Homeಕರ್ನಾಟಕಕರ್ನಾಟಕದ ಐಎಎಸ್ ಅಧಿಕಾರಿ ಒರಿಸ್ಸಾದಲ್ಲಿ ಅಮಾನತು : ಮೊಹಮದ್ ಮೊಹ್ಸಿನ್ ಅವರು ಮಾಡಿದ ತಪ್ಪೇನು?

ಕರ್ನಾಟಕದ ಐಎಎಸ್ ಅಧಿಕಾರಿ ಒರಿಸ್ಸಾದಲ್ಲಿ ಅಮಾನತು : ಮೊಹಮದ್ ಮೊಹ್ಸಿನ್ ಅವರು ಮಾಡಿದ ತಪ್ಪೇನು?

- Advertisement -
- Advertisement -

ಕುಂದಾಪುರದಲ್ಲಿ ಅಸಿಸ್ಟೆಂಟ್ ಕಮೀಷನರ್ ಆಗಿ ತಮ್ಮ ಕೆಲಸ ಶುರು ಮಾಡಿದ ಐಎಎಸ್ ಅಧಿಕಾರಿ ಮೊಹಮದ್ ಮೊಹ್ಸಿನ್, ಇದೀಗ ದೇಶಾದ್ಯಂತ ಸುದ್ದಿಯಲ್ಲಿದ್ದಾರೆ. ಸುದ್ದಿ ಒಳ್ಳೆಯದೋ ಕೆಟ್ಟದ್ದೋ ಎನ್ನುವುದು ಓದುಗರು ಯಾವ ನೆಲೆಯಿಂದ ನೋಡುತ್ತಾರೆ ಎಂಬುದರ ಆಧಾರದ ಮೇಲೆ ನಿಂತಿರುತ್ತದೆ. ಏಪ್ರಿಲ್ 17ರಂದು ಒರಿಸ್ಸಾದ ಸಂಭಲ್ಪುರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಚುನಾವಣಾ ಪ್ರಚಾರಕ್ಕೆ ಹೋಗಿದ್ದರು. ಅಲ್ಲಿ ಚುನಾವಣಾ ವೀಕ್ಷಕರಾಗಿ ಮೊಹಮದ್ ಮೊಹ್ಸಿನ್ ಕರ್ತವ್ಯ ನಿರತರಾಗಿದ್ದರು. ಚುನಾವಣೆಯ ಸಂದರ್ಭದಲ್ಲಿ ಆ ರಾಜ್ಯದಿಂದ ಹೊರಗಿನ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಿಸಲಾಗುತ್ತದೆ. ಏಕೆಂದರೆ, ಆಯಾ ರಾಜ್ಯದ ಅಧಿಕಾರಿಗಳು ನಂತರದಲ್ಲಿ ರಾಜಕೀಯ ನಾಯಕತ್ವದ ಕೆಳಗೇ ಕೆಲಸ ಮಾಡಬೇಕಾದ್ದರಿಂದ ಪಕ್ಷಪಾತ ಧೋರಣೆ ತೋರುವ ಸಾಧ್ಯತೆ ಇರುತ್ತದೆ. ಅದೇ ರೀತಿ ಮೊಹಮದ್ ಮೊಹ್ಸಿನ್ ಒರಿಸ್ಸಾಕ್ಕೆ ಹೋಗಿದ್ದರು. ಸಂಭಲ್ಪುರಕ್ಕೆ ಬಂದ ಮೋದಿಯವರ ಹೆಲಿಕಾಪ್ಟರ್ ಅನ್ನು ಪರೀಕ್ಷಿಸಲು ಮೊಹ್ಸಿನ್ ಸೂಚಿಸಿದ್ದರು.

ಇದೇ ಅವರು ಮಾಡಿದ ತಪ್ಪು ಎಂದು ಚುನಾವಣಾ ಆಯೋಗವು ಅವರನ್ನು ಅಮಾನತು ಮಾಡಿದೆ. ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿ ಯಾರನ್ನು ಬೇಕಾದರೂ ಪರೀಕ್ಷೆ ಮಾಡುವ ಅಧಿಕಾರ ಹೊಂದಿರುತ್ತಾರೆ ಅಲ್ಲವೇ? ಚಿತ್ರದುರ್ಗದಲ್ಲಿ ದೊಡ್ಡದೊಂದು ಪೆಟ್ಟಿಗೆಯನ್ನು ಮೋದಿಯವರ ಹೆಲಿಕಾಪ್ಟರ್ ನಿಂದ ಇಳಿಸಿ ಖಾಸಗಿ ಇನ್ನೋವಾ ಕಾರಿಗೆ ಸಾಗಿಸಿದ ಪ್ರಕರಣದಲ್ಲೂ ಇದು ಚರ್ಚೆಗೆ ಬಂದಿತ್ತು. ಅಲ್ಲಿನ ಎಸ್.ಪಿಯವರು ಸ್ಪಷ್ಟನೆ ನೀಡಿ, ನಮ್ಮದೇನಿದ್ದರೂ ಭದ್ರತೆ ಕೆಲಸ; ಪರೀಕ್ಷೆ ಮಾಡುವುದು ಚುನಾವಣಾಧಿಕಾರಿಗಳಿಗೆ ಬಿಟ್ಟಿದ್ದು ಎಂದಿದ್ದರು. ಆ ನಂತರ ಸದರಿ ಪೆಟ್ಟಿಗೆಯನ್ನು ಚುನಾವಣಾಧಿಕಾರಿಗಳು ಏಕೆ ತಪಾಸಣೆಗೆ ಒಳಪಡಿಸಲಿಲ್ಲ ಎಂಬ ಪ್ರಶ್ನೆ ಗಂಭೀರವಾಗಿ ಎದ್ದಿತ್ತು.

