Homeಕರ್ನಾಟಕಕರ್ನಾಟಕದ ಐಎಎಸ್ ಅಧಿಕಾರಿ ಒರಿಸ್ಸಾದಲ್ಲಿ ಅಮಾನತು : ಮೊಹಮದ್ ಮೊಹ್ಸಿನ್ ಅವರು ಮಾಡಿದ ತಪ್ಪೇನು?

ಕರ್ನಾಟಕದ ಐಎಎಸ್ ಅಧಿಕಾರಿ ಒರಿಸ್ಸಾದಲ್ಲಿ ಅಮಾನತು : ಮೊಹಮದ್ ಮೊಹ್ಸಿನ್ ಅವರು ಮಾಡಿದ ತಪ್ಪೇನು?

- Advertisement -
- Advertisement -

ಕುಂದಾಪುರದಲ್ಲಿ ಅಸಿಸ್ಟೆಂಟ್ ಕಮೀಷನರ್ ಆಗಿ ತಮ್ಮ ಕೆಲಸ ಶುರು ಮಾಡಿದ ಐಎಎಸ್ ಅಧಿಕಾರಿ ಮೊಹಮದ್ ಮೊಹ್ಸಿನ್, ಇದೀಗ ದೇಶಾದ್ಯಂತ ಸುದ್ದಿಯಲ್ಲಿದ್ದಾರೆ. ಸುದ್ದಿ ಒಳ್ಳೆಯದೋ ಕೆಟ್ಟದ್ದೋ ಎನ್ನುವುದು ಓದುಗರು ಯಾವ ನೆಲೆಯಿಂದ ನೋಡುತ್ತಾರೆ ಎಂಬುದರ ಆಧಾರದ ಮೇಲೆ ನಿಂತಿರುತ್ತದೆ. ಏಪ್ರಿಲ್ 17ರಂದು ಒರಿಸ್ಸಾದ ಸಂಭಲ್ಪುರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಚುನಾವಣಾ ಪ್ರಚಾರಕ್ಕೆ ಹೋಗಿದ್ದರು. ಅಲ್ಲಿ ಚುನಾವಣಾ ವೀಕ್ಷಕರಾಗಿ ಮೊಹಮದ್ ಮೊಹ್ಸಿನ್ ಕರ್ತವ್ಯ ನಿರತರಾಗಿದ್ದರು. ಚುನಾವಣೆಯ ಸಂದರ್ಭದಲ್ಲಿ ಆ ರಾಜ್ಯದಿಂದ ಹೊರಗಿನ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಿಸಲಾಗುತ್ತದೆ. ಏಕೆಂದರೆ, ಆಯಾ ರಾಜ್ಯದ ಅಧಿಕಾರಿಗಳು ನಂತರದಲ್ಲಿ ರಾಜಕೀಯ ನಾಯಕತ್ವದ ಕೆಳಗೇ ಕೆಲಸ ಮಾಡಬೇಕಾದ್ದರಿಂದ ಪಕ್ಷಪಾತ ಧೋರಣೆ ತೋರುವ ಸಾಧ್ಯತೆ ಇರುತ್ತದೆ. ಅದೇ ರೀತಿ ಮೊಹಮದ್ ಮೊಹ್ಸಿನ್ ಒರಿಸ್ಸಾಕ್ಕೆ ಹೋಗಿದ್ದರು. ಸಂಭಲ್ಪುರಕ್ಕೆ ಬಂದ ಮೋದಿಯವರ ಹೆಲಿಕಾಪ್ಟರ್ ಅನ್ನು ಪರೀಕ್ಷಿಸಲು ಮೊಹ್ಸಿನ್ ಸೂಚಿಸಿದ್ದರು.

ಇದೇ ಅವರು ಮಾಡಿದ ತಪ್ಪು ಎಂದು ಚುನಾವಣಾ ಆಯೋಗವು ಅವರನ್ನು ಅಮಾನತು ಮಾಡಿದೆ. ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿ ಯಾರನ್ನು ಬೇಕಾದರೂ ಪರೀಕ್ಷೆ ಮಾಡುವ ಅಧಿಕಾರ ಹೊಂದಿರುತ್ತಾರೆ ಅಲ್ಲವೇ? ಚಿತ್ರದುರ್ಗದಲ್ಲಿ ದೊಡ್ಡದೊಂದು ಪೆಟ್ಟಿಗೆಯನ್ನು ಮೋದಿಯವರ ಹೆಲಿಕಾಪ್ಟರ್ ನಿಂದ ಇಳಿಸಿ ಖಾಸಗಿ ಇನ್ನೋವಾ ಕಾರಿಗೆ ಸಾಗಿಸಿದ ಪ್ರಕರಣದಲ್ಲೂ ಇದು ಚರ್ಚೆಗೆ ಬಂದಿತ್ತು. ಅಲ್ಲಿನ ಎಸ್.ಪಿಯವರು ಸ್ಪಷ್ಟನೆ ನೀಡಿ, ನಮ್ಮದೇನಿದ್ದರೂ ಭದ್ರತೆ ಕೆಲಸ; ಪರೀಕ್ಷೆ ಮಾಡುವುದು ಚುನಾವಣಾಧಿಕಾರಿಗಳಿಗೆ ಬಿಟ್ಟಿದ್ದು ಎಂದಿದ್ದರು. ಆ ನಂತರ ಸದರಿ ಪೆಟ್ಟಿಗೆಯನ್ನು ಚುನಾವಣಾಧಿಕಾರಿಗಳು ಏಕೆ ತಪಾಸಣೆಗೆ ಒಳಪಡಿಸಲಿಲ್ಲ ಎಂಬ ಪ್ರಶ್ನೆ ಗಂಭೀರವಾಗಿ ಎದ್ದಿತ್ತು.

