Homeಮುಖಪುಟಮೋದಿ ಸರ್ಕಾರ ನಿರ್ಲಕ್ಷಿಸಿ ಮುಸ್ಲಿಂ ಮಹಿಳೆಯನ್ನು ಜಡ್ಜ್ ಆಗಿ ನೇಮಿಸಿದ ಸುಪ್ರೀಂ ಕೋರ್ಟ್‌..

ಮೋದಿ ಸರ್ಕಾರ ನಿರ್ಲಕ್ಷಿಸಿ ಮುಸ್ಲಿಂ ಮಹಿಳೆಯನ್ನು ಜಡ್ಜ್ ಆಗಿ ನೇಮಿಸಿದ ಸುಪ್ರೀಂ ಕೋರ್ಟ್‌..

- Advertisement -
- Advertisement -

ಪಾರದರ್ಶಕ ಆಡಳಿತ ನೀಡುವುದಾಗಿ ಗಾಳಿಯಲ್ಲಿ ಕೈ ಬೀಸುತ್ತಾ ಮಾತನಾಡುವ ಪ್ರಧಾನಿ ಮೋದಿ, ನ್ಯಾಯಾಂಗದಲ್ಲೂ ಕೈಯಾಡಿಸಿ ಜಾತಿ-ಧರ್ಮದ ಕೆಸರು ಎಬ್ಬಿಸಿ, ಆಡಳಿತವೆಲ್ಲ ರಾಡಿ ಮಾಡುವ ಇವರ ಮುಖವಾಡ ಬಯಲಾಗಿದೆ. ಸಮಾಧಾನಕರ ಸಂಗತಿ ಎಂದರೆ, ಪ್ರಧಾನಿ ಮೋದಿ ಪ್ರಭಾವಕ್ಕೆ ಮಣಿಯದ ಸುಪ್ರೀಂಕೋರ್ಟ್‍ನ ಕೊಲಿಜಿಯಂ ಮಾತ್ರ ಕೇಂದ್ರ ಸರ್ಕಾರವನ್ನೇ ಪ್ರಶ್ನಿಸಿ, ನ್ಯಾಯಪರತೆಯನ್ನು ಎತ್ತಿ ಹಿಡಿದಿದೆ.

ಹಿಂದೂ ವಕೀಲೆಯೊಬ್ಬರು ಮುಸ್ಲಿಂ ಉದ್ಯಮಿಯನ್ನು ಮದುವೆಯಾಗಿ ಆ ಧರ್ಮದ ಅನುಯಾಯಿಯಾಗಿದ್ದನ್ನು ಸಹಿಸದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಈ ವಕೀಲೆಗೆ ಜಮ್ಮು-ಕಾಶ್ಮೀರ ಹೈಕೋರ್ಟ್ ನ್ಯಾಯಾಧೀರಾಗುವುದನ್ನು ತಪ್ಪಿಸಲು ಸಾಧ್ಯವಿದ್ದ ಎಲ್ಲ ಪ್ರಯತ್ನ ಮಾಡಿರುವ, 56 ಅಂಗುಲ ಎದೆ ವಿಸ್ತಾರದ ಮನಸ್ಸಿನ ಸಣ್ಣತನ ಬಹಿರಂಗ ಚರ್ಚೆಗೆ ಆಹ್ವಾನ ನೀಡುತ್ತಿದೆ.

ಮೋಕ್ಷಾ ಖಸ್ಮಿ ಖಜುರಿಯಾ ಮೂಲತಃ ಹಿಂದೂ, ಜಮ್ಮು ನಿವಾಸಿ. ವೃತ್ತಿಯಿಂದ ವಕೀಲೆ. ಶ್ರೀನಗರದ ಬಾರ್‍ಜುಲ್ಲಾ ನಿವಾಸಿ ಹಾಗೂ ಉದ್ಯಮಿ ಯಾಸೀರ್ ಸೈಯದ್ ಖಸ್ಮಿ ಅವರೊಂದಿಗೆ ಮದುವೆಯಾಗಿ ಮುಸ್ಲಿಂ ಧರ್ಮವನ್ನು ಒಪ್ಪಿಕೊಂಡಿದ್ದರು.

ಕೊಲಿಜಿಯಂ ಆಯ್ಕೆ
ಜಮ್ಮು-ಕಾಶ್ಮೀರ ಹೈಕೋರ್ಟ್ ಕೊಲಿಜಿಯಂ ಮೋಕ್ಷಾ ಖಸ್ಮಿ ಖಜುರಿಯಾ ಸೇರಿದಂತೆ ಇಬ್ಬರು ವಕೀಲರ ಹೆಸರನ್ನು ಜಮ್ಮು-ಕಾಶ್ಮೀರ ಹೈಕೋರ್ಟ್ ನ್ಯಾಯಮೂರ್ತಿಯ ಹುದ್ದೆಗೆ ನೇಮಿಸಲು ಶಿಫಾರಸು ಮಾಡಿತ್ತು. ಅಕ್ಟೋಬರ್ 15 ರಂದು ನಡೆದ ಸಭೆಯಲ್ಲಿ ಈ ಹೆಸರುಗಳನ್ನು ಸುಪ್ರೀಂಕೋರ್ಟ್ ಕೊಲಿಜಿಯಂ ಅನುಮೋದಿಸಿ, ಕೇಂದ್ರ ಸರ್ಕಾರದ ಒಪ್ಪಿಗೆಗೆ ಕಳುಹಿಸಿತ್ತು.

