Homeಮುಖಪುಟಬೀಳಗ್ಯಾಗ ರೊಕ್ಕ ನಡಿಲಿಲ್ಲ, ಬಾಗಲಕೋಟದಾಗ ಸೊಕ್ಕ ನಡಿಲಿಲ್ಲ; ಲೆಕ್ಕ ಚುಕ್ತಾ ಮಾಡಿದ ಮತದಾರರು

ಬೀಳಗ್ಯಾಗ ರೊಕ್ಕ ನಡಿಲಿಲ್ಲ, ಬಾಗಲಕೋಟದಾಗ ಸೊಕ್ಕ ನಡಿಲಿಲ್ಲ; ಲೆಕ್ಕ ಚುಕ್ತಾ ಮಾಡಿದ ಮತದಾರರು

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ನಿನ್ನೆಯಷ್ಟೇ ಹೊರಬಂದಿದೆ. ಬಾಗಲಕೋಟೆ ಜಿಲ್ಲೆಯ ಇಬ್ಬರು ಸಚಿವರು ಸೋಲು ಕಂಡಿದ್ದಾರೆ. ಬಿಜೆಪಿಯ ಭದ್ರಕೋಟೆ ಬಾಗಲಕೋಟೆ ಮತಕ್ಷೇತ್ರದಲ್ಲಿಯೇ ಬಿಜೆಪಿ ಅಭ್ಯರ್ಥಿ ಸೋಲು ಕಂಡಿದ್ದಾರೆ. ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಕೇವಲ ಎರಡು ಕ್ಷೇತ್ರದಲ್ಲಿ ಮಾತ್ರ ಬಿಜೆಪಿಗೆ ಗೆಲುವಾಗಿದ್ದು, ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ.

ಬಿಜೆಪಿಯ ಭದ್ರಕೋಟೆ ಬಾಗಲಕೋಟೆ ಹಾಗೂ ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದ ಮುರಗೇಶ ನಿರಾಣಿ ಅವರು ಸ್ಪರ್ಧಿಸುವ ಬೀಳಗಿ ಮತಕ್ಷೇತ್ರ ಭಾರೀ ಕುತೂಹಲ ಹುಟ್ಟುಹಾಕಿತ್ತು. ಆದರೆ ಅಂತಿಮವಾಗಿ ಎರಡು ಕ್ಷೇತ್ರಗಳಲ್ಲೂ ಬಿಜೆಪಿ ಸೋಲು ಕಂಡಿದೆ. ಫಲಿತಾಂಶದ ಬಳಿಕ ಜಿಲ್ಲೆಯ ಮತದಾರರಿಂದ, ”ಬೀಳಗ್ಯಾಗ ರೊಕ್ಕ ನಡಿಲಿಲ್ಲ, ಬಾಗಲಕೋಟದಾಗ ಸೊಕ್ಕ ನಡಿಲಿಲ್ಲ” ಎನ್ನುವ ಮಾತು ಕೇಳಿಬರುತ್ತಿದೆ.

ಬೀಳಗಿಯಲ್ಲಿ ಹಣದ ಹೊಳೆ ಹರಿಸಿದ್ದ ಮುರಗೇಶ್ ನಿರಾಣಿ

ಬೀಳಗಿ ಮತಕ್ಷೇತ್ರದಿಂದ ಮುರಗೇಶ್ ನಿರಾಣಿ ಅವರು ಈಗಾಗಲೇ ನಾಲ್ಕು ಬಾರಿ ಸ್ಪರ್ಧೆ ಮಾಡಿ ಮೂರು ಬಾರಿ ಗೆಲುವು ಸಾಧಿಸಿದ್ದರು. ಮುಂದಿನ ಮುಖ್ಯಮಂತ್ರಿ ರೇ ಸ್‌ನಲ್ಲೂ ನಿರಾಣಿ ಹೆಸರು ಮುಂಚೂಣಿಯಲ್ಲಿತ್ತು. ಆದರೆ ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆ ಜೋರಾಗಿಯೇ ಇತ್ತು. ಕ್ಷೇತ್ರದ ಬಹಳಷ್ಟು ಹಳ್ಳಿಗಳ ಮತದಾರರು ಚುನಾವಣೆಗೂ ಮುನ್ನ ಹೇಳುತ್ತಿದ್ದ ಒಂದೇ ಒಂದು ಮಾತಂದ್ರೆ, ”ನಿರಾಣಿ ಸಾಹೇಬ್ ಓಟ್ ಕೇಳಾಕ್ ಅಷ್ಟೇ ನಮ್ಮೂರಿಗೆ ಬರ್ತಾನ ರೀ, ಆರಿಸಿ ಬಂದ್ಮೇಲೆ ಇತ್ಲಾಗ ತಲೆನೇ ಹಾಕಲ್ಲ, ಇನ್ನ ನಮ್ಮ ಕಷ್ಟ ಯಾವಾಗ ಕೇಳತಾನ್ರೀ ಅಂವಾ” ಎನ್ನುತ್ತಿದ್ದರು.