ಚಿತ್ರದುರ್ಗದಲ್ಲಿ ಮೋದಿ ಹೆಲಿಕ್ಯಾಪ್ಟರ್ ನಿಂದ ಟ್ರಂಕ್ ಒಂದನ್ನು ಹೊತ್ತಿ ಓಡುತ್ತಿರುವುದು

ಈಗ ಪ್ರಧಾನಿಯವರ ವಾಹನವನ್ನು ಪರಿಶೀಲಿಸುವ ಕೆಲಸ ಚುನಾವಣೆಗೆ ಸಂಬಂಧಿಸಿದ ಅಧಿಕಾರಿ ಮಾಡಬಹುದೇ ಇಲ್ಲವೇ? ಪ್ರಧಾನಿಯವರದ್ದು ಹೋಗಲಿ, ತನ್ನದ್ದೂ ಮಾಡಬಾರದೆಂದು ಅದೇ ಒರಿಸ್ಸಾದ ಬಿಜೆಪಿ ನಾಯಕ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಜಗಳವಾಡಿದ್ದಾರೆ. ಆ ಜಗಳದ ನಂತರ ಏನಾಯಿತು ಗೊತ್ತಿಲ್ಲ. ಆದರೆ ಮೊಹಮ್ಮದ್ ಮೊಹ್ಸಿನ್ ಅವರನ್ನು ‘ಎಸ್.ಪಿ.ಜಿ ರಕ್ಷಣೆಯಲ್ಲಿರುವವರ ವಾಹನಗಳಿಗೆ ಇಂತಹ ತಪಾಸಣೆಯಿಂದ ವಿನಾಯಿತಿ ಕೊಟ್ಟಿದ್ದರೂ, ಮೊಹ್ಸಿನ್ ಅವರು ತಪಾಸಣೆಗೆ ಆದೇಶ ನೀಡಿದ್ದಾರೆ. ಹಾಗಾಗಿ ತಪಾಸಣೆ ಮಾಡಿದ್ದಾರೆ ಆದ್ದರಿಂದ ಅಮಾನತು ಮಾಡಲಾಗಿದೆ’ ಎಂದು ಆಯೋಗ ಹೇಳಿದೆ.

ಮೊಹಮ್ಮದ್ ಮೊಹ್ಸಿನ್

ಆದರೆ, ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಈ ಕುರಿತು ಯಾವುದೇ ನಿಯಮಗಳಿಲ್ಲ. ಬದಲಿಗೆ ಸರ್ಕಾರೀ ವಾಹನಗಳನ್ನು ಬಳಸುವ ಕುರಿತು ಅಷ್ಟೇ ಹೇಳಲಾಗಿದೆ. ಹೀಗಾಗಿ ‘ಇಲ್ಲದ ನಿಯಮಗಳನ್ನು ಮುಂದಿಟ್ಟು ಇವರನ್ನು ಅಮಾನತು ಮಾಡಲಾಗಿದೆ’ ಎಂದು ಕಾಂಗ್ರೆಸ್ ಸೇರಿದಂತೆ ಹಲವರು ಚುನಾವಣಾ ಆಯೋಗವನ್ನು ಟೀಕಿಸಿದ್ದಾರೆ. ಈಗಾಗಲೇ ಚುನಾವಣಾ ಆಯೋಗವು ಬಿಜೆಪಿ ಕಚೇರಿಯಂತೆ ವರ್ತಿಸುತ್ತಿದೆ ಎಂಬ ಆರೋಪಗಳು ಸಾಕಷ್ಟು ಕೇಳಿಬಂದಿರುವಾಗ ಈ ಅಮಾನತು ಮತ್ತಷ್ಟು ಸಂಶಯಗಳಿಗೆ ಕಾರಣವಾಗಿದೆ.

