Homeಮುಖಪುಟಮೋದಿ ಸರ್ಕಾರ ನಿರ್ಲಕ್ಷಿಸಿ ಮುಸ್ಲಿಂ ಮಹಿಳೆಯನ್ನು ಜಡ್ಜ್ ಆಗಿ ನೇಮಿಸಿದ ಸುಪ್ರೀಂ ಕೋರ್ಟ್‌..

ಮೋದಿ ಸರ್ಕಾರ ನಿರ್ಲಕ್ಷಿಸಿ ಮುಸ್ಲಿಂ ಮಹಿಳೆಯನ್ನು ಜಡ್ಜ್ ಆಗಿ ನೇಮಿಸಿದ ಸುಪ್ರೀಂ ಕೋರ್ಟ್‌..

- Advertisement -
- Advertisement -

ಪಾರದರ್ಶಕ ಆಡಳಿತ ನೀಡುವುದಾಗಿ ಗಾಳಿಯಲ್ಲಿ ಕೈ ಬೀಸುತ್ತಾ ಮಾತನಾಡುವ ಪ್ರಧಾನಿ ಮೋದಿ, ನ್ಯಾಯಾಂಗದಲ್ಲೂ ಕೈಯಾಡಿಸಿ ಜಾತಿ-ಧರ್ಮದ ಕೆಸರು ಎಬ್ಬಿಸಿ, ಆಡಳಿತವೆಲ್ಲ ರಾಡಿ ಮಾಡುವ ಇವರ ಮುಖವಾಡ ಬಯಲಾಗಿದೆ. ಸಮಾಧಾನಕರ ಸಂಗತಿ ಎಂದರೆ, ಪ್ರಧಾನಿ ಮೋದಿ ಪ್ರಭಾವಕ್ಕೆ ಮಣಿಯದ ಸುಪ್ರೀಂಕೋರ್ಟ್‍ನ ಕೊಲಿಜಿಯಂ ಮಾತ್ರ ಕೇಂದ್ರ ಸರ್ಕಾರವನ್ನೇ ಪ್ರಶ್ನಿಸಿ, ನ್ಯಾಯಪರತೆಯನ್ನು ಎತ್ತಿ ಹಿಡಿದಿದೆ.

ಹಿಂದೂ ವಕೀಲೆಯೊಬ್ಬರು ಮುಸ್ಲಿಂ ಉದ್ಯಮಿಯನ್ನು ಮದುವೆಯಾಗಿ ಆ ಧರ್ಮದ ಅನುಯಾಯಿಯಾಗಿದ್ದನ್ನು ಸಹಿಸದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಈ ವಕೀಲೆಗೆ ಜಮ್ಮು-ಕಾಶ್ಮೀರ ಹೈಕೋರ್ಟ್ ನ್ಯಾಯಾಧೀರಾಗುವುದನ್ನು ತಪ್ಪಿಸಲು ಸಾಧ್ಯವಿದ್ದ ಎಲ್ಲ ಪ್ರಯತ್ನ ಮಾಡಿರುವ, 56 ಅಂಗುಲ ಎದೆ ವಿಸ್ತಾರದ ಮನಸ್ಸಿನ ಸಣ್ಣತನ ಬಹಿರಂಗ ಚರ್ಚೆಗೆ ಆಹ್ವಾನ ನೀಡುತ್ತಿದೆ.

ಮೋಕ್ಷಾ ಖಸ್ಮಿ ಖಜುರಿಯಾ ಮೂಲತಃ ಹಿಂದೂ, ಜಮ್ಮು ನಿವಾಸಿ. ವೃತ್ತಿಯಿಂದ ವಕೀಲೆ. ಶ್ರೀನಗರದ ಬಾರ್‍ಜುಲ್ಲಾ ನಿವಾಸಿ ಹಾಗೂ ಉದ್ಯಮಿ ಯಾಸೀರ್ ಸೈಯದ್ ಖಸ್ಮಿ ಅವರೊಂದಿಗೆ ಮದುವೆಯಾಗಿ ಮುಸ್ಲಿಂ ಧರ್ಮವನ್ನು ಒಪ್ಪಿಕೊಂಡಿದ್ದರು.

ಕೊಲಿಜಿಯಂ ಆಯ್ಕೆ
ಜಮ್ಮು-ಕಾಶ್ಮೀರ ಹೈಕೋರ್ಟ್ ಕೊಲಿಜಿಯಂ ಮೋಕ್ಷಾ ಖಸ್ಮಿ ಖಜುರಿಯಾ ಸೇರಿದಂತೆ ಇಬ್ಬರು ವಕೀಲರ ಹೆಸರನ್ನು ಜಮ್ಮು-ಕಾಶ್ಮೀರ ಹೈಕೋರ್ಟ್ ನ್ಯಾಯಮೂರ್ತಿಯ ಹುದ್ದೆಗೆ ನೇಮಿಸಲು ಶಿಫಾರಸು ಮಾಡಿತ್ತು. ಅಕ್ಟೋಬರ್ 15 ರಂದು ನಡೆದ ಸಭೆಯಲ್ಲಿ ಈ ಹೆಸರುಗಳನ್ನು ಸುಪ್ರೀಂಕೋರ್ಟ್ ಕೊಲಿಜಿಯಂ ಅನುಮೋದಿಸಿ, ಕೇಂದ್ರ ಸರ್ಕಾರದ ಒಪ್ಪಿಗೆಗೆ ಕಳುಹಿಸಿತ್ತು.

