Homeಮುಖಪುಟಮೋದಿ ಸರ್ಕಾರ ನಿರ್ಲಕ್ಷಿಸಿ ಮುಸ್ಲಿಂ ಮಹಿಳೆಯನ್ನು ಜಡ್ಜ್ ಆಗಿ ನೇಮಿಸಿದ ಸುಪ್ರೀಂ ಕೋರ್ಟ್‌..

ಮೋದಿ ಸರ್ಕಾರ ನಿರ್ಲಕ್ಷಿಸಿ ಮುಸ್ಲಿಂ ಮಹಿಳೆಯನ್ನು ಜಡ್ಜ್ ಆಗಿ ನೇಮಿಸಿದ ಸುಪ್ರೀಂ ಕೋರ್ಟ್‌..

- Advertisement -
- Advertisement -

ಪಾರದರ್ಶಕ ಆಡಳಿತ ನೀಡುವುದಾಗಿ ಗಾಳಿಯಲ್ಲಿ ಕೈ ಬೀಸುತ್ತಾ ಮಾತನಾಡುವ ಪ್ರಧಾನಿ ಮೋದಿ, ನ್ಯಾಯಾಂಗದಲ್ಲೂ ಕೈಯಾಡಿಸಿ ಜಾತಿ-ಧರ್ಮದ ಕೆಸರು ಎಬ್ಬಿಸಿ, ಆಡಳಿತವೆಲ್ಲ ರಾಡಿ ಮಾಡುವ ಇವರ ಮುಖವಾಡ ಬಯಲಾಗಿದೆ. ಸಮಾಧಾನಕರ ಸಂಗತಿ ಎಂದರೆ, ಪ್ರಧಾನಿ ಮೋದಿ ಪ್ರಭಾವಕ್ಕೆ ಮಣಿಯದ ಸುಪ್ರೀಂಕೋರ್ಟ್‍ನ ಕೊಲಿಜಿಯಂ ಮಾತ್ರ ಕೇಂದ್ರ ಸರ್ಕಾರವನ್ನೇ ಪ್ರಶ್ನಿಸಿ, ನ್ಯಾಯಪರತೆಯನ್ನು ಎತ್ತಿ ಹಿಡಿದಿದೆ.

ಹಿಂದೂ ವಕೀಲೆಯೊಬ್ಬರು ಮುಸ್ಲಿಂ ಉದ್ಯಮಿಯನ್ನು ಮದುವೆಯಾಗಿ ಆ ಧರ್ಮದ ಅನುಯಾಯಿಯಾಗಿದ್ದನ್ನು ಸಹಿಸದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಈ ವಕೀಲೆಗೆ ಜಮ್ಮು-ಕಾಶ್ಮೀರ ಹೈಕೋರ್ಟ್ ನ್ಯಾಯಾಧೀರಾಗುವುದನ್ನು ತಪ್ಪಿಸಲು ಸಾಧ್ಯವಿದ್ದ ಎಲ್ಲ ಪ್ರಯತ್ನ ಮಾಡಿರುವ, 56 ಅಂಗುಲ ಎದೆ ವಿಸ್ತಾರದ ಮನಸ್ಸಿನ ಸಣ್ಣತನ ಬಹಿರಂಗ ಚರ್ಚೆಗೆ ಆಹ್ವಾನ ನೀಡುತ್ತಿದೆ.

ಮೋಕ್ಷಾ ಖಸ್ಮಿ ಖಜುರಿಯಾ ಮೂಲತಃ ಹಿಂದೂ, ಜಮ್ಮು ನಿವಾಸಿ. ವೃತ್ತಿಯಿಂದ ವಕೀಲೆ. ಶ್ರೀನಗರದ ಬಾರ್‍ಜುಲ್ಲಾ ನಿವಾಸಿ ಹಾಗೂ ಉದ್ಯಮಿ ಯಾಸೀರ್ ಸೈಯದ್ ಖಸ್ಮಿ ಅವರೊಂದಿಗೆ ಮದುವೆಯಾಗಿ ಮುಸ್ಲಿಂ ಧರ್ಮವನ್ನು ಒಪ್ಪಿಕೊಂಡಿದ್ದರು.

ಕೊಲಿಜಿಯಂ ಆಯ್ಕೆ
ಜಮ್ಮು-ಕಾಶ್ಮೀರ ಹೈಕೋರ್ಟ್ ಕೊಲಿಜಿಯಂ ಮೋಕ್ಷಾ ಖಸ್ಮಿ ಖಜುರಿಯಾ ಸೇರಿದಂತೆ ಇಬ್ಬರು ವಕೀಲರ ಹೆಸರನ್ನು ಜಮ್ಮು-ಕಾಶ್ಮೀರ ಹೈಕೋರ್ಟ್ ನ್ಯಾಯಮೂರ್ತಿಯ ಹುದ್ದೆಗೆ ನೇಮಿಸಲು ಶಿಫಾರಸು ಮಾಡಿತ್ತು. ಅಕ್ಟೋಬರ್ 15 ರಂದು ನಡೆದ ಸಭೆಯಲ್ಲಿ ಈ ಹೆಸರುಗಳನ್ನು ಸುಪ್ರೀಂಕೋರ್ಟ್ ಕೊಲಿಜಿಯಂ ಅನುಮೋದಿಸಿ, ಕೇಂದ್ರ ಸರ್ಕಾರದ ಒಪ್ಪಿಗೆಗೆ ಕಳುಹಿಸಿತ್ತು.