ಚಿತ್ರದುರ್ಗದಲ್ಲಿ ಮೋದಿ ಹೆಲಿಕ್ಯಾಪ್ಟರ್ ನಿಂದ ಟ್ರಂಕ್ ಒಂದನ್ನು ಹೊತ್ತಿ ಓಡುತ್ತಿರುವುದು

ಈಗ ಪ್ರಧಾನಿಯವರ ವಾಹನವನ್ನು ಪರಿಶೀಲಿಸುವ ಕೆಲಸ ಚುನಾವಣೆಗೆ ಸಂಬಂಧಿಸಿದ ಅಧಿಕಾರಿ ಮಾಡಬಹುದೇ ಇಲ್ಲವೇ? ಪ್ರಧಾನಿಯವರದ್ದು ಹೋಗಲಿ, ತನ್ನದ್ದೂ ಮಾಡಬಾರದೆಂದು ಅದೇ ಒರಿಸ್ಸಾದ ಬಿಜೆಪಿ ನಾಯಕ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಜಗಳವಾಡಿದ್ದಾರೆ. ಆ ಜಗಳದ ನಂತರ ಏನಾಯಿತು ಗೊತ್ತಿಲ್ಲ. ಆದರೆ ಮೊಹಮ್ಮದ್ ಮೊಹ್ಸಿನ್ ಅವರನ್ನು ‘ಎಸ್.ಪಿ.ಜಿ ರಕ್ಷಣೆಯಲ್ಲಿರುವವರ ವಾಹನಗಳಿಗೆ ಇಂತಹ ತಪಾಸಣೆಯಿಂದ ವಿನಾಯಿತಿ ಕೊಟ್ಟಿದ್ದರೂ, ಮೊಹ್ಸಿನ್ ಅವರು ತಪಾಸಣೆಗೆ ಆದೇಶ ನೀಡಿದ್ದಾರೆ. ಹಾಗಾಗಿ ತಪಾಸಣೆ ಮಾಡಿದ್ದಾರೆ ಆದ್ದರಿಂದ ಅಮಾನತು ಮಾಡಲಾಗಿದೆ’ ಎಂದು ಆಯೋಗ ಹೇಳಿದೆ.

ಮೊಹಮ್ಮದ್ ಮೊಹ್ಸಿನ್

ಆದರೆ, ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಈ ಕುರಿತು ಯಾವುದೇ ನಿಯಮಗಳಿಲ್ಲ. ಬದಲಿಗೆ ಸರ್ಕಾರೀ ವಾಹನಗಳನ್ನು ಬಳಸುವ ಕುರಿತು ಅಷ್ಟೇ ಹೇಳಲಾಗಿದೆ. ಹೀಗಾಗಿ ‘ಇಲ್ಲದ ನಿಯಮಗಳನ್ನು ಮುಂದಿಟ್ಟು ಇವರನ್ನು ಅಮಾನತು ಮಾಡಲಾಗಿದೆ’ ಎಂದು ಕಾಂಗ್ರೆಸ್ ಸೇರಿದಂತೆ ಹಲವರು ಚುನಾವಣಾ ಆಯೋಗವನ್ನು ಟೀಕಿಸಿದ್ದಾರೆ. ಈಗಾಗಲೇ ಚುನಾವಣಾ ಆಯೋಗವು ಬಿಜೆಪಿ ಕಚೇರಿಯಂತೆ ವರ್ತಿಸುತ್ತಿದೆ ಎಂಬ ಆರೋಪಗಳು ಸಾಕಷ್ಟು ಕೇಳಿಬಂದಿರುವಾಗ ಈ ಅಮಾನತು ಮತ್ತಷ್ಟು ಸಂಶಯಗಳಿಗೆ ಕಾರಣವಾಗಿದೆ.