ಕೇಂದ್ರ ಸರ್ಕಾರದ ತಡೆ
ಈ ಇಬ್ಬರ ಹೆಸರಿಗೆ ಒಪ್ಪಿಗೆ ಸೂಚಿಸದ ಕೇಂದ್ರ ಸರ್ಕಾರ, ಏಕಾಏಕಿಯಾಗಿ ಮೋಕ್ಷಾ ಖಸ್ಮಿ ಖಜುರಿಯಾ ಅವರ ವಾರ್ಷಿಕ ಆದಾಯ ಹೆಚ್ಚಿದೆ ಎಂಬ ಸಬೂಬು ನೀಡಿ ವಿಳಂಬ ಧೋರಣೆ ಅನುಸರಿಸಿತು. ಮೋಕ್ಷಾ ಅಂತರ್ ಧರ್ಮೀಯ ಮದುವೆಯಾಗಿದ್ದಾರೆ ಎಂಬ ಅಂಶಕ್ಕೆ ಪರ್ಯಾಯವಾಗಿ ಆದಾಯ ಹೆಚ್ಚಿದ್ದರ ಬಗ್ಗೆ ಸಂಶಯ ವ್ಯಕ್ತಪಡಿಸಿತ್ತು. ಮಾತ್ರವಲ್ಲ; ಮೋಕ್ಷಾ ಅವರ ಆದಾಯವನ್ನೇ ಪ್ರಮುಖ ಗುರಾಣಿಯಾಗಿಸಿ, ಕೊಲಿಜಿಯಂ ಶಿಫಾರಸುಗಳಿಗೆ ತಡೆಯೊಡ್ಡಿತು.

2012 ರಿಂದ 2016ರವರೆಗೆ ಈ ಮೂರು ವರ್ಷಗಳ ಅವಧಿಯಲ್ಲಿ ಕ್ರಮವಾಗಿ 2.50 ಲಕ್ಷ ರೂ.ಗಳಿಂದ 3.25 ಲಕ್ಷ ರೂ.ಗಳಿತ್ತು. ಆದರೆ, 2016 ಹಾಗೂ 2017-18ರಲ್ಲಿ ಕ್ರಮವಾಗಿ 12 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳಿಗೆ ಆದಾಯ ಹೆಚ್ಚಿದೆ ಎಂಬುದು ಕೇಂದ್ರ ಸರ್ಕಾರದ ಆಕ್ಷೇಪವಾಗಿತ್ತು.

ಕೊಲಿಜಿಯಂ ಪ್ರತಿಕ್ರಿಯೆ
ಮದುವೆ ವಿಷಯಕ್ಕೆ ಸಂಬಂಧಿಸಿದಂತೆ, ಕೋಲಿಜಿಯಂ ಮಾತ್ರ ಅಂತರ್ ಧರ್ಮೀಯ ಮದುವೆ ಅಪರಾಧವೇ? ಎಂದು ಪ್ರತಿಕ್ರಿಯಿಸಿತ್ತು. ಆದಾಯ ಹೆಚ್ಚಳ ವಿಷಯದಲ್ಲಿ ಕೇಂದ್ರ ಸರ್ಕಾರದ ಆರೋಪ ಆಧಾರರಹಿತವಾಗಿದೆ ಎಂದು ಪ್ರತಿಕ್ರಿಯಿಸಿ, ಸರ್ಕಾರದ ತಡೆಯನ್ನು ನಿರ್ಲಕ್ಷಿಸಿ, ಮೋಕ್ಷಾ ಖಸ್ಮಿ ಖಜುರಿಯಾ ಅವರನ್ನು ಜಮ್ಮು-ಕಾಶ್ಮೀರ ಹೈಕೋರ್ಟ್‍ಗೆ ನ್ಯಾಯಾಧೀಶರನ್ನಾಗಿ ನೇಮಿಸಿದೆ.

ಇದೇ ಮೋಕ್ಷಾ ಖಸ್ಮಿ ಖಜುರಿಯಾ, ಜಮ್ಮು-ಕಾಶ್ಮಿರದಲ್ಲಿ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ಸೇವೆ ಸಲ್ಲಿಸಿದ್ದು, ಆ ಸರ್ಕಾರದ ಕಾನೂನು ಸಚಿವ ಅಬ್ದುಲ್ ಹಖ್ ಖಾನ್ ಹಾಗೂ ಅಡ್ವೊಕೇಟ್ ಜನರಲ್ ಜಹಾಂಗೀರ್ ಇಕ್ಬಾಲ್ ಗನೈ ಅವರೊಂದಿಗಿನ ಮನಸ್ತಾಪದ ಹಿನ್ನೆಲೆಯಲ್ಲಿ ಹುದ್ದೆಯನ್ನು ತೊರೆದಿದ್ದರು.

ಪತಿ ಖಸ್ಮಿ ಖಜುರಿಯಾ ಸಹ ಮೆಹಬೂಬಾ ಮುಫ್ತಿ ನೇತೃತ್ವದ ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿಯ ಮುಖಂಡರಾಗಿದ್ದಾರೆ.

ಆಧಾರ: ದಿ ಪ್ರಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...