Homeಮುಖಪುಟಬೀಳಗ್ಯಾಗ ರೊಕ್ಕ ನಡಿಲಿಲ್ಲ, ಬಾಗಲಕೋಟದಾಗ ಸೊಕ್ಕ ನಡಿಲಿಲ್ಲ; ಲೆಕ್ಕ ಚುಕ್ತಾ ಮಾಡಿದ ಮತದಾರರು

ಬೀಳಗ್ಯಾಗ ರೊಕ್ಕ ನಡಿಲಿಲ್ಲ, ಬಾಗಲಕೋಟದಾಗ ಸೊಕ್ಕ ನಡಿಲಿಲ್ಲ; ಲೆಕ್ಕ ಚುಕ್ತಾ ಮಾಡಿದ ಮತದಾರರು

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ನಿನ್ನೆಯಷ್ಟೇ ಹೊರಬಂದಿದೆ. ಬಾಗಲಕೋಟೆ ಜಿಲ್ಲೆಯ ಇಬ್ಬರು ಸಚಿವರು ಸೋಲು ಕಂಡಿದ್ದಾರೆ. ಬಿಜೆಪಿಯ ಭದ್ರಕೋಟೆ ಬಾಗಲಕೋಟೆ ಮತಕ್ಷೇತ್ರದಲ್ಲಿಯೇ ಬಿಜೆಪಿ ಅಭ್ಯರ್ಥಿ ಸೋಲು ಕಂಡಿದ್ದಾರೆ. ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಕೇವಲ ಎರಡು ಕ್ಷೇತ್ರದಲ್ಲಿ ಮಾತ್ರ ಬಿಜೆಪಿಗೆ ಗೆಲುವಾಗಿದ್ದು, ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ.

ಬಿಜೆಪಿಯ ಭದ್ರಕೋಟೆ ಬಾಗಲಕೋಟೆ ಹಾಗೂ ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದ ಮುರಗೇಶ ನಿರಾಣಿ ಅವರು ಸ್ಪರ್ಧಿಸುವ ಬೀಳಗಿ ಮತಕ್ಷೇತ್ರ ಭಾರೀ ಕುತೂಹಲ ಹುಟ್ಟುಹಾಕಿತ್ತು. ಆದರೆ ಅಂತಿಮವಾಗಿ ಎರಡು ಕ್ಷೇತ್ರಗಳಲ್ಲೂ ಬಿಜೆಪಿ ಸೋಲು ಕಂಡಿದೆ. ಫಲಿತಾಂಶದ ಬಳಿಕ ಜಿಲ್ಲೆಯ ಮತದಾರರಿಂದ, ”ಬೀಳಗ್ಯಾಗ ರೊಕ್ಕ ನಡಿಲಿಲ್ಲ, ಬಾಗಲಕೋಟದಾಗ ಸೊಕ್ಕ ನಡಿಲಿಲ್ಲ” ಎನ್ನುವ ಮಾತು ಕೇಳಿಬರುತ್ತಿದೆ.

ಬೀಳಗಿಯಲ್ಲಿ ಹಣದ ಹೊಳೆ ಹರಿಸಿದ್ದ ಮುರಗೇಶ್ ನಿರಾಣಿ

ಬೀಳಗಿ ಮತಕ್ಷೇತ್ರದಿಂದ ಮುರಗೇಶ್ ನಿರಾಣಿ ಅವರು ಈಗಾಗಲೇ ನಾಲ್ಕು ಬಾರಿ ಸ್ಪರ್ಧೆ ಮಾಡಿ ಮೂರು ಬಾರಿ ಗೆಲುವು ಸಾಧಿಸಿದ್ದರು. ಮುಂದಿನ ಮುಖ್ಯಮಂತ್ರಿ ರೇ ಸ್‌ನಲ್ಲೂ ನಿರಾಣಿ ಹೆಸರು ಮುಂಚೂಣಿಯಲ್ಲಿತ್ತು. ಆದರೆ ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆ ಜೋರಾಗಿಯೇ ಇತ್ತು. ಕ್ಷೇತ್ರದ ಬಹಳಷ್ಟು ಹಳ್ಳಿಗಳ ಮತದಾರರು ಚುನಾವಣೆಗೂ ಮುನ್ನ ಹೇಳುತ್ತಿದ್ದ ಒಂದೇ ಒಂದು ಮಾತಂದ್ರೆ, ”ನಿರಾಣಿ ಸಾಹೇಬ್ ಓಟ್ ಕೇಳಾಕ್ ಅಷ್ಟೇ ನಮ್ಮೂರಿಗೆ ಬರ್ತಾನ ರೀ, ಆರಿಸಿ ಬಂದ್ಮೇಲೆ ಇತ್ಲಾಗ ತಲೆನೇ ಹಾಕಲ್ಲ, ಇನ್ನ ನಮ್ಮ ಕಷ್ಟ ಯಾವಾಗ ಕೇಳತಾನ್ರೀ ಅಂವಾ” ಎನ್ನುತ್ತಿದ್ದರು.

