Homeಮುಖಪುಟಕಟ್ಟಡ ಕಾರ್ಮಿರ ಹಣದಲ್ಲಿಆಹಾರ-ಧಾನ್ಯ ವಿತರಿಸಿ ಪ್ರಚಾರ ಪಡೆಯುತ್ತಿರುವ ಬಿಜೆಪಿ ಶಾಸಕರು

ಕಟ್ಟಡ ಕಾರ್ಮಿರ ಹಣದಲ್ಲಿಆಹಾರ-ಧಾನ್ಯ ವಿತರಿಸಿ ಪ್ರಚಾರ ಪಡೆಯುತ್ತಿರುವ ಬಿಜೆಪಿ ಶಾಸಕರು

ಸಂಕಟದಿಂದ ಹೇಗೆ ಪಾರಾಗುವುದೆಂದು ಇಡೀ ಜಗತ್ತು ಚಿಂತಿಸುತ್ತಿದ್ದರೆ, ಬಿಜೆಪಿಯ ಕೆಲ ನಾಯಕರುಗಳು ಸರಕಾರದ ಪರಿಹಾರ ಸಾಮಗ್ರಿ ಮೇಲೆ ತಮ್ಮ ಫೋಟೋ ಹಾಕಿಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವ ಸಂಗತಿ.

- Advertisement -
- Advertisement -

ಕೋವಿಡ್-19 ಲಾಕ್‌ಡೌನ್‌ನಿಂದಾಗಿ ತತ್ತರಿಸಿಹೋಗಿರುವ ವಲಸೆ ಮತ್ತು ಕಟ್ಟಡಕಾರ್ಮಿಕರಿಗೆ ಆಹಾರ-ಧಾನ್ಯ ಹಂಚುವ ಕಾರ್ಯ ಭರ್ಜರಿ ಪ್ರಚಾರದೊಂದಿಗೆ ನಡೆಯುತ್ತಿದೆ. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಕಾರ್ಮಿಕರು ಉಳಿಸಿರುವ ಹಣದಲ್ಲೇ ಆಹಾರ-ಧಾನ್ಯಗಳನ್ನು ಖರೀದಿಸಿ ಬಿಜೆಪಿ ಶಾಸಕರು ಅಕ್ಕಿ ಪಾಕೆಟ್‌ಗಳ ಮೇಲೆ ತಮ್ಮ ಪೋಟೋಗಳನ್ನು ಹಾಕಿಕೊಂಡು ಕಟ್ಟಡ ಕಾರ್ಮಿಕರಿಗೆ ಆಹಾರಧಾನ್ಯ ಮತ್ತು ಊಟವನ್ನು ವಿತರಿಸುತ್ತಿರುವುದು ಜೋರಾಗಿ ನಡೆಯುತ್ತಿದೆ. ಹಣ ಕಟ್ಟಡ ಕಾರ್ಮಿಕರದ್ದು, ಪ್ರಚಾರ ಪಡೆಯುತ್ತಿರುವುದು ಮಾತ್ರ ಬಿಜೆಪಿ ಶಾಸಕರು. ಆಹಾರಧಾನ್ಯಗಳನ್ನು ವಿತರಿಸುವಾಗ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುತ್ತಿಲ್ಲ. ಮುಖ್ಯಮಂತ್ರಿಗಳು ಮತ್ತು ಪ್ರಧಾನಿಗಳ ಮಾತನ್ನು ಬಿಜೆಪಿ ಶಾಸಕರೇ ಉಲ್ಲಂಘಿಸುತ್ತಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

