Homeಮುಖಪುಟಕಟ್ಟಡ ಕಾರ್ಮಿರ ಹಣದಲ್ಲಿಆಹಾರ-ಧಾನ್ಯ ವಿತರಿಸಿ ಪ್ರಚಾರ ಪಡೆಯುತ್ತಿರುವ ಬಿಜೆಪಿ ಶಾಸಕರು

ಕಟ್ಟಡ ಕಾರ್ಮಿರ ಹಣದಲ್ಲಿಆಹಾರ-ಧಾನ್ಯ ವಿತರಿಸಿ ಪ್ರಚಾರ ಪಡೆಯುತ್ತಿರುವ ಬಿಜೆಪಿ ಶಾಸಕರು

ಸಂಕಟದಿಂದ ಹೇಗೆ ಪಾರಾಗುವುದೆಂದು ಇಡೀ ಜಗತ್ತು ಚಿಂತಿಸುತ್ತಿದ್ದರೆ, ಬಿಜೆಪಿಯ ಕೆಲ ನಾಯಕರುಗಳು ಸರಕಾರದ ಪರಿಹಾರ ಸಾಮಗ್ರಿ ಮೇಲೆ ತಮ್ಮ ಫೋಟೋ ಹಾಕಿಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವ ಸಂಗತಿ.

- Advertisement -
- Advertisement -

ಕೋವಿಡ್-19 ಲಾಕ್‌ಡೌನ್‌ನಿಂದಾಗಿ ತತ್ತರಿಸಿಹೋಗಿರುವ ವಲಸೆ ಮತ್ತು ಕಟ್ಟಡಕಾರ್ಮಿಕರಿಗೆ ಆಹಾರ-ಧಾನ್ಯ ಹಂಚುವ ಕಾರ್ಯ ಭರ್ಜರಿ ಪ್ರಚಾರದೊಂದಿಗೆ ನಡೆಯುತ್ತಿದೆ. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಕಾರ್ಮಿಕರು ಉಳಿಸಿರುವ ಹಣದಲ್ಲೇ ಆಹಾರ-ಧಾನ್ಯಗಳನ್ನು ಖರೀದಿಸಿ ಬಿಜೆಪಿ ಶಾಸಕರು ಅಕ್ಕಿ ಪಾಕೆಟ್‌ಗಳ ಮೇಲೆ ತಮ್ಮ ಪೋಟೋಗಳನ್ನು ಹಾಕಿಕೊಂಡು ಕಟ್ಟಡ ಕಾರ್ಮಿಕರಿಗೆ ಆಹಾರಧಾನ್ಯ ಮತ್ತು ಊಟವನ್ನು ವಿತರಿಸುತ್ತಿರುವುದು ಜೋರಾಗಿ ನಡೆಯುತ್ತಿದೆ. ಹಣ ಕಟ್ಟಡ ಕಾರ್ಮಿಕರದ್ದು, ಪ್ರಚಾರ ಪಡೆಯುತ್ತಿರುವುದು ಮಾತ್ರ ಬಿಜೆಪಿ ಶಾಸಕರು. ಆಹಾರಧಾನ್ಯಗಳನ್ನು ವಿತರಿಸುವಾಗ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುತ್ತಿಲ್ಲ. ಮುಖ್ಯಮಂತ್ರಿಗಳು ಮತ್ತು ಪ್ರಧಾನಿಗಳ ಮಾತನ್ನು ಬಿಜೆಪಿ ಶಾಸಕರೇ ಉಲ್ಲಂಘಿಸುತ್ತಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

