Homeಕರ್ನಾಟಕಕರ್ನಾಟಕದ ಐಎಎಸ್ ಅಧಿಕಾರಿ ಒರಿಸ್ಸಾದಲ್ಲಿ ಅಮಾನತು : ಮೊಹಮದ್ ಮೊಹ್ಸಿನ್ ಅವರು ಮಾಡಿದ ತಪ್ಪೇನು?

ಕರ್ನಾಟಕದ ಐಎಎಸ್ ಅಧಿಕಾರಿ ಒರಿಸ್ಸಾದಲ್ಲಿ ಅಮಾನತು : ಮೊಹಮದ್ ಮೊಹ್ಸಿನ್ ಅವರು ಮಾಡಿದ ತಪ್ಪೇನು?

- Advertisement -
- Advertisement -

ಕುಂದಾಪುರದಲ್ಲಿ ಅಸಿಸ್ಟೆಂಟ್ ಕಮೀಷನರ್ ಆಗಿ ತಮ್ಮ ಕೆಲಸ ಶುರು ಮಾಡಿದ ಐಎಎಸ್ ಅಧಿಕಾರಿ ಮೊಹಮದ್ ಮೊಹ್ಸಿನ್, ಇದೀಗ ದೇಶಾದ್ಯಂತ ಸುದ್ದಿಯಲ್ಲಿದ್ದಾರೆ. ಸುದ್ದಿ ಒಳ್ಳೆಯದೋ ಕೆಟ್ಟದ್ದೋ ಎನ್ನುವುದು ಓದುಗರು ಯಾವ ನೆಲೆಯಿಂದ ನೋಡುತ್ತಾರೆ ಎಂಬುದರ ಆಧಾರದ ಮೇಲೆ ನಿಂತಿರುತ್ತದೆ. ಏಪ್ರಿಲ್ 17ರಂದು ಒರಿಸ್ಸಾದ ಸಂಭಲ್ಪುರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಚುನಾವಣಾ ಪ್ರಚಾರಕ್ಕೆ ಹೋಗಿದ್ದರು. ಅಲ್ಲಿ ಚುನಾವಣಾ ವೀಕ್ಷಕರಾಗಿ ಮೊಹಮದ್ ಮೊಹ್ಸಿನ್ ಕರ್ತವ್ಯ ನಿರತರಾಗಿದ್ದರು. ಚುನಾವಣೆಯ ಸಂದರ್ಭದಲ್ಲಿ ಆ ರಾಜ್ಯದಿಂದ ಹೊರಗಿನ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಿಸಲಾಗುತ್ತದೆ. ಏಕೆಂದರೆ, ಆಯಾ ರಾಜ್ಯದ ಅಧಿಕಾರಿಗಳು ನಂತರದಲ್ಲಿ ರಾಜಕೀಯ ನಾಯಕತ್ವದ ಕೆಳಗೇ ಕೆಲಸ ಮಾಡಬೇಕಾದ್ದರಿಂದ ಪಕ್ಷಪಾತ ಧೋರಣೆ ತೋರುವ ಸಾಧ್ಯತೆ ಇರುತ್ತದೆ. ಅದೇ ರೀತಿ ಮೊಹಮದ್ ಮೊಹ್ಸಿನ್ ಒರಿಸ್ಸಾಕ್ಕೆ ಹೋಗಿದ್ದರು. ಸಂಭಲ್ಪುರಕ್ಕೆ ಬಂದ ಮೋದಿಯವರ ಹೆಲಿಕಾಪ್ಟರ್ ಅನ್ನು ಪರೀಕ್ಷಿಸಲು ಮೊಹ್ಸಿನ್ ಸೂಚಿಸಿದ್ದರು.

ಇದೇ ಅವರು ಮಾಡಿದ ತಪ್ಪು ಎಂದು ಚುನಾವಣಾ ಆಯೋಗವು ಅವರನ್ನು ಅಮಾನತು ಮಾಡಿದೆ. ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿ ಯಾರನ್ನು ಬೇಕಾದರೂ ಪರೀಕ್ಷೆ ಮಾಡುವ ಅಧಿಕಾರ ಹೊಂದಿರುತ್ತಾರೆ ಅಲ್ಲವೇ? ಚಿತ್ರದುರ್ಗದಲ್ಲಿ ದೊಡ್ಡದೊಂದು ಪೆಟ್ಟಿಗೆಯನ್ನು ಮೋದಿಯವರ ಹೆಲಿಕಾಪ್ಟರ್ ನಿಂದ ಇಳಿಸಿ ಖಾಸಗಿ ಇನ್ನೋವಾ ಕಾರಿಗೆ ಸಾಗಿಸಿದ ಪ್ರಕರಣದಲ್ಲೂ ಇದು ಚರ್ಚೆಗೆ ಬಂದಿತ್ತು. ಅಲ್ಲಿನ ಎಸ್.ಪಿಯವರು ಸ್ಪಷ್ಟನೆ ನೀಡಿ, ನಮ್ಮದೇನಿದ್ದರೂ ಭದ್ರತೆ ಕೆಲಸ; ಪರೀಕ್ಷೆ ಮಾಡುವುದು ಚುನಾವಣಾಧಿಕಾರಿಗಳಿಗೆ ಬಿಟ್ಟಿದ್ದು ಎಂದಿದ್ದರು. ಆ ನಂತರ ಸದರಿ ಪೆಟ್ಟಿಗೆಯನ್ನು ಚುನಾವಣಾಧಿಕಾರಿಗಳು ಏಕೆ ತಪಾಸಣೆಗೆ ಒಳಪಡಿಸಲಿಲ್ಲ ಎಂಬ ಪ್ರಶ್ನೆ ಗಂಭೀರವಾಗಿ ಎದ್ದಿತ್ತು.

