Homeಕರ್ನಾಟಕಕರ್ನಾಟಕದ ಐಎಎಸ್ ಅಧಿಕಾರಿ ಒರಿಸ್ಸಾದಲ್ಲಿ ಅಮಾನತು : ಮೊಹಮದ್ ಮೊಹ್ಸಿನ್ ಅವರು ಮಾಡಿದ ತಪ್ಪೇನು?

ಕರ್ನಾಟಕದ ಐಎಎಸ್ ಅಧಿಕಾರಿ ಒರಿಸ್ಸಾದಲ್ಲಿ ಅಮಾನತು : ಮೊಹಮದ್ ಮೊಹ್ಸಿನ್ ಅವರು ಮಾಡಿದ ತಪ್ಪೇನು?

- Advertisement -
- Advertisement -

ಕುಂದಾಪುರದಲ್ಲಿ ಅಸಿಸ್ಟೆಂಟ್ ಕಮೀಷನರ್ ಆಗಿ ತಮ್ಮ ಕೆಲಸ ಶುರು ಮಾಡಿದ ಐಎಎಸ್ ಅಧಿಕಾರಿ ಮೊಹಮದ್ ಮೊಹ್ಸಿನ್, ಇದೀಗ ದೇಶಾದ್ಯಂತ ಸುದ್ದಿಯಲ್ಲಿದ್ದಾರೆ. ಸುದ್ದಿ ಒಳ್ಳೆಯದೋ ಕೆಟ್ಟದ್ದೋ ಎನ್ನುವುದು ಓದುಗರು ಯಾವ ನೆಲೆಯಿಂದ ನೋಡುತ್ತಾರೆ ಎಂಬುದರ ಆಧಾರದ ಮೇಲೆ ನಿಂತಿರುತ್ತದೆ. ಏಪ್ರಿಲ್ 17ರಂದು ಒರಿಸ್ಸಾದ ಸಂಭಲ್ಪುರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಚುನಾವಣಾ ಪ್ರಚಾರಕ್ಕೆ ಹೋಗಿದ್ದರು. ಅಲ್ಲಿ ಚುನಾವಣಾ ವೀಕ್ಷಕರಾಗಿ ಮೊಹಮದ್ ಮೊಹ್ಸಿನ್ ಕರ್ತವ್ಯ ನಿರತರಾಗಿದ್ದರು. ಚುನಾವಣೆಯ ಸಂದರ್ಭದಲ್ಲಿ ಆ ರಾಜ್ಯದಿಂದ ಹೊರಗಿನ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಿಸಲಾಗುತ್ತದೆ. ಏಕೆಂದರೆ, ಆಯಾ ರಾಜ್ಯದ ಅಧಿಕಾರಿಗಳು ನಂತರದಲ್ಲಿ ರಾಜಕೀಯ ನಾಯಕತ್ವದ ಕೆಳಗೇ ಕೆಲಸ ಮಾಡಬೇಕಾದ್ದರಿಂದ ಪಕ್ಷಪಾತ ಧೋರಣೆ ತೋರುವ ಸಾಧ್ಯತೆ ಇರುತ್ತದೆ. ಅದೇ ರೀತಿ ಮೊಹಮದ್ ಮೊಹ್ಸಿನ್ ಒರಿಸ್ಸಾಕ್ಕೆ ಹೋಗಿದ್ದರು. ಸಂಭಲ್ಪುರಕ್ಕೆ ಬಂದ ಮೋದಿಯವರ ಹೆಲಿಕಾಪ್ಟರ್ ಅನ್ನು ಪರೀಕ್ಷಿಸಲು ಮೊಹ್ಸಿನ್ ಸೂಚಿಸಿದ್ದರು.

ಇದೇ ಅವರು ಮಾಡಿದ ತಪ್ಪು ಎಂದು ಚುನಾವಣಾ ಆಯೋಗವು ಅವರನ್ನು ಅಮಾನತು ಮಾಡಿದೆ. ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿ ಯಾರನ್ನು ಬೇಕಾದರೂ ಪರೀಕ್ಷೆ ಮಾಡುವ ಅಧಿಕಾರ ಹೊಂದಿರುತ್ತಾರೆ ಅಲ್ಲವೇ? ಚಿತ್ರದುರ್ಗದಲ್ಲಿ ದೊಡ್ಡದೊಂದು ಪೆಟ್ಟಿಗೆಯನ್ನು ಮೋದಿಯವರ ಹೆಲಿಕಾಪ್ಟರ್ ನಿಂದ ಇಳಿಸಿ ಖಾಸಗಿ ಇನ್ನೋವಾ ಕಾರಿಗೆ ಸಾಗಿಸಿದ ಪ್ರಕರಣದಲ್ಲೂ ಇದು ಚರ್ಚೆಗೆ ಬಂದಿತ್ತು. ಅಲ್ಲಿನ ಎಸ್.ಪಿಯವರು ಸ್ಪಷ್ಟನೆ ನೀಡಿ, ನಮ್ಮದೇನಿದ್ದರೂ ಭದ್ರತೆ ಕೆಲಸ; ಪರೀಕ್ಷೆ ಮಾಡುವುದು ಚುನಾವಣಾಧಿಕಾರಿಗಳಿಗೆ ಬಿಟ್ಟಿದ್ದು ಎಂದಿದ್ದರು. ಆ ನಂತರ ಸದರಿ ಪೆಟ್ಟಿಗೆಯನ್ನು ಚುನಾವಣಾಧಿಕಾರಿಗಳು ಏಕೆ ತಪಾಸಣೆಗೆ ಒಳಪಡಿಸಲಿಲ್ಲ ಎಂಬ ಪ್ರಶ್ನೆ ಗಂಭೀರವಾಗಿ ಎದ್ದಿತ್ತು.

