Homeಮುಖಪುಟಮೋದಿ ಸರ್ಕಾರ ನಿರ್ಲಕ್ಷಿಸಿ ಮುಸ್ಲಿಂ ಮಹಿಳೆಯನ್ನು ಜಡ್ಜ್ ಆಗಿ ನೇಮಿಸಿದ ಸುಪ್ರೀಂ ಕೋರ್ಟ್‌..

ಮೋದಿ ಸರ್ಕಾರ ನಿರ್ಲಕ್ಷಿಸಿ ಮುಸ್ಲಿಂ ಮಹಿಳೆಯನ್ನು ಜಡ್ಜ್ ಆಗಿ ನೇಮಿಸಿದ ಸುಪ್ರೀಂ ಕೋರ್ಟ್‌..

- Advertisement -
- Advertisement -

ಪಾರದರ್ಶಕ ಆಡಳಿತ ನೀಡುವುದಾಗಿ ಗಾಳಿಯಲ್ಲಿ ಕೈ ಬೀಸುತ್ತಾ ಮಾತನಾಡುವ ಪ್ರಧಾನಿ ಮೋದಿ, ನ್ಯಾಯಾಂಗದಲ್ಲೂ ಕೈಯಾಡಿಸಿ ಜಾತಿ-ಧರ್ಮದ ಕೆಸರು ಎಬ್ಬಿಸಿ, ಆಡಳಿತವೆಲ್ಲ ರಾಡಿ ಮಾಡುವ ಇವರ ಮುಖವಾಡ ಬಯಲಾಗಿದೆ. ಸಮಾಧಾನಕರ ಸಂಗತಿ ಎಂದರೆ, ಪ್ರಧಾನಿ ಮೋದಿ ಪ್ರಭಾವಕ್ಕೆ ಮಣಿಯದ ಸುಪ್ರೀಂಕೋರ್ಟ್‍ನ ಕೊಲಿಜಿಯಂ ಮಾತ್ರ ಕೇಂದ್ರ ಸರ್ಕಾರವನ್ನೇ ಪ್ರಶ್ನಿಸಿ, ನ್ಯಾಯಪರತೆಯನ್ನು ಎತ್ತಿ ಹಿಡಿದಿದೆ.

ಹಿಂದೂ ವಕೀಲೆಯೊಬ್ಬರು ಮುಸ್ಲಿಂ ಉದ್ಯಮಿಯನ್ನು ಮದುವೆಯಾಗಿ ಆ ಧರ್ಮದ ಅನುಯಾಯಿಯಾಗಿದ್ದನ್ನು ಸಹಿಸದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಈ ವಕೀಲೆಗೆ ಜಮ್ಮು-ಕಾಶ್ಮೀರ ಹೈಕೋರ್ಟ್ ನ್ಯಾಯಾಧೀರಾಗುವುದನ್ನು ತಪ್ಪಿಸಲು ಸಾಧ್ಯವಿದ್ದ ಎಲ್ಲ ಪ್ರಯತ್ನ ಮಾಡಿರುವ, 56 ಅಂಗುಲ ಎದೆ ವಿಸ್ತಾರದ ಮನಸ್ಸಿನ ಸಣ್ಣತನ ಬಹಿರಂಗ ಚರ್ಚೆಗೆ ಆಹ್ವಾನ ನೀಡುತ್ತಿದೆ.

ಮೋಕ್ಷಾ ಖಸ್ಮಿ ಖಜುರಿಯಾ ಮೂಲತಃ ಹಿಂದೂ, ಜಮ್ಮು ನಿವಾಸಿ. ವೃತ್ತಿಯಿಂದ ವಕೀಲೆ. ಶ್ರೀನಗರದ ಬಾರ್‍ಜುಲ್ಲಾ ನಿವಾಸಿ ಹಾಗೂ ಉದ್ಯಮಿ ಯಾಸೀರ್ ಸೈಯದ್ ಖಸ್ಮಿ ಅವರೊಂದಿಗೆ ಮದುವೆಯಾಗಿ ಮುಸ್ಲಿಂ ಧರ್ಮವನ್ನು ಒಪ್ಪಿಕೊಂಡಿದ್ದರು.

ಕೊಲಿಜಿಯಂ ಆಯ್ಕೆ
ಜಮ್ಮು-ಕಾಶ್ಮೀರ ಹೈಕೋರ್ಟ್ ಕೊಲಿಜಿಯಂ ಮೋಕ್ಷಾ ಖಸ್ಮಿ ಖಜುರಿಯಾ ಸೇರಿದಂತೆ ಇಬ್ಬರು ವಕೀಲರ ಹೆಸರನ್ನು ಜಮ್ಮು-ಕಾಶ್ಮೀರ ಹೈಕೋರ್ಟ್ ನ್ಯಾಯಮೂರ್ತಿಯ ಹುದ್ದೆಗೆ ನೇಮಿಸಲು ಶಿಫಾರಸು ಮಾಡಿತ್ತು. ಅಕ್ಟೋಬರ್ 15 ರಂದು ನಡೆದ ಸಭೆಯಲ್ಲಿ ಈ ಹೆಸರುಗಳನ್ನು ಸುಪ್ರೀಂಕೋರ್ಟ್ ಕೊಲಿಜಿಯಂ ಅನುಮೋದಿಸಿ, ಕೇಂದ್ರ ಸರ್ಕಾರದ ಒಪ್ಪಿಗೆಗೆ ಕಳುಹಿಸಿತ್ತು.

