Homeಕರ್ನಾಟಕಕರ್ನಾಟಕದ ಐಎಎಸ್ ಅಧಿಕಾರಿ ಒರಿಸ್ಸಾದಲ್ಲಿ ಅಮಾನತು : ಮೊಹಮದ್ ಮೊಹ್ಸಿನ್ ಅವರು ಮಾಡಿದ ತಪ್ಪೇನು?

ಕರ್ನಾಟಕದ ಐಎಎಸ್ ಅಧಿಕಾರಿ ಒರಿಸ್ಸಾದಲ್ಲಿ ಅಮಾನತು : ಮೊಹಮದ್ ಮೊಹ್ಸಿನ್ ಅವರು ಮಾಡಿದ ತಪ್ಪೇನು?

- Advertisement -
- Advertisement -

ಕುಂದಾಪುರದಲ್ಲಿ ಅಸಿಸ್ಟೆಂಟ್ ಕಮೀಷನರ್ ಆಗಿ ತಮ್ಮ ಕೆಲಸ ಶುರು ಮಾಡಿದ ಐಎಎಸ್ ಅಧಿಕಾರಿ ಮೊಹಮದ್ ಮೊಹ್ಸಿನ್, ಇದೀಗ ದೇಶಾದ್ಯಂತ ಸುದ್ದಿಯಲ್ಲಿದ್ದಾರೆ. ಸುದ್ದಿ ಒಳ್ಳೆಯದೋ ಕೆಟ್ಟದ್ದೋ ಎನ್ನುವುದು ಓದುಗರು ಯಾವ ನೆಲೆಯಿಂದ ನೋಡುತ್ತಾರೆ ಎಂಬುದರ ಆಧಾರದ ಮೇಲೆ ನಿಂತಿರುತ್ತದೆ. ಏಪ್ರಿಲ್ 17ರಂದು ಒರಿಸ್ಸಾದ ಸಂಭಲ್ಪುರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಚುನಾವಣಾ ಪ್ರಚಾರಕ್ಕೆ ಹೋಗಿದ್ದರು. ಅಲ್ಲಿ ಚುನಾವಣಾ ವೀಕ್ಷಕರಾಗಿ ಮೊಹಮದ್ ಮೊಹ್ಸಿನ್ ಕರ್ತವ್ಯ ನಿರತರಾಗಿದ್ದರು. ಚುನಾವಣೆಯ ಸಂದರ್ಭದಲ್ಲಿ ಆ ರಾಜ್ಯದಿಂದ ಹೊರಗಿನ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಿಸಲಾಗುತ್ತದೆ. ಏಕೆಂದರೆ, ಆಯಾ ರಾಜ್ಯದ ಅಧಿಕಾರಿಗಳು ನಂತರದಲ್ಲಿ ರಾಜಕೀಯ ನಾಯಕತ್ವದ ಕೆಳಗೇ ಕೆಲಸ ಮಾಡಬೇಕಾದ್ದರಿಂದ ಪಕ್ಷಪಾತ ಧೋರಣೆ ತೋರುವ ಸಾಧ್ಯತೆ ಇರುತ್ತದೆ. ಅದೇ ರೀತಿ ಮೊಹಮದ್ ಮೊಹ್ಸಿನ್ ಒರಿಸ್ಸಾಕ್ಕೆ ಹೋಗಿದ್ದರು. ಸಂಭಲ್ಪುರಕ್ಕೆ ಬಂದ ಮೋದಿಯವರ ಹೆಲಿಕಾಪ್ಟರ್ ಅನ್ನು ಪರೀಕ್ಷಿಸಲು ಮೊಹ್ಸಿನ್ ಸೂಚಿಸಿದ್ದರು.

ಇದೇ ಅವರು ಮಾಡಿದ ತಪ್ಪು ಎಂದು ಚುನಾವಣಾ ಆಯೋಗವು ಅವರನ್ನು ಅಮಾನತು ಮಾಡಿದೆ. ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿ ಯಾರನ್ನು ಬೇಕಾದರೂ ಪರೀಕ್ಷೆ ಮಾಡುವ ಅಧಿಕಾರ ಹೊಂದಿರುತ್ತಾರೆ ಅಲ್ಲವೇ? ಚಿತ್ರದುರ್ಗದಲ್ಲಿ ದೊಡ್ಡದೊಂದು ಪೆಟ್ಟಿಗೆಯನ್ನು ಮೋದಿಯವರ ಹೆಲಿಕಾಪ್ಟರ್ ನಿಂದ ಇಳಿಸಿ ಖಾಸಗಿ ಇನ್ನೋವಾ ಕಾರಿಗೆ ಸಾಗಿಸಿದ ಪ್ರಕರಣದಲ್ಲೂ ಇದು ಚರ್ಚೆಗೆ ಬಂದಿತ್ತು. ಅಲ್ಲಿನ ಎಸ್.ಪಿಯವರು ಸ್ಪಷ್ಟನೆ ನೀಡಿ, ನಮ್ಮದೇನಿದ್ದರೂ ಭದ್ರತೆ ಕೆಲಸ; ಪರೀಕ್ಷೆ ಮಾಡುವುದು ಚುನಾವಣಾಧಿಕಾರಿಗಳಿಗೆ ಬಿಟ್ಟಿದ್ದು ಎಂದಿದ್ದರು. ಆ ನಂತರ ಸದರಿ ಪೆಟ್ಟಿಗೆಯನ್ನು ಚುನಾವಣಾಧಿಕಾರಿಗಳು ಏಕೆ ತಪಾಸಣೆಗೆ ಒಳಪಡಿಸಲಿಲ್ಲ ಎಂಬ ಪ್ರಶ್ನೆ ಗಂಭೀರವಾಗಿ ಎದ್ದಿತ್ತು.