ಕೇಂದ್ರ ಸರ್ಕಾರದ ತಡೆ
ಈ ಇಬ್ಬರ ಹೆಸರಿಗೆ ಒಪ್ಪಿಗೆ ಸೂಚಿಸದ ಕೇಂದ್ರ ಸರ್ಕಾರ, ಏಕಾಏಕಿಯಾಗಿ ಮೋಕ್ಷಾ ಖಸ್ಮಿ ಖಜುರಿಯಾ ಅವರ ವಾರ್ಷಿಕ ಆದಾಯ ಹೆಚ್ಚಿದೆ ಎಂಬ ಸಬೂಬು ನೀಡಿ ವಿಳಂಬ ಧೋರಣೆ ಅನುಸರಿಸಿತು. ಮೋಕ್ಷಾ ಅಂತರ್ ಧರ್ಮೀಯ ಮದುವೆಯಾಗಿದ್ದಾರೆ ಎಂಬ ಅಂಶಕ್ಕೆ ಪರ್ಯಾಯವಾಗಿ ಆದಾಯ ಹೆಚ್ಚಿದ್ದರ ಬಗ್ಗೆ ಸಂಶಯ ವ್ಯಕ್ತಪಡಿಸಿತ್ತು. ಮಾತ್ರವಲ್ಲ; ಮೋಕ್ಷಾ ಅವರ ಆದಾಯವನ್ನೇ ಪ್ರಮುಖ ಗುರಾಣಿಯಾಗಿಸಿ, ಕೊಲಿಜಿಯಂ ಶಿಫಾರಸುಗಳಿಗೆ ತಡೆಯೊಡ್ಡಿತು.

2012 ರಿಂದ 2016ರವರೆಗೆ ಈ ಮೂರು ವರ್ಷಗಳ ಅವಧಿಯಲ್ಲಿ ಕ್ರಮವಾಗಿ 2.50 ಲಕ್ಷ ರೂ.ಗಳಿಂದ 3.25 ಲಕ್ಷ ರೂ.ಗಳಿತ್ತು. ಆದರೆ, 2016 ಹಾಗೂ 2017-18ರಲ್ಲಿ ಕ್ರಮವಾಗಿ 12 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳಿಗೆ ಆದಾಯ ಹೆಚ್ಚಿದೆ ಎಂಬುದು ಕೇಂದ್ರ ಸರ್ಕಾರದ ಆಕ್ಷೇಪವಾಗಿತ್ತು.

ಕೊಲಿಜಿಯಂ ಪ್ರತಿಕ್ರಿಯೆ
ಮದುವೆ ವಿಷಯಕ್ಕೆ ಸಂಬಂಧಿಸಿದಂತೆ, ಕೋಲಿಜಿಯಂ ಮಾತ್ರ ಅಂತರ್ ಧರ್ಮೀಯ ಮದುವೆ ಅಪರಾಧವೇ? ಎಂದು ಪ್ರತಿಕ್ರಿಯಿಸಿತ್ತು. ಆದಾಯ ಹೆಚ್ಚಳ ವಿಷಯದಲ್ಲಿ ಕೇಂದ್ರ ಸರ್ಕಾರದ ಆರೋಪ ಆಧಾರರಹಿತವಾಗಿದೆ ಎಂದು ಪ್ರತಿಕ್ರಿಯಿಸಿ, ಸರ್ಕಾರದ ತಡೆಯನ್ನು ನಿರ್ಲಕ್ಷಿಸಿ, ಮೋಕ್ಷಾ ಖಸ್ಮಿ ಖಜುರಿಯಾ ಅವರನ್ನು ಜಮ್ಮು-ಕಾಶ್ಮೀರ ಹೈಕೋರ್ಟ್‍ಗೆ ನ್ಯಾಯಾಧೀಶರನ್ನಾಗಿ ನೇಮಿಸಿದೆ.

ಇದೇ ಮೋಕ್ಷಾ ಖಸ್ಮಿ ಖಜುರಿಯಾ, ಜಮ್ಮು-ಕಾಶ್ಮಿರದಲ್ಲಿ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ಸೇವೆ ಸಲ್ಲಿಸಿದ್ದು, ಆ ಸರ್ಕಾರದ ಕಾನೂನು ಸಚಿವ ಅಬ್ದುಲ್ ಹಖ್ ಖಾನ್ ಹಾಗೂ ಅಡ್ವೊಕೇಟ್ ಜನರಲ್ ಜಹಾಂಗೀರ್ ಇಕ್ಬಾಲ್ ಗನೈ ಅವರೊಂದಿಗಿನ ಮನಸ್ತಾಪದ ಹಿನ್ನೆಲೆಯಲ್ಲಿ ಹುದ್ದೆಯನ್ನು ತೊರೆದಿದ್ದರು.

ಪತಿ ಖಸ್ಮಿ ಖಜುರಿಯಾ ಸಹ ಮೆಹಬೂಬಾ ಮುಫ್ತಿ ನೇತೃತ್ವದ ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿಯ ಮುಖಂಡರಾಗಿದ್ದಾರೆ.

ಆಧಾರ: ದಿ ಪ್ರಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...