Homeಕವನಮೊಳಗುತ್ತಿದೆ ಸೈರನ್! : ಶಂಕರ್ ಸಿಹಿಮೊಗೆಯವರ ಕವನ

ಮೊಳಗುತ್ತಿದೆ ಸೈರನ್! : ಶಂಕರ್ ಸಿಹಿಮೊಗೆಯವರ ಕವನ

- Advertisement -
- Advertisement -

ಮೊಳಗುತ್ತಿದೆ ಸೈರನ್!

ನಾನು
ಅಂದೇ ಹೇಳಿದ್ದೆ!
ಕಿರೀಟ ತೊಟ್ಟವರ ನಂಬದಿರಿ ಎಂದು!
ಜೀವ ಹಿಂಡುವ ರಕ್ತ ಹೀರುವ ಮಂದಿ
ನಮ್ಮ ನಿಮ್ಮಂತೆ ಬರುವುದಿಲ್ಲ!
ಕಿರೀಟ ತೊಟ್ಟಿಯೇ ಬರುತ್ತಾರೆ!
ಥೇಟ್ ಈಗ ಬಂದಿರುವ
ಅರೆಜೀವಿಯಂತೆ!
ಪೀಠವಿಲ್ಲದ ಅರಮನೆಯಲ್ಲಿ
ಕಿರೀಟಿ ರಾಜನದ್ದೆ ಆರ್ಭಟ
ನಿರ್ಗತಿಕ ವಲಸೆಗಾರರ ಬಡವರ
ಕೂಳಿಗೂ ಗತಿ ಇಲ್ಲ!
ಮಂದಗತಿಯ ಮೂರ್ಖ ರಾಜನಿಗೆ
ಕೇಳುವವರು ಯಾರು?
ಅಯ್ಯೋ ಹೇಳುವವರು ಯಾರು?
ಎಂದು ಗೊರವಂಕ ಕೂಗುತ್ತಿರುವಾಗ
ಗಲ್ಲಿಗಲ್ಲಿಗಳ ರಸ್ತೆಗಳಲ್ಲಿ
ಒಣಗಿ ಉದುರಿದ ಎಲೆಗಳ ತಳಗಳಲ್ಲಿ
ಹುಳದಂತೆ ಜನರು ಸಾಯುತ್ತಿರುವ ದೃಶ್ಯವನ್ನು
ತದೇಕ ಚಿತ್ತದಿಂದ ಕಂಬಳಿ ಹುಳುವೊಂದು
ಬರೆದು ದಾಖಲು ಮಾಡುತ್ತಿತ್ತು
“ಯಕಶ್ಚಿತ್ ಕಣ್ಣಿಗೆ ಕಾಣದ
ಅರೆಜೀವಿಯೊಂದರಿಂದ
ಮನುಷ್ಯರು ಉಸಿರುಗಟ್ಟಿ
ಸಾಯುತ್ತಿದ್ದಾರೆ ಅಯ್ಯೋ
ಮನುಷ್ಯರು ಉಸಿರುಗಟ್ಟಿ
ಸಾಯುತ್ತಿದ್ದಾರೆ”

ಮರದ ಮೇಲೆ ಕೂತ ಹಕ್ಕಿ
ಅಯ್ಯೋ ಅಯ್ಯೋ ಈ ಮನುಷ್ಯರಿಗೆ ಏನಾಗಿದೆ?
ಯಾಕ್ಹೀಗೆ ಮುಖಕ್ಕೆ ಮುಸುಕು ಹಾಕಿಕೊಂಡಿದ್ದಾರೆ!
ಕಲ್ಲು ಹೊಡೆಯುತ್ತಿದ್ದ ಕೈಗಳೇ ಕಾಣುತ್ತಿಲ್ಲವಲ್ಲ!
ಎಂದು ವ್ಯಂಗ್ಯವಾಗಿ ಚರಮಗೀತೆಯ ಹಾಡುತ್ತಿತ್ತು!
ಬೆಕ್ಕು, ನಾಯಿ, ಇರುವೆ ಮತ್ತು ಕೋಳಿ ಮಾತನಾಡಿಕೊಳ್ಳುತ್ತಿದ್ದವು!
ನೋಡಿದೆಯ ಬೆಕ್ಕಣ್ಣ
‘ನಮ್ಮ ಕುತ್ತಿಗೆಗೆ ಹಗ್ಗ ಜಡಿದು ಮೂಲೆಗೆ ಕಟ್ಟುತ್ತಿದ್ದ
ಈ ಮನುಷ್ಯರ ಪಾಡು ಇಂದು ಈಗ ಏನಾಗಿದೆಯೆಂದು?
ಕಾಲಕ್ಕೆ ಬೆಲೆ ಕಟ್ಟುವರುಂಟೆ?
ಕೆಲಸವಿಲ್ಲದ ಯುವಕರ ಗೋಣು
ನೇಣು ಕುಣಿಕೆಗೆ ಅಯ್ಯೋ ನೋಡಲಾಗುತ್ತಿಲ್ಲ!
ಕೆಲಸವೇ ಸಿಗುತ್ತಿಲ್ಲ!
ಗುಳೆ ಬಂದವರ ಪಾಡು
ಅವರ ಹಸಿವು ಯಾರಿಗೂ ಬೇಡ!’
ಎಂದು ಬೊಗಳಿತು ನಾಯಿ!
ಹೌದಣ್ಣ ಹೌದು
‘ತೋಳಕ್ಕೆ ಸಿಂಹದ ಬಣ್ಣ
ನಾಯಕನ ಬಣ್ಣ ಬಳಿದರೆ
ಎಷ್ಟು ದಿನ ತಾನೇ ಉಳಿದೀತು?
ಮಳೆ ಬಂದಾಗ ಕರಗಿ
ಬಿಸಿಲು ಹೆಚ್ಚಾದಾಗ ಒಣಗಿ
ಹೋಗಲೇಬೇಕಲ್ಲ!
ರಾಜನ ಸತ್ಯದ ಮಿಥ್ಯವು ಜನರಿಗೆ ತಿಳಿಯಲೆ ಬೇಕಲ್ಲ!
ಕ್ಕೊ ಕ್ಕೊ ಕ್ಕೊ ಎಂದು ಕೂಗಿತು ಕೋಳಿ!

