Homeಮುಖಪುಟಮೋದಿ ಸರ್ಕಾರ ನಿರ್ಲಕ್ಷಿಸಿ ಮುಸ್ಲಿಂ ಮಹಿಳೆಯನ್ನು ಜಡ್ಜ್ ಆಗಿ ನೇಮಿಸಿದ ಸುಪ್ರೀಂ ಕೋರ್ಟ್‌..

ಮೋದಿ ಸರ್ಕಾರ ನಿರ್ಲಕ್ಷಿಸಿ ಮುಸ್ಲಿಂ ಮಹಿಳೆಯನ್ನು ಜಡ್ಜ್ ಆಗಿ ನೇಮಿಸಿದ ಸುಪ್ರೀಂ ಕೋರ್ಟ್‌..

- Advertisement -
- Advertisement -

ಪಾರದರ್ಶಕ ಆಡಳಿತ ನೀಡುವುದಾಗಿ ಗಾಳಿಯಲ್ಲಿ ಕೈ ಬೀಸುತ್ತಾ ಮಾತನಾಡುವ ಪ್ರಧಾನಿ ಮೋದಿ, ನ್ಯಾಯಾಂಗದಲ್ಲೂ ಕೈಯಾಡಿಸಿ ಜಾತಿ-ಧರ್ಮದ ಕೆಸರು ಎಬ್ಬಿಸಿ, ಆಡಳಿತವೆಲ್ಲ ರಾಡಿ ಮಾಡುವ ಇವರ ಮುಖವಾಡ ಬಯಲಾಗಿದೆ. ಸಮಾಧಾನಕರ ಸಂಗತಿ ಎಂದರೆ, ಪ್ರಧಾನಿ ಮೋದಿ ಪ್ರಭಾವಕ್ಕೆ ಮಣಿಯದ ಸುಪ್ರೀಂಕೋರ್ಟ್‍ನ ಕೊಲಿಜಿಯಂ ಮಾತ್ರ ಕೇಂದ್ರ ಸರ್ಕಾರವನ್ನೇ ಪ್ರಶ್ನಿಸಿ, ನ್ಯಾಯಪರತೆಯನ್ನು ಎತ್ತಿ ಹಿಡಿದಿದೆ.

ಹಿಂದೂ ವಕೀಲೆಯೊಬ್ಬರು ಮುಸ್ಲಿಂ ಉದ್ಯಮಿಯನ್ನು ಮದುವೆಯಾಗಿ ಆ ಧರ್ಮದ ಅನುಯಾಯಿಯಾಗಿದ್ದನ್ನು ಸಹಿಸದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಈ ವಕೀಲೆಗೆ ಜಮ್ಮು-ಕಾಶ್ಮೀರ ಹೈಕೋರ್ಟ್ ನ್ಯಾಯಾಧೀರಾಗುವುದನ್ನು ತಪ್ಪಿಸಲು ಸಾಧ್ಯವಿದ್ದ ಎಲ್ಲ ಪ್ರಯತ್ನ ಮಾಡಿರುವ, 56 ಅಂಗುಲ ಎದೆ ವಿಸ್ತಾರದ ಮನಸ್ಸಿನ ಸಣ್ಣತನ ಬಹಿರಂಗ ಚರ್ಚೆಗೆ ಆಹ್ವಾನ ನೀಡುತ್ತಿದೆ.

ಮೋಕ್ಷಾ ಖಸ್ಮಿ ಖಜುರಿಯಾ ಮೂಲತಃ ಹಿಂದೂ, ಜಮ್ಮು ನಿವಾಸಿ. ವೃತ್ತಿಯಿಂದ ವಕೀಲೆ. ಶ್ರೀನಗರದ ಬಾರ್‍ಜುಲ್ಲಾ ನಿವಾಸಿ ಹಾಗೂ ಉದ್ಯಮಿ ಯಾಸೀರ್ ಸೈಯದ್ ಖಸ್ಮಿ ಅವರೊಂದಿಗೆ ಮದುವೆಯಾಗಿ ಮುಸ್ಲಿಂ ಧರ್ಮವನ್ನು ಒಪ್ಪಿಕೊಂಡಿದ್ದರು.

ಕೊಲಿಜಿಯಂ ಆಯ್ಕೆ
ಜಮ್ಮು-ಕಾಶ್ಮೀರ ಹೈಕೋರ್ಟ್ ಕೊಲಿಜಿಯಂ ಮೋಕ್ಷಾ ಖಸ್ಮಿ ಖಜುರಿಯಾ ಸೇರಿದಂತೆ ಇಬ್ಬರು ವಕೀಲರ ಹೆಸರನ್ನು ಜಮ್ಮು-ಕಾಶ್ಮೀರ ಹೈಕೋರ್ಟ್ ನ್ಯಾಯಮೂರ್ತಿಯ ಹುದ್ದೆಗೆ ನೇಮಿಸಲು ಶಿಫಾರಸು ಮಾಡಿತ್ತು. ಅಕ್ಟೋಬರ್ 15 ರಂದು ನಡೆದ ಸಭೆಯಲ್ಲಿ ಈ ಹೆಸರುಗಳನ್ನು ಸುಪ್ರೀಂಕೋರ್ಟ್ ಕೊಲಿಜಿಯಂ ಅನುಮೋದಿಸಿ, ಕೇಂದ್ರ ಸರ್ಕಾರದ ಒಪ್ಪಿಗೆಗೆ ಕಳುಹಿಸಿತ್ತು.