ಕಲ್ಯಾಣ ಮಂಡಳಿಯ ಹಣವನ್ನು ಕಟ್ಟಡ ಕಾರ್ಮಿಕರಿಗೆ ಬಿಟ್ಟು ಇತರ ಉದ್ದೇಶಕ್ಕೆ ಬಳಸಿಕೊಳ್ಳಬಾರದೆಂಬ ಸುಪ್ರೀಂ ಕೋರ್ಟ್ ಆದೇಶವಿದೆ. ಆದರೂ ಕೇಂದ್ರ ಸರ್ಕಾರ ಕಲ್ಯಾಣ ಮಂಡಳಿಯಿಂದ 3 ಸಾವಿರ ಕೋಟಿ ರೂಪಾಯಿ ಹಣ ಬಳಕೆ ಮಾಡಿಕೊಂಡಿದೆ. ಹೀಗೆ ಹಣ ಬಳಕೆ ಮಾಡಿಕೊಳ್ಳುವ ಮೊದಲು ಕಲ್ಯಾಣ ಮಂಡಳಿಯ ಸಭೆ ಕರೆಯಬೇಕು. ಆದರೆ ಕಾರ್ಮಿಕರು, ಮಾಲಿಕರು ಮತ್ತು ಸರ್ಕಾರದ ಪ್ರತಿನಿಧಿಗಳು ಈ ಮಂಡಳಿಯಲ್ಲಿದ್ದರೂ ಸಭೆಯನ್ನೇ ಕರೆದಿಲ್ಲ. ಜೊತೆಗೆ ಸಲಹಾ ಮಂಡಳಿಯ ಸಭೆಯನ್ನು ಕರೆಯದೆ ಹಣ ಬಳಸಿಕೊಳ್ಳಲಾಗಿದೆ. ಈ ಮೂಲಕ ಸುಪ್ರೀಂಕೋರ್ಟ್ ಆದೇಶ ಮತ್ತು ಕಲ್ಯಾಣ ಮಂಡಳಿಯ ನಿಯಮಗಳನ್ನು ಗಾಳಿಗೆ ತೂರಲಾಗಿದೆ.

ರಾಜ್ಯ ಸರ್ಕಾರ 150 ಕೋಟಿ ರೂಪಾಯಿಗಳನ್ನು ಕಲ್ಯಾಣ ಮಂಡಳಿಯಿಂದ ತೆಗೆದುಕೊಂಡಿದೆ. ಐಎಎಸ್ ಅಧಿಕಾರಿ ಮಣಿವಣ್ಣನ್ ಉಸ್ತುವಾರಿಯಲ್ಲಿ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ ಆಹಾರಧಾನ್ಯಗಳನ್ನು ಟ್ರೇಡ್ ಯೂನಿಯನ್ ಗಳ ಮೂಲಕ ವಿತರಿಸಲು ವ್ಯವಸ್ಥೆ ಮಾಡಲಾಗಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಶಾಸಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೇಲೆ ಒತ್ತಡ ತಂದು ಶಾಸಕರೇ ವಿತರಿಸುವಂತೆ ನೋಡಿಕೊಂಡರು. ಪರಿಣಾಮ ಶಾಸಕ ಅರವಿಂದ ಲಿಂಬಾವಳಿ ಮತ್ತು ಬಿಜೆಪಿ ಕಾರ್ಪೋರೇಟರ್‌ಗಳು ತಮ್ಮ ಪೋಟೋಗಳನ್ನು ಅಕ್ಕಿ ಪಾಕೇಟ್‌ಗಳ ಮೇಲೆ ಮುದ್ರಿಸಿ ವಲಸೆ-ಕಟ್ಟಡ ಕಾರ್ಮಿಕರಿಗೆ ಹಂಚುವ ಕೆಲಸ ಮಾಡುತ್ತಿದ್ದಾರೆ.

