Homeಕವನಮೊಳಗುತ್ತಿದೆ ಸೈರನ್! : ಶಂಕರ್ ಸಿಹಿಮೊಗೆಯವರ ಕವನ

ಮೊಳಗುತ್ತಿದೆ ಸೈರನ್! : ಶಂಕರ್ ಸಿಹಿಮೊಗೆಯವರ ಕವನ

- Advertisement -
- Advertisement -

ಮೊಳಗುತ್ತಿದೆ ಸೈರನ್!

ನಾನು
ಅಂದೇ ಹೇಳಿದ್ದೆ!
ಕಿರೀಟ ತೊಟ್ಟವರ ನಂಬದಿರಿ ಎಂದು!
ಜೀವ ಹಿಂಡುವ ರಕ್ತ ಹೀರುವ ಮಂದಿ
ನಮ್ಮ ನಿಮ್ಮಂತೆ ಬರುವುದಿಲ್ಲ!
ಕಿರೀಟ ತೊಟ್ಟಿಯೇ ಬರುತ್ತಾರೆ!
ಥೇಟ್ ಈಗ ಬಂದಿರುವ
ಅರೆಜೀವಿಯಂತೆ!
ಪೀಠವಿಲ್ಲದ ಅರಮನೆಯಲ್ಲಿ
ಕಿರೀಟಿ ರಾಜನದ್ದೆ ಆರ್ಭಟ
ನಿರ್ಗತಿಕ ವಲಸೆಗಾರರ ಬಡವರ
ಕೂಳಿಗೂ ಗತಿ ಇಲ್ಲ!
ಮಂದಗತಿಯ ಮೂರ್ಖ ರಾಜನಿಗೆ
ಕೇಳುವವರು ಯಾರು?
ಅಯ್ಯೋ ಹೇಳುವವರು ಯಾರು?
ಎಂದು ಗೊರವಂಕ ಕೂಗುತ್ತಿರುವಾಗ
ಗಲ್ಲಿಗಲ್ಲಿಗಳ ರಸ್ತೆಗಳಲ್ಲಿ
ಒಣಗಿ ಉದುರಿದ ಎಲೆಗಳ ತಳಗಳಲ್ಲಿ
ಹುಳದಂತೆ ಜನರು ಸಾಯುತ್ತಿರುವ ದೃಶ್ಯವನ್ನು
ತದೇಕ ಚಿತ್ತದಿಂದ ಕಂಬಳಿ ಹುಳುವೊಂದು
ಬರೆದು ದಾಖಲು ಮಾಡುತ್ತಿತ್ತು
“ಯಕಶ್ಚಿತ್ ಕಣ್ಣಿಗೆ ಕಾಣದ
ಅರೆಜೀವಿಯೊಂದರಿಂದ
ಮನುಷ್ಯರು ಉಸಿರುಗಟ್ಟಿ
ಸಾಯುತ್ತಿದ್ದಾರೆ ಅಯ್ಯೋ
ಮನುಷ್ಯರು ಉಸಿರುಗಟ್ಟಿ
ಸಾಯುತ್ತಿದ್ದಾರೆ”

ಮರದ ಮೇಲೆ ಕೂತ ಹಕ್ಕಿ
ಅಯ್ಯೋ ಅಯ್ಯೋ ಈ ಮನುಷ್ಯರಿಗೆ ಏನಾಗಿದೆ?
ಯಾಕ್ಹೀಗೆ ಮುಖಕ್ಕೆ ಮುಸುಕು ಹಾಕಿಕೊಂಡಿದ್ದಾರೆ!
ಕಲ್ಲು ಹೊಡೆಯುತ್ತಿದ್ದ ಕೈಗಳೇ ಕಾಣುತ್ತಿಲ್ಲವಲ್ಲ!
ಎಂದು ವ್ಯಂಗ್ಯವಾಗಿ ಚರಮಗೀತೆಯ ಹಾಡುತ್ತಿತ್ತು!
ಬೆಕ್ಕು, ನಾಯಿ, ಇರುವೆ ಮತ್ತು ಕೋಳಿ ಮಾತನಾಡಿಕೊಳ್ಳುತ್ತಿದ್ದವು!
ನೋಡಿದೆಯ ಬೆಕ್ಕಣ್ಣ
‘ನಮ್ಮ ಕುತ್ತಿಗೆಗೆ ಹಗ್ಗ ಜಡಿದು ಮೂಲೆಗೆ ಕಟ್ಟುತ್ತಿದ್ದ
ಈ ಮನುಷ್ಯರ ಪಾಡು ಇಂದು ಈಗ ಏನಾಗಿದೆಯೆಂದು?
ಕಾಲಕ್ಕೆ ಬೆಲೆ ಕಟ್ಟುವರುಂಟೆ?
ಕೆಲಸವಿಲ್ಲದ ಯುವಕರ ಗೋಣು
ನೇಣು ಕುಣಿಕೆಗೆ ಅಯ್ಯೋ ನೋಡಲಾಗುತ್ತಿಲ್ಲ!
ಕೆಲಸವೇ ಸಿಗುತ್ತಿಲ್ಲ!
ಗುಳೆ ಬಂದವರ ಪಾಡು
ಅವರ ಹಸಿವು ಯಾರಿಗೂ ಬೇಡ!’
ಎಂದು ಬೊಗಳಿತು ನಾಯಿ!
ಹೌದಣ್ಣ ಹೌದು
‘ತೋಳಕ್ಕೆ ಸಿಂಹದ ಬಣ್ಣ
ನಾಯಕನ ಬಣ್ಣ ಬಳಿದರೆ
ಎಷ್ಟು ದಿನ ತಾನೇ ಉಳಿದೀತು?
ಮಳೆ ಬಂದಾಗ ಕರಗಿ
ಬಿಸಿಲು ಹೆಚ್ಚಾದಾಗ ಒಣಗಿ
ಹೋಗಲೇಬೇಕಲ್ಲ!
ರಾಜನ ಸತ್ಯದ ಮಿಥ್ಯವು ಜನರಿಗೆ ತಿಳಿಯಲೆ ಬೇಕಲ್ಲ!
ಕ್ಕೊ ಕ್ಕೊ ಕ್ಕೊ ಎಂದು ಕೂಗಿತು ಕೋಳಿ!

