Homeಮುಖಪುಟಮೊಹರಂ ಮೆರವಣಿಗೆಯಲ್ಲಿ ಹಿಂಸಾಚಾರ: ಕಣ್ಣು ಕಳೆದುಕೊಂಡ ವಿದ್ಯಾರ್ಥಿಗಳು

ಮೊಹರಂ ಮೆರವಣಿಗೆಯಲ್ಲಿ ಹಿಂಸಾಚಾರ: ಕಣ್ಣು ಕಳೆದುಕೊಂಡ ವಿದ್ಯಾರ್ಥಿಗಳು

ವೈದ್ಯರು ಹೇಳುವಂತೆ ತನ್ವೀರ್‌ಗೆ ಕನಿಷ್ಟ 15 ಗುಂಡುಗಳಾದರೂ ಕಣ್ಣಿಗೆ ಬಿದ್ದಿವೆ. ಕಣ್ಣಿನಲ್ಲಿ ರಂಧ್ರವಿರುವ ಸಾಧ್ಯತೆಯಿದೆ ಎನ್ನುತ್ತಾರೆ.

- Advertisement -
- Advertisement -

ಪೊಲೀಸರ ಅನುಮತಿ ನಿರಾಕರಣೆ ನಡುವೆಯೂ ಜಮ್ಮು-ಕಾಶ್ಮೀರದ ಶ್ರೀನಗರದ ಬಮೀನಾದಲ್ಲಿ ನಡೆಯುತ್ತಿದ್ದ ಮೊಹರಂ ಮೆರವಣಿಗೆ ಚದುರಿಸಲು ಭದ್ರತಾ ಪಡೆಗಳು ನಡೆಸಿದ ಪೆಲೆಟ್ ಫೈರಿಂಗ್‌ನಲ್ಲಿ ಹಲವರು ದೃಷ್ಠಿ ಕಳೆದುಕೊಂಡಿದ್ದಾರೆ.

ಭದ್ರತಾ ಪಡೆಗಳ ದಾಳಿಯಿಂದಾಗಿ ಅಲಿಗಡ್‌ನಲ್ಲಿ 10ನೇ ತರಗತಿ ಓದುತ್ತಿದ್ದ ತನ್ವೀರ್ ಅಹ್ಮದ್ ಎಂಬ ಬಾಲಕನ ಎರಡು ಕಣ್ಣುಗಳು ದೃಷ್ಠಿ ಕಳೆದುಕೊಳ್ಳುವ ಅಪಾಯದಲ್ಲಿವೆ ಎಂದು ಎಸ್‌ಎಂಎಚ್‌ಎಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ನಾವು ತುಂಬಾ ಶಾಂತಿಯಿಂದಲೇ ಮೆರವಣಿಗೆ ನಡೆಸುತ್ತಿದ್ದೆವು. ಪೊಲೀಸರೇ ಮೊದಲು ಲಾಠಿಚಾರ್ಜ್ ಮಾಡಿ, ಪೆಲೆಟ್ ಫೈರಿಂಗ್ ಆರಂಭಿಸಿದರು. ನಾನು ಮನೆಗೆ ಹೊರಡುವವನಿದ್ದೆ. ಏನಾಗುತ್ತಿದೆ ಎಂದು ನೋಡಲು ಹಿಂತಿರುಗಿದೆ. ಆಗಲೇ ನನಗೆ ಗುಂಡುಗಳು ಬಿದ್ದವು ಎನ್ನುತ್ತಾರೆ  ಗಾಯಾಳು ತನ್ವೀರ್.

ನನ್ನ ಮಗ ಅಲಿಗಡ್‌ನಲ್ಲಿ 6ನೇ ತರಗತಿಯಿಂದಲೂ ಓದುತ್ತಿದ್ದ. ಲಾಕ್‌ಡೌನ್‌ನಿಂದಾಗಿ ಇಲ್ಲಿಗೆ ಬಂದಿದ್ದ, ಆತನಿಗಾಗಿ ದೃಷ್ಠಿ ಬರಲಿ ಎಂದು ನಾವು ಪ್ರಾರ್ಥಿಸುತ್ತಿದ್ದೆ ಎಂದು ತನ್ವೀರ್ ತಂದೆ ನಜೀರ್ ಅಹ್ಮದ್ ಭಟ್ ಕಣ್ಣೀರು ಹಾಕಿದ್ದಾರೆ.

ವೈದ್ಯರು ಹೇಳುವಂತೆ ತನ್ವೀರ್‌ಗೆ ಕನಿಷ್ಟ 15 ಗುಂಡುಗಳಾದರೂ ಕಣ್ಣಿಗೆ ಬಿದ್ದಿವೆ. ಕಣ್ಣಿನಲ್ಲಿ ರಂಧ್ರವಿರುವ ಸಾಧ್ಯತೆಯಿದೆ ಎನ್ನುತ್ತಾರೆ.

ಇನ್ನು ತನ್ವೀರ್ ನಂತೆಯೇ  ಗಾಯಗೊಂಡಿರುವ 12ನೇ ತರಗತಿ ವಿದ್ಯಾರ್ಥಿ ಸುಹೇಲ್ ಅಬ್ಬಾಸ್ ಮೀರ್ ಕೂಡ ನಮ್ಮ ಮೆರವಣಿಗೆ ಶಾಂತಿಯುತವಾಗಿತ್ತು, ನಮ್ಮ ಧಾರ್ಮಿಕ ಆಚರಣೆಯನ್ನು ನಾವು ಮಾಡುತ್ತಿದ್ದೆವು ಎನ್ನುತ್ತಾನೆ. ಈತನಿಗೂ ಎಡಗಣ್ಣು, ಎಡಗೈಗಳಿಗೆ ಗಾಯಗಳಾಗಿವೆ.

image courtesy: ThePrint

ಸದ್ಯ ಗಾಯಾಳು ಸುಹೇಲ್‌ಗೆ ಒಂದು ಶಸ್ತ್ರ ಚಿಕಿತ್ಸೆ ನಡೆದಿದ್ದು, ಕೆಲ ದಿನಗಳಲ್ಲಿ ಎಡಗಣ್ಣಿಗೆ ಮತ್ತೊಂದು ಶಸ್ತ್ರ ಚಿಕಿತ್ಸೆ ಮಾಡಬೇಕಾಗಿದೆ. ಸರಿಯಾದ ಚಿಕಿತ್ಸೆ ಮತ್ತು ಉತ್ತಮ ಆರೈಕೆಯಿಂದ ಆತನಿಗೆ ದೃಷ್ಠಿ ಮರಳಬಹುದು ಎಂದು ವೈದ್ಯರು ಭರವಸೆ ನೀಡುತ್ತಾರೆ. ಘಟನೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಸೇರಿ 19 ಮಂದಿ ತೀವ್ರವಾಗಿ ಗಾಯಗೊಂಡಿದ್ದರೇ, 200-250ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಾಗಳಾಗಿವೆ.


ಇದನ್ನೂ ಓದಿ: ಜಮ್ಮು ಕಾಶ್ಮೀರಕ್ಕೆ ಹೊಸ ಆಡಳಿತ ನಿಯಮ ಪ್ರಕಟಿಸಿದ ಗೃಹ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...