Homeಮುಖಪುಟಕಟ್ಟಡ ಕಾರ್ಮಿರ ಹಣದಲ್ಲಿಆಹಾರ-ಧಾನ್ಯ ವಿತರಿಸಿ ಪ್ರಚಾರ ಪಡೆಯುತ್ತಿರುವ ಬಿಜೆಪಿ ಶಾಸಕರು

ಕಟ್ಟಡ ಕಾರ್ಮಿರ ಹಣದಲ್ಲಿಆಹಾರ-ಧಾನ್ಯ ವಿತರಿಸಿ ಪ್ರಚಾರ ಪಡೆಯುತ್ತಿರುವ ಬಿಜೆಪಿ ಶಾಸಕರು

ಸಂಕಟದಿಂದ ಹೇಗೆ ಪಾರಾಗುವುದೆಂದು ಇಡೀ ಜಗತ್ತು ಚಿಂತಿಸುತ್ತಿದ್ದರೆ, ಬಿಜೆಪಿಯ ಕೆಲ ನಾಯಕರುಗಳು ಸರಕಾರದ ಪರಿಹಾರ ಸಾಮಗ್ರಿ ಮೇಲೆ ತಮ್ಮ ಫೋಟೋ ಹಾಕಿಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವ ಸಂಗತಿ.

- Advertisement -
- Advertisement -

ಕೋವಿಡ್-19 ಲಾಕ್‌ಡೌನ್‌ನಿಂದಾಗಿ ತತ್ತರಿಸಿಹೋಗಿರುವ ವಲಸೆ ಮತ್ತು ಕಟ್ಟಡಕಾರ್ಮಿಕರಿಗೆ ಆಹಾರ-ಧಾನ್ಯ ಹಂಚುವ ಕಾರ್ಯ ಭರ್ಜರಿ ಪ್ರಚಾರದೊಂದಿಗೆ ನಡೆಯುತ್ತಿದೆ. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಕಾರ್ಮಿಕರು ಉಳಿಸಿರುವ ಹಣದಲ್ಲೇ ಆಹಾರ-ಧಾನ್ಯಗಳನ್ನು ಖರೀದಿಸಿ ಬಿಜೆಪಿ ಶಾಸಕರು ಅಕ್ಕಿ ಪಾಕೆಟ್‌ಗಳ ಮೇಲೆ ತಮ್ಮ ಪೋಟೋಗಳನ್ನು ಹಾಕಿಕೊಂಡು ಕಟ್ಟಡ ಕಾರ್ಮಿಕರಿಗೆ ಆಹಾರಧಾನ್ಯ ಮತ್ತು ಊಟವನ್ನು ವಿತರಿಸುತ್ತಿರುವುದು ಜೋರಾಗಿ ನಡೆಯುತ್ತಿದೆ. ಹಣ ಕಟ್ಟಡ ಕಾರ್ಮಿಕರದ್ದು, ಪ್ರಚಾರ ಪಡೆಯುತ್ತಿರುವುದು ಮಾತ್ರ ಬಿಜೆಪಿ ಶಾಸಕರು. ಆಹಾರಧಾನ್ಯಗಳನ್ನು ವಿತರಿಸುವಾಗ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುತ್ತಿಲ್ಲ. ಮುಖ್ಯಮಂತ್ರಿಗಳು ಮತ್ತು ಪ್ರಧಾನಿಗಳ ಮಾತನ್ನು ಬಿಜೆಪಿ ಶಾಸಕರೇ ಉಲ್ಲಂಘಿಸುತ್ತಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