ಚಿತ್ರದುರ್ಗದಲ್ಲಿ ಮೋದಿ ಹೆಲಿಕ್ಯಾಪ್ಟರ್ ನಿಂದ ಟ್ರಂಕ್ ಒಂದನ್ನು ಹೊತ್ತಿ ಓಡುತ್ತಿರುವುದು

ಈಗ ಪ್ರಧಾನಿಯವರ ವಾಹನವನ್ನು ಪರಿಶೀಲಿಸುವ ಕೆಲಸ ಚುನಾವಣೆಗೆ ಸಂಬಂಧಿಸಿದ ಅಧಿಕಾರಿ ಮಾಡಬಹುದೇ ಇಲ್ಲವೇ? ಪ್ರಧಾನಿಯವರದ್ದು ಹೋಗಲಿ, ತನ್ನದ್ದೂ ಮಾಡಬಾರದೆಂದು ಅದೇ ಒರಿಸ್ಸಾದ ಬಿಜೆಪಿ ನಾಯಕ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಜಗಳವಾಡಿದ್ದಾರೆ. ಆ ಜಗಳದ ನಂತರ ಏನಾಯಿತು ಗೊತ್ತಿಲ್ಲ. ಆದರೆ ಮೊಹಮ್ಮದ್ ಮೊಹ್ಸಿನ್ ಅವರನ್ನು ‘ಎಸ್.ಪಿ.ಜಿ ರಕ್ಷಣೆಯಲ್ಲಿರುವವರ ವಾಹನಗಳಿಗೆ ಇಂತಹ ತಪಾಸಣೆಯಿಂದ ವಿನಾಯಿತಿ ಕೊಟ್ಟಿದ್ದರೂ, ಮೊಹ್ಸಿನ್ ಅವರು ತಪಾಸಣೆಗೆ ಆದೇಶ ನೀಡಿದ್ದಾರೆ. ಹಾಗಾಗಿ ತಪಾಸಣೆ ಮಾಡಿದ್ದಾರೆ ಆದ್ದರಿಂದ ಅಮಾನತು ಮಾಡಲಾಗಿದೆ’ ಎಂದು ಆಯೋಗ ಹೇಳಿದೆ.

ಮೊಹಮ್ಮದ್ ಮೊಹ್ಸಿನ್

ಆದರೆ, ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಈ ಕುರಿತು ಯಾವುದೇ ನಿಯಮಗಳಿಲ್ಲ. ಬದಲಿಗೆ ಸರ್ಕಾರೀ ವಾಹನಗಳನ್ನು ಬಳಸುವ ಕುರಿತು ಅಷ್ಟೇ ಹೇಳಲಾಗಿದೆ. ಹೀಗಾಗಿ ‘ಇಲ್ಲದ ನಿಯಮಗಳನ್ನು ಮುಂದಿಟ್ಟು ಇವರನ್ನು ಅಮಾನತು ಮಾಡಲಾಗಿದೆ’ ಎಂದು ಕಾಂಗ್ರೆಸ್ ಸೇರಿದಂತೆ ಹಲವರು ಚುನಾವಣಾ ಆಯೋಗವನ್ನು ಟೀಕಿಸಿದ್ದಾರೆ. ಈಗಾಗಲೇ ಚುನಾವಣಾ ಆಯೋಗವು ಬಿಜೆಪಿ ಕಚೇರಿಯಂತೆ ವರ್ತಿಸುತ್ತಿದೆ ಎಂಬ ಆರೋಪಗಳು ಸಾಕಷ್ಟು ಕೇಳಿಬಂದಿರುವಾಗ ಈ ಅಮಾನತು ಮತ್ತಷ್ಟು ಸಂಶಯಗಳಿಗೆ ಕಾರಣವಾಗಿದೆ.

