Homeಮುಖಪುಟಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

- Advertisement -
- Advertisement -

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ ಪ್ರಕರಣದಲ್ಲಿ ದೊಡ್ಡ ಕಾನೂನು ಜಯ ಸಿಕ್ಕಿದಂತಾಗಿದೆ.

ಲೋಕಪಾಲ್ ತಮ್ಮ ರಕ್ಷಣಾತ್ಮಕ ವಾದಗಳನ್ನು ಪರಿಗಣಿಸಿಲ್ಲ, ಇದು ನೈಸರ್ಗಿಕ ನ್ಯಾಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಮಹುವಾ ಲೋಕಪಾಲ್ ಆದೇಶದ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಅನಿಲ್ ಕ್ಷೇತ್ರಪಾಲ ಮತ್ತು ನ್ಯಾಯಮೂರ್ತಿ ಹರೀಶ್ ವೈದ್ಯನಾಥನ್ ಶಂಕರ್ ಅವರ ದೆಹಲಿ ಹೈಕೋರ್ಟ್‌ನ ದ್ವಿಸದಸ್ಯ ಪೀಠವು ನಡೆಸಿದೆ.

ಈ ಪ್ರಕರಣದಲ್ಲಿ ಲೋಕಪಾಲ್ ಕಾನೂನು ಪ್ರಕ್ರಿಯೆಗಳನ್ನು ಸರಿಯಾಗಿ ಪಾಲಿಸಿಲ್ಲ ಮತ್ತು ಮೊಯಿತ್ರಾ ಅವರ ವಾದಗಳನ್ನು ಪರಿಗಣಿಸದೆ ತಪ್ಪು ಮಾಡಿದೆ ಎಂದು ಹೇಳಿರುವ ದೆಹಲಿ ಹೈಕೋರ್ಟ್‌ ಒಂದು ತಿಂಗಳೊಳಗೆ ಈ ಬಗ್ಗೆ ಮರುಪರಿಶೀಲಿಸುವಂತೆ ಲೋಕಪಾಲ್‌ಗೆ ಸೂಚನೆ ನೀಡಿದೆ.

ಏನಿದು ಪ್ರಶ್ನೆಗಾಗಿ ಕಾಸು ಪ್ರಕರಣ?

ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಂದ ಹಣ ಮತ್ತು ದುಬಾರಿ ಉಡುಗೊರೆಗಳನ್ನು ಪಡೆದು ಸಂಸತ್ತಿನಲ್ಲಿ ಅದಾನಿ ಸಮೂಹದ ವಿರುದ್ಧ ಮೊಯಿತ್ರಾ ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು 2023ರ ಅಕ್ಟೋಬರ್‌ನಲ್ಲಿ ಸಂಸದ ನಿಶಿಕಾಂತ್ ದುಬೆ ಸ್ಪೀಕರ್‌ಗೆ ದೂರು ನೀಡಿದ್ದರು. ಮೊಯಿತ್ರಾ ಅವರು ಸಂಸತ್ತಿನ ಅಧಿಕೃತ ಲಾಗಿನ್ ಐಡಿ ಮತ್ತು ಪಾಸ್‌ವರ್ಡ್‌ ಅನ್ನು ಹಿರಾನಂದಾನಿ ಅವರಿಗೆ ನೀಡಿದ್ದರು ಎಂದು ಆರೋಪಿಸಲಾಗಿತ್ತು. 

ಅದಾದ ಬಳಿಕ ಅದೇ ವರ್ಷದ ಡಿಸೆಂಬರ್‌ನಲ್ಲಿ ಎಥಿಕ್ಸ್ ಕಮಿಟಿ(ನೈತಿಕ ಸಮಿತಿ) ಶಿಫಾರಸಿನ ಮೇರೆಗೆ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು. 2024ರ ಮಾರ್ಚ್‌ನಲ್ಲಿ ಲೋಕಪಾಲ್ ಆದೇಶದ ಮೇರೆಗೆ ಸಿಬಿಐ ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದೆ. 2025ರ ನವೆಂಬರ್‌ನಲ್ಲಿ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಲೋಕಪಾಲ್‌ ಅನುಮತಿ ನೀಡಿದೆ.

ಇನ್ನು ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಗೆ ತಮ್ಮ ಸಂಸತ್ತಿನ ಲಾಗಿನ್ ಮತ್ತು ಪಾಸ್‌ವರ್ಡ್ ನೀಡಿರುವುದನ್ನು ಮೊಯಿತ್ರಾ ಒಪ್ಪಿಕೊಂಡಿದ್ದಾರೆ. ಆದರೆ ಇದು ಕೇವಲ ಪ್ರಶ್ನೆಗಳನ್ನು ಟೈಪ್ ಮಾಡಲು ಸಹಾಯ ಪಡೆಯುವ ಉದ್ದೇಶದಿಂದ ಆಗಿತ್ತೇ ಹೊರತು ಹಣದ ಬದಲಾಗಿ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಾಗೆಯೇ ಹಿರಾನಂದಾನಿ ಅವರಿಂದ ಯಾವುದೇ ರೀತಿಯ ಹಣವನ್ನು ಪಡೆದಿಲ್ಲ ಎಂದು ಹೇಳಿದ್ದಾರೆ. ಹಾಗೆಯೇ ಇಡೀ ಪ್ರರಕಣವು ವೈಯಕ್ತಿಕ ದ್ವೇಷ ಮತ್ತು ರಾಜಕೀಯ ಸೇಡಿನಿಂದ ಕೂಡಿದೆ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...