Homeಕರ್ನಾಟಕಕರ್ನಾಟಕದ ಐಎಎಸ್ ಅಧಿಕಾರಿ ಒರಿಸ್ಸಾದಲ್ಲಿ ಅಮಾನತು : ಮೊಹಮದ್ ಮೊಹ್ಸಿನ್ ಅವರು ಮಾಡಿದ ತಪ್ಪೇನು?

ಕರ್ನಾಟಕದ ಐಎಎಸ್ ಅಧಿಕಾರಿ ಒರಿಸ್ಸಾದಲ್ಲಿ ಅಮಾನತು : ಮೊಹಮದ್ ಮೊಹ್ಸಿನ್ ಅವರು ಮಾಡಿದ ತಪ್ಪೇನು?

- Advertisement -
- Advertisement -

ಕುಂದಾಪುರದಲ್ಲಿ ಅಸಿಸ್ಟೆಂಟ್ ಕಮೀಷನರ್ ಆಗಿ ತಮ್ಮ ಕೆಲಸ ಶುರು ಮಾಡಿದ ಐಎಎಸ್ ಅಧಿಕಾರಿ ಮೊಹಮದ್ ಮೊಹ್ಸಿನ್, ಇದೀಗ ದೇಶಾದ್ಯಂತ ಸುದ್ದಿಯಲ್ಲಿದ್ದಾರೆ. ಸುದ್ದಿ ಒಳ್ಳೆಯದೋ ಕೆಟ್ಟದ್ದೋ ಎನ್ನುವುದು ಓದುಗರು ಯಾವ ನೆಲೆಯಿಂದ ನೋಡುತ್ತಾರೆ ಎಂಬುದರ ಆಧಾರದ ಮೇಲೆ ನಿಂತಿರುತ್ತದೆ. ಏಪ್ರಿಲ್ 17ರಂದು ಒರಿಸ್ಸಾದ ಸಂಭಲ್ಪುರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಚುನಾವಣಾ ಪ್ರಚಾರಕ್ಕೆ ಹೋಗಿದ್ದರು. ಅಲ್ಲಿ ಚುನಾವಣಾ ವೀಕ್ಷಕರಾಗಿ ಮೊಹಮದ್ ಮೊಹ್ಸಿನ್ ಕರ್ತವ್ಯ ನಿರತರಾಗಿದ್ದರು. ಚುನಾವಣೆಯ ಸಂದರ್ಭದಲ್ಲಿ ಆ ರಾಜ್ಯದಿಂದ ಹೊರಗಿನ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಿಸಲಾಗುತ್ತದೆ. ಏಕೆಂದರೆ, ಆಯಾ ರಾಜ್ಯದ ಅಧಿಕಾರಿಗಳು ನಂತರದಲ್ಲಿ ರಾಜಕೀಯ ನಾಯಕತ್ವದ ಕೆಳಗೇ ಕೆಲಸ ಮಾಡಬೇಕಾದ್ದರಿಂದ ಪಕ್ಷಪಾತ ಧೋರಣೆ ತೋರುವ ಸಾಧ್ಯತೆ ಇರುತ್ತದೆ. ಅದೇ ರೀತಿ ಮೊಹಮದ್ ಮೊಹ್ಸಿನ್ ಒರಿಸ್ಸಾಕ್ಕೆ ಹೋಗಿದ್ದರು. ಸಂಭಲ್ಪುರಕ್ಕೆ ಬಂದ ಮೋದಿಯವರ ಹೆಲಿಕಾಪ್ಟರ್ ಅನ್ನು ಪರೀಕ್ಷಿಸಲು ಮೊಹ್ಸಿನ್ ಸೂಚಿಸಿದ್ದರು.

ಇದೇ ಅವರು ಮಾಡಿದ ತಪ್ಪು ಎಂದು ಚುನಾವಣಾ ಆಯೋಗವು ಅವರನ್ನು ಅಮಾನತು ಮಾಡಿದೆ. ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿ ಯಾರನ್ನು ಬೇಕಾದರೂ ಪರೀಕ್ಷೆ ಮಾಡುವ ಅಧಿಕಾರ ಹೊಂದಿರುತ್ತಾರೆ ಅಲ್ಲವೇ? ಚಿತ್ರದುರ್ಗದಲ್ಲಿ ದೊಡ್ಡದೊಂದು ಪೆಟ್ಟಿಗೆಯನ್ನು ಮೋದಿಯವರ ಹೆಲಿಕಾಪ್ಟರ್ ನಿಂದ ಇಳಿಸಿ ಖಾಸಗಿ ಇನ್ನೋವಾ ಕಾರಿಗೆ ಸಾಗಿಸಿದ ಪ್ರಕರಣದಲ್ಲೂ ಇದು ಚರ್ಚೆಗೆ ಬಂದಿತ್ತು. ಅಲ್ಲಿನ ಎಸ್.ಪಿಯವರು ಸ್ಪಷ್ಟನೆ ನೀಡಿ, ನಮ್ಮದೇನಿದ್ದರೂ ಭದ್ರತೆ ಕೆಲಸ; ಪರೀಕ್ಷೆ ಮಾಡುವುದು ಚುನಾವಣಾಧಿಕಾರಿಗಳಿಗೆ ಬಿಟ್ಟಿದ್ದು ಎಂದಿದ್ದರು. ಆ ನಂತರ ಸದರಿ ಪೆಟ್ಟಿಗೆಯನ್ನು ಚುನಾವಣಾಧಿಕಾರಿಗಳು ಏಕೆ ತಪಾಸಣೆಗೆ ಒಳಪಡಿಸಲಿಲ್ಲ ಎಂಬ ಪ್ರಶ್ನೆ ಗಂಭೀರವಾಗಿ ಎದ್ದಿತ್ತು.