ಸೋಲಿನ ಭೀತಿ ಎದುರಿಸುತ್ತಿರುವ ಮುರಗೇಶ್ ನಿರಾಣಿ ಅವರು ಗೆಲ್ಲಲೇ ಬೇಕು ಎನ್ನುವ ಹಠದಿಂದ ಹಣದ ಹೊಳೆ ಹರಿಸಲು ಸಿದ್ದರಾಗಿದ್ದರು. ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ಖಾನೆ ಸಿಬ್ಬಂದಿ ಕ್ವಾರ್ಟರ್ಸ್‌ನಲ್ಲಿ ನಿರಾಣಿಗೆ ಸಂಬಂಧಿಸಿದ 21.45 ಲಕ್ಷ ಮೌಲ್ಯದ 963 ಸಾಂಪ್ರದಾಯಿಕ ಬೆಳ್ಳಿ ದೀಪಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ವಿಚಾರವಾಗಿ ಮುರುಗೇಶ್ ನಿರಾಣಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇನ್ನು ಕೆಲವಡೆ ಆಮಿಷ ಒಡ್ಡುವ ಮೂಲಕ ಮತ ಗಳಿಸಲು ನಿರಾಣಿ ಮುಂದಾಗಿದ್ದಾರೆ ಎಂದು ಹೇಳಲಾಗಿತ್ತು.

ಕ್ಷೇತ್ರದ ಪ್ರಬುದ್ಧ ಮತದಾರರು ತಮ್ಮ ಮತವನ್ನು ಹಣಕ್ಕೆ ಮಾರಿಕೊಳ್ಳಲಿಲ್ಲ ಎನ್ನುವುದು ಫಲಿತಾಂಶದ ಬಳಿಕ ಗೊತ್ತಾಯಿತು. ಇಷ್ಟೆಲ್ಲಾ ಹಣ ಆಮಿಷ ಒಡ್ಡಿ ಮತ ಸೆಳೆಯಲು ನಿರಾಣಿ ಮುಂದಾದರೂ, ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ಮಾತ್ರ ಕಿಂಚಿತ್ತು ದೃತಿಗೆಡಲಿಲ್ಲ. ಜನರ ಬಳಿ ಹೋದ ಜೆಟಿ ಪಾಟೀಲ್ ಅವರು, ”ಯಾರರ ರೊಕ್ಕ ಕೊಟ್ಟು, ಓಟ್ ಹಾಕ್ರಿ ಅಂದ್ರ, ರೊಕ್ಕ ಇಸ್ಕೊಳ್ರಿ ಆದ್ರ, ನಿಮ್ಮ ಓಟ್ ಮಾತ್ರ ಯಾರ ಕೆಲಸ ಮಾಡಿದಾರ, ನಿಮ್ಮ ಊರ ಅಭಿವೃದ್ಧಿ ಯಾರ ಮಾಡ್ಯಾರ ಅವರಿಗೆ ಹಾಕ್ರಿ” ಅಂತ ಹೇಳುತ್ತಿದ್ದರು. ಹಾಗಾಗಿನೇ ಇದೀಗ ಕ್ಷೇತ್ರದಲ್ಲಿ ರೊಕ್ಕ ನಡಿಲಿಲ್ಲ ಎಂದು ಹೇಳುತ್ತಾರೆ.

ಬಾಗಲಕೋಟೆ ಜಿಲ್ಲೆಯ ಸರಳ, ಸಜ್ಜನಿಕೆ ರಾಜಕಾರಣಿಯಾಗಿರುವ ಜೆಟಿ ಪಾಟೀಲ್ ಅವರು, 95,652 ಮತ ಗಳಿಸುವ ಮೂಲಕ ಮುರಗೇಶ್ ನಿರಾಣಿ ಅವರನ್ನು 11,129 ಮತಗಳಿಂದ ಮಕಾಡೆ ಮಲಗಿಸಿದ್ದಾರೆ.

