Homeಮುಖಪುಟಮೋದಿ ಸರ್ಕಾರ ನಿರ್ಲಕ್ಷಿಸಿ ಮುಸ್ಲಿಂ ಮಹಿಳೆಯನ್ನು ಜಡ್ಜ್ ಆಗಿ ನೇಮಿಸಿದ ಸುಪ್ರೀಂ ಕೋರ್ಟ್‌..

ಮೋದಿ ಸರ್ಕಾರ ನಿರ್ಲಕ್ಷಿಸಿ ಮುಸ್ಲಿಂ ಮಹಿಳೆಯನ್ನು ಜಡ್ಜ್ ಆಗಿ ನೇಮಿಸಿದ ಸುಪ್ರೀಂ ಕೋರ್ಟ್‌..

- Advertisement -
- Advertisement -

ಪಾರದರ್ಶಕ ಆಡಳಿತ ನೀಡುವುದಾಗಿ ಗಾಳಿಯಲ್ಲಿ ಕೈ ಬೀಸುತ್ತಾ ಮಾತನಾಡುವ ಪ್ರಧಾನಿ ಮೋದಿ, ನ್ಯಾಯಾಂಗದಲ್ಲೂ ಕೈಯಾಡಿಸಿ ಜಾತಿ-ಧರ್ಮದ ಕೆಸರು ಎಬ್ಬಿಸಿ, ಆಡಳಿತವೆಲ್ಲ ರಾಡಿ ಮಾಡುವ ಇವರ ಮುಖವಾಡ ಬಯಲಾಗಿದೆ. ಸಮಾಧಾನಕರ ಸಂಗತಿ ಎಂದರೆ, ಪ್ರಧಾನಿ ಮೋದಿ ಪ್ರಭಾವಕ್ಕೆ ಮಣಿಯದ ಸುಪ್ರೀಂಕೋರ್ಟ್‍ನ ಕೊಲಿಜಿಯಂ ಮಾತ್ರ ಕೇಂದ್ರ ಸರ್ಕಾರವನ್ನೇ ಪ್ರಶ್ನಿಸಿ, ನ್ಯಾಯಪರತೆಯನ್ನು ಎತ್ತಿ ಹಿಡಿದಿದೆ.

ಹಿಂದೂ ವಕೀಲೆಯೊಬ್ಬರು ಮುಸ್ಲಿಂ ಉದ್ಯಮಿಯನ್ನು ಮದುವೆಯಾಗಿ ಆ ಧರ್ಮದ ಅನುಯಾಯಿಯಾಗಿದ್ದನ್ನು ಸಹಿಸದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಈ ವಕೀಲೆಗೆ ಜಮ್ಮು-ಕಾಶ್ಮೀರ ಹೈಕೋರ್ಟ್ ನ್ಯಾಯಾಧೀರಾಗುವುದನ್ನು ತಪ್ಪಿಸಲು ಸಾಧ್ಯವಿದ್ದ ಎಲ್ಲ ಪ್ರಯತ್ನ ಮಾಡಿರುವ, 56 ಅಂಗುಲ ಎದೆ ವಿಸ್ತಾರದ ಮನಸ್ಸಿನ ಸಣ್ಣತನ ಬಹಿರಂಗ ಚರ್ಚೆಗೆ ಆಹ್ವಾನ ನೀಡುತ್ತಿದೆ.

ಮೋಕ್ಷಾ ಖಸ್ಮಿ ಖಜುರಿಯಾ ಮೂಲತಃ ಹಿಂದೂ, ಜಮ್ಮು ನಿವಾಸಿ. ವೃತ್ತಿಯಿಂದ ವಕೀಲೆ. ಶ್ರೀನಗರದ ಬಾರ್‍ಜುಲ್ಲಾ ನಿವಾಸಿ ಹಾಗೂ ಉದ್ಯಮಿ ಯಾಸೀರ್ ಸೈಯದ್ ಖಸ್ಮಿ ಅವರೊಂದಿಗೆ ಮದುವೆಯಾಗಿ ಮುಸ್ಲಿಂ ಧರ್ಮವನ್ನು ಒಪ್ಪಿಕೊಂಡಿದ್ದರು.

ಕೊಲಿಜಿಯಂ ಆಯ್ಕೆ
ಜಮ್ಮು-ಕಾಶ್ಮೀರ ಹೈಕೋರ್ಟ್ ಕೊಲಿಜಿಯಂ ಮೋಕ್ಷಾ ಖಸ್ಮಿ ಖಜುರಿಯಾ ಸೇರಿದಂತೆ ಇಬ್ಬರು ವಕೀಲರ ಹೆಸರನ್ನು ಜಮ್ಮು-ಕಾಶ್ಮೀರ ಹೈಕೋರ್ಟ್ ನ್ಯಾಯಮೂರ್ತಿಯ ಹುದ್ದೆಗೆ ನೇಮಿಸಲು ಶಿಫಾರಸು ಮಾಡಿತ್ತು. ಅಕ್ಟೋಬರ್ 15 ರಂದು ನಡೆದ ಸಭೆಯಲ್ಲಿ ಈ ಹೆಸರುಗಳನ್ನು ಸುಪ್ರೀಂಕೋರ್ಟ್ ಕೊಲಿಜಿಯಂ ಅನುಮೋದಿಸಿ, ಕೇಂದ್ರ ಸರ್ಕಾರದ ಒಪ್ಪಿಗೆಗೆ ಕಳುಹಿಸಿತ್ತು.