ಚಿತ್ರದುರ್ಗದಲ್ಲಿ ಮೋದಿ ಹೆಲಿಕ್ಯಾಪ್ಟರ್ ನಿಂದ ಟ್ರಂಕ್ ಒಂದನ್ನು ಹೊತ್ತಿ ಓಡುತ್ತಿರುವುದು

ಈಗ ಪ್ರಧಾನಿಯವರ ವಾಹನವನ್ನು ಪರಿಶೀಲಿಸುವ ಕೆಲಸ ಚುನಾವಣೆಗೆ ಸಂಬಂಧಿಸಿದ ಅಧಿಕಾರಿ ಮಾಡಬಹುದೇ ಇಲ್ಲವೇ? ಪ್ರಧಾನಿಯವರದ್ದು ಹೋಗಲಿ, ತನ್ನದ್ದೂ ಮಾಡಬಾರದೆಂದು ಅದೇ ಒರಿಸ್ಸಾದ ಬಿಜೆಪಿ ನಾಯಕ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಜಗಳವಾಡಿದ್ದಾರೆ. ಆ ಜಗಳದ ನಂತರ ಏನಾಯಿತು ಗೊತ್ತಿಲ್ಲ. ಆದರೆ ಮೊಹಮ್ಮದ್ ಮೊಹ್ಸಿನ್ ಅವರನ್ನು ‘ಎಸ್.ಪಿ.ಜಿ ರಕ್ಷಣೆಯಲ್ಲಿರುವವರ ವಾಹನಗಳಿಗೆ ಇಂತಹ ತಪಾಸಣೆಯಿಂದ ವಿನಾಯಿತಿ ಕೊಟ್ಟಿದ್ದರೂ, ಮೊಹ್ಸಿನ್ ಅವರು ತಪಾಸಣೆಗೆ ಆದೇಶ ನೀಡಿದ್ದಾರೆ. ಹಾಗಾಗಿ ತಪಾಸಣೆ ಮಾಡಿದ್ದಾರೆ ಆದ್ದರಿಂದ ಅಮಾನತು ಮಾಡಲಾಗಿದೆ’ ಎಂದು ಆಯೋಗ ಹೇಳಿದೆ.

ಮೊಹಮ್ಮದ್ ಮೊಹ್ಸಿನ್

ಆದರೆ, ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಈ ಕುರಿತು ಯಾವುದೇ ನಿಯಮಗಳಿಲ್ಲ. ಬದಲಿಗೆ ಸರ್ಕಾರೀ ವಾಹನಗಳನ್ನು ಬಳಸುವ ಕುರಿತು ಅಷ್ಟೇ ಹೇಳಲಾಗಿದೆ. ಹೀಗಾಗಿ ‘ಇಲ್ಲದ ನಿಯಮಗಳನ್ನು ಮುಂದಿಟ್ಟು ಇವರನ್ನು ಅಮಾನತು ಮಾಡಲಾಗಿದೆ’ ಎಂದು ಕಾಂಗ್ರೆಸ್ ಸೇರಿದಂತೆ ಹಲವರು ಚುನಾವಣಾ ಆಯೋಗವನ್ನು ಟೀಕಿಸಿದ್ದಾರೆ. ಈಗಾಗಲೇ ಚುನಾವಣಾ ಆಯೋಗವು ಬಿಜೆಪಿ ಕಚೇರಿಯಂತೆ ವರ್ತಿಸುತ್ತಿದೆ ಎಂಬ ಆರೋಪಗಳು ಸಾಕಷ್ಟು ಕೇಳಿಬಂದಿರುವಾಗ ಈ ಅಮಾನತು ಮತ್ತಷ್ಟು ಸಂಶಯಗಳಿಗೆ ಕಾರಣವಾಗಿದೆ.