ಕಲ್ಯಾಣ ಮಂಡಳಿಯ ಹಣವನ್ನು ಕಟ್ಟಡ ಕಾರ್ಮಿಕರಿಗೆ ಬಿಟ್ಟು ಇತರ ಉದ್ದೇಶಕ್ಕೆ ಬಳಸಿಕೊಳ್ಳಬಾರದೆಂಬ ಸುಪ್ರೀಂ ಕೋರ್ಟ್ ಆದೇಶವಿದೆ. ಆದರೂ ಕೇಂದ್ರ ಸರ್ಕಾರ ಕಲ್ಯಾಣ ಮಂಡಳಿಯಿಂದ 3 ಸಾವಿರ ಕೋಟಿ ರೂಪಾಯಿ ಹಣ ಬಳಕೆ ಮಾಡಿಕೊಂಡಿದೆ. ಹೀಗೆ ಹಣ ಬಳಕೆ ಮಾಡಿಕೊಳ್ಳುವ ಮೊದಲು ಕಲ್ಯಾಣ ಮಂಡಳಿಯ ಸಭೆ ಕರೆಯಬೇಕು. ಆದರೆ ಕಾರ್ಮಿಕರು, ಮಾಲಿಕರು ಮತ್ತು ಸರ್ಕಾರದ ಪ್ರತಿನಿಧಿಗಳು ಈ ಮಂಡಳಿಯಲ್ಲಿದ್ದರೂ ಸಭೆಯನ್ನೇ ಕರೆದಿಲ್ಲ. ಜೊತೆಗೆ ಸಲಹಾ ಮಂಡಳಿಯ ಸಭೆಯನ್ನು ಕರೆಯದೆ ಹಣ ಬಳಸಿಕೊಳ್ಳಲಾಗಿದೆ. ಈ ಮೂಲಕ ಸುಪ್ರೀಂಕೋರ್ಟ್ ಆದೇಶ ಮತ್ತು ಕಲ್ಯಾಣ ಮಂಡಳಿಯ ನಿಯಮಗಳನ್ನು ಗಾಳಿಗೆ ತೂರಲಾಗಿದೆ.

ರಾಜ್ಯ ಸರ್ಕಾರ 150 ಕೋಟಿ ರೂಪಾಯಿಗಳನ್ನು ಕಲ್ಯಾಣ ಮಂಡಳಿಯಿಂದ ತೆಗೆದುಕೊಂಡಿದೆ. ಐಎಎಸ್ ಅಧಿಕಾರಿ ಮಣಿವಣ್ಣನ್ ಉಸ್ತುವಾರಿಯಲ್ಲಿ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ ಆಹಾರಧಾನ್ಯಗಳನ್ನು ಟ್ರೇಡ್ ಯೂನಿಯನ್ ಗಳ ಮೂಲಕ ವಿತರಿಸಲು ವ್ಯವಸ್ಥೆ ಮಾಡಲಾಗಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಶಾಸಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೇಲೆ ಒತ್ತಡ ತಂದು ಶಾಸಕರೇ ವಿತರಿಸುವಂತೆ ನೋಡಿಕೊಂಡರು. ಪರಿಣಾಮ ಶಾಸಕ ಅರವಿಂದ ಲಿಂಬಾವಳಿ ಮತ್ತು ಬಿಜೆಪಿ ಕಾರ್ಪೋರೇಟರ್‌ಗಳು ತಮ್ಮ ಪೋಟೋಗಳನ್ನು ಅಕ್ಕಿ ಪಾಕೇಟ್‌ಗಳ ಮೇಲೆ ಮುದ್ರಿಸಿ ವಲಸೆ-ಕಟ್ಟಡ ಕಾರ್ಮಿಕರಿಗೆ ಹಂಚುವ ಕೆಲಸ ಮಾಡುತ್ತಿದ್ದಾರೆ.