ಚಿತ್ರದುರ್ಗದಲ್ಲಿ ಮೋದಿ ಹೆಲಿಕ್ಯಾಪ್ಟರ್ ನಿಂದ ಟ್ರಂಕ್ ಒಂದನ್ನು ಹೊತ್ತಿ ಓಡುತ್ತಿರುವುದು

ಈಗ ಪ್ರಧಾನಿಯವರ ವಾಹನವನ್ನು ಪರಿಶೀಲಿಸುವ ಕೆಲಸ ಚುನಾವಣೆಗೆ ಸಂಬಂಧಿಸಿದ ಅಧಿಕಾರಿ ಮಾಡಬಹುದೇ ಇಲ್ಲವೇ? ಪ್ರಧಾನಿಯವರದ್ದು ಹೋಗಲಿ, ತನ್ನದ್ದೂ ಮಾಡಬಾರದೆಂದು ಅದೇ ಒರಿಸ್ಸಾದ ಬಿಜೆಪಿ ನಾಯಕ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಜಗಳವಾಡಿದ್ದಾರೆ. ಆ ಜಗಳದ ನಂತರ ಏನಾಯಿತು ಗೊತ್ತಿಲ್ಲ. ಆದರೆ ಮೊಹಮ್ಮದ್ ಮೊಹ್ಸಿನ್ ಅವರನ್ನು ‘ಎಸ್.ಪಿ.ಜಿ ರಕ್ಷಣೆಯಲ್ಲಿರುವವರ ವಾಹನಗಳಿಗೆ ಇಂತಹ ತಪಾಸಣೆಯಿಂದ ವಿನಾಯಿತಿ ಕೊಟ್ಟಿದ್ದರೂ, ಮೊಹ್ಸಿನ್ ಅವರು ತಪಾಸಣೆಗೆ ಆದೇಶ ನೀಡಿದ್ದಾರೆ. ಹಾಗಾಗಿ ತಪಾಸಣೆ ಮಾಡಿದ್ದಾರೆ ಆದ್ದರಿಂದ ಅಮಾನತು ಮಾಡಲಾಗಿದೆ’ ಎಂದು ಆಯೋಗ ಹೇಳಿದೆ.

ಮೊಹಮ್ಮದ್ ಮೊಹ್ಸಿನ್

ಆದರೆ, ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಈ ಕುರಿತು ಯಾವುದೇ ನಿಯಮಗಳಿಲ್ಲ. ಬದಲಿಗೆ ಸರ್ಕಾರೀ ವಾಹನಗಳನ್ನು ಬಳಸುವ ಕುರಿತು ಅಷ್ಟೇ ಹೇಳಲಾಗಿದೆ. ಹೀಗಾಗಿ ‘ಇಲ್ಲದ ನಿಯಮಗಳನ್ನು ಮುಂದಿಟ್ಟು ಇವರನ್ನು ಅಮಾನತು ಮಾಡಲಾಗಿದೆ’ ಎಂದು ಕಾಂಗ್ರೆಸ್ ಸೇರಿದಂತೆ ಹಲವರು ಚುನಾವಣಾ ಆಯೋಗವನ್ನು ಟೀಕಿಸಿದ್ದಾರೆ. ಈಗಾಗಲೇ ಚುನಾವಣಾ ಆಯೋಗವು ಬಿಜೆಪಿ ಕಚೇರಿಯಂತೆ ವರ್ತಿಸುತ್ತಿದೆ ಎಂಬ ಆರೋಪಗಳು ಸಾಕಷ್ಟು ಕೇಳಿಬಂದಿರುವಾಗ ಈ ಅಮಾನತು ಮತ್ತಷ್ಟು ಸಂಶಯಗಳಿಗೆ ಕಾರಣವಾಗಿದೆ.