ಕೇಂದ್ರ ಸರ್ಕಾರದ ತಡೆ
ಈ ಇಬ್ಬರ ಹೆಸರಿಗೆ ಒಪ್ಪಿಗೆ ಸೂಚಿಸದ ಕೇಂದ್ರ ಸರ್ಕಾರ, ಏಕಾಏಕಿಯಾಗಿ ಮೋಕ್ಷಾ ಖಸ್ಮಿ ಖಜುರಿಯಾ ಅವರ ವಾರ್ಷಿಕ ಆದಾಯ ಹೆಚ್ಚಿದೆ ಎಂಬ ಸಬೂಬು ನೀಡಿ ವಿಳಂಬ ಧೋರಣೆ ಅನುಸರಿಸಿತು. ಮೋಕ್ಷಾ ಅಂತರ್ ಧರ್ಮೀಯ ಮದುವೆಯಾಗಿದ್ದಾರೆ ಎಂಬ ಅಂಶಕ್ಕೆ ಪರ್ಯಾಯವಾಗಿ ಆದಾಯ ಹೆಚ್ಚಿದ್ದರ ಬಗ್ಗೆ ಸಂಶಯ ವ್ಯಕ್ತಪಡಿಸಿತ್ತು. ಮಾತ್ರವಲ್ಲ; ಮೋಕ್ಷಾ ಅವರ ಆದಾಯವನ್ನೇ ಪ್ರಮುಖ ಗುರಾಣಿಯಾಗಿಸಿ, ಕೊಲಿಜಿಯಂ ಶಿಫಾರಸುಗಳಿಗೆ ತಡೆಯೊಡ್ಡಿತು.

2012 ರಿಂದ 2016ರವರೆಗೆ ಈ ಮೂರು ವರ್ಷಗಳ ಅವಧಿಯಲ್ಲಿ ಕ್ರಮವಾಗಿ 2.50 ಲಕ್ಷ ರೂ.ಗಳಿಂದ 3.25 ಲಕ್ಷ ರೂ.ಗಳಿತ್ತು. ಆದರೆ, 2016 ಹಾಗೂ 2017-18ರಲ್ಲಿ ಕ್ರಮವಾಗಿ 12 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳಿಗೆ ಆದಾಯ ಹೆಚ್ಚಿದೆ ಎಂಬುದು ಕೇಂದ್ರ ಸರ್ಕಾರದ ಆಕ್ಷೇಪವಾಗಿತ್ತು.

ಕೊಲಿಜಿಯಂ ಪ್ರತಿಕ್ರಿಯೆ
ಮದುವೆ ವಿಷಯಕ್ಕೆ ಸಂಬಂಧಿಸಿದಂತೆ, ಕೋಲಿಜಿಯಂ ಮಾತ್ರ ಅಂತರ್ ಧರ್ಮೀಯ ಮದುವೆ ಅಪರಾಧವೇ? ಎಂದು ಪ್ರತಿಕ್ರಿಯಿಸಿತ್ತು. ಆದಾಯ ಹೆಚ್ಚಳ ವಿಷಯದಲ್ಲಿ ಕೇಂದ್ರ ಸರ್ಕಾರದ ಆರೋಪ ಆಧಾರರಹಿತವಾಗಿದೆ ಎಂದು ಪ್ರತಿಕ್ರಿಯಿಸಿ, ಸರ್ಕಾರದ ತಡೆಯನ್ನು ನಿರ್ಲಕ್ಷಿಸಿ, ಮೋಕ್ಷಾ ಖಸ್ಮಿ ಖಜುರಿಯಾ ಅವರನ್ನು ಜಮ್ಮು-ಕಾಶ್ಮೀರ ಹೈಕೋರ್ಟ್‍ಗೆ ನ್ಯಾಯಾಧೀಶರನ್ನಾಗಿ ನೇಮಿಸಿದೆ.

ಇದೇ ಮೋಕ್ಷಾ ಖಸ್ಮಿ ಖಜುರಿಯಾ, ಜಮ್ಮು-ಕಾಶ್ಮಿರದಲ್ಲಿ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ಸೇವೆ ಸಲ್ಲಿಸಿದ್ದು, ಆ ಸರ್ಕಾರದ ಕಾನೂನು ಸಚಿವ ಅಬ್ದುಲ್ ಹಖ್ ಖಾನ್ ಹಾಗೂ ಅಡ್ವೊಕೇಟ್ ಜನರಲ್ ಜಹಾಂಗೀರ್ ಇಕ್ಬಾಲ್ ಗನೈ ಅವರೊಂದಿಗಿನ ಮನಸ್ತಾಪದ ಹಿನ್ನೆಲೆಯಲ್ಲಿ ಹುದ್ದೆಯನ್ನು ತೊರೆದಿದ್ದರು.

ಪತಿ ಖಸ್ಮಿ ಖಜುರಿಯಾ ಸಹ ಮೆಹಬೂಬಾ ಮುಫ್ತಿ ನೇತೃತ್ವದ ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿಯ ಮುಖಂಡರಾಗಿದ್ದಾರೆ.

ಆಧಾರ: ದಿ ಪ್ರಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...