ಕಳೆದ ಸಾರಿ ದೊಡ್ಡ ಸಾಧನೆ ಮಾಡಿದ್ದ ರಾಜ್ಯಗಳಲ್ಲಿ ಅದನ್ನು ಉಳಿಸಿಕೊಳ್ಳಲು ಬಿಜೆಪಿಗೆ ಸಾಧ್ಯವಾಗದು ಎಂಬ ಹಿನ್ನೆಲೆಯಲ್ಲಿ ಒರಿಸ್ಸಾದಂತಹ ಕೆಲವು ರಾಜ್ಯಗಳಲ್ಲಿ ನಷ್ಟವನ್ನು ತುಂಬಿಕೊಳ್ಳುವ ಬಿಜೆಪಿಯ ಯೋಜನೆ ಎಲ್ಲರಿಗೂ ಗೊತ್ತಿದೆ. ಪ್ರಧಾನಿಯವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದಕ್ಕೆ ಅಮಾನತು ಮಾಡಿರುವುದು ಮತ್ತು ಧರ್ಮೇಂದ್ರ ಪ್ರಧಾನ್ ವಾಹನದ ತಪಾಸಣೆಗೆ ಬಿಡದೇ ಇರುವುದು ಎರಡೂ ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ವಿಶ್ವಾಸ ಇಲ್ಲದಂತೆ ಮಾಡುತ್ತಿದೆ.

ಮೊಹಮದ್ ಮೊಹ್ಸಿನ್ ಅವರು ವಿಜಾಪುರ ಮತ್ತು ಗದಗದ ಜಿಲ್ಲಾಧಿಕಾರಿಗಳಾಗಿಯೂ ಸೇವೆ ಸಲ್ಲಿಸಿದ್ದರು. ಅದಲ್ಲದೇ ಹಲವು ನಿಗಮ ಮಂಡಳಿಗಳ ವ್ಯವಸ್ಥಾಪಕ ನಿರ್ದೇಶಕರಾಗಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದರು.

ಅವರ ಸಾಮಾಜಿಕ ಜಾಲತಾಣಗಳಲ್ಲಿ ಪರೋಕ್ಷವಾಗಿ ಕೇಂದ್ರ ಸರ್ಕಾರವು ಕಾರ್ಪೋರೇಟ್ ಸಂಸ್ಥೆಗಳ ಪರವಾಗಿ ನಿಂತಿರುವುದನ್ನು ಟೀಕಿಸಿರುವ ಕೆಲವು ಪೋಸ್ಟ್.ಗಳು ಕಂಡುಬರುತ್ತವೆ. ಇದರ ಬಗ್ಗೆ ಕೆಲವು ರಾಜಕೀಯ ವಿಶ್ಲೇಷಕರನ್ನು ‘ನಾನುಗೌರಿ ವೆಬ್’ನಿಂದ ಮಾತಾಡಿಸಲಾಯಿತು. ಸ್ವರಾಜ್ ಇಂಡಿಯಾದ ರಾಜಶೇಖರ್ ಅಕ್ಕಿಯವರನ್ನು ಮಾತಾಡಿಸಿದಾಗ, ‘ಅವರು ಸರ್ಕಾರೀ ಅಧಿಕಾರಿಯಾಗಿದ್ದುಕೊಂಡು ಸರ್ಕಾರವನ್ನು ಟೀಕಿಸುತ್ತಿದ್ದಾರಾದರೆ ಅದನ್ನು ನಾನು ತಪ್ಪು ಎನ್ನುತ್ತೇನೆ. ಆದರೆ, ಈಗ ಪ್ರಧಾನಿಯವರ ವಾಹನ ತಪಾಸಣೆಯೇ ತಪ್ಪು ಎನ್ನುವುದು ಮತ್ತು ಅದಕ್ಕಾಗಿ ಅಮಾನತು ಮಾಡುವುದನ್ನೂ ತಪ್ಪು ಎನ್ನುತ್ತೇನೆ. ಎರಡನ್ನೂ ಲಿಂಕ್ ಮಾಡಬಾರದು ‘ ಎನ್ನುತ್ತಾರೆ.

ವಕೀಲ ಮತ್ತು ರಾಜಕೀಯ ವಿಶ್ಲೇಷಕ ಜಗನ್ನಾಥ್ ರಾಮಸ್ವಾಮಿಯವರ ಪ್ರಕಾರ, ‘ಈ ಅಧಿಕಾರಿ ವ್ಯವಸ್ಥೆಯ ಹುಳುಕುಗಳನ್ನು ಪ್ರಶ್ನಿಸುವ ಮನೋಭಾವ ಇದ್ದುದರಿಂದಲೇ ಪ್ರಧಾನಿಯವರ ವಾಹನ ತಪಾಸಣೆಗೂ ಕೈ ಹಾಕಿದ್ದಾರೆ. ಇವತ್ತು ‘ನಾರ್ಮಲ್’ ಎಂದು ಭಾವಿಸಲಾಗುವ ಅಧಿಕಾರಿಗಳು ವ್ಯವಸ್ಥೆಯ ಜೊತೆಗೆ ಅಡ್ಜಸ್ಟ್ ಮೆಂಟ್ ಮಾಡಿಕೊಂಡು ಹೋಗುತ್ತಾರೆ, ಅಷ್ಟೇ’ ಎಂಬ ಅನಿಸಿಕೆ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...