ಕಳೆದ ಸಾರಿ ದೊಡ್ಡ ಸಾಧನೆ ಮಾಡಿದ್ದ ರಾಜ್ಯಗಳಲ್ಲಿ ಅದನ್ನು ಉಳಿಸಿಕೊಳ್ಳಲು ಬಿಜೆಪಿಗೆ ಸಾಧ್ಯವಾಗದು ಎಂಬ ಹಿನ್ನೆಲೆಯಲ್ಲಿ ಒರಿಸ್ಸಾದಂತಹ ಕೆಲವು ರಾಜ್ಯಗಳಲ್ಲಿ ನಷ್ಟವನ್ನು ತುಂಬಿಕೊಳ್ಳುವ ಬಿಜೆಪಿಯ ಯೋಜನೆ ಎಲ್ಲರಿಗೂ ಗೊತ್ತಿದೆ. ಪ್ರಧಾನಿಯವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದಕ್ಕೆ ಅಮಾನತು ಮಾಡಿರುವುದು ಮತ್ತು ಧರ್ಮೇಂದ್ರ ಪ್ರಧಾನ್ ವಾಹನದ ತಪಾಸಣೆಗೆ ಬಿಡದೇ ಇರುವುದು ಎರಡೂ ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ವಿಶ್ವಾಸ ಇಲ್ಲದಂತೆ ಮಾಡುತ್ತಿದೆ.

ಮೊಹಮದ್ ಮೊಹ್ಸಿನ್ ಅವರು ವಿಜಾಪುರ ಮತ್ತು ಗದಗದ ಜಿಲ್ಲಾಧಿಕಾರಿಗಳಾಗಿಯೂ ಸೇವೆ ಸಲ್ಲಿಸಿದ್ದರು. ಅದಲ್ಲದೇ ಹಲವು ನಿಗಮ ಮಂಡಳಿಗಳ ವ್ಯವಸ್ಥಾಪಕ ನಿರ್ದೇಶಕರಾಗಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದರು.

ಅವರ ಸಾಮಾಜಿಕ ಜಾಲತಾಣಗಳಲ್ಲಿ ಪರೋಕ್ಷವಾಗಿ ಕೇಂದ್ರ ಸರ್ಕಾರವು ಕಾರ್ಪೋರೇಟ್ ಸಂಸ್ಥೆಗಳ ಪರವಾಗಿ ನಿಂತಿರುವುದನ್ನು ಟೀಕಿಸಿರುವ ಕೆಲವು ಪೋಸ್ಟ್.ಗಳು ಕಂಡುಬರುತ್ತವೆ. ಇದರ ಬಗ್ಗೆ ಕೆಲವು ರಾಜಕೀಯ ವಿಶ್ಲೇಷಕರನ್ನು ‘ನಾನುಗೌರಿ ವೆಬ್’ನಿಂದ ಮಾತಾಡಿಸಲಾಯಿತು. ಸ್ವರಾಜ್ ಇಂಡಿಯಾದ ರಾಜಶೇಖರ್ ಅಕ್ಕಿಯವರನ್ನು ಮಾತಾಡಿಸಿದಾಗ, ‘ಅವರು ಸರ್ಕಾರೀ ಅಧಿಕಾರಿಯಾಗಿದ್ದುಕೊಂಡು ಸರ್ಕಾರವನ್ನು ಟೀಕಿಸುತ್ತಿದ್ದಾರಾದರೆ ಅದನ್ನು ನಾನು ತಪ್ಪು ಎನ್ನುತ್ತೇನೆ. ಆದರೆ, ಈಗ ಪ್ರಧಾನಿಯವರ ವಾಹನ ತಪಾಸಣೆಯೇ ತಪ್ಪು ಎನ್ನುವುದು ಮತ್ತು ಅದಕ್ಕಾಗಿ ಅಮಾನತು ಮಾಡುವುದನ್ನೂ ತಪ್ಪು ಎನ್ನುತ್ತೇನೆ. ಎರಡನ್ನೂ ಲಿಂಕ್ ಮಾಡಬಾರದು ‘ ಎನ್ನುತ್ತಾರೆ.

ವಕೀಲ ಮತ್ತು ರಾಜಕೀಯ ವಿಶ್ಲೇಷಕ ಜಗನ್ನಾಥ್ ರಾಮಸ್ವಾಮಿಯವರ ಪ್ರಕಾರ, ‘ಈ ಅಧಿಕಾರಿ ವ್ಯವಸ್ಥೆಯ ಹುಳುಕುಗಳನ್ನು ಪ್ರಶ್ನಿಸುವ ಮನೋಭಾವ ಇದ್ದುದರಿಂದಲೇ ಪ್ರಧಾನಿಯವರ ವಾಹನ ತಪಾಸಣೆಗೂ ಕೈ ಹಾಕಿದ್ದಾರೆ. ಇವತ್ತು ‘ನಾರ್ಮಲ್’ ಎಂದು ಭಾವಿಸಲಾಗುವ ಅಧಿಕಾರಿಗಳು ವ್ಯವಸ್ಥೆಯ ಜೊತೆಗೆ ಅಡ್ಜಸ್ಟ್ ಮೆಂಟ್ ಮಾಡಿಕೊಂಡು ಹೋಗುತ್ತಾರೆ, ಅಷ್ಟೇ’ ಎಂಬ ಅನಿಸಿಕೆ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...