ಒಟ್ಟು 1,84,837 ಮತದಾರರು ಮತ ಚಲಾಯಿಸಿದ್ದರು. ಗೆಲುವು ಕಂಡಿರುವ ಜೆಟಿ ಪಾಟೀಲ್ ಅವರು 95,652 ಮತ ಗಳಿಸಿದ್ದಾರೆ. ಇನ್ನು ಪ್ರಬಲ ಪೈಪೋಟಿಯೊಡ್ಡಿದ ಮುರಗೇಶ್ ನಿರಾಣಿ ಅವರು 84,523 ಮತ ಗಳಿಸುವ ಮೂಲಕ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟರು.

ಅಧಿಕಾರದ ಮದವೇರಿಸಿಕೊಂಡಿದ್ದ ಚರಂತಿಮಠಗೆ ಸೋಲು

ಭೂಮಿ ಫಲವತ್ತಾಗಿದ್ದಾಗ ಫಸಲು ತಾನಾಗಿಯೇ ಬರುತ್ತದೆ ಎನ್ನುವಂತೆ ಬಾಗಲಕೋಟೆ ಮತಕ್ಷೇತ್ರದಲ್ಲಿ ಪಿ.ಎಚ್. ಪೂಜಾರ, ಸೇರಿದಂತೆ ಸಂಘಪರಿವಾರದ ನಾಯಕರು ಬಿಜೆಪಿ ಪಕ್ಷದ ಸಂಘಟನೆಯನ್ನು ಚೆನ್ನಾಗಿ ಮಾಡಿದ್ದರು. 2004ರ ಸಮಯದಲ್ಲಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿದ್ದ ಪೂಜಾರಗೆ ಟಿಕೆಟ್ ಕೈ ತಪ್ಪಿ ವೀರಣ್ಣ ಚರಂತಿಮಠ ಪಾಲಾಯಿತು. ಆಗ ಸತತವಾಗಿ 2004 ಮತ್ತು 2008ರ ಚುನಾವಣೆಯಲ್ಲಿ ಸುಲಭವಾಗಿ ಚರಂತಿಮಠ ಗೆಲುವು ಸಾಧಿಸಿದರು. ಒಂದು ಕಡೆ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷರೂ ಆಗಿರುವ ಚರಂತಿಮಠ ಅಲ್ಲಿಯೂ ಸತತವಾಗಿ ಅಧಿಕಾರದಲ್ಲಿ ಮುಂದುವರೆದಿದ್ದಾರೆ. ಸಂಘದ ನೌಕರರ ಮೇಲೂ ಅಧಿಕಾರದ ದರ್ಪ ದೋರಿಸುತ್ತಾರೆ ಎನ್ನುವ ಆರೋಪಗಳು ಆಗಾಗ ಕೇಳಿಬರುತ್ತಲೇ ಇರುತ್ತವೆ.

ಇನ್ನು ಕ್ಷೇತ್ರದಲ್ಲಿ ಸತತವಾಗಿ ಎರಡು ಬಾರಿ ಆಯ್ಕೆಯಾಗಿದ್ದ ಚರಂತಿಮಠ ಬಳಿಗೆ ಕ್ಷೇತ್ರದ ಜನರು ತಮ್ಮ ಅಳಲು ಹೇಳಿಕೊಳ್ಳಲು ಹೋದರೆ, ಕನಿಷ್ಟ ಮಾನವೀಯತೆಯಿಂದಲೂ ನಡೆದುಕೊಳ್ಳುತ್ತಿರಲಿಲ್ಲ ಎನ್ನುವ ಆರೋಪಗಳಿವೆ. ತಮ್ಮ ಪಕ್ಷದ ಕಾರ್ಯಕರ್ತರು ಕೂಡ ಇವರ ಮುಂಗೋಪಕ್ಕೆ ಬೇಸತ್ತು ಹೊರಬಂದಿರುವ ಸಾಕಷ್ಟು ಉದಾಹರಣೆಗಳಿವೆ.

ಸತತವಾಗಿ ಎರಡು ಬಾರಿ ಗೆದ್ದಿದ್ದ ಚರಂತಿಮಠ ಅಧಿಕಾರದ ಮದವೇರಿಸಿಕೊಂಡಿದ್ದರು, ಆಗ ಅವರ ವರ್ತನೆಯಿಂದ ಬೇಸತ್ತಿದ್ದ ಕಾರ್ಯಕರ್ತರು ಹಾಗೂ ಮುಖಂಡರು 2013ರ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯನ್ನೇ ತೊರೆದಿದ್ದರು. ಹಾಗಾಗಿ ಆ ಚುನಾವಣೆಯಲ್ಲಿ ಚರಂತಿಮಠ ಅವರು ಸೋಲುಕಂಡರು.