ಕಲ್ಯಾಣ ಮಂಡಳಿಯ ಹಣವನ್ನು ಕಟ್ಟಡ ಕಾರ್ಮಿಕರಿಗೆ ಬಿಟ್ಟು ಇತರ ಉದ್ದೇಶಕ್ಕೆ ಬಳಸಿಕೊಳ್ಳಬಾರದೆಂಬ ಸುಪ್ರೀಂ ಕೋರ್ಟ್ ಆದೇಶವಿದೆ. ಆದರೂ ಕೇಂದ್ರ ಸರ್ಕಾರ ಕಲ್ಯಾಣ ಮಂಡಳಿಯಿಂದ 3 ಸಾವಿರ ಕೋಟಿ ರೂಪಾಯಿ ಹಣ ಬಳಕೆ ಮಾಡಿಕೊಂಡಿದೆ. ಹೀಗೆ ಹಣ ಬಳಕೆ ಮಾಡಿಕೊಳ್ಳುವ ಮೊದಲು ಕಲ್ಯಾಣ ಮಂಡಳಿಯ ಸಭೆ ಕರೆಯಬೇಕು. ಆದರೆ ಕಾರ್ಮಿಕರು, ಮಾಲಿಕರು ಮತ್ತು ಸರ್ಕಾರದ ಪ್ರತಿನಿಧಿಗಳು ಈ ಮಂಡಳಿಯಲ್ಲಿದ್ದರೂ ಸಭೆಯನ್ನೇ ಕರೆದಿಲ್ಲ. ಜೊತೆಗೆ ಸಲಹಾ ಮಂಡಳಿಯ ಸಭೆಯನ್ನು ಕರೆಯದೆ ಹಣ ಬಳಸಿಕೊಳ್ಳಲಾಗಿದೆ. ಈ ಮೂಲಕ ಸುಪ್ರೀಂಕೋರ್ಟ್ ಆದೇಶ ಮತ್ತು ಕಲ್ಯಾಣ ಮಂಡಳಿಯ ನಿಯಮಗಳನ್ನು ಗಾಳಿಗೆ ತೂರಲಾಗಿದೆ.

ರಾಜ್ಯ ಸರ್ಕಾರ 150 ಕೋಟಿ ರೂಪಾಯಿಗಳನ್ನು ಕಲ್ಯಾಣ ಮಂಡಳಿಯಿಂದ ತೆಗೆದುಕೊಂಡಿದೆ. ಐಎಎಸ್ ಅಧಿಕಾರಿ ಮಣಿವಣ್ಣನ್ ಉಸ್ತುವಾರಿಯಲ್ಲಿ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ ಆಹಾರಧಾನ್ಯಗಳನ್ನು ಟ್ರೇಡ್ ಯೂನಿಯನ್ ಗಳ ಮೂಲಕ ವಿತರಿಸಲು ವ್ಯವಸ್ಥೆ ಮಾಡಲಾಗಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಶಾಸಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೇಲೆ ಒತ್ತಡ ತಂದು ಶಾಸಕರೇ ವಿತರಿಸುವಂತೆ ನೋಡಿಕೊಂಡರು. ಪರಿಣಾಮ ಶಾಸಕ ಅರವಿಂದ ಲಿಂಬಾವಳಿ ಮತ್ತು ಬಿಜೆಪಿ ಕಾರ್ಪೋರೇಟರ್‌ಗಳು ತಮ್ಮ ಪೋಟೋಗಳನ್ನು ಅಕ್ಕಿ ಪಾಕೇಟ್‌ಗಳ ಮೇಲೆ ಮುದ್ರಿಸಿ ವಲಸೆ-ಕಟ್ಟಡ ಕಾರ್ಮಿಕರಿಗೆ ಹಂಚುವ ಕೆಲಸ ಮಾಡುತ್ತಿದ್ದಾರೆ.

