Homeಕವನಮೊಳಗುತ್ತಿದೆ ಸೈರನ್! : ಶಂಕರ್ ಸಿಹಿಮೊಗೆಯವರ ಕವನ

ಮೊಳಗುತ್ತಿದೆ ಸೈರನ್! : ಶಂಕರ್ ಸಿಹಿಮೊಗೆಯವರ ಕವನ

- Advertisement -
- Advertisement -

ಮೊಳಗುತ್ತಿದೆ ಸೈರನ್!

ನಾನು
ಅಂದೇ ಹೇಳಿದ್ದೆ!
ಕಿರೀಟ ತೊಟ್ಟವರ ನಂಬದಿರಿ ಎಂದು!
ಜೀವ ಹಿಂಡುವ ರಕ್ತ ಹೀರುವ ಮಂದಿ
ನಮ್ಮ ನಿಮ್ಮಂತೆ ಬರುವುದಿಲ್ಲ!
ಕಿರೀಟ ತೊಟ್ಟಿಯೇ ಬರುತ್ತಾರೆ!
ಥೇಟ್ ಈಗ ಬಂದಿರುವ
ಅರೆಜೀವಿಯಂತೆ!
ಪೀಠವಿಲ್ಲದ ಅರಮನೆಯಲ್ಲಿ
ಕಿರೀಟಿ ರಾಜನದ್ದೆ ಆರ್ಭಟ
ನಿರ್ಗತಿಕ ವಲಸೆಗಾರರ ಬಡವರ
ಕೂಳಿಗೂ ಗತಿ ಇಲ್ಲ!
ಮಂದಗತಿಯ ಮೂರ್ಖ ರಾಜನಿಗೆ
ಕೇಳುವವರು ಯಾರು?
ಅಯ್ಯೋ ಹೇಳುವವರು ಯಾರು?
ಎಂದು ಗೊರವಂಕ ಕೂಗುತ್ತಿರುವಾಗ
ಗಲ್ಲಿಗಲ್ಲಿಗಳ ರಸ್ತೆಗಳಲ್ಲಿ
ಒಣಗಿ ಉದುರಿದ ಎಲೆಗಳ ತಳಗಳಲ್ಲಿ
ಹುಳದಂತೆ ಜನರು ಸಾಯುತ್ತಿರುವ ದೃಶ್ಯವನ್ನು
ತದೇಕ ಚಿತ್ತದಿಂದ ಕಂಬಳಿ ಹುಳುವೊಂದು
ಬರೆದು ದಾಖಲು ಮಾಡುತ್ತಿತ್ತು
“ಯಕಶ್ಚಿತ್ ಕಣ್ಣಿಗೆ ಕಾಣದ
ಅರೆಜೀವಿಯೊಂದರಿಂದ
ಮನುಷ್ಯರು ಉಸಿರುಗಟ್ಟಿ
ಸಾಯುತ್ತಿದ್ದಾರೆ ಅಯ್ಯೋ
ಮನುಷ್ಯರು ಉಸಿರುಗಟ್ಟಿ
ಸಾಯುತ್ತಿದ್ದಾರೆ”

ಮರದ ಮೇಲೆ ಕೂತ ಹಕ್ಕಿ
ಅಯ್ಯೋ ಅಯ್ಯೋ ಈ ಮನುಷ್ಯರಿಗೆ ಏನಾಗಿದೆ?
ಯಾಕ್ಹೀಗೆ ಮುಖಕ್ಕೆ ಮುಸುಕು ಹಾಕಿಕೊಂಡಿದ್ದಾರೆ!
ಕಲ್ಲು ಹೊಡೆಯುತ್ತಿದ್ದ ಕೈಗಳೇ ಕಾಣುತ್ತಿಲ್ಲವಲ್ಲ!
ಎಂದು ವ್ಯಂಗ್ಯವಾಗಿ ಚರಮಗೀತೆಯ ಹಾಡುತ್ತಿತ್ತು!
ಬೆಕ್ಕು, ನಾಯಿ, ಇರುವೆ ಮತ್ತು ಕೋಳಿ ಮಾತನಾಡಿಕೊಳ್ಳುತ್ತಿದ್ದವು!
ನೋಡಿದೆಯ ಬೆಕ್ಕಣ್ಣ
‘ನಮ್ಮ ಕುತ್ತಿಗೆಗೆ ಹಗ್ಗ ಜಡಿದು ಮೂಲೆಗೆ ಕಟ್ಟುತ್ತಿದ್ದ
ಈ ಮನುಷ್ಯರ ಪಾಡು ಇಂದು ಈಗ ಏನಾಗಿದೆಯೆಂದು?
ಕಾಲಕ್ಕೆ ಬೆಲೆ ಕಟ್ಟುವರುಂಟೆ?
ಕೆಲಸವಿಲ್ಲದ ಯುವಕರ ಗೋಣು
ನೇಣು ಕುಣಿಕೆಗೆ ಅಯ್ಯೋ ನೋಡಲಾಗುತ್ತಿಲ್ಲ!
ಕೆಲಸವೇ ಸಿಗುತ್ತಿಲ್ಲ!
ಗುಳೆ ಬಂದವರ ಪಾಡು
ಅವರ ಹಸಿವು ಯಾರಿಗೂ ಬೇಡ!’
ಎಂದು ಬೊಗಳಿತು ನಾಯಿ!
ಹೌದಣ್ಣ ಹೌದು
‘ತೋಳಕ್ಕೆ ಸಿಂಹದ ಬಣ್ಣ
ನಾಯಕನ ಬಣ್ಣ ಬಳಿದರೆ
ಎಷ್ಟು ದಿನ ತಾನೇ ಉಳಿದೀತು?
ಮಳೆ ಬಂದಾಗ ಕರಗಿ
ಬಿಸಿಲು ಹೆಚ್ಚಾದಾಗ ಒಣಗಿ
ಹೋಗಲೇಬೇಕಲ್ಲ!
ರಾಜನ ಸತ್ಯದ ಮಿಥ್ಯವು ಜನರಿಗೆ ತಿಳಿಯಲೆ ಬೇಕಲ್ಲ!
ಕ್ಕೊ ಕ್ಕೊ ಕ್ಕೊ ಎಂದು ಕೂಗಿತು ಕೋಳಿ!