ನಾನುಗೌರಿ.ಕಾಂ ಜೊತೆ ದೂರವಾಣಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ್ ಬೆಂಗಳೂರು ನಗರದಲ್ಲಿರುವ ಮುನಿರತ್ನಂ, ಅರವಿಂದ ಲಿಂಬಾವಳಿ, ಸತೀಶ್ ರೆಡ್ಡಿ, ಮಾಜಿ ಶಾಸಕ ಎನ್.ಎಸ್.ಕೃಷ್ಣಯ್ಯ ಸೇರಿದಂತೆ ಬಿಜೆಪಿ ಶಾಸಕರು ಮತ್ತು ಕಾರ್ಪೋರೇಟರ್‌ಗಳು ಕಟ್ಟಡ ಕಾರ್ಮಿಕರಿಗೆ ಆಹಾರಧಾನ್ಯಗಳ ವಿತರಣೆ ಮಾಡುವಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಸುಮಾರು 20ಲಕ್ಷಕ್ಕೂ ಹೆಚ್ಚು ಮಂದಿ ಕಟ್ಟಡ ಮತ್ತು ವಲಸೆ ಕಾರ್ಮಿಕರಿದ್ದು ಪ್ರತಿಯೊಬ್ಬ ಕಾರ್ಮಿಕನಿಗೆ 750 ರೂ ಮೌಲ್ಯದ ಆಹಾರಧಾನ್ಯಗಳನ್ನು ವಿತರಿಸಲಾಗುತ್ತಿದೆ. ಆಹಾರ ಧಾನ್ಯಗಳನ್ನು ವಿತರಿಸುವುದಕ್ಕಾಗಿಯೇ 75 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದ್ದು ಕಾರ್ಮಿಕರ ಹಣವನ್ನು
ಲೂಟಿ ಮಾಡಲಾಗುತ್ತಿದೆ ಎಂದಿದ್ದಾರೆ.

ಸಂಕಟದಿಂದ ಹೇಗೆ ಪಾರಾಗುವುದೆಂದು ಇಡೀ ಜಗತ್ತು ಚಿಂತಿಸುತ್ತಿದ್ದರೆ, ಬಿಜೆಪಿಯ ಕೆಲ ನಾಯಕರುಗಳು ಸರಕಾರದ ಪರಿಹಾರ ಸಾಮಗ್ರಿ ಮೇಲೆ ತಮ್ಮ ಫೋಟೋ ಹಾಕಿಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವ ಸಂಗತಿ. ಇದೇನು ಜನಸಾಮಾನ್ಯರಿಗೆ ಸರಕಾರ ನೀಡುವ ಪರಿಹಾರ ಸಾಮಗ್ರಿಯೋ? ಬಿಜೆಪಿ ಪಕ್ಷದ ಕೊಡುಗೆಯೋ? ಅಥವಾ ಲಿಂಬಾವಳಿಯವರ ವೈಯಕ್ತಿಕ ದಾನವೋ? ಅಥವಾ ಲಜ್ಜೆಗೇಡಿ ರಾಜಕಾರಣವೋ? ಪ್ರಧಾನಿ ಮೋದಿ ಮತ್ತು ಸನ್ಮಾನ್ಯ ಯಡಿಯೂರಪ್ಪ ಉತ್ತರ ಹೇಳುವರೇ? ಒಂದು ಸಮುದಾಯವನ್ನು ಕೊರೋನ ಮಹಾಮಾರಿಗೆ ಸಮೀಕರಿಸುವವರ ಬಗ್ಗೆ ದಿವ್ಯ ಮೌನ ತಳೆದ ಪ್ರಧಾನಿಗಳು ಬಡ ಕಾರ್ಮಿಕರ ಪರಿಹಾರ ಸಾಮಗ್ರಿಯನ್ನು ಕೆಲ ಪ್ರಚಾರಪ್ರಿಯರು ತಮ್ಮ ಫೋಟೋ ಸ್ಟಿಕರ್ ಅಂಟಿಸಿ ನೀಡುವುದಕ್ಕೆ ಸಮ್ಮತಿ ಸೂಚಿಸಿದ್ದಾರೆಯೇ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಲಸೆ ಮತ್ತು ಕಟ್ಟಡ ಕಾರ್ಮಿಕರಿಗೆ ಊಟದ ವ್ಯವಸ್ಥೆ ನೋಡಿಕೊಳ್ಳಲು ಇಸ್ಕಾನ್ ಸಂಸ್ಥೆಗೆ ವಹಿಸಿದೆ. ಮಾಳವಿಕ ನೇತೃತ್ವದಲ್ಲಿ ಕೋವಿಡ್ ವಾರಿಯರ್ ಫೋರ್ಸ್ ರಚನೆ ಮಾಡಿದೆ. ಇದು ಅದಮ್ಯಚೇತನ ಸಂಸ್ಥೆಯೊಂದಿಗೆ ಸೇರಿಕೊಂಡು ಇದೇ ಕಲ್ಯಾಣ ಮಂಡಳಿಯ ಹಣದಲ್ಲಿ ಊಟ ವಿತರಿಸುತ್ತಿದೆ. ಸೇವಾ ಆರ್‌ಎಸ್ಎಸ್ ಹೆಸರಿನಲ್ಲೂ ಊಟ ವಿತರಣೆ ಮಾಡುತ್ತಿದೆ. ಒಂದು ಕೇಂದ್ರದಲ್ಲಿ ಆಹಾರ ತಯಾರಿಸಿ ಒಂದು ಊಟಕ್ಕೆ 24 ರೂಪಾಯಿಯಂತೆ ಸರ್ಕಾರದಿಂದ ಹಣ ಪಡೆಯುತ್ತವೆ ಈ ಸಂಸ್ಥೆಗಳು. ಮೊದಲು 300 ಗ್ರಾ ಕೊಡುತ್ತಿದ್ದರು. ಈಗ ಅದು 200 ಗ್ರಾಂಗೆ ಇಳಿದಿದೆ. ಇದರಿಂದ ಕಟ್ಟಡ ಕಾರ್ಮಿಕರ ಹೊಟ್ಟೆ ತುಂಬುವುದಿಲ್ಲ ಎಂಬ ದೂರುಗಳು ಕೇಳಿಬಂದಿವೆ.