ಚಿತ್ರದುರ್ಗದಲ್ಲಿ ಮೋದಿ ಹೆಲಿಕ್ಯಾಪ್ಟರ್ ನಿಂದ ಟ್ರಂಕ್ ಒಂದನ್ನು ಹೊತ್ತಿ ಓಡುತ್ತಿರುವುದು

ಈಗ ಪ್ರಧಾನಿಯವರ ವಾಹನವನ್ನು ಪರಿಶೀಲಿಸುವ ಕೆಲಸ ಚುನಾವಣೆಗೆ ಸಂಬಂಧಿಸಿದ ಅಧಿಕಾರಿ ಮಾಡಬಹುದೇ ಇಲ್ಲವೇ? ಪ್ರಧಾನಿಯವರದ್ದು ಹೋಗಲಿ, ತನ್ನದ್ದೂ ಮಾಡಬಾರದೆಂದು ಅದೇ ಒರಿಸ್ಸಾದ ಬಿಜೆಪಿ ನಾಯಕ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಜಗಳವಾಡಿದ್ದಾರೆ. ಆ ಜಗಳದ ನಂತರ ಏನಾಯಿತು ಗೊತ್ತಿಲ್ಲ. ಆದರೆ ಮೊಹಮ್ಮದ್ ಮೊಹ್ಸಿನ್ ಅವರನ್ನು ‘ಎಸ್.ಪಿ.ಜಿ ರಕ್ಷಣೆಯಲ್ಲಿರುವವರ ವಾಹನಗಳಿಗೆ ಇಂತಹ ತಪಾಸಣೆಯಿಂದ ವಿನಾಯಿತಿ ಕೊಟ್ಟಿದ್ದರೂ, ಮೊಹ್ಸಿನ್ ಅವರು ತಪಾಸಣೆಗೆ ಆದೇಶ ನೀಡಿದ್ದಾರೆ. ಹಾಗಾಗಿ ತಪಾಸಣೆ ಮಾಡಿದ್ದಾರೆ ಆದ್ದರಿಂದ ಅಮಾನತು ಮಾಡಲಾಗಿದೆ’ ಎಂದು ಆಯೋಗ ಹೇಳಿದೆ.

ಮೊಹಮ್ಮದ್ ಮೊಹ್ಸಿನ್

ಆದರೆ, ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಈ ಕುರಿತು ಯಾವುದೇ ನಿಯಮಗಳಿಲ್ಲ. ಬದಲಿಗೆ ಸರ್ಕಾರೀ ವಾಹನಗಳನ್ನು ಬಳಸುವ ಕುರಿತು ಅಷ್ಟೇ ಹೇಳಲಾಗಿದೆ. ಹೀಗಾಗಿ ‘ಇಲ್ಲದ ನಿಯಮಗಳನ್ನು ಮುಂದಿಟ್ಟು ಇವರನ್ನು ಅಮಾನತು ಮಾಡಲಾಗಿದೆ’ ಎಂದು ಕಾಂಗ್ರೆಸ್ ಸೇರಿದಂತೆ ಹಲವರು ಚುನಾವಣಾ ಆಯೋಗವನ್ನು ಟೀಕಿಸಿದ್ದಾರೆ. ಈಗಾಗಲೇ ಚುನಾವಣಾ ಆಯೋಗವು ಬಿಜೆಪಿ ಕಚೇರಿಯಂತೆ ವರ್ತಿಸುತ್ತಿದೆ ಎಂಬ ಆರೋಪಗಳು ಸಾಕಷ್ಟು ಕೇಳಿಬಂದಿರುವಾಗ ಈ ಅಮಾನತು ಮತ್ತಷ್ಟು ಸಂಶಯಗಳಿಗೆ ಕಾರಣವಾಗಿದೆ.

