Homeಮುಖಪುಟಅಕ್ರಮ ಹಣ ವರ್ಗಾವಣೆ ಪ್ರಕರಣ: ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇಡಿ ವಶಕ್ಕೆ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇಡಿ ವಶಕ್ಕೆ

- Advertisement -
- Advertisement -

ದುಬೈಗೆ ತೆರಳುತ್ತಿದ್ದ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರೆ. ಜೊತೆಗೆ ನಟಿಗೆ ದೇಶ ಬಿಟ್ಟು ಹೊರ ಹೋಗದಂತೆ ಸೂಚನೆ ನೀಡಲಾಗಿದೆ.

ಸುಕೇಶ್‌ ಚಂದ್ರಶೇಖರ್‌ ಮತ್ತು ಶ್ರೀಲಂಕಾ ಮೂಲದ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರ ನಡುವೆ ಅಕ್ರಮ ಹಣ ವರ್ಗಾವಣೆ ಆಗಿದೆ. ಫರ್ನಾಂಡಿಸ್‌ ಅವರು ಸುಕೇಶ್‌ ಅವರಿಂದ 52 ಲಕ್ಷ ರೂ. ಮೌಲ್ಯದ ಕುದುರೆ, 9 ಲಕ್ಷ ರೂ. ಮೌಲ್ಯದ ಪರ್ಷಿಯಾ ದೇಶದ ಬೆಕ್ಕು ಸೇರಿದಂತೆ 10 ಕೋಟಿ ರೂ. ಮೌಲ್ಯದ ಉಡುಗೊರೆಗಳನ್ನು ಪಡೆದಿದ್ದಾರೆ ಎಂಬುದರ ಬಗ್ಗೆ ಇಡಿ ಸಾಕ್ಷ್ಯಾಧಾರಗಳನ್ನು ಕಲೆಹಾಕಿದೆ. ಆ ಹಿನ್ನೆಲೆಯಲ್ಲಿ ಜ್ಯಾಕ್ವೆಲಿನ್‌ರ ವಿರುದ್ಧ “ಲುಕ್‌ ಔಟ್‌ ಸರ್ಕ್ಯುಲರ್ ‘ ಜಾರಿಗೊಳಿಸಲಾಗಿದ್ದು, ಅವರನ್ನು ಈ ವಿಚಾರಕ್ಕಾಗಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ಅಕ್ರಮ ಹಣ ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಇಡಿ ಹಲವು ಬಾರಿ ವಿಚಾರಣೆಗೆ ಒಳಪಡಿಸಿತ್ತು.

ಇದನ್ನೂ ಓದಿ: ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

ಜಾಕ್ವೆಲಿನ್ ಫರ್ನಾಂಡಿಸ್ ಹಿನ್ನೆಲೆ

ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಮೂಲತಃ ಶ್ರೀಲಂಕಾದವರು. ಸುದ್ದಿ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅವರು, ಅಲಾದಿನ್ (2009) ಚಿತ್ರದ ಮೂಲಕ ಹಿಂದಿ ಸಿನಿಮಾ ರಂಗಕ್ಕೆ ಕಾಲಿಟ್ಟರು. ಜಾಕ್ವೆಲಿನ್ 2006 ರಲ್ಲಿ ಮಿಸ್ ಯೂನಿವರ್ಸ್ ಶ್ರೀಲಂಕಾ ಕಿರೀಟ ಧರಿಸಿದ್ದು, ಅದೇ ವರ್ಷ ವಿಶ್ವ ಸುಂದರಿ ಸ್ಪರ್ಧೆಯಲ್ಲಿಯೂ ಶ್ರೀಲಂಕಾವನ್ನು ಪ್ರತಿನಿಧಿಸಿದ್ದರು. ಒಂದು ದಶಕಕ್ಕೂ ಹೆಚ್ಚು ಕಾಲ ಹಿಂದಿ ಚಿತ್ರೋದ್ಯಮದಲ್ಲಿ ಸಕ್ರಿಯವಾಗಿರುವ ಅವರು ಮರ್ಡರ್‌ 2, ಕಿಕ್, ರಾಯ್, ಡ್ರೈವ್, ಜುಡ್ವಾ 2, ಹೌಸ್‌ಫುಲ್ 2, ಮತ್ತು ಮಿಸಸ್ ಸೀರಿಯಲ್ ಕಿಲ್ಲರ್‌ ಸೇರಿದಂತೆ ಹಲವು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಬ್ರಿಟಿಷ್ ಚಲನಚಿತ್ರ ಡೆಫಿನಿಷನ್ ಆಫ್ ಫಿಯರ್, ಶ್ರೀಲಂಕಾದ ಸಿನಿಮಾ ಇಂಡಸ್ಟ್ರಿಯಲ್ಲೂ ಅವರು ಕೆಲಸ ಮಾಡಿದ್ದಾರೆ.