ನಂಟು ಗಂಟಿನ ಹಂಗಿನೊಳಗೆ ಯಾವ
ಸಾಂಕ್ರಾಮಿಕ ರೋಗ ಬಂದರೇನು?
ಮನುಷ್ಯ ಬದಲಾಗುವನೇ?
ಇಲ್ಲ ಅವನು ಬದಲಾಗುವುದೇ ಇಲ್ಲ!
ಜಿಡ್ಡುಗಟ್ಟಿದೆ ಮೆದುಳು
ಮದ ಮತ್ಸರ ಮೋಹ ಸ್ವಾರ್ಥದಿಂದ!
ಹಸಿದ ಹೊಟ್ಟೆಗೆ ಅನ್ನ ಇಕ್ಕುವವರಿಲ್ಲ!
ತಿನ್ನುವವರು ರೋಗದ ಹೆಸರಿನಲ್ಲಿ
ಮತ್ತಷ್ಟು ಮಗದಷ್ಟು ತಿನ್ನುತ್ತಲೆ ಇದ್ದಾರೆ!
ಸಾಯುವವರು ಮಾತ್ರ ಸಾಯುತ್ತಲೆ ಇದ್ದಾರೆ!
ಇದಕ್ಕೆ ಕೊನೆ ಎಲ್ಲಿದೆ ಇಲ್ಲಿ?
ಎಂದು ಬುಸುಗುಟ್ಟಿತು ಹಾವು ಪೊಟರೆಯಲಿ!

ಕಾಲದ ಮೃಗ ಓಡುತ್ತಿದೆ ಓಡುತ್ತಿದೆ
ತನ್ನ ಬೆನ್ನ ತಾನೇ ಕಾಣದಂತೆ!
ಮೃಗ ಖಗಗಳು ವ್ಯಂಗ್ಯವಾಡುತ್ತಿವೆ!
ಅಪರೂಪಕ್ಕೆ ಕೇಳುತ್ತಿದ್ದ
ಆ್ಯಂಬುಲೆನ್ಸಿನ ಸೈರನ್ ಸದ್ದು
ಈಗ ನಿತ್ಯದ ಮಂತ್ರವಾಗಿದೆ!
ರಾಮ ಮಂದಿರದ ಭಜನೆಯಂತೆ
ಭಗವದ್ಗೀತೆಯ ಶ್ಲೋಕದಂತೆ!
ಅಲ್ಲಾವುವಿನ ಆದೇಶದಂತೆ
ಕುರಾನಿನ ವಚನದಂತೆ!
ಶಿಲುಬೆ ಮೇಲಿನ ಅಹಿಂಸಾ ಮೂರ್ತಿಯಂತೆ
ಬೈಬಲ್ಲಿನ ವಾಣಿಯಂತೆ!
ಬುದ್ಧನ ಉಪದೇಶದಂತೆ
ಹೊರಗೆ ಹೆಜ್ಜೆ ಇಟ್ಟರೆ ಸಾಕು ಸೈರನ್ ‌ಮೊಳಗುತ್ತಿದೆ
‘ಎಚ್ಚರ‌ ಮನುಷ್ಯ ಎಚ್ಚರ
ನಿನಗಿನ್ನೂ ಬಹಳ ಸಮಯವಿದೆ ಬದಲಾಗು’ ಎಂದು!

ಶಂಕರ್ ಸಿಹಿಮೊಗೆ

(ಮೂಲತಃ ಶಿವಮೊಗ್ಗದವರಾದ ಶಂಕರ್ ಸಿಹಿಮೊಗೆಯವರು ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದು, ಸಾಹಿತ್ಯ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಆಸಕ್ತಿಯಿಂದ ತೊಡಗಿಸಿಕೊಂಡಿದ್ದಾರೆ.)


ಇದನ್ನೂ ಓದಿ: ಕವನ | ಅಂತಿಮ ವಲಸೆಯ ಮುನ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...