ನಾನುಗೌರಿ.ಕಾಂ ಜೊತೆ ದೂರವಾಣಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ್ ಬೆಂಗಳೂರು ನಗರದಲ್ಲಿರುವ ಮುನಿರತ್ನಂ, ಅರವಿಂದ ಲಿಂಬಾವಳಿ, ಸತೀಶ್ ರೆಡ್ಡಿ, ಮಾಜಿ ಶಾಸಕ ಎನ್.ಎಸ್.ಕೃಷ್ಣಯ್ಯ ಸೇರಿದಂತೆ ಬಿಜೆಪಿ ಶಾಸಕರು ಮತ್ತು ಕಾರ್ಪೋರೇಟರ್‌ಗಳು ಕಟ್ಟಡ ಕಾರ್ಮಿಕರಿಗೆ ಆಹಾರಧಾನ್ಯಗಳ ವಿತರಣೆ ಮಾಡುವಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಸುಮಾರು 20ಲಕ್ಷಕ್ಕೂ ಹೆಚ್ಚು ಮಂದಿ ಕಟ್ಟಡ ಮತ್ತು ವಲಸೆ ಕಾರ್ಮಿಕರಿದ್ದು ಪ್ರತಿಯೊಬ್ಬ ಕಾರ್ಮಿಕನಿಗೆ 750 ರೂ ಮೌಲ್ಯದ ಆಹಾರಧಾನ್ಯಗಳನ್ನು ವಿತರಿಸಲಾಗುತ್ತಿದೆ. ಆಹಾರ ಧಾನ್ಯಗಳನ್ನು ವಿತರಿಸುವುದಕ್ಕಾಗಿಯೇ 75 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದ್ದು ಕಾರ್ಮಿಕರ ಹಣವನ್ನು
ಲೂಟಿ ಮಾಡಲಾಗುತ್ತಿದೆ ಎಂದಿದ್ದಾರೆ.

ಸಂಕಟದಿಂದ ಹೇಗೆ ಪಾರಾಗುವುದೆಂದು ಇಡೀ ಜಗತ್ತು ಚಿಂತಿಸುತ್ತಿದ್ದರೆ, ಬಿಜೆಪಿಯ ಕೆಲ ನಾಯಕರುಗಳು ಸರಕಾರದ ಪರಿಹಾರ ಸಾಮಗ್ರಿ ಮೇಲೆ ತಮ್ಮ ಫೋಟೋ ಹಾಕಿಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವ ಸಂಗತಿ. ಇದೇನು ಜನಸಾಮಾನ್ಯರಿಗೆ ಸರಕಾರ ನೀಡುವ ಪರಿಹಾರ ಸಾಮಗ್ರಿಯೋ? ಬಿಜೆಪಿ ಪಕ್ಷದ ಕೊಡುಗೆಯೋ? ಅಥವಾ ಲಿಂಬಾವಳಿಯವರ ವೈಯಕ್ತಿಕ ದಾನವೋ? ಅಥವಾ ಲಜ್ಜೆಗೇಡಿ ರಾಜಕಾರಣವೋ? ಪ್ರಧಾನಿ ಮೋದಿ ಮತ್ತು ಸನ್ಮಾನ್ಯ ಯಡಿಯೂರಪ್ಪ ಉತ್ತರ ಹೇಳುವರೇ? ಒಂದು ಸಮುದಾಯವನ್ನು ಕೊರೋನ ಮಹಾಮಾರಿಗೆ ಸಮೀಕರಿಸುವವರ ಬಗ್ಗೆ ದಿವ್ಯ ಮೌನ ತಳೆದ ಪ್ರಧಾನಿಗಳು ಬಡ ಕಾರ್ಮಿಕರ ಪರಿಹಾರ ಸಾಮಗ್ರಿಯನ್ನು ಕೆಲ ಪ್ರಚಾರಪ್ರಿಯರು ತಮ್ಮ ಫೋಟೋ ಸ್ಟಿಕರ್ ಅಂಟಿಸಿ ನೀಡುವುದಕ್ಕೆ ಸಮ್ಮತಿ ಸೂಚಿಸಿದ್ದಾರೆಯೇ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಲಸೆ ಮತ್ತು ಕಟ್ಟಡ ಕಾರ್ಮಿಕರಿಗೆ ಊಟದ ವ್ಯವಸ್ಥೆ ನೋಡಿಕೊಳ್ಳಲು ಇಸ್ಕಾನ್ ಸಂಸ್ಥೆಗೆ ವಹಿಸಿದೆ. ಮಾಳವಿಕ ನೇತೃತ್ವದಲ್ಲಿ ಕೋವಿಡ್ ವಾರಿಯರ್ ಫೋರ್ಸ್ ರಚನೆ ಮಾಡಿದೆ. ಇದು ಅದಮ್ಯಚೇತನ ಸಂಸ್ಥೆಯೊಂದಿಗೆ ಸೇರಿಕೊಂಡು ಇದೇ ಕಲ್ಯಾಣ ಮಂಡಳಿಯ ಹಣದಲ್ಲಿ ಊಟ ವಿತರಿಸುತ್ತಿದೆ. ಸೇವಾ ಆರ್‌ಎಸ್ಎಸ್ ಹೆಸರಿನಲ್ಲೂ ಊಟ ವಿತರಣೆ ಮಾಡುತ್ತಿದೆ. ಒಂದು ಕೇಂದ್ರದಲ್ಲಿ ಆಹಾರ ತಯಾರಿಸಿ ಒಂದು ಊಟಕ್ಕೆ 24 ರೂಪಾಯಿಯಂತೆ ಸರ್ಕಾರದಿಂದ ಹಣ ಪಡೆಯುತ್ತವೆ ಈ ಸಂಸ್ಥೆಗಳು. ಮೊದಲು 300 ಗ್ರಾ ಕೊಡುತ್ತಿದ್ದರು. ಈಗ ಅದು 200 ಗ್ರಾಂಗೆ ಇಳಿದಿದೆ. ಇದರಿಂದ ಕಟ್ಟಡ ಕಾರ್ಮಿಕರ ಹೊಟ್ಟೆ ತುಂಬುವುದಿಲ್ಲ ಎಂಬ ದೂರುಗಳು ಕೇಳಿಬಂದಿವೆ.