ಕಳೆದ ಸಾರಿ ದೊಡ್ಡ ಸಾಧನೆ ಮಾಡಿದ್ದ ರಾಜ್ಯಗಳಲ್ಲಿ ಅದನ್ನು ಉಳಿಸಿಕೊಳ್ಳಲು ಬಿಜೆಪಿಗೆ ಸಾಧ್ಯವಾಗದು ಎಂಬ ಹಿನ್ನೆಲೆಯಲ್ಲಿ ಒರಿಸ್ಸಾದಂತಹ ಕೆಲವು ರಾಜ್ಯಗಳಲ್ಲಿ ನಷ್ಟವನ್ನು ತುಂಬಿಕೊಳ್ಳುವ ಬಿಜೆಪಿಯ ಯೋಜನೆ ಎಲ್ಲರಿಗೂ ಗೊತ್ತಿದೆ. ಪ್ರಧಾನಿಯವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದಕ್ಕೆ ಅಮಾನತು ಮಾಡಿರುವುದು ಮತ್ತು ಧರ್ಮೇಂದ್ರ ಪ್ರಧಾನ್ ವಾಹನದ ತಪಾಸಣೆಗೆ ಬಿಡದೇ ಇರುವುದು ಎರಡೂ ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ವಿಶ್ವಾಸ ಇಲ್ಲದಂತೆ ಮಾಡುತ್ತಿದೆ.

ಮೊಹಮದ್ ಮೊಹ್ಸಿನ್ ಅವರು ವಿಜಾಪುರ ಮತ್ತು ಗದಗದ ಜಿಲ್ಲಾಧಿಕಾರಿಗಳಾಗಿಯೂ ಸೇವೆ ಸಲ್ಲಿಸಿದ್ದರು. ಅದಲ್ಲದೇ ಹಲವು ನಿಗಮ ಮಂಡಳಿಗಳ ವ್ಯವಸ್ಥಾಪಕ ನಿರ್ದೇಶಕರಾಗಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದರು.

ಅವರ ಸಾಮಾಜಿಕ ಜಾಲತಾಣಗಳಲ್ಲಿ ಪರೋಕ್ಷವಾಗಿ ಕೇಂದ್ರ ಸರ್ಕಾರವು ಕಾರ್ಪೋರೇಟ್ ಸಂಸ್ಥೆಗಳ ಪರವಾಗಿ ನಿಂತಿರುವುದನ್ನು ಟೀಕಿಸಿರುವ ಕೆಲವು ಪೋಸ್ಟ್.ಗಳು ಕಂಡುಬರುತ್ತವೆ. ಇದರ ಬಗ್ಗೆ ಕೆಲವು ರಾಜಕೀಯ ವಿಶ್ಲೇಷಕರನ್ನು ‘ನಾನುಗೌರಿ ವೆಬ್’ನಿಂದ ಮಾತಾಡಿಸಲಾಯಿತು. ಸ್ವರಾಜ್ ಇಂಡಿಯಾದ ರಾಜಶೇಖರ್ ಅಕ್ಕಿಯವರನ್ನು ಮಾತಾಡಿಸಿದಾಗ, ‘ಅವರು ಸರ್ಕಾರೀ ಅಧಿಕಾರಿಯಾಗಿದ್ದುಕೊಂಡು ಸರ್ಕಾರವನ್ನು ಟೀಕಿಸುತ್ತಿದ್ದಾರಾದರೆ ಅದನ್ನು ನಾನು ತಪ್ಪು ಎನ್ನುತ್ತೇನೆ. ಆದರೆ, ಈಗ ಪ್ರಧಾನಿಯವರ ವಾಹನ ತಪಾಸಣೆಯೇ ತಪ್ಪು ಎನ್ನುವುದು ಮತ್ತು ಅದಕ್ಕಾಗಿ ಅಮಾನತು ಮಾಡುವುದನ್ನೂ ತಪ್ಪು ಎನ್ನುತ್ತೇನೆ. ಎರಡನ್ನೂ ಲಿಂಕ್ ಮಾಡಬಾರದು ‘ ಎನ್ನುತ್ತಾರೆ.

ವಕೀಲ ಮತ್ತು ರಾಜಕೀಯ ವಿಶ್ಲೇಷಕ ಜಗನ್ನಾಥ್ ರಾಮಸ್ವಾಮಿಯವರ ಪ್ರಕಾರ, ‘ಈ ಅಧಿಕಾರಿ ವ್ಯವಸ್ಥೆಯ ಹುಳುಕುಗಳನ್ನು ಪ್ರಶ್ನಿಸುವ ಮನೋಭಾವ ಇದ್ದುದರಿಂದಲೇ ಪ್ರಧಾನಿಯವರ ವಾಹನ ತಪಾಸಣೆಗೂ ಕೈ ಹಾಕಿದ್ದಾರೆ. ಇವತ್ತು ‘ನಾರ್ಮಲ್’ ಎಂದು ಭಾವಿಸಲಾಗುವ ಅಧಿಕಾರಿಗಳು ವ್ಯವಸ್ಥೆಯ ಜೊತೆಗೆ ಅಡ್ಜಸ್ಟ್ ಮೆಂಟ್ ಮಾಡಿಕೊಂಡು ಹೋಗುತ್ತಾರೆ, ಅಷ್ಟೇ’ ಎಂಬ ಅನಿಸಿಕೆ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...