ಕಳೆದ ಸಾರಿ ದೊಡ್ಡ ಸಾಧನೆ ಮಾಡಿದ್ದ ರಾಜ್ಯಗಳಲ್ಲಿ ಅದನ್ನು ಉಳಿಸಿಕೊಳ್ಳಲು ಬಿಜೆಪಿಗೆ ಸಾಧ್ಯವಾಗದು ಎಂಬ ಹಿನ್ನೆಲೆಯಲ್ಲಿ ಒರಿಸ್ಸಾದಂತಹ ಕೆಲವು ರಾಜ್ಯಗಳಲ್ಲಿ ನಷ್ಟವನ್ನು ತುಂಬಿಕೊಳ್ಳುವ ಬಿಜೆಪಿಯ ಯೋಜನೆ ಎಲ್ಲರಿಗೂ ಗೊತ್ತಿದೆ. ಪ್ರಧಾನಿಯವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದಕ್ಕೆ ಅಮಾನತು ಮಾಡಿರುವುದು ಮತ್ತು ಧರ್ಮೇಂದ್ರ ಪ್ರಧಾನ್ ವಾಹನದ ತಪಾಸಣೆಗೆ ಬಿಡದೇ ಇರುವುದು ಎರಡೂ ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ವಿಶ್ವಾಸ ಇಲ್ಲದಂತೆ ಮಾಡುತ್ತಿದೆ.

ಮೊಹಮದ್ ಮೊಹ್ಸಿನ್ ಅವರು ವಿಜಾಪುರ ಮತ್ತು ಗದಗದ ಜಿಲ್ಲಾಧಿಕಾರಿಗಳಾಗಿಯೂ ಸೇವೆ ಸಲ್ಲಿಸಿದ್ದರು. ಅದಲ್ಲದೇ ಹಲವು ನಿಗಮ ಮಂಡಳಿಗಳ ವ್ಯವಸ್ಥಾಪಕ ನಿರ್ದೇಶಕರಾಗಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದರು.

ಅವರ ಸಾಮಾಜಿಕ ಜಾಲತಾಣಗಳಲ್ಲಿ ಪರೋಕ್ಷವಾಗಿ ಕೇಂದ್ರ ಸರ್ಕಾರವು ಕಾರ್ಪೋರೇಟ್ ಸಂಸ್ಥೆಗಳ ಪರವಾಗಿ ನಿಂತಿರುವುದನ್ನು ಟೀಕಿಸಿರುವ ಕೆಲವು ಪೋಸ್ಟ್.ಗಳು ಕಂಡುಬರುತ್ತವೆ. ಇದರ ಬಗ್ಗೆ ಕೆಲವು ರಾಜಕೀಯ ವಿಶ್ಲೇಷಕರನ್ನು ‘ನಾನುಗೌರಿ ವೆಬ್’ನಿಂದ ಮಾತಾಡಿಸಲಾಯಿತು. ಸ್ವರಾಜ್ ಇಂಡಿಯಾದ ರಾಜಶೇಖರ್ ಅಕ್ಕಿಯವರನ್ನು ಮಾತಾಡಿಸಿದಾಗ, ‘ಅವರು ಸರ್ಕಾರೀ ಅಧಿಕಾರಿಯಾಗಿದ್ದುಕೊಂಡು ಸರ್ಕಾರವನ್ನು ಟೀಕಿಸುತ್ತಿದ್ದಾರಾದರೆ ಅದನ್ನು ನಾನು ತಪ್ಪು ಎನ್ನುತ್ತೇನೆ. ಆದರೆ, ಈಗ ಪ್ರಧಾನಿಯವರ ವಾಹನ ತಪಾಸಣೆಯೇ ತಪ್ಪು ಎನ್ನುವುದು ಮತ್ತು ಅದಕ್ಕಾಗಿ ಅಮಾನತು ಮಾಡುವುದನ್ನೂ ತಪ್ಪು ಎನ್ನುತ್ತೇನೆ. ಎರಡನ್ನೂ ಲಿಂಕ್ ಮಾಡಬಾರದು ‘ ಎನ್ನುತ್ತಾರೆ.

ವಕೀಲ ಮತ್ತು ರಾಜಕೀಯ ವಿಶ್ಲೇಷಕ ಜಗನ್ನಾಥ್ ರಾಮಸ್ವಾಮಿಯವರ ಪ್ರಕಾರ, ‘ಈ ಅಧಿಕಾರಿ ವ್ಯವಸ್ಥೆಯ ಹುಳುಕುಗಳನ್ನು ಪ್ರಶ್ನಿಸುವ ಮನೋಭಾವ ಇದ್ದುದರಿಂದಲೇ ಪ್ರಧಾನಿಯವರ ವಾಹನ ತಪಾಸಣೆಗೂ ಕೈ ಹಾಕಿದ್ದಾರೆ. ಇವತ್ತು ‘ನಾರ್ಮಲ್’ ಎಂದು ಭಾವಿಸಲಾಗುವ ಅಧಿಕಾರಿಗಳು ವ್ಯವಸ್ಥೆಯ ಜೊತೆಗೆ ಅಡ್ಜಸ್ಟ್ ಮೆಂಟ್ ಮಾಡಿಕೊಂಡು ಹೋಗುತ್ತಾರೆ, ಅಷ್ಟೇ’ ಎಂಬ ಅನಿಸಿಕೆ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....