ಕೇಂದ್ರ ಸರ್ಕಾರದ ತಡೆ
ಈ ಇಬ್ಬರ ಹೆಸರಿಗೆ ಒಪ್ಪಿಗೆ ಸೂಚಿಸದ ಕೇಂದ್ರ ಸರ್ಕಾರ, ಏಕಾಏಕಿಯಾಗಿ ಮೋಕ್ಷಾ ಖಸ್ಮಿ ಖಜುರಿಯಾ ಅವರ ವಾರ್ಷಿಕ ಆದಾಯ ಹೆಚ್ಚಿದೆ ಎಂಬ ಸಬೂಬು ನೀಡಿ ವಿಳಂಬ ಧೋರಣೆ ಅನುಸರಿಸಿತು. ಮೋಕ್ಷಾ ಅಂತರ್ ಧರ್ಮೀಯ ಮದುವೆಯಾಗಿದ್ದಾರೆ ಎಂಬ ಅಂಶಕ್ಕೆ ಪರ್ಯಾಯವಾಗಿ ಆದಾಯ ಹೆಚ್ಚಿದ್ದರ ಬಗ್ಗೆ ಸಂಶಯ ವ್ಯಕ್ತಪಡಿಸಿತ್ತು. ಮಾತ್ರವಲ್ಲ; ಮೋಕ್ಷಾ ಅವರ ಆದಾಯವನ್ನೇ ಪ್ರಮುಖ ಗುರಾಣಿಯಾಗಿಸಿ, ಕೊಲಿಜಿಯಂ ಶಿಫಾರಸುಗಳಿಗೆ ತಡೆಯೊಡ್ಡಿತು.

2012 ರಿಂದ 2016ರವರೆಗೆ ಈ ಮೂರು ವರ್ಷಗಳ ಅವಧಿಯಲ್ಲಿ ಕ್ರಮವಾಗಿ 2.50 ಲಕ್ಷ ರೂ.ಗಳಿಂದ 3.25 ಲಕ್ಷ ರೂ.ಗಳಿತ್ತು. ಆದರೆ, 2016 ಹಾಗೂ 2017-18ರಲ್ಲಿ ಕ್ರಮವಾಗಿ 12 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳಿಗೆ ಆದಾಯ ಹೆಚ್ಚಿದೆ ಎಂಬುದು ಕೇಂದ್ರ ಸರ್ಕಾರದ ಆಕ್ಷೇಪವಾಗಿತ್ತು.

ಕೊಲಿಜಿಯಂ ಪ್ರತಿಕ್ರಿಯೆ
ಮದುವೆ ವಿಷಯಕ್ಕೆ ಸಂಬಂಧಿಸಿದಂತೆ, ಕೋಲಿಜಿಯಂ ಮಾತ್ರ ಅಂತರ್ ಧರ್ಮೀಯ ಮದುವೆ ಅಪರಾಧವೇ? ಎಂದು ಪ್ರತಿಕ್ರಿಯಿಸಿತ್ತು. ಆದಾಯ ಹೆಚ್ಚಳ ವಿಷಯದಲ್ಲಿ ಕೇಂದ್ರ ಸರ್ಕಾರದ ಆರೋಪ ಆಧಾರರಹಿತವಾಗಿದೆ ಎಂದು ಪ್ರತಿಕ್ರಿಯಿಸಿ, ಸರ್ಕಾರದ ತಡೆಯನ್ನು ನಿರ್ಲಕ್ಷಿಸಿ, ಮೋಕ್ಷಾ ಖಸ್ಮಿ ಖಜುರಿಯಾ ಅವರನ್ನು ಜಮ್ಮು-ಕಾಶ್ಮೀರ ಹೈಕೋರ್ಟ್‍ಗೆ ನ್ಯಾಯಾಧೀಶರನ್ನಾಗಿ ನೇಮಿಸಿದೆ.

ಇದೇ ಮೋಕ್ಷಾ ಖಸ್ಮಿ ಖಜುರಿಯಾ, ಜಮ್ಮು-ಕಾಶ್ಮಿರದಲ್ಲಿ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ಸೇವೆ ಸಲ್ಲಿಸಿದ್ದು, ಆ ಸರ್ಕಾರದ ಕಾನೂನು ಸಚಿವ ಅಬ್ದುಲ್ ಹಖ್ ಖಾನ್ ಹಾಗೂ ಅಡ್ವೊಕೇಟ್ ಜನರಲ್ ಜಹಾಂಗೀರ್ ಇಕ್ಬಾಲ್ ಗನೈ ಅವರೊಂದಿಗಿನ ಮನಸ್ತಾಪದ ಹಿನ್ನೆಲೆಯಲ್ಲಿ ಹುದ್ದೆಯನ್ನು ತೊರೆದಿದ್ದರು.

ಪತಿ ಖಸ್ಮಿ ಖಜುರಿಯಾ ಸಹ ಮೆಹಬೂಬಾ ಮುಫ್ತಿ ನೇತೃತ್ವದ ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿಯ ಮುಖಂಡರಾಗಿದ್ದಾರೆ.

ಆಧಾರ: ದಿ ಪ್ರಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...