ನಂಟು ಗಂಟಿನ ಹಂಗಿನೊಳಗೆ ಯಾವ
ಸಾಂಕ್ರಾಮಿಕ ರೋಗ ಬಂದರೇನು?
ಮನುಷ್ಯ ಬದಲಾಗುವನೇ?
ಇಲ್ಲ ಅವನು ಬದಲಾಗುವುದೇ ಇಲ್ಲ!
ಜಿಡ್ಡುಗಟ್ಟಿದೆ ಮೆದುಳು
ಮದ ಮತ್ಸರ ಮೋಹ ಸ್ವಾರ್ಥದಿಂದ!
ಹಸಿದ ಹೊಟ್ಟೆಗೆ ಅನ್ನ ಇಕ್ಕುವವರಿಲ್ಲ!
ತಿನ್ನುವವರು ರೋಗದ ಹೆಸರಿನಲ್ಲಿ
ಮತ್ತಷ್ಟು ಮಗದಷ್ಟು ತಿನ್ನುತ್ತಲೆ ಇದ್ದಾರೆ!
ಸಾಯುವವರು ಮಾತ್ರ ಸಾಯುತ್ತಲೆ ಇದ್ದಾರೆ!
ಇದಕ್ಕೆ ಕೊನೆ ಎಲ್ಲಿದೆ ಇಲ್ಲಿ?
ಎಂದು ಬುಸುಗುಟ್ಟಿತು ಹಾವು ಪೊಟರೆಯಲಿ!

ಕಾಲದ ಮೃಗ ಓಡುತ್ತಿದೆ ಓಡುತ್ತಿದೆ
ತನ್ನ ಬೆನ್ನ ತಾನೇ ಕಾಣದಂತೆ!
ಮೃಗ ಖಗಗಳು ವ್ಯಂಗ್ಯವಾಡುತ್ತಿವೆ!
ಅಪರೂಪಕ್ಕೆ ಕೇಳುತ್ತಿದ್ದ
ಆ್ಯಂಬುಲೆನ್ಸಿನ ಸೈರನ್ ಸದ್ದು
ಈಗ ನಿತ್ಯದ ಮಂತ್ರವಾಗಿದೆ!
ರಾಮ ಮಂದಿರದ ಭಜನೆಯಂತೆ
ಭಗವದ್ಗೀತೆಯ ಶ್ಲೋಕದಂತೆ!
ಅಲ್ಲಾವುವಿನ ಆದೇಶದಂತೆ
ಕುರಾನಿನ ವಚನದಂತೆ!
ಶಿಲುಬೆ ಮೇಲಿನ ಅಹಿಂಸಾ ಮೂರ್ತಿಯಂತೆ
ಬೈಬಲ್ಲಿನ ವಾಣಿಯಂತೆ!
ಬುದ್ಧನ ಉಪದೇಶದಂತೆ
ಹೊರಗೆ ಹೆಜ್ಜೆ ಇಟ್ಟರೆ ಸಾಕು ಸೈರನ್ ‌ಮೊಳಗುತ್ತಿದೆ
‘ಎಚ್ಚರ‌ ಮನುಷ್ಯ ಎಚ್ಚರ
ನಿನಗಿನ್ನೂ ಬಹಳ ಸಮಯವಿದೆ ಬದಲಾಗು’ ಎಂದು!

ಶಂಕರ್ ಸಿಹಿಮೊಗೆ

(ಮೂಲತಃ ಶಿವಮೊಗ್ಗದವರಾದ ಶಂಕರ್ ಸಿಹಿಮೊಗೆಯವರು ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದು, ಸಾಹಿತ್ಯ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಆಸಕ್ತಿಯಿಂದ ತೊಡಗಿಸಿಕೊಂಡಿದ್ದಾರೆ.)


ಇದನ್ನೂ ಓದಿ: ಕವನ | ಅಂತಿಮ ವಲಸೆಯ ಮುನ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...