ರಾತ್ರಿ ವೇಳೆ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ ಕೊಡುವ ಊಟ ಕಳಪೆಯಾಗಿದೆ. ಒಂದುಕಡೆ ಊಟ ತಯಾರಿಸಿ ಬೆಂಗಳೂರಿನ 24 ಕಲ್ಯಾಣ ಮಂಟಪಗಳಲ್ಲಿ ಅನ್ನವನ್ನು ತಂದು ಸುರಿಯುವ ವ್ಯವಸ್ಥೆ ಇರುವುದರಿಂದ ಸ್ವಚ್ಛತೆ ಕಾಣುತ್ತಿಲ್ಲ. ಕಲ್ಯಾಣ ಮಂಟಪದ ಆವರಣದಲ್ಲಿ ಸುರಿದ ಅನ್ನವನ್ನು ಡಬ್ಬಿಗಳಿಗೆ ತುಂಬಿಕೊಡಲಾಗುತ್ತಿದೆ. ಆಹಾರಧಾನ್ಯವನ್ನು ಕೊಡುವ ನೆಪದಲ್ಲಿ ಕಲ್ಯಾಣ ಮಂಡಳಿಯಿಂದ ಬಿಡುಗಡೆಯಾಗಿರುವ ಹಣ ಸದ್ಬಳಕೆಯಾಗುತ್ತಿಲ್ಲ ಎಂಬ ಆರೋಪವಿದೆ..

ಬೆಂಗಳೂರಿನಿಂದ ನಡೆದುನಡೆದು ಗ್ರಾಮ ಸೇರುವ ಹೊತ್ತಿಗೆ ವಲಸೆ ಕಾರ್ಮಿಕ ಮಹಿಳೆ ಗಂಗಮ್ಮ ಮೃತಪಟ್ಟರು. ಕಟ್ಟಡ ಕಾರ್ಮಿಕರು ಮೃತಪಟ್ಟರೆ ಕಲ್ಯಾಣ ಮಂಡಳಿಯಿಂದ 5 ಲಕ್ಷ ರೂಪಾಯಿ ಪರಿಹಾರ ನೀಡಲು ಅವಕಾಶವಿದೆ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಕೇವಲ 3 ಲಕ್ಷ ರೂಪಾಯಿ ನೀಡುವ ಭರವಸೆ ನೀಡಿದ್ದಾರೆ. ಗಂಗಮ್ಮಳ ಸಾವನ್ನು ಕೆಲಸ ಮಾಡುವ ಸಂದರ್ಭದಲ್ಲೇ ನಡೆದಿದೆ ಎಂದು ಪರಿಗಣಿಸಿ ಆಕೆಯ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರವನ್ನು ಸರ್ಕಾರ ನೀಡಬೇಕಿದೆ ಎಂಬ ಒತ್ತಾಯವೂ ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...