ನಾನುಗೌರಿ.ಕಾಂ ಜೊತೆ ದೂರವಾಣಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ್ ಬೆಂಗಳೂರು ನಗರದಲ್ಲಿರುವ ಮುನಿರತ್ನಂ, ಅರವಿಂದ ಲಿಂಬಾವಳಿ, ಸತೀಶ್ ರೆಡ್ಡಿ, ಮಾಜಿ ಶಾಸಕ ಎನ್.ಎಸ್.ಕೃಷ್ಣಯ್ಯ ಸೇರಿದಂತೆ ಬಿಜೆಪಿ ಶಾಸಕರು ಮತ್ತು ಕಾರ್ಪೋರೇಟರ್‌ಗಳು ಕಟ್ಟಡ ಕಾರ್ಮಿಕರಿಗೆ ಆಹಾರಧಾನ್ಯಗಳ ವಿತರಣೆ ಮಾಡುವಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಸುಮಾರು 20ಲಕ್ಷಕ್ಕೂ ಹೆಚ್ಚು ಮಂದಿ ಕಟ್ಟಡ ಮತ್ತು ವಲಸೆ ಕಾರ್ಮಿಕರಿದ್ದು ಪ್ರತಿಯೊಬ್ಬ ಕಾರ್ಮಿಕನಿಗೆ 750 ರೂ ಮೌಲ್ಯದ ಆಹಾರಧಾನ್ಯಗಳನ್ನು ವಿತರಿಸಲಾಗುತ್ತಿದೆ. ಆಹಾರ ಧಾನ್ಯಗಳನ್ನು ವಿತರಿಸುವುದಕ್ಕಾಗಿಯೇ 75 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದ್ದು ಕಾರ್ಮಿಕರ ಹಣವನ್ನು
ಲೂಟಿ ಮಾಡಲಾಗುತ್ತಿದೆ ಎಂದಿದ್ದಾರೆ.

ಸಂಕಟದಿಂದ ಹೇಗೆ ಪಾರಾಗುವುದೆಂದು ಇಡೀ ಜಗತ್ತು ಚಿಂತಿಸುತ್ತಿದ್ದರೆ, ಬಿಜೆಪಿಯ ಕೆಲ ನಾಯಕರುಗಳು ಸರಕಾರದ ಪರಿಹಾರ ಸಾಮಗ್ರಿ ಮೇಲೆ ತಮ್ಮ ಫೋಟೋ ಹಾಕಿಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವ ಸಂಗತಿ. ಇದೇನು ಜನಸಾಮಾನ್ಯರಿಗೆ ಸರಕಾರ ನೀಡುವ ಪರಿಹಾರ ಸಾಮಗ್ರಿಯೋ? ಬಿಜೆಪಿ ಪಕ್ಷದ ಕೊಡುಗೆಯೋ? ಅಥವಾ ಲಿಂಬಾವಳಿಯವರ ವೈಯಕ್ತಿಕ ದಾನವೋ? ಅಥವಾ ಲಜ್ಜೆಗೇಡಿ ರಾಜಕಾರಣವೋ? ಪ್ರಧಾನಿ ಮೋದಿ ಮತ್ತು ಸನ್ಮಾನ್ಯ ಯಡಿಯೂರಪ್ಪ ಉತ್ತರ ಹೇಳುವರೇ? ಒಂದು ಸಮುದಾಯವನ್ನು ಕೊರೋನ ಮಹಾಮಾರಿಗೆ ಸಮೀಕರಿಸುವವರ ಬಗ್ಗೆ ದಿವ್ಯ ಮೌನ ತಳೆದ ಪ್ರಧಾನಿಗಳು ಬಡ ಕಾರ್ಮಿಕರ ಪರಿಹಾರ ಸಾಮಗ್ರಿಯನ್ನು ಕೆಲ ಪ್ರಚಾರಪ್ರಿಯರು ತಮ್ಮ ಫೋಟೋ ಸ್ಟಿಕರ್ ಅಂಟಿಸಿ ನೀಡುವುದಕ್ಕೆ ಸಮ್ಮತಿ ಸೂಚಿಸಿದ್ದಾರೆಯೇ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಲಸೆ ಮತ್ತು ಕಟ್ಟಡ ಕಾರ್ಮಿಕರಿಗೆ ಊಟದ ವ್ಯವಸ್ಥೆ ನೋಡಿಕೊಳ್ಳಲು ಇಸ್ಕಾನ್ ಸಂಸ್ಥೆಗೆ ವಹಿಸಿದೆ. ಮಾಳವಿಕ ನೇತೃತ್ವದಲ್ಲಿ ಕೋವಿಡ್ ವಾರಿಯರ್ ಫೋರ್ಸ್ ರಚನೆ ಮಾಡಿದೆ. ಇದು ಅದಮ್ಯಚೇತನ ಸಂಸ್ಥೆಯೊಂದಿಗೆ ಸೇರಿಕೊಂಡು ಇದೇ ಕಲ್ಯಾಣ ಮಂಡಳಿಯ ಹಣದಲ್ಲಿ ಊಟ ವಿತರಿಸುತ್ತಿದೆ. ಸೇವಾ ಆರ್‌ಎಸ್ಎಸ್ ಹೆಸರಿನಲ್ಲೂ ಊಟ ವಿತರಣೆ ಮಾಡುತ್ತಿದೆ. ಒಂದು ಕೇಂದ್ರದಲ್ಲಿ ಆಹಾರ ತಯಾರಿಸಿ ಒಂದು ಊಟಕ್ಕೆ 24 ರೂಪಾಯಿಯಂತೆ ಸರ್ಕಾರದಿಂದ ಹಣ ಪಡೆಯುತ್ತವೆ ಈ ಸಂಸ್ಥೆಗಳು. ಮೊದಲು 300 ಗ್ರಾ ಕೊಡುತ್ತಿದ್ದರು. ಈಗ ಅದು 200 ಗ್ರಾಂಗೆ ಇಳಿದಿದೆ. ಇದರಿಂದ ಕಟ್ಟಡ ಕಾರ್ಮಿಕರ ಹೊಟ್ಟೆ ತುಂಬುವುದಿಲ್ಲ ಎಂಬ ದೂರುಗಳು ಕೇಳಿಬಂದಿವೆ.