ಕಳೆದ ಸಾರಿ ದೊಡ್ಡ ಸಾಧನೆ ಮಾಡಿದ್ದ ರಾಜ್ಯಗಳಲ್ಲಿ ಅದನ್ನು ಉಳಿಸಿಕೊಳ್ಳಲು ಬಿಜೆಪಿಗೆ ಸಾಧ್ಯವಾಗದು ಎಂಬ ಹಿನ್ನೆಲೆಯಲ್ಲಿ ಒರಿಸ್ಸಾದಂತಹ ಕೆಲವು ರಾಜ್ಯಗಳಲ್ಲಿ ನಷ್ಟವನ್ನು ತುಂಬಿಕೊಳ್ಳುವ ಬಿಜೆಪಿಯ ಯೋಜನೆ ಎಲ್ಲರಿಗೂ ಗೊತ್ತಿದೆ. ಪ್ರಧಾನಿಯವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದಕ್ಕೆ ಅಮಾನತು ಮಾಡಿರುವುದು ಮತ್ತು ಧರ್ಮೇಂದ್ರ ಪ್ರಧಾನ್ ವಾಹನದ ತಪಾಸಣೆಗೆ ಬಿಡದೇ ಇರುವುದು ಎರಡೂ ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ವಿಶ್ವಾಸ ಇಲ್ಲದಂತೆ ಮಾಡುತ್ತಿದೆ.

ಮೊಹಮದ್ ಮೊಹ್ಸಿನ್ ಅವರು ವಿಜಾಪುರ ಮತ್ತು ಗದಗದ ಜಿಲ್ಲಾಧಿಕಾರಿಗಳಾಗಿಯೂ ಸೇವೆ ಸಲ್ಲಿಸಿದ್ದರು. ಅದಲ್ಲದೇ ಹಲವು ನಿಗಮ ಮಂಡಳಿಗಳ ವ್ಯವಸ್ಥಾಪಕ ನಿರ್ದೇಶಕರಾಗಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದರು.

ಅವರ ಸಾಮಾಜಿಕ ಜಾಲತಾಣಗಳಲ್ಲಿ ಪರೋಕ್ಷವಾಗಿ ಕೇಂದ್ರ ಸರ್ಕಾರವು ಕಾರ್ಪೋರೇಟ್ ಸಂಸ್ಥೆಗಳ ಪರವಾಗಿ ನಿಂತಿರುವುದನ್ನು ಟೀಕಿಸಿರುವ ಕೆಲವು ಪೋಸ್ಟ್.ಗಳು ಕಂಡುಬರುತ್ತವೆ. ಇದರ ಬಗ್ಗೆ ಕೆಲವು ರಾಜಕೀಯ ವಿಶ್ಲೇಷಕರನ್ನು ‘ನಾನುಗೌರಿ ವೆಬ್’ನಿಂದ ಮಾತಾಡಿಸಲಾಯಿತು. ಸ್ವರಾಜ್ ಇಂಡಿಯಾದ ರಾಜಶೇಖರ್ ಅಕ್ಕಿಯವರನ್ನು ಮಾತಾಡಿಸಿದಾಗ, ‘ಅವರು ಸರ್ಕಾರೀ ಅಧಿಕಾರಿಯಾಗಿದ್ದುಕೊಂಡು ಸರ್ಕಾರವನ್ನು ಟೀಕಿಸುತ್ತಿದ್ದಾರಾದರೆ ಅದನ್ನು ನಾನು ತಪ್ಪು ಎನ್ನುತ್ತೇನೆ. ಆದರೆ, ಈಗ ಪ್ರಧಾನಿಯವರ ವಾಹನ ತಪಾಸಣೆಯೇ ತಪ್ಪು ಎನ್ನುವುದು ಮತ್ತು ಅದಕ್ಕಾಗಿ ಅಮಾನತು ಮಾಡುವುದನ್ನೂ ತಪ್ಪು ಎನ್ನುತ್ತೇನೆ. ಎರಡನ್ನೂ ಲಿಂಕ್ ಮಾಡಬಾರದು ‘ ಎನ್ನುತ್ತಾರೆ.

ವಕೀಲ ಮತ್ತು ರಾಜಕೀಯ ವಿಶ್ಲೇಷಕ ಜಗನ್ನಾಥ್ ರಾಮಸ್ವಾಮಿಯವರ ಪ್ರಕಾರ, ‘ಈ ಅಧಿಕಾರಿ ವ್ಯವಸ್ಥೆಯ ಹುಳುಕುಗಳನ್ನು ಪ್ರಶ್ನಿಸುವ ಮನೋಭಾವ ಇದ್ದುದರಿಂದಲೇ ಪ್ರಧಾನಿಯವರ ವಾಹನ ತಪಾಸಣೆಗೂ ಕೈ ಹಾಕಿದ್ದಾರೆ. ಇವತ್ತು ‘ನಾರ್ಮಲ್’ ಎಂದು ಭಾವಿಸಲಾಗುವ ಅಧಿಕಾರಿಗಳು ವ್ಯವಸ್ಥೆಯ ಜೊತೆಗೆ ಅಡ್ಜಸ್ಟ್ ಮೆಂಟ್ ಮಾಡಿಕೊಂಡು ಹೋಗುತ್ತಾರೆ, ಅಷ್ಟೇ’ ಎಂಬ ಅನಿಸಿಕೆ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...