ಕೇಂದ್ರ ಸರ್ಕಾರದ ತಡೆ
ಈ ಇಬ್ಬರ ಹೆಸರಿಗೆ ಒಪ್ಪಿಗೆ ಸೂಚಿಸದ ಕೇಂದ್ರ ಸರ್ಕಾರ, ಏಕಾಏಕಿಯಾಗಿ ಮೋಕ್ಷಾ ಖಸ್ಮಿ ಖಜುರಿಯಾ ಅವರ ವಾರ್ಷಿಕ ಆದಾಯ ಹೆಚ್ಚಿದೆ ಎಂಬ ಸಬೂಬು ನೀಡಿ ವಿಳಂಬ ಧೋರಣೆ ಅನುಸರಿಸಿತು. ಮೋಕ್ಷಾ ಅಂತರ್ ಧರ್ಮೀಯ ಮದುವೆಯಾಗಿದ್ದಾರೆ ಎಂಬ ಅಂಶಕ್ಕೆ ಪರ್ಯಾಯವಾಗಿ ಆದಾಯ ಹೆಚ್ಚಿದ್ದರ ಬಗ್ಗೆ ಸಂಶಯ ವ್ಯಕ್ತಪಡಿಸಿತ್ತು. ಮಾತ್ರವಲ್ಲ; ಮೋಕ್ಷಾ ಅವರ ಆದಾಯವನ್ನೇ ಪ್ರಮುಖ ಗುರಾಣಿಯಾಗಿಸಿ, ಕೊಲಿಜಿಯಂ ಶಿಫಾರಸುಗಳಿಗೆ ತಡೆಯೊಡ್ಡಿತು.

2012 ರಿಂದ 2016ರವರೆಗೆ ಈ ಮೂರು ವರ್ಷಗಳ ಅವಧಿಯಲ್ಲಿ ಕ್ರಮವಾಗಿ 2.50 ಲಕ್ಷ ರೂ.ಗಳಿಂದ 3.25 ಲಕ್ಷ ರೂ.ಗಳಿತ್ತು. ಆದರೆ, 2016 ಹಾಗೂ 2017-18ರಲ್ಲಿ ಕ್ರಮವಾಗಿ 12 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳಿಗೆ ಆದಾಯ ಹೆಚ್ಚಿದೆ ಎಂಬುದು ಕೇಂದ್ರ ಸರ್ಕಾರದ ಆಕ್ಷೇಪವಾಗಿತ್ತು.

ಕೊಲಿಜಿಯಂ ಪ್ರತಿಕ್ರಿಯೆ
ಮದುವೆ ವಿಷಯಕ್ಕೆ ಸಂಬಂಧಿಸಿದಂತೆ, ಕೋಲಿಜಿಯಂ ಮಾತ್ರ ಅಂತರ್ ಧರ್ಮೀಯ ಮದುವೆ ಅಪರಾಧವೇ? ಎಂದು ಪ್ರತಿಕ್ರಿಯಿಸಿತ್ತು. ಆದಾಯ ಹೆಚ್ಚಳ ವಿಷಯದಲ್ಲಿ ಕೇಂದ್ರ ಸರ್ಕಾರದ ಆರೋಪ ಆಧಾರರಹಿತವಾಗಿದೆ ಎಂದು ಪ್ರತಿಕ್ರಿಯಿಸಿ, ಸರ್ಕಾರದ ತಡೆಯನ್ನು ನಿರ್ಲಕ್ಷಿಸಿ, ಮೋಕ್ಷಾ ಖಸ್ಮಿ ಖಜುರಿಯಾ ಅವರನ್ನು ಜಮ್ಮು-ಕಾಶ್ಮೀರ ಹೈಕೋರ್ಟ್‍ಗೆ ನ್ಯಾಯಾಧೀಶರನ್ನಾಗಿ ನೇಮಿಸಿದೆ.

ಇದೇ ಮೋಕ್ಷಾ ಖಸ್ಮಿ ಖಜುರಿಯಾ, ಜಮ್ಮು-ಕಾಶ್ಮಿರದಲ್ಲಿ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ಸೇವೆ ಸಲ್ಲಿಸಿದ್ದು, ಆ ಸರ್ಕಾರದ ಕಾನೂನು ಸಚಿವ ಅಬ್ದುಲ್ ಹಖ್ ಖಾನ್ ಹಾಗೂ ಅಡ್ವೊಕೇಟ್ ಜನರಲ್ ಜಹಾಂಗೀರ್ ಇಕ್ಬಾಲ್ ಗನೈ ಅವರೊಂದಿಗಿನ ಮನಸ್ತಾಪದ ಹಿನ್ನೆಲೆಯಲ್ಲಿ ಹುದ್ದೆಯನ್ನು ತೊರೆದಿದ್ದರು.

ಪತಿ ಖಸ್ಮಿ ಖಜುರಿಯಾ ಸಹ ಮೆಹಬೂಬಾ ಮುಫ್ತಿ ನೇತೃತ್ವದ ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿಯ ಮುಖಂಡರಾಗಿದ್ದಾರೆ.

ಆಧಾರ: ದಿ ಪ್ರಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...