವಾದಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಲಂಡನ್ ನಗರದ ಖ್ಯಾತ ಮಾನವ ಹಕ್ಕುಗಳ ಕಾರ್ಯಕರ್ತೆ ಸಂತೋಷ್ ದಾಸ್ ಈ ಕುರಿತು ಟ್ವೀಟ್ ಮಾಡಿದ್ದು, “ಕಳೆದ 5 ನಿಮಿಷಗಳಲ್ಲಿ, ಶ್ರೀಮತಿ ಮೊಹಿಂದರ್ ಕೌರ್ ಮಿಧಾ ಈಲಿಂಗ್‌ನ ಮೇಯರ್ ಆಗಿ ಆಯ್ಕೆಯಾದರು. ಯುಕೆಯಲ್ಲಿ ಪ್ರಥಮ ಬಾರಿಗೆ ದಲಿತ ಮಹಿಳೆಯೊಬ್ಬರು ಮೇಯರ್ ಆಗಿದ್ದಾರೆ. ಇದು ನಮಗೆ ಹೆಮ್ಮೆಯ ಕ್ಷಣ’ ಎಂದಿದ್ದಾರೆ.

ಹಾರ್ವರ್ಡ್ ವಿಶ್ವವಿದ್ಯಾಲಯದ ವಿದ್ವಾಂಸ ಸೂರಜ್ ಯೆಂಗ್ಡೆ ಪ್ರತಿಕ್ರಿಯಿಸಿ ‘ಇದೊಂದು ಅಂತಾರಾಷ್ಟ್ರೀಯ ಸುದ್ದಿ. ಗೌರವಾನ್ವಿತ ಮೊಹಿಂದರ್ ಮಿಧಾರನ್ನು ಮೊದಲ ದಲಿತ ಮಹಿಳಾ ಮೇಯರ್ ಆಗಿ ಆಯ್ಕೆ ಮಾಡಿದ ಈಲಿಂಗ್ ಕೌನ್ಸಿಲ್‌ಗೆ ಅಭಿನಂದನೆಗಳು. ಜೈ ಭೀಮ್” ಎಂದಿದ್ದಾರೆ.

ಇದನ್ನೂ ಓದಿ: ಆಂಧ್ರಪ್ರದೇಶ: ಹೊಸ ಜಿಲ್ಲೆಗೆ ಅಂಬೇಡ್ಕರ್‌‌‌ ನಾಮಕರಣ ವಿರೋಧಿಸಿ ಸಚಿವನ ಮನೆಗೆ ಬೆಂಕಿ

ಭಾರತದಲ್ಲಿ ಜಾತಿಯ ಹೆಸರಿನಲ್ಲಿ ಶೋಷಣೆಗೆ ಒಳಗಾಗುವ ಜನರು ತಮ್ಮ ಸಾಮರ್ಥ್ಯದ ಆಧಾರದ ಮೇಲೆ ವಿದೇಶಗಳಲ್ಲಿ ತಮ್ಮ ಕೀರ್ತಿ ಪತಾಕೆ ಹಾರಿಸುತ್ತಿದ್ದಾರೆ. ಮೊಹಿಂದರ್ ಮಿಧಾ ಅವರಂತಹ ಮಹಿಳೆಯರು ನಮಗೆಲ್ಲ ಸ್ಪೂರ್ತಿಯಾಗಿದ್ದಾರೆ. ಬಾಬಾಸಾಹೇಬ್ ಡಾ. ಅಂಬೇಡ್ಕರ್ ಅವರು ಉನ್ನತ ಶಿಕ್ಷಣವನ್ನು ಪೂರ್ಣಗೊಳಿಸಿದ ಅದೇ ಲಂಡನ್‌ನಲ್ಲಿ, ದಲಿತ ಮಹಿಳೆಯೊಬ್ಬರು ನಗರವನ್ನು ಮುನ್ನಡೆಸುತ್ತಾರೆ. ಇದು ನಮ್ಮ ಹೆಮ್ಮೆ ಎಂದು ದಿ ಶೂದ್ರ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಮೋದಿ ಅಥವಾ ಬಿ ಜೆ ಪಿ ಯನ್ನು ತೆಗಳಿದರೆ ಮಾತ್ರ ಕಾಮೆಂಟ್ ಹಾಕುತ್ತೀರಾ ಅಲ್ಲವೇ

  2. ತಪ್ಪೇನು ? ಈ media ಇರುವುದೇ ಮೋದಿ, ಬಿಜೆಪಿ, ಹಿಂದೂ, ಬ್ರಾಹ್ಮಣ್ಯ, ಭಾರತ ದೇಶದ ಮೇಲೆ ಗೂಬೆ ಕೂರಿಸಿ ತೆಗಳುವುದಕ್ಕೆ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...