ನಂಟು ಗಂಟಿನ ಹಂಗಿನೊಳಗೆ ಯಾವ
ಸಾಂಕ್ರಾಮಿಕ ರೋಗ ಬಂದರೇನು?
ಮನುಷ್ಯ ಬದಲಾಗುವನೇ?
ಇಲ್ಲ ಅವನು ಬದಲಾಗುವುದೇ ಇಲ್ಲ!
ಜಿಡ್ಡುಗಟ್ಟಿದೆ ಮೆದುಳು
ಮದ ಮತ್ಸರ ಮೋಹ ಸ್ವಾರ್ಥದಿಂದ!
ಹಸಿದ ಹೊಟ್ಟೆಗೆ ಅನ್ನ ಇಕ್ಕುವವರಿಲ್ಲ!
ತಿನ್ನುವವರು ರೋಗದ ಹೆಸರಿನಲ್ಲಿ
ಮತ್ತಷ್ಟು ಮಗದಷ್ಟು ತಿನ್ನುತ್ತಲೆ ಇದ್ದಾರೆ!
ಸಾಯುವವರು ಮಾತ್ರ ಸಾಯುತ್ತಲೆ ಇದ್ದಾರೆ!
ಇದಕ್ಕೆ ಕೊನೆ ಎಲ್ಲಿದೆ ಇಲ್ಲಿ?
ಎಂದು ಬುಸುಗುಟ್ಟಿತು ಹಾವು ಪೊಟರೆಯಲಿ!

ಕಾಲದ ಮೃಗ ಓಡುತ್ತಿದೆ ಓಡುತ್ತಿದೆ
ತನ್ನ ಬೆನ್ನ ತಾನೇ ಕಾಣದಂತೆ!
ಮೃಗ ಖಗಗಳು ವ್ಯಂಗ್ಯವಾಡುತ್ತಿವೆ!
ಅಪರೂಪಕ್ಕೆ ಕೇಳುತ್ತಿದ್ದ
ಆ್ಯಂಬುಲೆನ್ಸಿನ ಸೈರನ್ ಸದ್ದು
ಈಗ ನಿತ್ಯದ ಮಂತ್ರವಾಗಿದೆ!
ರಾಮ ಮಂದಿರದ ಭಜನೆಯಂತೆ
ಭಗವದ್ಗೀತೆಯ ಶ್ಲೋಕದಂತೆ!
ಅಲ್ಲಾವುವಿನ ಆದೇಶದಂತೆ
ಕುರಾನಿನ ವಚನದಂತೆ!
ಶಿಲುಬೆ ಮೇಲಿನ ಅಹಿಂಸಾ ಮೂರ್ತಿಯಂತೆ
ಬೈಬಲ್ಲಿನ ವಾಣಿಯಂತೆ!
ಬುದ್ಧನ ಉಪದೇಶದಂತೆ
ಹೊರಗೆ ಹೆಜ್ಜೆ ಇಟ್ಟರೆ ಸಾಕು ಸೈರನ್ ‌ಮೊಳಗುತ್ತಿದೆ
‘ಎಚ್ಚರ‌ ಮನುಷ್ಯ ಎಚ್ಚರ
ನಿನಗಿನ್ನೂ ಬಹಳ ಸಮಯವಿದೆ ಬದಲಾಗು’ ಎಂದು!

ಶಂಕರ್ ಸಿಹಿಮೊಗೆ

(ಮೂಲತಃ ಶಿವಮೊಗ್ಗದವರಾದ ಶಂಕರ್ ಸಿಹಿಮೊಗೆಯವರು ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದು, ಸಾಹಿತ್ಯ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಆಸಕ್ತಿಯಿಂದ ತೊಡಗಿಸಿಕೊಂಡಿದ್ದಾರೆ.)


ಇದನ್ನೂ ಓದಿ: ಕವನ | ಅಂತಿಮ ವಲಸೆಯ ಮುನ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...