ರಾತ್ರಿ ವೇಳೆ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ ಕೊಡುವ ಊಟ ಕಳಪೆಯಾಗಿದೆ. ಒಂದುಕಡೆ ಊಟ ತಯಾರಿಸಿ ಬೆಂಗಳೂರಿನ 24 ಕಲ್ಯಾಣ ಮಂಟಪಗಳಲ್ಲಿ ಅನ್ನವನ್ನು ತಂದು ಸುರಿಯುವ ವ್ಯವಸ್ಥೆ ಇರುವುದರಿಂದ ಸ್ವಚ್ಛತೆ ಕಾಣುತ್ತಿಲ್ಲ. ಕಲ್ಯಾಣ ಮಂಟಪದ ಆವರಣದಲ್ಲಿ ಸುರಿದ ಅನ್ನವನ್ನು ಡಬ್ಬಿಗಳಿಗೆ ತುಂಬಿಕೊಡಲಾಗುತ್ತಿದೆ. ಆಹಾರಧಾನ್ಯವನ್ನು ಕೊಡುವ ನೆಪದಲ್ಲಿ ಕಲ್ಯಾಣ ಮಂಡಳಿಯಿಂದ ಬಿಡುಗಡೆಯಾಗಿರುವ ಹಣ ಸದ್ಬಳಕೆಯಾಗುತ್ತಿಲ್ಲ ಎಂಬ ಆರೋಪವಿದೆ..

ಬೆಂಗಳೂರಿನಿಂದ ನಡೆದುನಡೆದು ಗ್ರಾಮ ಸೇರುವ ಹೊತ್ತಿಗೆ ವಲಸೆ ಕಾರ್ಮಿಕ ಮಹಿಳೆ ಗಂಗಮ್ಮ ಮೃತಪಟ್ಟರು. ಕಟ್ಟಡ ಕಾರ್ಮಿಕರು ಮೃತಪಟ್ಟರೆ ಕಲ್ಯಾಣ ಮಂಡಳಿಯಿಂದ 5 ಲಕ್ಷ ರೂಪಾಯಿ ಪರಿಹಾರ ನೀಡಲು ಅವಕಾಶವಿದೆ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಕೇವಲ 3 ಲಕ್ಷ ರೂಪಾಯಿ ನೀಡುವ ಭರವಸೆ ನೀಡಿದ್ದಾರೆ. ಗಂಗಮ್ಮಳ ಸಾವನ್ನು ಕೆಲಸ ಮಾಡುವ ಸಂದರ್ಭದಲ್ಲೇ ನಡೆದಿದೆ ಎಂದು ಪರಿಗಣಿಸಿ ಆಕೆಯ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರವನ್ನು ಸರ್ಕಾರ ನೀಡಬೇಕಿದೆ ಎಂಬ ಒತ್ತಾಯವೂ ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...