ಕೇಂದ್ರ ಸರ್ಕಾರದ ತಡೆ
ಈ ಇಬ್ಬರ ಹೆಸರಿಗೆ ಒಪ್ಪಿಗೆ ಸೂಚಿಸದ ಕೇಂದ್ರ ಸರ್ಕಾರ, ಏಕಾಏಕಿಯಾಗಿ ಮೋಕ್ಷಾ ಖಸ್ಮಿ ಖಜುರಿಯಾ ಅವರ ವಾರ್ಷಿಕ ಆದಾಯ ಹೆಚ್ಚಿದೆ ಎಂಬ ಸಬೂಬು ನೀಡಿ ವಿಳಂಬ ಧೋರಣೆ ಅನುಸರಿಸಿತು. ಮೋಕ್ಷಾ ಅಂತರ್ ಧರ್ಮೀಯ ಮದುವೆಯಾಗಿದ್ದಾರೆ ಎಂಬ ಅಂಶಕ್ಕೆ ಪರ್ಯಾಯವಾಗಿ ಆದಾಯ ಹೆಚ್ಚಿದ್ದರ ಬಗ್ಗೆ ಸಂಶಯ ವ್ಯಕ್ತಪಡಿಸಿತ್ತು. ಮಾತ್ರವಲ್ಲ; ಮೋಕ್ಷಾ ಅವರ ಆದಾಯವನ್ನೇ ಪ್ರಮುಖ ಗುರಾಣಿಯಾಗಿಸಿ, ಕೊಲಿಜಿಯಂ ಶಿಫಾರಸುಗಳಿಗೆ ತಡೆಯೊಡ್ಡಿತು.

2012 ರಿಂದ 2016ರವರೆಗೆ ಈ ಮೂರು ವರ್ಷಗಳ ಅವಧಿಯಲ್ಲಿ ಕ್ರಮವಾಗಿ 2.50 ಲಕ್ಷ ರೂ.ಗಳಿಂದ 3.25 ಲಕ್ಷ ರೂ.ಗಳಿತ್ತು. ಆದರೆ, 2016 ಹಾಗೂ 2017-18ರಲ್ಲಿ ಕ್ರಮವಾಗಿ 12 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳಿಗೆ ಆದಾಯ ಹೆಚ್ಚಿದೆ ಎಂಬುದು ಕೇಂದ್ರ ಸರ್ಕಾರದ ಆಕ್ಷೇಪವಾಗಿತ್ತು.

ಕೊಲಿಜಿಯಂ ಪ್ರತಿಕ್ರಿಯೆ
ಮದುವೆ ವಿಷಯಕ್ಕೆ ಸಂಬಂಧಿಸಿದಂತೆ, ಕೋಲಿಜಿಯಂ ಮಾತ್ರ ಅಂತರ್ ಧರ್ಮೀಯ ಮದುವೆ ಅಪರಾಧವೇ? ಎಂದು ಪ್ರತಿಕ್ರಿಯಿಸಿತ್ತು. ಆದಾಯ ಹೆಚ್ಚಳ ವಿಷಯದಲ್ಲಿ ಕೇಂದ್ರ ಸರ್ಕಾರದ ಆರೋಪ ಆಧಾರರಹಿತವಾಗಿದೆ ಎಂದು ಪ್ರತಿಕ್ರಿಯಿಸಿ, ಸರ್ಕಾರದ ತಡೆಯನ್ನು ನಿರ್ಲಕ್ಷಿಸಿ, ಮೋಕ್ಷಾ ಖಸ್ಮಿ ಖಜುರಿಯಾ ಅವರನ್ನು ಜಮ್ಮು-ಕಾಶ್ಮೀರ ಹೈಕೋರ್ಟ್‍ಗೆ ನ್ಯಾಯಾಧೀಶರನ್ನಾಗಿ ನೇಮಿಸಿದೆ.

ಇದೇ ಮೋಕ್ಷಾ ಖಸ್ಮಿ ಖಜುರಿಯಾ, ಜಮ್ಮು-ಕಾಶ್ಮಿರದಲ್ಲಿ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ಸೇವೆ ಸಲ್ಲಿಸಿದ್ದು, ಆ ಸರ್ಕಾರದ ಕಾನೂನು ಸಚಿವ ಅಬ್ದುಲ್ ಹಖ್ ಖಾನ್ ಹಾಗೂ ಅಡ್ವೊಕೇಟ್ ಜನರಲ್ ಜಹಾಂಗೀರ್ ಇಕ್ಬಾಲ್ ಗನೈ ಅವರೊಂದಿಗಿನ ಮನಸ್ತಾಪದ ಹಿನ್ನೆಲೆಯಲ್ಲಿ ಹುದ್ದೆಯನ್ನು ತೊರೆದಿದ್ದರು.

ಪತಿ ಖಸ್ಮಿ ಖಜುರಿಯಾ ಸಹ ಮೆಹಬೂಬಾ ಮುಫ್ತಿ ನೇತೃತ್ವದ ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿಯ ಮುಖಂಡರಾಗಿದ್ದಾರೆ.

ಆಧಾರ: ದಿ ಪ್ರಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...