ಕಳೆದ ಸಾರಿ ದೊಡ್ಡ ಸಾಧನೆ ಮಾಡಿದ್ದ ರಾಜ್ಯಗಳಲ್ಲಿ ಅದನ್ನು ಉಳಿಸಿಕೊಳ್ಳಲು ಬಿಜೆಪಿಗೆ ಸಾಧ್ಯವಾಗದು ಎಂಬ ಹಿನ್ನೆಲೆಯಲ್ಲಿ ಒರಿಸ್ಸಾದಂತಹ ಕೆಲವು ರಾಜ್ಯಗಳಲ್ಲಿ ನಷ್ಟವನ್ನು ತುಂಬಿಕೊಳ್ಳುವ ಬಿಜೆಪಿಯ ಯೋಜನೆ ಎಲ್ಲರಿಗೂ ಗೊತ್ತಿದೆ. ಪ್ರಧಾನಿಯವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದಕ್ಕೆ ಅಮಾನತು ಮಾಡಿರುವುದು ಮತ್ತು ಧರ್ಮೇಂದ್ರ ಪ್ರಧಾನ್ ವಾಹನದ ತಪಾಸಣೆಗೆ ಬಿಡದೇ ಇರುವುದು ಎರಡೂ ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ವಿಶ್ವಾಸ ಇಲ್ಲದಂತೆ ಮಾಡುತ್ತಿದೆ.

ಮೊಹಮದ್ ಮೊಹ್ಸಿನ್ ಅವರು ವಿಜಾಪುರ ಮತ್ತು ಗದಗದ ಜಿಲ್ಲಾಧಿಕಾರಿಗಳಾಗಿಯೂ ಸೇವೆ ಸಲ್ಲಿಸಿದ್ದರು. ಅದಲ್ಲದೇ ಹಲವು ನಿಗಮ ಮಂಡಳಿಗಳ ವ್ಯವಸ್ಥಾಪಕ ನಿರ್ದೇಶಕರಾಗಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದರು.

ಅವರ ಸಾಮಾಜಿಕ ಜಾಲತಾಣಗಳಲ್ಲಿ ಪರೋಕ್ಷವಾಗಿ ಕೇಂದ್ರ ಸರ್ಕಾರವು ಕಾರ್ಪೋರೇಟ್ ಸಂಸ್ಥೆಗಳ ಪರವಾಗಿ ನಿಂತಿರುವುದನ್ನು ಟೀಕಿಸಿರುವ ಕೆಲವು ಪೋಸ್ಟ್.ಗಳು ಕಂಡುಬರುತ್ತವೆ. ಇದರ ಬಗ್ಗೆ ಕೆಲವು ರಾಜಕೀಯ ವಿಶ್ಲೇಷಕರನ್ನು ‘ನಾನುಗೌರಿ ವೆಬ್’ನಿಂದ ಮಾತಾಡಿಸಲಾಯಿತು. ಸ್ವರಾಜ್ ಇಂಡಿಯಾದ ರಾಜಶೇಖರ್ ಅಕ್ಕಿಯವರನ್ನು ಮಾತಾಡಿಸಿದಾಗ, ‘ಅವರು ಸರ್ಕಾರೀ ಅಧಿಕಾರಿಯಾಗಿದ್ದುಕೊಂಡು ಸರ್ಕಾರವನ್ನು ಟೀಕಿಸುತ್ತಿದ್ದಾರಾದರೆ ಅದನ್ನು ನಾನು ತಪ್ಪು ಎನ್ನುತ್ತೇನೆ. ಆದರೆ, ಈಗ ಪ್ರಧಾನಿಯವರ ವಾಹನ ತಪಾಸಣೆಯೇ ತಪ್ಪು ಎನ್ನುವುದು ಮತ್ತು ಅದಕ್ಕಾಗಿ ಅಮಾನತು ಮಾಡುವುದನ್ನೂ ತಪ್ಪು ಎನ್ನುತ್ತೇನೆ. ಎರಡನ್ನೂ ಲಿಂಕ್ ಮಾಡಬಾರದು ‘ ಎನ್ನುತ್ತಾರೆ.

ವಕೀಲ ಮತ್ತು ರಾಜಕೀಯ ವಿಶ್ಲೇಷಕ ಜಗನ್ನಾಥ್ ರಾಮಸ್ವಾಮಿಯವರ ಪ್ರಕಾರ, ‘ಈ ಅಧಿಕಾರಿ ವ್ಯವಸ್ಥೆಯ ಹುಳುಕುಗಳನ್ನು ಪ್ರಶ್ನಿಸುವ ಮನೋಭಾವ ಇದ್ದುದರಿಂದಲೇ ಪ್ರಧಾನಿಯವರ ವಾಹನ ತಪಾಸಣೆಗೂ ಕೈ ಹಾಕಿದ್ದಾರೆ. ಇವತ್ತು ‘ನಾರ್ಮಲ್’ ಎಂದು ಭಾವಿಸಲಾಗುವ ಅಧಿಕಾರಿಗಳು ವ್ಯವಸ್ಥೆಯ ಜೊತೆಗೆ ಅಡ್ಜಸ್ಟ್ ಮೆಂಟ್ ಮಾಡಿಕೊಂಡು ಹೋಗುತ್ತಾರೆ, ಅಷ್ಟೇ’ ಎಂಬ ಅನಿಸಿಕೆ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...