ಸೋಲಿನ ಭೀತಿ ಎದುರಿಸುತ್ತಿರುವ ಮುರಗೇಶ್ ನಿರಾಣಿ ಅವರು ಗೆಲ್ಲಲೇ ಬೇಕು ಎನ್ನುವ ಹಠದಿಂದ ಹಣದ ಹೊಳೆ ಹರಿಸಲು ಸಿದ್ದರಾಗಿದ್ದರು. ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ಖಾನೆ ಸಿಬ್ಬಂದಿ ಕ್ವಾರ್ಟರ್ಸ್‌ನಲ್ಲಿ ನಿರಾಣಿಗೆ ಸಂಬಂಧಿಸಿದ 21.45 ಲಕ್ಷ ಮೌಲ್ಯದ 963 ಸಾಂಪ್ರದಾಯಿಕ ಬೆಳ್ಳಿ ದೀಪಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ವಿಚಾರವಾಗಿ ಮುರುಗೇಶ್ ನಿರಾಣಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇನ್ನು ಕೆಲವಡೆ ಆಮಿಷ ಒಡ್ಡುವ ಮೂಲಕ ಮತ ಗಳಿಸಲು ನಿರಾಣಿ ಮುಂದಾಗಿದ್ದಾರೆ ಎಂದು ಹೇಳಲಾಗಿತ್ತು.

ಕ್ಷೇತ್ರದ ಪ್ರಬುದ್ಧ ಮತದಾರರು ತಮ್ಮ ಮತವನ್ನು ಹಣಕ್ಕೆ ಮಾರಿಕೊಳ್ಳಲಿಲ್ಲ ಎನ್ನುವುದು ಫಲಿತಾಂಶದ ಬಳಿಕ ಗೊತ್ತಾಯಿತು. ಇಷ್ಟೆಲ್ಲಾ ಹಣ ಆಮಿಷ ಒಡ್ಡಿ ಮತ ಸೆಳೆಯಲು ನಿರಾಣಿ ಮುಂದಾದರೂ, ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ಮಾತ್ರ ಕಿಂಚಿತ್ತು ದೃತಿಗೆಡಲಿಲ್ಲ. ಜನರ ಬಳಿ ಹೋದ ಜೆಟಿ ಪಾಟೀಲ್ ಅವರು, ”ಯಾರರ ರೊಕ್ಕ ಕೊಟ್ಟು, ಓಟ್ ಹಾಕ್ರಿ ಅಂದ್ರ, ರೊಕ್ಕ ಇಸ್ಕೊಳ್ರಿ ಆದ್ರ, ನಿಮ್ಮ ಓಟ್ ಮಾತ್ರ ಯಾರ ಕೆಲಸ ಮಾಡಿದಾರ, ನಿಮ್ಮ ಊರ ಅಭಿವೃದ್ಧಿ ಯಾರ ಮಾಡ್ಯಾರ ಅವರಿಗೆ ಹಾಕ್ರಿ” ಅಂತ ಹೇಳುತ್ತಿದ್ದರು. ಹಾಗಾಗಿನೇ ಇದೀಗ ಕ್ಷೇತ್ರದಲ್ಲಿ ರೊಕ್ಕ ನಡಿಲಿಲ್ಲ ಎಂದು ಹೇಳುತ್ತಾರೆ.

ಬಾಗಲಕೋಟೆ ಜಿಲ್ಲೆಯ ಸರಳ, ಸಜ್ಜನಿಕೆ ರಾಜಕಾರಣಿಯಾಗಿರುವ ಜೆಟಿ ಪಾಟೀಲ್ ಅವರು, 95,652 ಮತ ಗಳಿಸುವ ಮೂಲಕ ಮುರಗೇಶ್ ನಿರಾಣಿ ಅವರನ್ನು 11,129 ಮತಗಳಿಂದ ಮಕಾಡೆ ಮಲಗಿಸಿದ್ದಾರೆ.