2018ರ ಚುನಾವಣೆಯಲ್ಲಿ ಎದುರಾಳಿಯು ಸಿ.ಡಿ ಸುಳಿಯಲ್ಲಿ ಸಿಲುಕಿದ್ದರಿಂದ ಅದರ ಲಾಭ ಪಡೆದು ಮೂರನೇ ಬಾರಿಗೆ ಚರಂತಿಮಠ ಶಾಸಕರಾದರು. ತಮ್ಮ ಅಧಿಕಾರ ಅವಧಿಯಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿ ಒಳ್ಳೆಯ ಹೆಸರು ಸಂಪಾದಿಸಿದ್ದರೂ ಕೂಡ, ಜನನಾಯಕನಾಗಿ ಜನರ ಜೊತೆ ಹೇಗಿರಬೇಕು ಎನ್ನುವ ಸಾಮಾನ್ಯಜ್ಞಾನವಿಲ್ಲದೇ ವರ್ತಿಸುತ್ತಾರೆ ಎನ್ನುವ ಆರೋಪಗಳು ಅವರ ಮೇಲಿವೆ. ಜನರೊಟ್ಟಿಗೆ ಬೆರೆಯದೇ, ಮನಸೋಇಚ್ಛೆ ಮಾತನಾಡುತ್ತಾರೆ ಎನ್ನುವ ಆಕ್ರೋಶ ಒಂದೆಡೆಯಾದರೆ, ಪಕ್ಷದೊಳಗಿದ್ದ ಕಾರ್ಯಕರ್ತರು ಹಾಗೂ ಬಿಜೆಪಿಯ ಬೆನ್ನಿಗೆ ನಿಲ್ಲುವ ಸಂಘಪರಿವಾರದವರನ್ನು ತನ್ನ ನಡವಳಿಕೆಯಿಂದ ದೂರ ಮಾಡಿಕೊಂಡಿದ್ದಾರೆ.

2023ರ ವಿಧಾನಸಭಾ ಚುನಾವಣೆಯಲ್ಲಿ ವೀರಣ್ಣ ಚರಂತಿಮಠ ವಿರುದ್ಧ ಕೆಲಸ ಮಾಡಲು ಅವರ ಸಹೋದರ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಒಂದಾಗಿದ್ದರು. ಸಂಘಪರಿವಾರದ ಮುಖಂಡರು ಬಹಿರಂಗವಾಗಿಯೇ ಶಾಸಕನ ಸೊಕ್ಕು ಇಳಿಸುತ್ತೇವೆ ಎನ್ನುವ ಹೇಳಿಕೆ ನೀಡುತ್ತಿದ್ದರು. ಮತ್ತೊಂದು ಕಡೆ ಅನೇಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಬಿಜೆಪಿ ಮುಖಂಡ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಪ್ರಕಾಶ್ ತಪಶೆಟ್ಟಿಯವರು ಕೂಡ ಕಾಂಗ್ರೆಸ್ ಸೇರಿದರು. ಇನ್ನು ಬಿಜೆಪಿ ಮುಖಂಡ ಪಿ.ಎಚ್. ಪೂಜಾರ ಅವರು ಚರಂತಿಮಠನ ಜೊತೆಗೆ ಪ್ರಚಾರಕ್ಕೂ ತೆರಳದೇ ತಟಸ್ಥವಾಗಿ ಉಳಿದರು. ಪೂಜಾರ ಅವರ ಬೆಂಬಲಿಗರೆಲ್ಲರೂ ಪಕ್ಷೇತರ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡಿದ್ದಾರೆ.

2023ರ ಚುನಾವಣೆಯಲ್ಲಿ ವೀರಣ್ಣ ಚರಂತಿಮಠ ಅವರು 73458 ಮತಗಳನ್ನು ಪಡೆದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಚ್‌ವೈ ಮೇಟಿ ಅವರು 79,336 ಮತ ಪಡೆಯುವ ಮೂಲಕ 5,878 ಮತಗಳ ಅಂತರದಲ್ಲಿ ಚರಂತಮಠ ಅವರಿಗೆ ಸೋಲುಣಿಸಿದರು. ಇನ್ನೂ ಪಕ್ಷೇತರರಾಗಿ ಸ್ಪರ್ಧೆ ಮಾಡಿದ್ದ ಮಲ್ಲಿಕಾರ್ಜುನ್ ಚರಂತಿಮಠ ಅವರು 10116 ಮತಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...