ರಾತ್ರಿ ವೇಳೆ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ ಕೊಡುವ ಊಟ ಕಳಪೆಯಾಗಿದೆ. ಒಂದುಕಡೆ ಊಟ ತಯಾರಿಸಿ ಬೆಂಗಳೂರಿನ 24 ಕಲ್ಯಾಣ ಮಂಟಪಗಳಲ್ಲಿ ಅನ್ನವನ್ನು ತಂದು ಸುರಿಯುವ ವ್ಯವಸ್ಥೆ ಇರುವುದರಿಂದ ಸ್ವಚ್ಛತೆ ಕಾಣುತ್ತಿಲ್ಲ. ಕಲ್ಯಾಣ ಮಂಟಪದ ಆವರಣದಲ್ಲಿ ಸುರಿದ ಅನ್ನವನ್ನು ಡಬ್ಬಿಗಳಿಗೆ ತುಂಬಿಕೊಡಲಾಗುತ್ತಿದೆ. ಆಹಾರಧಾನ್ಯವನ್ನು ಕೊಡುವ ನೆಪದಲ್ಲಿ ಕಲ್ಯಾಣ ಮಂಡಳಿಯಿಂದ ಬಿಡುಗಡೆಯಾಗಿರುವ ಹಣ ಸದ್ಬಳಕೆಯಾಗುತ್ತಿಲ್ಲ ಎಂಬ ಆರೋಪವಿದೆ..

ಬೆಂಗಳೂರಿನಿಂದ ನಡೆದುನಡೆದು ಗ್ರಾಮ ಸೇರುವ ಹೊತ್ತಿಗೆ ವಲಸೆ ಕಾರ್ಮಿಕ ಮಹಿಳೆ ಗಂಗಮ್ಮ ಮೃತಪಟ್ಟರು. ಕಟ್ಟಡ ಕಾರ್ಮಿಕರು ಮೃತಪಟ್ಟರೆ ಕಲ್ಯಾಣ ಮಂಡಳಿಯಿಂದ 5 ಲಕ್ಷ ರೂಪಾಯಿ ಪರಿಹಾರ ನೀಡಲು ಅವಕಾಶವಿದೆ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಕೇವಲ 3 ಲಕ್ಷ ರೂಪಾಯಿ ನೀಡುವ ಭರವಸೆ ನೀಡಿದ್ದಾರೆ. ಗಂಗಮ್ಮಳ ಸಾವನ್ನು ಕೆಲಸ ಮಾಡುವ ಸಂದರ್ಭದಲ್ಲೇ ನಡೆದಿದೆ ಎಂದು ಪರಿಗಣಿಸಿ ಆಕೆಯ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರವನ್ನು ಸರ್ಕಾರ ನೀಡಬೇಕಿದೆ ಎಂಬ ಒತ್ತಾಯವೂ ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...