ಒಟ್ಟು 1,84,837 ಮತದಾರರು ಮತ ಚಲಾಯಿಸಿದ್ದರು. ಗೆಲುವು ಕಂಡಿರುವ ಜೆಟಿ ಪಾಟೀಲ್ ಅವರು 95,652 ಮತ ಗಳಿಸಿದ್ದಾರೆ. ಇನ್ನು ಪ್ರಬಲ ಪೈಪೋಟಿಯೊಡ್ಡಿದ ಮುರಗೇಶ್ ನಿರಾಣಿ ಅವರು 84,523 ಮತ ಗಳಿಸುವ ಮೂಲಕ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟರು.

ಅಧಿಕಾರದ ಮದವೇರಿಸಿಕೊಂಡಿದ್ದ ಚರಂತಿಮಠಗೆ ಸೋಲು

ಭೂಮಿ ಫಲವತ್ತಾಗಿದ್ದಾಗ ಫಸಲು ತಾನಾಗಿಯೇ ಬರುತ್ತದೆ ಎನ್ನುವಂತೆ ಬಾಗಲಕೋಟೆ ಮತಕ್ಷೇತ್ರದಲ್ಲಿ ಪಿ.ಎಚ್. ಪೂಜಾರ, ಸೇರಿದಂತೆ ಸಂಘಪರಿವಾರದ ನಾಯಕರು ಬಿಜೆಪಿ ಪಕ್ಷದ ಸಂಘಟನೆಯನ್ನು ಚೆನ್ನಾಗಿ ಮಾಡಿದ್ದರು. 2004ರ ಸಮಯದಲ್ಲಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿದ್ದ ಪೂಜಾರಗೆ ಟಿಕೆಟ್ ಕೈ ತಪ್ಪಿ ವೀರಣ್ಣ ಚರಂತಿಮಠ ಪಾಲಾಯಿತು. ಆಗ ಸತತವಾಗಿ 2004 ಮತ್ತು 2008ರ ಚುನಾವಣೆಯಲ್ಲಿ ಸುಲಭವಾಗಿ ಚರಂತಿಮಠ ಗೆಲುವು ಸಾಧಿಸಿದರು. ಒಂದು ಕಡೆ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷರೂ ಆಗಿರುವ ಚರಂತಿಮಠ ಅಲ್ಲಿಯೂ ಸತತವಾಗಿ ಅಧಿಕಾರದಲ್ಲಿ ಮುಂದುವರೆದಿದ್ದಾರೆ. ಸಂಘದ ನೌಕರರ ಮೇಲೂ ಅಧಿಕಾರದ ದರ್ಪ ದೋರಿಸುತ್ತಾರೆ ಎನ್ನುವ ಆರೋಪಗಳು ಆಗಾಗ ಕೇಳಿಬರುತ್ತಲೇ ಇರುತ್ತವೆ.

ಇನ್ನು ಕ್ಷೇತ್ರದಲ್ಲಿ ಸತತವಾಗಿ ಎರಡು ಬಾರಿ ಆಯ್ಕೆಯಾಗಿದ್ದ ಚರಂತಿಮಠ ಬಳಿಗೆ ಕ್ಷೇತ್ರದ ಜನರು ತಮ್ಮ ಅಳಲು ಹೇಳಿಕೊಳ್ಳಲು ಹೋದರೆ, ಕನಿಷ್ಟ ಮಾನವೀಯತೆಯಿಂದಲೂ ನಡೆದುಕೊಳ್ಳುತ್ತಿರಲಿಲ್ಲ ಎನ್ನುವ ಆರೋಪಗಳಿವೆ. ತಮ್ಮ ಪಕ್ಷದ ಕಾರ್ಯಕರ್ತರು ಕೂಡ ಇವರ ಮುಂಗೋಪಕ್ಕೆ ಬೇಸತ್ತು ಹೊರಬಂದಿರುವ ಸಾಕಷ್ಟು ಉದಾಹರಣೆಗಳಿವೆ.

ಸತತವಾಗಿ ಎರಡು ಬಾರಿ ಗೆದ್ದಿದ್ದ ಚರಂತಿಮಠ ಅಧಿಕಾರದ ಮದವೇರಿಸಿಕೊಂಡಿದ್ದರು, ಆಗ ಅವರ ವರ್ತನೆಯಿಂದ ಬೇಸತ್ತಿದ್ದ ಕಾರ್ಯಕರ್ತರು ಹಾಗೂ ಮುಖಂಡರು 2013ರ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯನ್ನೇ ತೊರೆದಿದ್ದರು. ಹಾಗಾಗಿ ಆ ಚುನಾವಣೆಯಲ್ಲಿ ಚರಂತಿಮಠ ಅವರು ಸೋಲುಕಂಡರು.