ಜಾಕ್ವೆಲಿನ್ ಫರ್ನಾಂಡಿಸ್ ಪ್ರಸ್ತುತ ಬಚ್ಚನ್ ಪಾಂಡೆ, ಅಟ್ಯಾಕ್, ಸರ್ಕಸ್, ರಾಮ್ ಸೇತು, ಪವನ್ ಕಲ್ಯಾಣ್ ಅಭಿನಯದ ತೆಲುಗು ಚಿತ್ರ ಹರಿ ಹರ ವೀರ ಮಲ್ಲು ಸಿನಿಮಾಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೆ, ಕನ್ನಡ ಸಿನಿಮಾ ಸುದೀಪ್ ಅಭಿನಯದ ವಿಕ್ರಾಂತ್ ರೋಣಾದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಏಕೆ ವಶಕ್ಕೆ ಪಡೆಯಲಾಗಿದೆ…?

ಜಾಕ್ವೆಲಿನ್ ಫೆರ್ನಾಂಡಿಸ್ ವಿರುದ್ಧ ಜಾರಿ ನಿರ್ದೇಶನಾಲಯವು ಲುಕ್ ಔಟ್ ಸುತ್ತೋಲೆ (ಎಲ್‌ಒಸಿ) ಹೊರಡಿಸಿದೆ. ಹೀಗಾಗಿ, ಅವರನ್ನು ಭಾನುವಾರ ಮುಂಬೈನಲ್ಲಿ ವಶಕ್ಕೆ ಪಡೆಯಲಾಗಿದೆ. ಸುಕೇಶ್ ಚಂದ್ರಶೇಖರ್ ಸುಲಿಗೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಫರ್ನಾಂಡಿಸ್‌ ಅವರ ಹೆಸರು ಕೇಳಿಬಂದಿದ್ದು, ಅದಕ್ಕೆ ಕೆಲವು ಸಾಕ್ಷಿಗಳು ದೊರೆತಿವೆ. ಜಾಕ್ವೆಲಿನ್ ಅವರನ್ನು ದೆಹಲಿಗೆ ಕರೆದೊಯ್ದು ವಿಚಾರಣೆ ನಡೆಸಲಿದ್ದು, ತನಿಖೆ ಮುಗಿಯುವವರೆಗೂ ಜಾಕ್ವೆಲಿನ್ ಅವರು ದೇಶವನ್ನು ತೊರೆಯುವಂತಿಲ್ಲ.

ಪ್ರಕರಣವೇನು?

ಚುನಾವಣಾ ಆಯೋಗವನ್ನು ಒಳಗೊಂಡಿರುವ ಲಂಚದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸುಕೇಶ್ ಚಂದ್ರಶೇಖರ್ ವಿರುದ್ಧ 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣವಿದೆ. ಸುಕೇಶ್ ಚಂದ್ರಶೇಖರ್ ಮತ್ತು ಇತರರ ವಿರುದ್ಧ ಇಡಿ ಇತ್ತೀಚೆಗೆ ಆರೋಪಪಟ್ಟಿ ಸಲ್ಲಿಸಿತ್ತು. ಆರೋಪದ ಪ್ರಕಾರ, ತಿಹಾರ್ ಜೈಲಿನಲ್ಲಿ ಸುಕೇಶ್ ಶಿಕ್ಷೆ ಅನುಭವಿಸುತ್ತಿದ್ದಾಗ, ಉದ್ಯಮಿಯೊಬ್ಬರ ಪತ್ನಿಯಿಂದ ಹಣ ಸುಲಿಗೆ ಮಾಡಿದ್ದ. ಅಲ್ಲದೆ, ಈ ವೇಳೆ ನಟಿ ಜಾಕ್ವೆಲಿನ್ ಅವರು ಸುಕೇಶ್ ಜೊತೆ ಹಣದ ವಹಿವಾಟು ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಜಾಕ್ವೆಲಿನ್‌ಗೆ ಸುಕೇಶ್ ಉಡುಗೊರೆಗಳನ್ನು ನೀಡಿದ್ದಾರೆ ಎಂದು ಇಡಿ ಹೇಳಿದೆ. ಜಾಕ್ವೆಲಿನ್‌ ಜೊತೆಗೆ ನಟಿ ನೋರಾ ಫತೇಹಿ ಅವರನ್ನೂ ಇಡಿ ವಿಚಾರಣೆ ಕರೆದಿತ್ತು.


ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...