2018ರ ಚುನಾವಣೆಯಲ್ಲಿ ಎದುರಾಳಿಯು ಸಿ.ಡಿ ಸುಳಿಯಲ್ಲಿ ಸಿಲುಕಿದ್ದರಿಂದ ಅದರ ಲಾಭ ಪಡೆದು ಮೂರನೇ ಬಾರಿಗೆ ಚರಂತಿಮಠ ಶಾಸಕರಾದರು. ತಮ್ಮ ಅಧಿಕಾರ ಅವಧಿಯಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿ ಒಳ್ಳೆಯ ಹೆಸರು ಸಂಪಾದಿಸಿದ್ದರೂ ಕೂಡ, ಜನನಾಯಕನಾಗಿ ಜನರ ಜೊತೆ ಹೇಗಿರಬೇಕು ಎನ್ನುವ ಸಾಮಾನ್ಯಜ್ಞಾನವಿಲ್ಲದೇ ವರ್ತಿಸುತ್ತಾರೆ ಎನ್ನುವ ಆರೋಪಗಳು ಅವರ ಮೇಲಿವೆ. ಜನರೊಟ್ಟಿಗೆ ಬೆರೆಯದೇ, ಮನಸೋಇಚ್ಛೆ ಮಾತನಾಡುತ್ತಾರೆ ಎನ್ನುವ ಆಕ್ರೋಶ ಒಂದೆಡೆಯಾದರೆ, ಪಕ್ಷದೊಳಗಿದ್ದ ಕಾರ್ಯಕರ್ತರು ಹಾಗೂ ಬಿಜೆಪಿಯ ಬೆನ್ನಿಗೆ ನಿಲ್ಲುವ ಸಂಘಪರಿವಾರದವರನ್ನು ತನ್ನ ನಡವಳಿಕೆಯಿಂದ ದೂರ ಮಾಡಿಕೊಂಡಿದ್ದಾರೆ.

2023ರ ವಿಧಾನಸಭಾ ಚುನಾವಣೆಯಲ್ಲಿ ವೀರಣ್ಣ ಚರಂತಿಮಠ ವಿರುದ್ಧ ಕೆಲಸ ಮಾಡಲು ಅವರ ಸಹೋದರ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಒಂದಾಗಿದ್ದರು. ಸಂಘಪರಿವಾರದ ಮುಖಂಡರು ಬಹಿರಂಗವಾಗಿಯೇ ಶಾಸಕನ ಸೊಕ್ಕು ಇಳಿಸುತ್ತೇವೆ ಎನ್ನುವ ಹೇಳಿಕೆ ನೀಡುತ್ತಿದ್ದರು. ಮತ್ತೊಂದು ಕಡೆ ಅನೇಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಬಿಜೆಪಿ ಮುಖಂಡ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಪ್ರಕಾಶ್ ತಪಶೆಟ್ಟಿಯವರು ಕೂಡ ಕಾಂಗ್ರೆಸ್ ಸೇರಿದರು. ಇನ್ನು ಬಿಜೆಪಿ ಮುಖಂಡ ಪಿ.ಎಚ್. ಪೂಜಾರ ಅವರು ಚರಂತಿಮಠನ ಜೊತೆಗೆ ಪ್ರಚಾರಕ್ಕೂ ತೆರಳದೇ ತಟಸ್ಥವಾಗಿ ಉಳಿದರು. ಪೂಜಾರ ಅವರ ಬೆಂಬಲಿಗರೆಲ್ಲರೂ ಪಕ್ಷೇತರ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡಿದ್ದಾರೆ.

2023ರ ಚುನಾವಣೆಯಲ್ಲಿ ವೀರಣ್ಣ ಚರಂತಿಮಠ ಅವರು 73458 ಮತಗಳನ್ನು ಪಡೆದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಚ್‌ವೈ ಮೇಟಿ ಅವರು 79,336 ಮತ ಪಡೆಯುವ ಮೂಲಕ 5,878 ಮತಗಳ ಅಂತರದಲ್ಲಿ ಚರಂತಮಠ ಅವರಿಗೆ ಸೋಲುಣಿಸಿದರು. ಇನ್ನೂ ಪಕ್ಷೇತರರಾಗಿ ಸ್ಪರ್ಧೆ ಮಾಡಿದ್ದ ಮಲ್ಲಿಕಾರ್ಜುನ್ ಚರಂತಿಮಠ ಅವರು 10116 ಮತಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...